Homeಮುಖಪುಟಪ್ರಕೃತಿ ಸಹಜ ಕೃಷಿಯಿಂದ ಮಾತ್ರ ಲಾಭ ಸಾಧ್ಯ : ಅವಿನಾಶ್

ಪ್ರಕೃತಿ ಸಹಜ ಕೃಷಿಯಿಂದ ಮಾತ್ರ ಲಾಭ ಸಾಧ್ಯ : ಅವಿನಾಶ್

- Advertisement -
- Advertisement -

ನನ್ನ ಗುರುಗಳಾದ ನಾಡೋಜ ಶ್ರೀ ನಾರಾಯಣರೆಡ್ಡಿಯವರ ಒಂದು ಮಾತು ಮತ್ತೆ ಮತ್ತೆ ನೆನಪಿಗೆ ಬರುತ್ತದೆ. ‘ನಮಗೆ ಈ ಸಬ್ಸಿಡಿಗಳು, ಈ ಡ್ಯಾಂಗಳು, ಸಾಲಸೋಲಗಳು ಯಾವುದೂ ಬೇಡ. ಭೂಮಿಯಲ್ಲಿ ಮಳೆ ನೀರನ್ನು ಹಿಡಿದಿಟ್ಟುಕೊಳ್ಳಂಗೆ ಹ್ಯೂಮಸ್ ಉತ್ಪತ್ತಿ ಮಾಡಿ, ಜೀವಾಣುಗಳನ್ನು ಹೆಚ್ಚಿಗೆ ಮಾಡುವಂಗೆ ಮಣ್ಣಿನಲ್ಲಿ ಸೂಕ್ಷ್ಮವಾತಾವರಣ ಸೃಷ್ಟಿ ಮಾಡುವುದು ಹಾಗು ಸಾವಯವ ಇಂಗಾಲವನ್ನು ಶೇ 4ಕ್ಕಿಂತ ಹೆಚ್ಚಾಗಂಗೆ ಮಾಡುವುದನ್ನು ನಮ್ಮ ರೈತರಿಗೆ ಹೇಳ್ಕೊಟ್ಟುಬಿಟ್ರೇ ನೆಮ್ಮದಿಯಿಂದ ಬದುಕುತ್ತಾರೆ’ ಅಂತ.

ನಾನು ಪ್ರತಿ ಬಾರಿ ಅವರನ್ನು ಭೇಟಿಯಾದಾಗಲೂ ಪ್ರಶ್ನೆಗಳ ಸರಮಾಲೆಯನ್ನೇ ಹೊತ್ತೊಯ್ಯುತ್ತಿದ್ದೆ. ಕೃಷಿ ವಿಜ್ಞಾನವನ್ನು ಬಹಳ ಸುಲಭವಾಗಿ ನಮಗೆ ಅರ್ಥಮಾಡಿಸುತ್ತಿದ್ದರು. ‘ಬೇರುಗಳು ಭೂಮಿಯಲ್ಲಿ ಬೆಳೆಯುವುದು, ಸೂಕ್ಷ್ಮ ಜೀವಾಣುಗಳ ಚಟುವಟಿಕೆ ಅಂದರೆ ರಂಧ್ರಗಳನ್ನು ಮಾಡುವುದು, ಓಡಾಡುವುದು… ಭೌತಿಕಕ್ರಿಯೆ’. ‘ಬೇರುಗಳ ರಸ ಮತ್ತು ಜೀವಾಣುಗಳು ಬಿಡುವ ಜೊಲ್ಲು… ರಾಸಾಯನಿಕ ಕ್ರಿಯೆ’. ‘ಜೀವಾಣುಗಳು, ಎರೆಹುಳುಗಳು, ಕೀಟಗಳು ಇತ್ಯಾದಿ ಮಣ್ಣಿನಲ್ಲಿ ಸಹಜವಾಗಿ ಸತ್ತರೆ ಅದು ಜೈವಿಕ ಕ್ರಿಯೆ’ ಎಂದು.

