Homeಅಂತರಾಷ್ಟ್ರೀಯಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

ಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

- Advertisement -
- Advertisement -

ಉಕ್ರೇನ್‌ನ ಗಡಿಭಾಗದಲ್ಲಿ ತನ್ನ ಸೇನಾ ನಿಯೋಜನೆಯನ್ನ ಹಿಂತೆಗೆದುಕೊಳ್ಳಲು ರಷ್ಯಾ ಸಿದ್ಧವಾಗಿಲ್ಲ. 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಷ್ಯಾವು ಉಕ್ರೇನ್ನ ಉತ್ತರದ ಗಡಿಭಾಗದಲ್ಲಿ ಮತ್ತು ಬೆಲಾರಸ್‌ನಲ್ಲಿ ತನ್ನ ಸೈನಿಕರು ಮತ್ತು ಸೇನಾ ಶಸ್ತ್ರಾಸ್ತ್ರಗಳ ಪ್ರಮಾಣವನ್ನು ಹೆಚ್ಚಿಸಿದೆ ಎಂದು ನ್ಯಾಟೋ ಸೆಕ್ರೆಟರಿ-ಜನರಲ್ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ರಷ್ಯಾದ ಉದ್ದೇಶಗಳು ಏನಿರಬಹುದು ಎಂಬ ಅನಿಶ್ಚಿತತೆ ಜಾಗತಿಕ ಮಟ್ಟದಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಈ ನಡುವೆ ಮಾಸ್ಕೋ (ರಷ್ಯಾ ರಾಜಧಾನಿ) ಮತ್ತು ಕೈವ್‌ (ಉಕ್ರೇನ್‌ ರಾಜಧಾನಿ)ನಲ್ಲಿ ಹೆಚ್ಚಿನ ಉನ್ನತ ಮಟ್ಟದ ರಾಜತಾಂತ್ರಿಕತೆಯು ತೆರೆದುಕೊಂಡಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ 

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೊಗಾನ್‌ ಅವರು ಉಕ್ರೇನ್ ರಾಜಧಾನಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಇದೇ ಸಮಯದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅರ್ಜೆಂಟೀನಾದ ಅಧ್ಯಕ್ಷ ಅಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಲಿದ್ದಾರೆ.

ಉಕ್ರೇನ್‌ನ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ 1,00,000 ಕ್ಕೂ ಹೆಚ್ಚು ಸೈನಿಕರನ್ನು ರಷ್ಯಾ ನಿಯೋಜಿಸಿದೆ. 2014ರಲ್ಲಿ ಮಾಡಿದಂತೆಯೇ ರಷ್ಯಾ ಮತ್ತೊಮ್ಮೆ ಆಕ್ರಮಣ ಮಾಡಬಹುದು. ಇದರಿಂದಾಗಿ ಉಕ್ರೇನ್‌ನ ಆರ್ಥಿಕತೆ ಅಸ್ಥಿರಗೊಳಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ. ಆದರೆ, ಉಕ್ರೇನ್‌ ಮೇಲೆ ಆಕ್ರಮಣ ಮಾಡಲು ಯೋಜಿಸಲಾಗಿದೆ ಎಂಬ ಅನುಮಾನಗಳನ್ನು ರಷ್ಯಾದ ಅಧಿಕಾರಿಗಳು ನಿರಾಕರಿಸಿದ್ದಾರೆ.

ಆದರೂ, “ಕಳೆದ ಕೆಲವು ದಿನಗಳಿಂದ ರಷ್ಯಾ ಮಿಲಿಟರಿ ಪಡೆಗಳು ಬೆಲಾರಸ್‌ನಲ್ಲಿ ಬೀಡು ಬಿಡಲಾರಂಭಿಸಿವೆ. ಶೀತಲ ಸಮರದ ನಂತರ ಇದು ರಷ್ಯಾದ ಅತಿದೊಡ್ಡ ನಿಯೋಜನೆಯಾಗಿದೆ” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶೇಷ ಪಡೆಗಳು, ಸುಧಾರಿತ ಫೈಟರ್ ಜೆಟ್‌ಗಳು, ಇಸ್ಕಾಂಡರ್ ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು S-400 ಗ್ರೌಂಡ್‌ ಟು ಏರ್‌ ಕ್ಷಿಪಣಿಗಳು ಸೇರಿದಂತೆ 30,000 ಸೈನಿಕರನ್ನು ರಷ್ಯಾವು ಬೆಲಾರಸ್‌ನಲ್ಲಿ ಸಜ್ಜುಗೊಳಿಸಿದೆ ಎಂದು ಸ್ಟೋಲ್ಟೆನ್‌ಬರ್ಗ್‌ ಹೇಳಿದ್ದಾರೆ.

