Homeಅಂತರಾಷ್ಟ್ರೀಯಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

ಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

- Advertisement -
- Advertisement -

ಉಕ್ರೇನ್‌ನ ಗಡಿಭಾಗದಲ್ಲಿ ತನ್ನ ಸೇನಾ ನಿಯೋಜನೆಯನ್ನ ಹಿಂತೆಗೆದುಕೊಳ್ಳಲು ರಷ್ಯಾ ಸಿದ್ಧವಾಗಿಲ್ಲ. 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಷ್ಯಾವು ಉಕ್ರೇನ್ನ ಉತ್ತರದ ಗಡಿಭಾಗದಲ್ಲಿ ಮತ್ತು ಬೆಲಾರಸ್‌ನಲ್ಲಿ ತನ್ನ ಸೈನಿಕರು ಮತ್ತು ಸೇನಾ ಶಸ್ತ್ರಾಸ್ತ್ರಗಳ ಪ್ರಮಾಣವನ್ನು ಹೆಚ್ಚಿಸಿದೆ ಎಂದು ನ್ಯಾಟೋ ಸೆಕ್ರೆಟರಿ-ಜನರಲ್ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ರಷ್ಯಾದ ಉದ್ದೇಶಗಳು ಏನಿರಬಹುದು ಎಂಬ ಅನಿಶ್ಚಿತತೆ ಜಾಗತಿಕ ಮಟ್ಟದಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಈ ನಡುವೆ ಮಾಸ್ಕೋ (ರಷ್ಯಾ ರಾಜಧಾನಿ) ಮತ್ತು ಕೈವ್‌ (ಉಕ್ರೇನ್‌ ರಾಜಧಾನಿ)ನಲ್ಲಿ ಹೆಚ್ಚಿನ ಉನ್ನತ ಮಟ್ಟದ ರಾಜತಾಂತ್ರಿಕತೆಯು ತೆರೆದುಕೊಂಡಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ 

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೊಗಾನ್‌ ಅವರು ಉಕ್ರೇನ್ ರಾಜಧಾನಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಇದೇ ಸಮಯದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅರ್ಜೆಂಟೀನಾದ ಅಧ್ಯಕ್ಷ ಅಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಲಿದ್ದಾರೆ.

ಉಕ್ರೇನ್‌ನ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ 1,00,000 ಕ್ಕೂ ಹೆಚ್ಚು ಸೈನಿಕರನ್ನು ರಷ್ಯಾ ನಿಯೋಜಿಸಿದೆ. 2014ರಲ್ಲಿ ಮಾಡಿದಂತೆಯೇ ರಷ್ಯಾ ಮತ್ತೊಮ್ಮೆ ಆಕ್ರಮಣ ಮಾಡಬಹುದು. ಇದರಿಂದಾಗಿ ಉಕ್ರೇನ್‌ನ ಆರ್ಥಿಕತೆ ಅಸ್ಥಿರಗೊಳಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ. ಆದರೆ, ಉಕ್ರೇನ್‌ ಮೇಲೆ ಆಕ್ರಮಣ ಮಾಡಲು ಯೋಜಿಸಲಾಗಿದೆ ಎಂಬ ಅನುಮಾನಗಳನ್ನು ರಷ್ಯಾದ ಅಧಿಕಾರಿಗಳು ನಿರಾಕರಿಸಿದ್ದಾರೆ.

ಆದರೂ, “ಕಳೆದ ಕೆಲವು ದಿನಗಳಿಂದ ರಷ್ಯಾ ಮಿಲಿಟರಿ ಪಡೆಗಳು ಬೆಲಾರಸ್‌ನಲ್ಲಿ ಬೀಡು ಬಿಡಲಾರಂಭಿಸಿವೆ. ಶೀತಲ ಸಮರದ ನಂತರ ಇದು ರಷ್ಯಾದ ಅತಿದೊಡ್ಡ ನಿಯೋಜನೆಯಾಗಿದೆ” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶೇಷ ಪಡೆಗಳು, ಸುಧಾರಿತ ಫೈಟರ್ ಜೆಟ್‌ಗಳು, ಇಸ್ಕಾಂಡರ್ ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು S-400 ಗ್ರೌಂಡ್‌ ಟು ಏರ್‌ ಕ್ಷಿಪಣಿಗಳು ಸೇರಿದಂತೆ 30,000 ಸೈನಿಕರನ್ನು ರಷ್ಯಾವು ಬೆಲಾರಸ್‌ನಲ್ಲಿ ಸಜ್ಜುಗೊಳಿಸಿದೆ ಎಂದು ಸ್ಟೋಲ್ಟೆನ್‌ಬರ್ಗ್‌ ಹೇಳಿದ್ದಾರೆ.

