Homeಮುಖಪುಟಪ್ರಕೃತಿ ಸಹಜ ಕೃಷಿಯಿಂದ ಮಾತ್ರ ಲಾಭ ಸಾಧ್ಯ : ಅವಿನಾಶ್

ಪ್ರಕೃತಿ ಸಹಜ ಕೃಷಿಯಿಂದ ಮಾತ್ರ ಲಾಭ ಸಾಧ್ಯ : ಅವಿನಾಶ್

- Advertisement -
- Advertisement -

ನನ್ನ ಗುರುಗಳಾದ ನಾಡೋಜ ಶ್ರೀ ನಾರಾಯಣರೆಡ್ಡಿಯವರ ಒಂದು ಮಾತು ಮತ್ತೆ ಮತ್ತೆ ನೆನಪಿಗೆ ಬರುತ್ತದೆ. ‘ನಮಗೆ ಈ ಸಬ್ಸಿಡಿಗಳು, ಈ ಡ್ಯಾಂಗಳು, ಸಾಲಸೋಲಗಳು ಯಾವುದೂ ಬೇಡ. ಭೂಮಿಯಲ್ಲಿ ಮಳೆ ನೀರನ್ನು ಹಿಡಿದಿಟ್ಟುಕೊಳ್ಳಂಗೆ ಹ್ಯೂಮಸ್ ಉತ್ಪತ್ತಿ ಮಾಡಿ, ಜೀವಾಣುಗಳನ್ನು ಹೆಚ್ಚಿಗೆ ಮಾಡುವಂಗೆ ಮಣ್ಣಿನಲ್ಲಿ ಸೂಕ್ಷ್ಮವಾತಾವರಣ ಸೃಷ್ಟಿ ಮಾಡುವುದು ಹಾಗು ಸಾವಯವ ಇಂಗಾಲವನ್ನು ಶೇ 4ಕ್ಕಿಂತ ಹೆಚ್ಚಾಗಂಗೆ ಮಾಡುವುದನ್ನು ನಮ್ಮ ರೈತರಿಗೆ ಹೇಳ್ಕೊಟ್ಟುಬಿಟ್ರೇ ನೆಮ್ಮದಿಯಿಂದ ಬದುಕುತ್ತಾರೆ’ ಅಂತ.

ನಾನು ಪ್ರತಿ ಬಾರಿ ಅವರನ್ನು ಭೇಟಿಯಾದಾಗಲೂ ಪ್ರಶ್ನೆಗಳ ಸರಮಾಲೆಯನ್ನೇ ಹೊತ್ತೊಯ್ಯುತ್ತಿದ್ದೆ. ಕೃಷಿ ವಿಜ್ಞಾನವನ್ನು ಬಹಳ ಸುಲಭವಾಗಿ ನಮಗೆ ಅರ್ಥಮಾಡಿಸುತ್ತಿದ್ದರು. ‘ಬೇರುಗಳು ಭೂಮಿಯಲ್ಲಿ ಬೆಳೆಯುವುದು, ಸೂಕ್ಷ್ಮ ಜೀವಾಣುಗಳ ಚಟುವಟಿಕೆ ಅಂದರೆ ರಂಧ್ರಗಳನ್ನು ಮಾಡುವುದು, ಓಡಾಡುವುದು… ಭೌತಿಕಕ್ರಿಯೆ’. ‘ಬೇರುಗಳ ರಸ ಮತ್ತು ಜೀವಾಣುಗಳು ಬಿಡುವ ಜೊಲ್ಲು… ರಾಸಾಯನಿಕ ಕ್ರಿಯೆ’. ‘ಜೀವಾಣುಗಳು, ಎರೆಹುಳುಗಳು, ಕೀಟಗಳು ಇತ್ಯಾದಿ ಮಣ್ಣಿನಲ್ಲಿ ಸಹಜವಾಗಿ ಸತ್ತರೆ ಅದು ಜೈವಿಕ ಕ್ರಿಯೆ’ ಎಂದು.

