Homeಅಂತರಾಷ್ಟ್ರೀಯಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

ಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

- Advertisement -
- Advertisement -

ಉಕ್ರೇನ್‌ನ ಗಡಿಭಾಗದಲ್ಲಿ ತನ್ನ ಸೇನಾ ನಿಯೋಜನೆಯನ್ನ ಹಿಂತೆಗೆದುಕೊಳ್ಳಲು ರಷ್ಯಾ ಸಿದ್ಧವಾಗಿಲ್ಲ. 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಷ್ಯಾವು ಉಕ್ರೇನ್ನ ಉತ್ತರದ ಗಡಿಭಾಗದಲ್ಲಿ ಮತ್ತು ಬೆಲಾರಸ್‌ನಲ್ಲಿ ತನ್ನ ಸೈನಿಕರು ಮತ್ತು ಸೇನಾ ಶಸ್ತ್ರಾಸ್ತ್ರಗಳ ಪ್ರಮಾಣವನ್ನು ಹೆಚ್ಚಿಸಿದೆ ಎಂದು ನ್ಯಾಟೋ ಸೆಕ್ರೆಟರಿ-ಜನರಲ್ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ರಷ್ಯಾದ ಉದ್ದೇಶಗಳು ಏನಿರಬಹುದು ಎಂಬ ಅನಿಶ್ಚಿತತೆ ಜಾಗತಿಕ ಮಟ್ಟದಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಈ ನಡುವೆ ಮಾಸ್ಕೋ (ರಷ್ಯಾ ರಾಜಧಾನಿ) ಮತ್ತು ಕೈವ್‌ (ಉಕ್ರೇನ್‌ ರಾಜಧಾನಿ)ನಲ್ಲಿ ಹೆಚ್ಚಿನ ಉನ್ನತ ಮಟ್ಟದ ರಾಜತಾಂತ್ರಿಕತೆಯು ತೆರೆದುಕೊಂಡಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ 

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೊಗಾನ್‌ ಅವರು ಉಕ್ರೇನ್ ರಾಜಧಾನಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಇದೇ ಸಮಯದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅರ್ಜೆಂಟೀನಾದ ಅಧ್ಯಕ್ಷ ಅಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಲಿದ್ದಾರೆ.

ಉಕ್ರೇನ್‌ನ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ 1,00,000 ಕ್ಕೂ ಹೆಚ್ಚು ಸೈನಿಕರನ್ನು ರಷ್ಯಾ ನಿಯೋಜಿಸಿದೆ. 2014ರಲ್ಲಿ ಮಾಡಿದಂತೆಯೇ ರಷ್ಯಾ ಮತ್ತೊಮ್ಮೆ ಆಕ್ರಮಣ ಮಾಡಬಹುದು. ಇದರಿಂದಾಗಿ ಉಕ್ರೇನ್‌ನ ಆರ್ಥಿಕತೆ ಅಸ್ಥಿರಗೊಳಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ. ಆದರೆ, ಉಕ್ರೇನ್‌ ಮೇಲೆ ಆಕ್ರಮಣ ಮಾಡಲು ಯೋಜಿಸಲಾಗಿದೆ ಎಂಬ ಅನುಮಾನಗಳನ್ನು ರಷ್ಯಾದ ಅಧಿಕಾರಿಗಳು ನಿರಾಕರಿಸಿದ್ದಾರೆ.

ಆದರೂ, “ಕಳೆದ ಕೆಲವು ದಿನಗಳಿಂದ ರಷ್ಯಾ ಮಿಲಿಟರಿ ಪಡೆಗಳು ಬೆಲಾರಸ್‌ನಲ್ಲಿ ಬೀಡು ಬಿಡಲಾರಂಭಿಸಿವೆ. ಶೀತಲ ಸಮರದ ನಂತರ ಇದು ರಷ್ಯಾದ ಅತಿದೊಡ್ಡ ನಿಯೋಜನೆಯಾಗಿದೆ” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶೇಷ ಪಡೆಗಳು, ಸುಧಾರಿತ ಫೈಟರ್ ಜೆಟ್‌ಗಳು, ಇಸ್ಕಾಂಡರ್ ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು S-400 ಗ್ರೌಂಡ್‌ ಟು ಏರ್‌ ಕ್ಷಿಪಣಿಗಳು ಸೇರಿದಂತೆ 30,000 ಸೈನಿಕರನ್ನು ರಷ್ಯಾವು ಬೆಲಾರಸ್‌ನಲ್ಲಿ ಸಜ್ಜುಗೊಳಿಸಿದೆ ಎಂದು ಸ್ಟೋಲ್ಟೆನ್‌ಬರ್ಗ್‌ ಹೇಳಿದ್ದಾರೆ.

