Homeಅಂತರಾಷ್ಟ್ರೀಯಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

ಬೆಲಾರಸ್‌ನಲ್ಲಿ ರಷ್ಯಾ ಸೇನಾ ನಿಯೋಜನೆ ಕುರಿತು ನ್ಯಾಟೋ ಕಳವಳ

- Advertisement -
- Advertisement -

ಉಕ್ರೇನ್‌ನ ಗಡಿಭಾಗದಲ್ಲಿ ತನ್ನ ಸೇನಾ ನಿಯೋಜನೆಯನ್ನ ಹಿಂತೆಗೆದುಕೊಳ್ಳಲು ರಷ್ಯಾ ಸಿದ್ಧವಾಗಿಲ್ಲ. 30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಷ್ಯಾವು ಉಕ್ರೇನ್ನ ಉತ್ತರದ ಗಡಿಭಾಗದಲ್ಲಿ ಮತ್ತು ಬೆಲಾರಸ್‌ನಲ್ಲಿ ತನ್ನ ಸೈನಿಕರು ಮತ್ತು ಸೇನಾ ಶಸ್ತ್ರಾಸ್ತ್ರಗಳ ಪ್ರಮಾಣವನ್ನು ಹೆಚ್ಚಿಸಿದೆ ಎಂದು ನ್ಯಾಟೋ ಸೆಕ್ರೆಟರಿ-ಜನರಲ್ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ರಷ್ಯಾದ ಉದ್ದೇಶಗಳು ಏನಿರಬಹುದು ಎಂಬ ಅನಿಶ್ಚಿತತೆ ಜಾಗತಿಕ ಮಟ್ಟದಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಈ ನಡುವೆ ಮಾಸ್ಕೋ (ರಷ್ಯಾ ರಾಜಧಾನಿ) ಮತ್ತು ಕೈವ್‌ (ಉಕ್ರೇನ್‌ ರಾಜಧಾನಿ)ನಲ್ಲಿ ಹೆಚ್ಚಿನ ಉನ್ನತ ಮಟ್ಟದ ರಾಜತಾಂತ್ರಿಕತೆಯು ತೆರೆದುಕೊಂಡಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ 

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೊಗಾನ್‌ ಅವರು ಉಕ್ರೇನ್ ರಾಜಧಾನಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಇದೇ ಸಮಯದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅರ್ಜೆಂಟೀನಾದ ಅಧ್ಯಕ್ಷ ಅಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಲಿದ್ದಾರೆ.

ಉಕ್ರೇನ್‌ನ ಉತ್ತರ ಮತ್ತು ಪೂರ್ವ ಗಡಿಗಳಲ್ಲಿ 1,00,000 ಕ್ಕೂ ಹೆಚ್ಚು ಸೈನಿಕರನ್ನು ರಷ್ಯಾ ನಿಯೋಜಿಸಿದೆ. 2014ರಲ್ಲಿ ಮಾಡಿದಂತೆಯೇ ರಷ್ಯಾ ಮತ್ತೊಮ್ಮೆ ಆಕ್ರಮಣ ಮಾಡಬಹುದು. ಇದರಿಂದಾಗಿ ಉಕ್ರೇನ್‌ನ ಆರ್ಥಿಕತೆ ಅಸ್ಥಿರಗೊಳಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ. ಆದರೆ, ಉಕ್ರೇನ್‌ ಮೇಲೆ ಆಕ್ರಮಣ ಮಾಡಲು ಯೋಜಿಸಲಾಗಿದೆ ಎಂಬ ಅನುಮಾನಗಳನ್ನು ರಷ್ಯಾದ ಅಧಿಕಾರಿಗಳು ನಿರಾಕರಿಸಿದ್ದಾರೆ.