ಮುಂದೆ ಅವರು ತಮ್ಮ ಮಾತನ್ನು ಮುಂದುವರಿಸುತ್ತ ‘ಈ ಮೂರು ಕ್ರಿಯೆಗಳು ಭೂಮಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಅದರ ಜೊತೆ ಬೇರುಗಳು ಹೊರಸೂಸುವ ರಸ (ರಾಸಾಯನಿಕಗಳು) ಸೇರಿದರೆ ಫ್ಲೋರಿಕ್ ಆಸಿಡ್ ತಯಾರಾಗುತ್ತದೆ. ಈ ಫ್ಲೋರಿಕ್ ಆಸಿಡ್ ಕಲ್ಲನ್ನು ಕರಗಿಸುವ ಶಕ್ತಿಯನ್ನು ಹೊಂದಿರುತ್ತದೆ. ಭೂಮಿಯಲ್ಲಿ ಸಹಜವಾಗಿ ಲಭ್ಯವಿರುವ ಹಲವು ಬಣ್ಣದ ಕಲ್ಲಿನಲ್ಲಿ ಸಸ್ಯ ಪೋಷಕಾಂಶಗಳಿರುತ್ತವೆ. ಒಂದು ಕೆ.ಜಿ ಕಲ್ಲಿನಲ್ಲಿ 350ರಿಂದ 500 ಗ್ರಾಮ್ ವಿವಿಧ ಸಸ್ಯ ಪೋಷಕಾಂಶಗಳು ಲಭ್ಯವಿರುತ್ತವೆ. ಈ ಫ್ಲೋರಿಕ್ ಆಸಿಡ್ ಭೂಮಿಯೊಳಗಡೆಯಿರುವ ಕಲ್ಲುಗಳನ್ನು ನಿರಂತರವಾಗಿ ಕರಗಿಸುತ್ತದೆ ಹಾಗೂ ಈ ಪೋಷಕಾಂಶಗಳನ್ನು ಜೀವಾಣುಗಳು ವಾಹಕದಂತೆ ಬೇರುಗಳಿಗೆ ರವಾನಿಸುತ್ತದೆ. ಇದರಿಂದ ಸಸ್ಯಗಳಿಗೆ ಪೋಷಕಾಂಶಗಳು ನಿರಂತರವಾಗಿ ಲಭ್ಯವಾಗಿ ಹೆಚ್ಚು ಸಮೃದ್ಧಿಯಾಗಿ ಬೆಳೆಯಲು ಸಾಧ್ಯವಾಗುತ್ತದೆ. ಇದು ಸರಳವಾದ ವಿಜ್ಞಾನ’ ಎಂದು ಹೇಳುತ್ತಿದ್ದರು. ಇದನ್ನರಿಯದ ನಾವು ನಮ್ಮಲ್ಲಿರುವ ಕಲ್ಲುಗಳನ್ನು ಕೈಗೆಟುಕದ ಸ್ಥಳದಲ್ಲಿ ಬಿಸಾಡಿದ್ದೇವೆ.