ಅದೇ ಸಮಯದಲ್ಲಿ, ಉಕ್ರೇನ್ ಕಳೆದ ತಿಂಗಳು ಡ್ರೋನ್ ಮೂಲಕ ದೇಶದ ವಾಯುಪ್ರದೇಶದ ಗಡಿ ಉಲ್ಲಂಘನೆಯನ್ನು ಮಾಡಿದೆ ಎಂದು ಬೆಲಾರಸ್‌ನ ರಕ್ಷಣಾ ಸಚಿವಾಲಯವು ಆರೋಪಿಸಿದೆ. ಬೆಲಾರಸ್‌ನ ಆರೋಪವನ್ನು ತಿರಸ್ಕರಿಸಿರುವ ಉಕ್ರೇನ್, ತಮ್ಮನ್ನು ಮತ್ತಷ್ಟು ಅಸ್ಥಿರಗೊಳಿಸಲು ರಷ್ಯಾದೊಂದಿಗೆ ಬೆಲಾರಸ್ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಉಕ್ರೇನ್‌ಅನ್ನು ಅಸ್ಥಿರಗೊಳಿಸುವ ರಷ್ಯಾದ ಚಟುವಟಿಕೆಗಳನ್ನು ತಡೆಯಲು ನಾವು ಮಿನ್ಸ್ಕ್‌ಗೆ ಕರೆ ನೀಡುತ್ತೇವೆ. ಬೆದರಿಕೆ ಅಸ್ತಿತ್ವದಲ್ಲಿದೆ, ಅಪಾಯಗಳು ಅಸ್ತಿತ್ವದಲ್ಲಿವೆ, ಆದರೆ ಅವರು 2014 ರಿಂದಲೂ ಇದು ಮುಂದುವರೆಯುತ್ತಿದೆ. ಅಂದಿನಿಂದಲೂ ರಷ್ಯಾ ಆಕ್ರಮಣಕಾರಿಯಾಗಿದೆ” ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯದ ವಕ್ತಾರ ಒಲೆಗ್ ನಿಕೊಲೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ರಷ್ಯಾ ಹೊಸ ಯುದ್ಧವನ್ನು ಬಯಸುವುದಿಲ್ಲ ಎನ್ನುವುದಾರೆ, ರಷ್ಯಾ ರಾಜತಾಂತ್ರಿಕ ಒಪ್ಪಂದಗಳನ್ನು ಮುಂದುವರೆಸಬೇಕು. ಉಕ್ರೇನ್‌ನ ಗಡಿಗಳಲ್ಲಿ ಮತ್ತು ಉಕ್ರೇನ್‌ ಭಾಗದ ಆಕ್ರಮಿತ ಪ್ರದೇಶಗಳಲ್ಲಿ ನಿಯೋಜಿಸಿರುವ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು. ರಾಜತಾಂತ್ರಿಕತೆ ಮಾತ್ರವೇ ಜವಾಬ್ದಾರಿಯುತ ಮಾರ್ಗವಾಗಿದೆ ಎಂದು ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಅವರು ಟ್ವೀಟ್‌ ಮಾಡಿದ್ದಾರೆ.

ರಷ್ಯಾ ಆಕ್ರಮಣ ಮಾಡಿದರೆ ಉಕ್ರೇನ್‌ಗೆ ಸೈನ್ಯವನ್ನು ನಿಯೋಜಿಸುವ ಉದ್ದೇಶವನ್ನು NATO ಹೊಂದಿಲ್ಲ. ಆದರೆ, ಉಕ್ರೇನ್‌ ಸಮೀಪವಿರುವ ನ್ಯಾಟೋದ ಸದಸ್ಯ ರಾಷ್ಟ್ರಗಳ (ಎಸ್ಟೋನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಪೋಲೆಂಡ್) ರಕ್ಷಣೆಯನ್ನು ಬಲಪಡಿಸಲು ಪ್ರಾರಂಭಿಸಿದೆ. 30 ರಾಷ್ಟ್ರಗಳ ಮಿಲಿಟರಿ ಮೈತ್ರಿಕೂಟವಾದ ನ್ಯಾಟೋ, ಬಲ್ಗೇರಿಯಾ ಮತ್ತು ರೊಮೇನಿಯಾ ಬಳಿಯ ಕಪ್ಪು ಸಮುದ್ರ ಪ್ರದೇಶದಲ್ಲಿ ತನ್ನ ರಕ್ಷಣೆಯನ್ನು ಹೆಚ್ಚಿಸಲು ಯೋಜಿಸುತ್ತಿದೆ.

2,000 ಅಮೆರಿಕಾ ಸೈನಿಕರನ್ನು ಪೋಲೆಂಡ್ ಮತ್ತು ಜರ್ಮನಿಗೆ ಕಳುಹಿಸಲು ಮತ್ತು ಜರ್ಮನಿಯಿಂದ ರೊಮೇನಿಯಾಗೆ 1,000 ಸೈನಿಕರನ್ನು ಸ್ಥಳಾಂತರಿಸಲು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಿರ್ಧರಿಸಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸಿರುವ ಸ್ಟೋಲ್ಟೆನ್‌ಬರ್ಗ್, ಇದು ಪೂರ್ವ ದೇಶಗಳ ಬಗ್ಗೆ NATOದ ಸದಸ್ಯ ರಾಷ್ಟ್ರವಾಗಿರುವ ಅಮೆರಿಕಾದ ಬದ್ಧತೆಯನ್ನು ಮಿತ್ರರಾಷ್ಟ್ರಗಳು ಮತ್ತು ಶತ್ರುಗಳಿಗೆ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

“ಬಿಕ್ಕಟ್ಟಿಗೆ ರಾಜಕೀಯ ಪರಿಹಾರವನ್ನು ಕಂಡುಹಿಡಿಯಲು ನಾವು ಬದ್ಧರಾಗಿದ್ದೇವೆ. ಆದರೆ, ಕೆಟ್ಟ ಪರಿಸ್ಥಿತಿ ಎದುರಾದರೆ, ಅದನ್ನು ನಿಭಾಯಿಸಲು ನಾವು ಸಿದ್ಧರಾಗಿರಬೇಕು” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...