ಅದೇ ಸಮಯದಲ್ಲಿ, ಉಕ್ರೇನ್ ಕಳೆದ ತಿಂಗಳು ಡ್ರೋನ್ ಮೂಲಕ ದೇಶದ ವಾಯುಪ್ರದೇಶದ ಗಡಿ ಉಲ್ಲಂಘನೆಯನ್ನು ಮಾಡಿದೆ ಎಂದು ಬೆಲಾರಸ್‌ನ ರಕ್ಷಣಾ ಸಚಿವಾಲಯವು ಆರೋಪಿಸಿದೆ. ಬೆಲಾರಸ್‌ನ ಆರೋಪವನ್ನು ತಿರಸ್ಕರಿಸಿರುವ ಉಕ್ರೇನ್, ತಮ್ಮನ್ನು ಮತ್ತಷ್ಟು ಅಸ್ಥಿರಗೊಳಿಸಲು ರಷ್ಯಾದೊಂದಿಗೆ ಬೆಲಾರಸ್ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಉಕ್ರೇನ್‌ಅನ್ನು ಅಸ್ಥಿರಗೊಳಿಸುವ ರಷ್ಯಾದ ಚಟುವಟಿಕೆಗಳನ್ನು ತಡೆಯಲು ನಾವು ಮಿನ್ಸ್ಕ್‌ಗೆ ಕರೆ ನೀಡುತ್ತೇವೆ. ಬೆದರಿಕೆ ಅಸ್ತಿತ್ವದಲ್ಲಿದೆ, ಅಪಾಯಗಳು ಅಸ್ತಿತ್ವದಲ್ಲಿವೆ, ಆದರೆ ಅವರು 2014 ರಿಂದಲೂ ಇದು ಮುಂದುವರೆಯುತ್ತಿದೆ. ಅಂದಿನಿಂದಲೂ ರಷ್ಯಾ ಆಕ್ರಮಣಕಾರಿಯಾಗಿದೆ” ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯದ ವಕ್ತಾರ ಒಲೆಗ್ ನಿಕೊಲೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ರಷ್ಯಾ ಹೊಸ ಯುದ್ಧವನ್ನು ಬಯಸುವುದಿಲ್ಲ ಎನ್ನುವುದಾರೆ, ರಷ್ಯಾ ರಾಜತಾಂತ್ರಿಕ ಒಪ್ಪಂದಗಳನ್ನು ಮುಂದುವರೆಸಬೇಕು. ಉಕ್ರೇನ್‌ನ ಗಡಿಗಳಲ್ಲಿ ಮತ್ತು ಉಕ್ರೇನ್‌ ಭಾಗದ ಆಕ್ರಮಿತ ಪ್ರದೇಶಗಳಲ್ಲಿ ನಿಯೋಜಿಸಿರುವ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು. ರಾಜತಾಂತ್ರಿಕತೆ ಮಾತ್ರವೇ ಜವಾಬ್ದಾರಿಯುತ ಮಾರ್ಗವಾಗಿದೆ ಎಂದು ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಅವರು ಟ್ವೀಟ್‌ ಮಾಡಿದ್ದಾರೆ.

ರಷ್ಯಾ ಆಕ್ರಮಣ ಮಾಡಿದರೆ ಉಕ್ರೇನ್‌ಗೆ ಸೈನ್ಯವನ್ನು ನಿಯೋಜಿಸುವ ಉದ್ದೇಶವನ್ನು NATO ಹೊಂದಿಲ್ಲ. ಆದರೆ, ಉಕ್ರೇನ್‌ ಸಮೀಪವಿರುವ ನ್ಯಾಟೋದ ಸದಸ್ಯ ರಾಷ್ಟ್ರಗಳ (ಎಸ್ಟೋನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಪೋಲೆಂಡ್) ರಕ್ಷಣೆಯನ್ನು ಬಲಪಡಿಸಲು ಪ್ರಾರಂಭಿಸಿದೆ. 30 ರಾಷ್ಟ್ರಗಳ ಮಿಲಿಟರಿ ಮೈತ್ರಿಕೂಟವಾದ ನ್ಯಾಟೋ, ಬಲ್ಗೇರಿಯಾ ಮತ್ತು ರೊಮೇನಿಯಾ ಬಳಿಯ ಕಪ್ಪು ಸಮುದ್ರ ಪ್ರದೇಶದಲ್ಲಿ ತನ್ನ ರಕ್ಷಣೆಯನ್ನು ಹೆಚ್ಚಿಸಲು ಯೋಜಿಸುತ್ತಿದೆ.

2,000 ಅಮೆರಿಕಾ ಸೈನಿಕರನ್ನು ಪೋಲೆಂಡ್ ಮತ್ತು ಜರ್ಮನಿಗೆ ಕಳುಹಿಸಲು ಮತ್ತು ಜರ್ಮನಿಯಿಂದ ರೊಮೇನಿಯಾಗೆ 1,000 ಸೈನಿಕರನ್ನು ಸ್ಥಳಾಂತರಿಸಲು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಿರ್ಧರಿಸಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸಿರುವ ಸ್ಟೋಲ್ಟೆನ್‌ಬರ್ಗ್, ಇದು ಪೂರ್ವ ದೇಶಗಳ ಬಗ್ಗೆ NATOದ ಸದಸ್ಯ ರಾಷ್ಟ್ರವಾಗಿರುವ ಅಮೆರಿಕಾದ ಬದ್ಧತೆಯನ್ನು ಮಿತ್ರರಾಷ್ಟ್ರಗಳು ಮತ್ತು ಶತ್ರುಗಳಿಗೆ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

“ಬಿಕ್ಕಟ್ಟಿಗೆ ರಾಜಕೀಯ ಪರಿಹಾರವನ್ನು ಕಂಡುಹಿಡಿಯಲು ನಾವು ಬದ್ಧರಾಗಿದ್ದೇವೆ. ಆದರೆ, ಕೆಟ್ಟ ಪರಿಸ್ಥಿತಿ ಎದುರಾದರೆ, ಅದನ್ನು ನಿಭಾಯಿಸಲು ನಾವು ಸಿದ್ಧರಾಗಿರಬೇಕು” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...