ಹಾಗೆಯೇ ಹ್ಯೂಮಸ್ ಹಾಗು ಸಾವಯವ ಇಂಗಾಲವನ್ನು ವೃದ್ಧಿಸಲಿಲ್ಲ. ಇದರಿಂದ ಪೋಷಕಾಂಶಗಳ ಕೊರತೆಯುಂಟಾಗಿದೆ. ಸಹಜವಾದ ಕೃಷಿ ನಮ್ಮ ಕೈ ತಪ್ಪಿದೆ. ಸಹಜವಾಗಿ ಪೋಷಕಾಂಶಗಳನ್ನು ಪೂರೈಸುವ ವಿಧಾನಗಳನ್ನು ಹೇಳಿಕೊಡುವುದನ್ನು ಬಿಟ್ಟು ಕಂಪನಿಗಳಿಂದ ಉತ್ಪಾದಿಸಿ ನಮಗೆ ದೊರೆಯುವಂತೆ ಮಾಡುತ್ತಿದ್ದಾರೆ. ವಾತಾವರಣದಲ್ಲಿರುವ ಸಾರಜನಕವನ್ನು ಯೂರಿಯಾ ಬ್ಯಾಗ್‍ನಲ್ಲಿ, ಭೂಮಿಯಲ್ಲಿ ಲಭ್ಯವಿರುವ ಪೋಷಕಾಂಶಗಳನ್ನು ಡಿಎಪಿ ಮತ್ತು ಮುಂತಾದ ಹೆಸರಿನ ಬ್ಯಾಗ್‍ನಲ್ಲಿ, ಸಹಜವಾಗಿ ನಮ್ಮದೇ ಭೂಮಿಯಲ್ಲಿ ನೆಲೆಸುತ್ತಿದ್ದ ಎರೆಹುಳುಗಳು, ಜೀವಾಣುಗಳನ್ನು ಬಾಟಲ್‍ನಲ್ಲಿಟ್ಟು ಕೊಂಡುಕೊಳ್ಳುವಂತೆ ಮಾಡಿದ್ದಾರೆ. ರಾಸಾಯನಿಕಗಳ ಬಳಕೆಯಿಂದ ಪ್ರಕೃತಿದತ್ತವಾಗಿ ಲಭ್ಯವಿದ್ದ ಎಲ್ಲವನ್ನೂ ಕೊಲ್ಲುವಂತೆ ಮಾಡಿದ್ದಾರೆ. ಇದಕ್ಕೆ ಯಾರು ಹೊಣೆ? ಕಂಪನಿಗಳು, ಮಾರುಕಟ್ಟೆ ತಮ್ಮ ಸ್ವಂತ ಲಾಭಕ್ಕಾಗಿ ಕೆಲಸ ಮಾಡುತ್ತವೆಯೇ ಹೊರತು ರೈತನ ಹಿತಾಸಕ್ತಿಗಾಗಿ ಅಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ.

ಕೃಷಿ ವಿಜ್ಞಾನಿಗಳಾಗಲಿ, ಸರ್ಕಾರಗಳಾಗಲಿ ಈ ನೈಜ ಸಮಸ್ಯೆಯ ಕಡೆಗೆ ಕಣ್ಣೆತ್ತಿಯೂ ನೋಡುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಕಳೆದ ಇಪ್ಪತ್ತು ವರ್ಷಗಳ ಕೆಳಗೆ ಶೇ 70ಕ್ಕಿಂತ ಹೆಚ್ಚಿದ್ದ ಕೃಷಿಕರ ಸಂಖ್ಯೆ ಇಂದು ಶೇ 55ಕ್ಕೆ ಇಳಿದಿದೆ. ಯುವಜನತೆ ಕೃಷಿಯಲ್ಲಿ ಯಶಸ್ಸಿಲ್ಲ, ಆದಾಯವಿಲ್ಲ ಎನ್ನುವ ಕಾರಣಕ್ಕೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಪ್ರಸ್ತುತ ಕೃಷಿಯನ್ನು ಮಾಡುತ್ತಿರುವವರಲ್ಲಿ ಬಹಳಷ್ಟು ಮಂದಿಯ ವಯಸ್ಸು 40ರಿಂದ 60 ವರ್ಷಗಳು. ಇವರ ಕಾರ್ಯಕ್ಷಮತೆ ಇನ್ನು ಹೆಚ್ಚೆಂದರೆ 20ರಿಂದ 30 ವರ್ಷಗಳ ಕಾಲವಿರಬಹುದು. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನೋಡಿದರೆ ಮುಂದಿನ ದಿನಗಳಲ್ಲಿ ಆಹಾರದ ಕ್ಷಾಮಕ್ಕೆ ತುತ್ತಾಗುತ್ತಿದ್ದೆವೇನೋ ಅನ್ನಿಸುತ್ತಿದೆ. ಹಸಿರುಕ್ರಾಂತಿಯ ಆ ದಿನಗಳಲ್ಲಿ ನಮ್ಮ ದೇಶಕ್ಕೆ ಆಹಾರ ಪದಾರ್ಥಗಳನ್ನು ಒದಗಿಸಲು ಹಲವಾರು ದೇಶಗಳ ಮುಂದೆ ಕೈಚಾಚಬೇಕಿತ್ತು. ಕಡೆಗೂ ಅಂದಿನ ಸಂಕಷ್ಟದ ದಿನಗಳಿಂದ ಪಾರಾಗಿ ಹೊರಬಂದೆವು.

