Homeಅಂತರಾಷ್ಟ್ರೀಯಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

ಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

- Advertisement -
- Advertisement -

ಉಕ್ರೇನ್‌ನ ಗಡಿಭಾಗದಲ್ಲಿ ತನ್ನ ಸೇನಾ ನಿಯೋಜನೆಯನ್ನ ಹಿಂತೆಗೆದುಕೊಳ್ಳಲು ರಷ್ಯಾ ಸಿದ್ಧವಾಗಿಲ್ಲ. 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಷ್ಯಾವು ಉಕ್ರೇನ್ನ ಉತ್ತರದ ಗಡಿಭಾಗದಲ್ಲಿ ಮತ್ತು ಬೆಲಾರಸ್‌ನಲ್ಲಿ ತನ್ನ ಸೈನಿಕರು ಮತ್ತು ಸೇನಾ ಶಸ್ತ್ರಾಸ್ತ್ರಗಳ ಪ್ರಮಾಣವನ್ನು ಹೆಚ್ಚಿಸಿದೆ ಎಂದು ನ್ಯಾಟೋ ಸೆಕ್ರೆಟರಿ-ಜನರಲ್ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ರಷ್ಯಾದ ಉದ್ದೇಶಗಳು ಏನಿರಬಹುದು ಎಂಬ ಅನಿಶ್ಚಿತತೆ ಜಾಗತಿಕ ಮಟ್ಟದಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಈ ನಡುವೆ ಮಾಸ್ಕೋ (ರಷ್ಯಾ ರಾಜಧಾನಿ) ಮತ್ತು ಕೈವ್‌ (ಉಕ್ರೇನ್‌ ರಾಜಧಾನಿ)ನಲ್ಲಿ ಹೆಚ್ಚಿನ ಉನ್ನತ ಮಟ್ಟದ ರಾಜತಾಂತ್ರಿಕತೆಯು ತೆರೆದುಕೊಂಡಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ 

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೊಗಾನ್‌ ಅವರು ಉಕ್ರೇನ್ ರಾಜಧಾನಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಇದೇ ಸಮಯದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅರ್ಜೆಂಟೀನಾದ ಅಧ್ಯಕ್ಷ ಅಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಲಿದ್ದಾರೆ.

ಉಕ್ರೇನ್‌ನ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ 1,00,000 ಕ್ಕೂ ಹೆಚ್ಚು ಸೈನಿಕರನ್ನು ರಷ್ಯಾ ನಿಯೋಜಿಸಿದೆ. 2014ರಲ್ಲಿ ಮಾಡಿದಂತೆಯೇ ರಷ್ಯಾ ಮತ್ತೊಮ್ಮೆ ಆಕ್ರಮಣ ಮಾಡಬಹುದು. ಇದರಿಂದಾಗಿ ಉಕ್ರೇನ್‌ನ ಆರ್ಥಿಕತೆ ಅಸ್ಥಿರಗೊಳಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ. ಆದರೆ, ಉಕ್ರೇನ್‌ ಮೇಲೆ ಆಕ್ರಮಣ ಮಾಡಲು ಯೋಜಿಸಲಾಗಿದೆ ಎಂಬ ಅನುಮಾನಗಳನ್ನು ರಷ್ಯಾದ ಅಧಿಕಾರಿಗಳು ನಿರಾಕರಿಸಿದ್ದಾರೆ.

ಆದರೂ, “ಕಳೆದ ಕೆಲವು ದಿನಗಳಿಂದ ರಷ್ಯಾ ಮಿಲಿಟರಿ ಪಡೆಗಳು ಬೆಲಾರಸ್‌ನಲ್ಲಿ ಬೀಡು ಬಿಡಲಾರಂಭಿಸಿವೆ. ಶೀತಲ ಸಮರದ ನಂತರ ಇದು ರಷ್ಯಾದ ಅತಿದೊಡ್ಡ ನಿಯೋಜನೆಯಾಗಿದೆ” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶೇಷ ಪಡೆಗಳು, ಸುಧಾರಿತ ಫೈಟರ್ ಜೆಟ್‌ಗಳು, ಇಸ್ಕಾಂಡರ್ ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು S-400 ಗ್ರೌಂಡ್‌ ಟು ಏರ್‌ ಕ್ಷಿಪಣಿಗಳು ಸೇರಿದಂತೆ 30,000 ಸೈನಿಕರನ್ನು ರಷ್ಯಾವು ಬೆಲಾರಸ್‌ನಲ್ಲಿ ಸಜ್ಜುಗೊಳಿಸಿದೆ ಎಂದು ಸ್ಟೋಲ್ಟೆನ್‌ಬರ್ಗ್‌ ಹೇಳಿದ್ದಾರೆ.