ಆದರೂ, “ಕಳೆದ ಕೆಲವು ದಿನಗಳಿಂದ ರಷ್ಯಾ ಮಿಲಿಟರಿ ಪಡೆಗಳು ಬೆಲಾರಸ್‌ನಲ್ಲಿ ಬೀಡು ಬಿಡಲಾರಂಭಿಸಿವೆ. ಶೀತಲ ಸಮರದ ನಂತರ ಇದು ರಷ್ಯಾದ ಅತಿದೊಡ್ಡ ನಿಯೋಜನೆಯಾಗಿದೆ” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಕ್ಯಾನ್ಸರ್ ದಿನ -2022: ಕ್ಯಾನ್ಸರ್ ಆರೈಕೆಯ ಅಸಮಾನತೆ ಅಂತ್ಯ ಅಭಿಯಾನ

ವಿಶೇಷ ಪಡೆಗಳು, ಸುಧಾರಿತ ಫೈಟರ್ ಜೆಟ್‌ಗಳು, ಇಸ್ಕಾಂಡರ್ ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು S-400 ಗ್ರೌಂಡ್‌ ಟು ಏರ್‌ ಕ್ಷಿಪಣಿಗಳು ಸೇರಿದಂತೆ 30,000 ಸೈನಿಕರನ್ನು ರಷ್ಯಾವು ಬೆಲಾರಸ್‌ನಲ್ಲಿ ಸಜ್ಜುಗೊಳಿಸಿದೆ ಎಂದು ಸ್ಟೋಲ್ಟೆನ್‌ಬರ್ಗ್‌ ಹೇಳಿದ್ದಾರೆ.

ಅದೇ ಸಮಯದಲ್ಲಿ, ಉಕ್ರೇನ್ ಕಳೆದ ತಿಂಗಳು ಡ್ರೋನ್ ಮೂಲಕ ದೇಶದ ವಾಯುಪ್ರದೇಶದ ಗಡಿ ಉಲ್ಲಂಘನೆಯನ್ನು ಮಾಡಿದೆ ಎಂದು ಬೆಲಾರಸ್‌ನ ರಕ್ಷಣಾ ಸಚಿವಾಲಯವು ಆರೋಪಿಸಿದೆ. ಬೆಲಾರಸ್‌ನ ಆರೋಪವನ್ನು ತಿರಸ್ಕರಿಸಿರುವ ಉಕ್ರೇನ್, ತಮ್ಮನ್ನು ಮತ್ತಷ್ಟು ಅಸ್ಥಿರಗೊಳಿಸಲು ರಷ್ಯಾದೊಂದಿಗೆ ಬೆಲಾರಸ್ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

“ಉಕ್ರೇನ್‌ಅನ್ನು ಅಸ್ಥಿರಗೊಳಿಸುವ ರಷ್ಯಾದ ಚಟುವಟಿಕೆಗಳನ್ನು ತಡೆಯಲು ನಾವು ಮಿನ್ಸ್ಕ್‌ಗೆ ಕರೆ ನೀಡುತ್ತೇವೆ. ಬೆದರಿಕೆ ಅಸ್ತಿತ್ವದಲ್ಲಿದೆ, ಅಪಾಯಗಳು ಅಸ್ತಿತ್ವದಲ್ಲಿವೆ, ಆದರೆ ಅವರು 2014 ರಿಂದಲೂ ಇದು ಮುಂದುವರೆಯುತ್ತಿದೆ. ಅಂದಿನಿಂದಲೂ ರಷ್ಯಾ ಆಕ್ರಮಣಕಾರಿಯಾಗಿದೆ” ಎಂದು ಉಕ್ರೇನ್ ವಿದೇಶಾಂಗ ಸಚಿವಾಲಯದ ವಕ್ತಾರ ಒಲೆಗ್ ನಿಕೊಲೆಂಕೊ ಹೇಳಿದ್ದಾರೆ.