ಅದೇ ಸಮಯದಲ್ಲಿ, ಉಕ್ರೇನ್ ಕಳೆದ ತಿಂಗಳು ಡ್ರೋನ್ ಮೂಲಕ ದೇಶದ ವಾಯುಪ್ರದೇಶದ ಗಡಿ ಉಲ್ಲಂಘನೆಯನ್ನು ಮಾಡಿದೆ ಎಂದು ಬೆಲಾರಸ್‌ನ ರಕ್ಷಣಾ ಸಚಿವಾಲಯವು ಆರೋಪಿಸಿದೆ. ಬೆಲಾರಸ್‌ನ ಆರೋಪವನ್ನು ತಿರಸ್ಕರಿಸಿರುವ ಉಕ್ರೇನ್, ತಮ್ಮನ್ನು ಮತ್ತಷ್ಟು ಅಸ್ಥಿರಗೊಳಿಸಲು ರಷ್ಯಾದೊಂದಿಗೆ ಬೆಲಾರಸ್ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಉಕ್ರೇನ್‌ಅನ್ನು ಅಸ್ಥಿರಗೊಳಿಸುವ ರಷ್ಯಾದ ಚಟುವಟಿಕೆಗಳನ್ನು ತಡೆಯಲು ನಾವು ಮಿನ್ಸ್ಕ್‌ಗೆ ಕರೆ ನೀಡುತ್ತೇವೆ. ಬೆದರಿಕೆ ಅಸ್ತಿತ್ವದಲ್ಲಿದೆ, ಅಪಾಯಗಳು ಅಸ್ತಿತ್ವದಲ್ಲಿವೆ, ಆದರೆ ಅವರು 2014 ರಿಂದಲೂ ಇದು ಮುಂದುವರೆಯುತ್ತಿದೆ. ಅಂದಿನಿಂದಲೂ ರಷ್ಯಾ ಆಕ್ರಮಣಕಾರಿಯಾಗಿದೆ” ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯದ ವಕ್ತಾರ ಒಲೆಗ್ ನಿಕೊಲೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ರಷ್ಯಾ ಹೊಸ ಯುದ್ಧವನ್ನು ಬಯಸುವುದಿಲ್ಲ ಎನ್ನುವುದಾರೆ, ರಷ್ಯಾ ರಾಜತಾಂತ್ರಿಕ ಒಪ್ಪಂದಗಳನ್ನು ಮುಂದುವರೆಸಬೇಕು. ಉಕ್ರೇನ್‌ನ ಗಡಿಗಳಲ್ಲಿ ಮತ್ತು ಉಕ್ರೇನ್‌ ಭಾಗದ ಆಕ್ರಮಿತ ಪ್ರದೇಶಗಳಲ್ಲಿ ನಿಯೋಜಿಸಿರುವ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು. ರಾಜತಾಂತ್ರಿಕತೆ ಮಾತ್ರವೇ ಜವಾಬ್ದಾರಿಯುತ ಮಾರ್ಗವಾಗಿದೆ ಎಂದು ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಅವರು ಟ್ವೀಟ್‌ ಮಾಡಿದ್ದಾರೆ.

ರಷ್ಯಾ ಆಕ್ರಮಣ ಮಾಡಿದರೆ ಉಕ್ರೇನ್‌ಗೆ ಸೈನ್ಯವನ್ನು ನಿಯೋಜಿಸುವ ಉದ್ದೇಶವನ್ನು NATO ಹೊಂದಿಲ್ಲ. ಆದರೆ, ಉಕ್ರೇನ್‌ ಸಮೀಪವಿರುವ ನ್ಯಾಟೋದ ಸದಸ್ಯ ರಾಷ್ಟ್ರಗಳ (ಎಸ್ಟೋನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಪೋಲೆಂಡ್) ರಕ್ಷಣೆಯನ್ನು ಬಲಪಡಿಸಲು ಪ್ರಾರಂಭಿಸಿದೆ. 30 ರಾಷ್ಟ್ರಗಳ ಮಿಲಿಟರಿ ಮೈತ್ರಿಕೂಟವಾದ ನ್ಯಾಟೋ, ಬಲ್ಗೇರಿಯಾ ಮತ್ತು ರೊಮೇನಿಯಾ ಬಳಿಯ ಕಪ್ಪು ಸಮುದ್ರ ಪ್ರದೇಶದಲ್ಲಿ ತನ್ನ ರಕ್ಷಣೆಯನ್ನು ಹೆಚ್ಚಿಸಲು ಯೋಜಿಸುತ್ತಿದೆ.

2,000 ಅಮೆರಿಕಾ ಸೈನಿಕರನ್ನು ಪೋಲೆಂಡ್ ಮತ್ತು ಜರ್ಮನಿಗೆ ಕಳುಹಿಸಲು ಮತ್ತು ಜರ್ಮನಿಯಿಂದ ರೊಮೇನಿಯಾಗೆ 1,000 ಸೈನಿಕರನ್ನು ಸ್ಥಳಾಂತರಿಸಲು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಿರ್ಧರಿಸಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸಿರುವ ಸ್ಟೋಲ್ಟೆನ್‌ಬರ್ಗ್, ಇದು ಪೂರ್ವ ದೇಶಗಳ ಬಗ್ಗೆ NATOದ ಸದಸ್ಯ ರಾಷ್ಟ್ರವಾಗಿರುವ ಅಮೆರಿಕಾದ ಬದ್ಧತೆಯನ್ನು ಮಿತ್ರರಾಷ್ಟ್ರಗಳು ಮತ್ತು ಶತ್ರುಗಳಿಗೆ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

“ಬಿಕ್ಕಟ್ಟಿಗೆ ರಾಜಕೀಯ ಪರಿಹಾರವನ್ನು ಕಂಡುಹಿಡಿಯಲು ನಾವು ಬದ್ಧರಾಗಿದ್ದೇವೆ. ಆದರೆ, ಕೆಟ್ಟ ಪರಿಸ್ಥಿತಿ ಎದುರಾದರೆ, ಅದನ್ನು ನಿಭಾಯಿಸಲು ನಾವು ಸಿದ್ಧರಾಗಿರಬೇಕು” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...