ಅದೇ ಸಮಯದಲ್ಲಿ, ಉಕ್ರೇನ್ ಕಳೆದ ತಿಂಗಳು ಡ್ರೋನ್ ಮೂಲಕ ದೇಶದ ವಾಯುಪ್ರದೇಶದ ಗಡಿ ಉಲ್ಲಂಘನೆಯನ್ನು ಮಾಡಿದೆ ಎಂದು ಬೆಲಾರಸ್‌ನ ರಕ್ಷಣಾ ಸಚಿವಾಲಯವು ಆರೋಪಿಸಿದೆ. ಬೆಲಾರಸ್‌ನ ಆರೋಪವನ್ನು ತಿರಸ್ಕರಿಸಿರುವ ಉಕ್ರೇನ್, ತಮ್ಮನ್ನು ಮತ್ತಷ್ಟು ಅಸ್ಥಿರಗೊಳಿಸಲು ರಷ್ಯಾದೊಂದಿಗೆ ಬೆಲಾರಸ್ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಉಕ್ರೇನ್‌ಅನ್ನು ಅಸ್ಥಿರಗೊಳಿಸುವ ರಷ್ಯಾದ ಚಟುವಟಿಕೆಗಳನ್ನು ತಡೆಯಲು ನಾವು ಮಿನ್ಸ್ಕ್‌ಗೆ ಕರೆ ನೀಡುತ್ತೇವೆ. ಬೆದರಿಕೆ ಅಸ್ತಿತ್ವದಲ್ಲಿದೆ, ಅಪಾಯಗಳು ಅಸ್ತಿತ್ವದಲ್ಲಿವೆ, ಆದರೆ ಅವರು 2014 ರಿಂದಲೂ ಇದು ಮುಂದುವರೆಯುತ್ತಿದೆ. ಅಂದಿನಿಂದಲೂ ರಷ್ಯಾ ಆಕ್ರಮಣಕಾರಿಯಾಗಿದೆ” ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯದ ವಕ್ತಾರ ಒಲೆಗ್ ನಿಕೊಲೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ರಷ್ಯಾ ಹೊಸ ಯುದ್ಧವನ್ನು ಬಯಸುವುದಿಲ್ಲ ಎನ್ನುವುದಾರೆ, ರಷ್ಯಾ ರಾಜತಾಂತ್ರಿಕ ಒಪ್ಪಂದಗಳನ್ನು ಮುಂದುವರೆಸಬೇಕು. ಉಕ್ರೇನ್‌ನ ಗಡಿಗಳಲ್ಲಿ ಮತ್ತು ಉಕ್ರೇನ್‌ ಭಾಗದ ಆಕ್ರಮಿತ ಪ್ರದೇಶಗಳಲ್ಲಿ ನಿಯೋಜಿಸಿರುವ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು. ರಾಜತಾಂತ್ರಿಕತೆ ಮಾತ್ರವೇ ಜವಾಬ್ದಾರಿಯುತ ಮಾರ್ಗವಾಗಿದೆ ಎಂದು ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಅವರು ಟ್ವೀಟ್‌ ಮಾಡಿದ್ದಾರೆ.

ರಷ್ಯಾ ಆಕ್ರಮಣ ಮಾಡಿದರೆ ಉಕ್ರೇನ್‌ಗೆ ಸೈನ್ಯವನ್ನು ನಿಯೋಜಿಸುವ ಉದ್ದೇಶವನ್ನು NATO ಹೊಂದಿಲ್ಲ. ಆದರೆ, ಉಕ್ರೇನ್‌ ಸಮೀಪವಿರುವ ನ್ಯಾಟೋದ ಸದಸ್ಯ ರಾಷ್ಟ್ರಗಳ (ಎಸ್ಟೋನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಪೋಲೆಂಡ್) ರಕ್ಷಣೆಯನ್ನು ಬಲಪಡಿಸಲು ಪ್ರಾರಂಭಿಸಿದೆ. 30 ರಾಷ್ಟ್ರಗಳ ಮಿಲಿಟರಿ ಮೈತ್ರಿಕೂಟವಾದ ನ್ಯಾಟೋ, ಬಲ್ಗೇರಿಯಾ ಮತ್ತು ರೊಮೇನಿಯಾ ಬಳಿಯ ಕಪ್ಪು ಸಮುದ್ರ ಪ್ರದೇಶದಲ್ಲಿ ತನ್ನ ರಕ್ಷಣೆಯನ್ನು ಹೆಚ್ಚಿಸಲು ಯೋಜಿಸುತ್ತಿದೆ.

2,000 ಅಮೆರಿಕಾ ಸೈನಿಕರನ್ನು ಪೋಲೆಂಡ್ ಮತ್ತು ಜರ್ಮನಿಗೆ ಕಳುಹಿಸಲು ಮತ್ತು ಜರ್ಮನಿಯಿಂದ ರೊಮೇನಿಯಾಗೆ 1,000 ಸೈನಿಕರನ್ನು ಸ್ಥಳಾಂತರಿಸಲು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಿರ್ಧರಿಸಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸಿರುವ ಸ್ಟೋಲ್ಟೆನ್‌ಬರ್ಗ್, ಇದು ಪೂರ್ವ ದೇಶಗಳ ಬಗ್ಗೆ NATOದ ಸದಸ್ಯ ರಾಷ್ಟ್ರವಾಗಿರುವ ಅಮೆರಿಕಾದ ಬದ್ಧತೆಯನ್ನು ಮಿತ್ರರಾಷ್ಟ್ರಗಳು ಮತ್ತು ಶತ್ರುಗಳಿಗೆ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

“ಬಿಕ್ಕಟ್ಟಿಗೆ ರಾಜಕೀಯ ಪರಿಹಾರವನ್ನು ಕಂಡುಹಿಡಿಯಲು ನಾವು ಬದ್ಧರಾಗಿದ್ದೇವೆ. ಆದರೆ, ಕೆಟ್ಟ ಪರಿಸ್ಥಿತಿ ಎದುರಾದರೆ, ಅದನ್ನು ನಿಭಾಯಿಸಲು ನಾವು ಸಿದ್ಧರಾಗಿರಬೇಕು” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...