ಇದನ್ನೂ ಓದಿ: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ರಷ್ಯಾ ಹೊಸ ಯುದ್ಧವನ್ನು ಬಯಸುವುದಿಲ್ಲ ಎನ್ನುವುದಾರೆ, ರಷ್ಯಾ ರಾಜತಾಂತ್ರಿಕ ಒಪ್ಪಂದಗಳನ್ನು ಮುಂದುವರೆಸಬೇಕು. ಉಕ್ರೇನ್‌ನ ಗಡಿಗಳಲ್ಲಿ ಮತ್ತು ಉಕ್ರೇನ್‌ ಭಾಗದ ಆಕ್ರಮಿತ ಪ್ರದೇಶಗಳಲ್ಲಿ ನಿಯೋಜಿಸಿರುವ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು. ರಾಜತಾಂತ್ರಿಕತೆ ಮಾತ್ರವೇ ಜವಾಬ್ದಾರಿಯುತ ಮಾರ್ಗವಾಗಿದೆ ಎಂದು ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಅವರು ಟ್ವೀಟ್‌ ಮಾಡಿದ್ದಾರೆ.

ರಷ್ಯಾ ಆಕ್ರಮಣ ಮಾಡಿದರೆ ಉಕ್ರೇನ್‌ಗೆ ಸೈನ್ಯವನ್ನು ನಿಯೋಜಿಸುವ ಉದ್ದೇಶವನ್ನು NATO ಹೊಂದಿಲ್ಲ. ಆದರೆ, ಉಕ್ರೇನ್‌ ಸಮೀಪವಿರುವ ನ್ಯಾಟೋದ ಸದಸ್ಯ ರಾಷ್ಟ್ರಗಳ (ಎಸ್ಟೋನಿಯಾ, ಲಾಟ್ವಿಯಾ, ಲಿಥುವೇನಿಯಾ ಮತ್ತು ಪೋಲೆಂಡ್) ರಕ್ಷಣೆಯನ್ನು ಬಲಪಡಿಸಲು ಪ್ರಾರಂಭಿಸಿದೆ. 30 ರಾಷ್ಟ್ರಗಳ ಮಿಲಿಟರಿ ಮೈತ್ರಿಕೂಟವಾದ ನ್ಯಾಟೋ, ಬಲ್ಗೇರಿಯಾ ಮತ್ತು ರೊಮೇನಿಯಾ ಬಳಿಯ ಕಪ್ಪು ಸಮುದ್ರ ಪ್ರದೇಶದಲ್ಲಿ ತನ್ನ ರಕ್ಷಣೆಯನ್ನು ಹೆಚ್ಚಿಸಲು ಯೋಜಿಸುತ್ತಿದೆ.

2,000 ಅಮೆರಿಕಾ ಸೈನಿಕರನ್ನು ಪೋಲೆಂಡ್ ಮತ್ತು ಜರ್ಮನಿಗೆ ಕಳುಹಿಸಲು ಮತ್ತು ಜರ್ಮನಿಯಿಂದ ರೊಮೇನಿಯಾಗೆ 1,000 ಸೈನಿಕರನ್ನು ಸ್ಥಳಾಂತರಿಸಲು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಿರ್ಧರಿಸಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸಿರುವ ಸ್ಟೋಲ್ಟೆನ್‌ಬರ್ಗ್, ಇದು ಪೂರ್ವ ದೇಶಗಳ ಬಗ್ಗೆ NATOದ ಸದಸ್ಯ ರಾಷ್ಟ್ರವಾಗಿರುವ ಅಮೆರಿಕಾದ ಬದ್ಧತೆಯನ್ನು ಮಿತ್ರರಾಷ್ಟ್ರಗಳು ಮತ್ತು ಶತ್ರುಗಳಿಗೆ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

“ಬಿಕ್ಕಟ್ಟಿಗೆ ರಾಜಕೀಯ ಪರಿಹಾರವನ್ನು ಕಂಡುಹಿಡಿಯಲು ನಾವು ಬದ್ಧರಾಗಿದ್ದೇವೆ. ಆದರೆ, ಕೆಟ್ಟ ಪರಿಸ್ಥಿತಿ ಎದುರಾದರೆ, ಅದನ್ನು ನಿಭಾಯಿಸಲು ನಾವು ಸಿದ್ಧರಾಗಿರಬೇಕು” ಎಂದು ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....