ಆದರೆ ಇಂದು, ಪ್ರಪಂಚದಲ್ಲಿರುವ 195 ದೇಶಗಳ ಪೈಕಿ 90ರಿಂದ 100 ದೇಶಗಳು ಮಾತ್ರ ಆಹಾರೋತ್ಪಾದನೆಯಲ್ಲಿ ತೊಡಗಿವೆ. ಅಂದರೆ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿವೆ. ಮುಂದಿನ ದಿನಗಳಲ್ಲಿ ಈ ದೇಶಗಳಿಂದಷ್ಟೇ ಆಹಾರವನ್ನು ಒದಗಿಸುವುದು ಕಷ್ಟ ಸಾಧ್ಯವಾದ ಮಾತು. ಒಂದು ಕಡೆ ಕೃಷಿಯು ಕಂಪನಿಗಳ ಪಾಲಾಗುತ್ತಿದ್ದರೆ ಇನ್ನೊಂದು ಕಡೆ ನಾವು ಅಳವಡಿಸಿಕೊಂಡಿರುವ ಕೃಷಿ ಪದ್ಧತಿಯೂ ನಮ್ಮ ಕೈ ಹಿಡಿಯುತ್ತಿಲ್ಲ. ಕಳೆದ 20 ವರ್ಷಗಳಿಗೆ ಹೋಲಿಸಿದರೆ ಇಂದು ನಮ್ಮ ವ್ಯವಸಾಯ ಭೂಮಿ ಶೇ 20ಕ್ಕಿಂತ ಹೆಚ್ಚು ಪ್ರದೇಶ ಬೆಳೆಗಳಿಲ್ಲದೆ ಪಾಳುಬಿದ್ದಿದೆ. ಇದರ ಜೊತೆಯಲ್ಲಿ ನೂರಾರು ರೈತರು ತಾವು ಬೆಳೆದ ಬೆಳೆಗಳನ್ನು ಸುಟ್ಟುಹಾಕುತ್ತಿದ್ದಾರೆ; ಕ್ರಿಮಿನಾಶಕಗಳನ್ನು ಸಿಂಪಡಿಸುವಾಗ ರೈತರು ಸತ್ತಿದ್ದಾರೆ; ರೈತರ ದೇಹದಲ್ಲಿ ರಾಸಾಯನಿಕಗಳು ಸೇರುತ್ತಿವೆ ಎನ್ನುವ ಹಲವಾರು ವರದಿಗಳು ನಮ್ಮ ಇಂದಿನ ಆಧುನಿಕ ಕೃಷಿಗೆ ಹಿಡಿದ ಕನ್ನಡಿಯಾಗಿದೆ.

ಈ ಸಮಸ್ಯೆಯಿಂದ ನಾವು ಪಾರಾಗಬೇಕಾದರೆ ಸಹಜ ಕೃಷಿಯ ಪರಿಚಯವನ್ನು ಮಾಡಿಕೊಡಬೇಕು. ಯುವಶಕ್ತಿಗೆ ಕೃಷಿಯಲ್ಲಿ ನೆಮ್ಮದಿಯ ಬದುಕಿದೆ ಎನ್ನುವುದನ್ನು ಮನವರಿಕೆ ಮಾಡಿಕೊಡಬೇಕು. ಇದರ ಜೊತೆಜೊತೆಯಲ್ಲಿ ರೈತರ ಸಣ್ಣಸಣ್ಣ ಗುಂಪುಗಳನ್ನು ಮಾಡಿ, ಅವರು ಬೆಳೆದ ಬೆಳೆಗಳನ್ನು ಮೌಲ್ಯವರ್ಧನೆ ಮಾಡುತ್ತಾ, ನಮ್ಮ ಅಕ್ಕಪಕ್ಕದಲ್ಲೆ ಮಾರುಕಟ್ಟೆಯನ್ನು ಸೃಷ್ಟಿಮಾಡುವತ್ತ ಆಲೋಚಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...