ಮುಂದೆ ಅವರು ತಮ್ಮ ಮಾತನ್ನು ಮುಂದುವರಿಸುತ್ತ ‘ಈ ಮೂರು ಕ್ರಿಯೆಗಳು ಭೂಮಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಅದರ ಜೊತೆ ಬೇರುಗಳು ಹೊರಸೂಸುವ ರಸ (ರಾಸಾಯನಿಕಗಳು) ಸೇರಿದರೆ ಫ್ಲೋರಿಕ್ ಆಸಿಡ್ ತಯಾರಾಗುತ್ತದೆ. ಈ ಫ್ಲೋರಿಕ್ ಆಸಿಡ್ ಕಲ್ಲನ್ನು ಕರಗಿಸುವ ಶಕ್ತಿಯನ್ನು ಹೊಂದಿರುತ್ತದೆ. ಭೂಮಿಯಲ್ಲಿ ಸಹಜವಾಗಿ ಲಭ್ಯವಿರುವ ಹಲವು ಬಣ್ಣದ ಕಲ್ಲಿನಲ್ಲಿ ಸಸ್ಯ ಪೋಷಕಾಂಶಗಳಿರುತ್ತವೆ. ಒಂದು ಕೆ.ಜಿ ಕಲ್ಲಿನಲ್ಲಿ 350ರಿಂದ 500 ಗ್ರಾಮ್ ವಿವಿಧ ಸಸ್ಯ ಪೋಷಕಾಂಶಗಳು ಲಭ್ಯವಿರುತ್ತವೆ. ಈ ಫ್ಲೋರಿಕ್ ಆಸಿಡ್ ಭೂಮಿಯೊಳಗಡೆಯಿರುವ ಕಲ್ಲುಗಳನ್ನು ನಿರಂತರವಾಗಿ ಕರಗಿಸುತ್ತದೆ ಹಾಗೂ ಈ ಪೋಷಕಾಂಶಗಳನ್ನು ಜೀವಾಣುಗಳು ವಾಹಕದಂತೆ ಬೇರುಗಳಿಗೆ ರವಾನಿಸುತ್ತದೆ. ಇದರಿಂದ ಸಸ್ಯಗಳಿಗೆ ಪೋಷಕಾಂಶಗಳು ನಿರಂತರವಾಗಿ ಲಭ್ಯವಾಗಿ ಹೆಚ್ಚು ಸಮೃದ್ಧಿಯಾಗಿ ಬೆಳೆಯಲು ಸಾಧ್ಯವಾಗುತ್ತದೆ. ಇದು ಸರಳವಾದ ವಿಜ್ಞಾನ’ ಎಂದು ಹೇಳುತ್ತಿದ್ದರು. ಇದನ್ನರಿಯದ ನಾವು ನಮ್ಮಲ್ಲಿರುವ ಕಲ್ಲುಗಳನ್ನು ಕೈಗೆಟುಕದ ಸ್ಥಳದಲ್ಲಿ ಬಿಸಾಡಿದ್ದೇವೆ.

ಹಾಗೆಯೇ ಹ್ಯೂಮಸ್ ಹಾಗು ಸಾವಯವ ಇಂಗಾಲವನ್ನು ವೃದ್ಧಿಸಲಿಲ್ಲ. ಇದರಿಂದ ಪೋಷಕಾಂಶಗಳ ಕೊರತೆಯುಂಟಾಗಿದೆ. ಸಹಜವಾದ ಕೃಷಿ ನಮ್ಮ ಕೈ ತಪ್ಪಿದೆ. ಸಹಜವಾಗಿ ಪೋಷಕಾಂಶಗಳನ್ನು ಪೂರೈಸುವ ವಿಧಾನಗಳನ್ನು ಹೇಳಿಕೊಡುವುದನ್ನು ಬಿಟ್ಟು ಕಂಪನಿಗಳಿಂದ ಉತ್ಪಾದಿಸಿ ನಮಗೆ ದೊರೆಯುವಂತೆ ಮಾಡುತ್ತಿದ್ದಾರೆ. ವಾತಾವರಣದಲ್ಲಿರುವ ಸಾರಜನಕವನ್ನು ಯೂರಿಯಾ ಬ್ಯಾಗ್‍ನಲ್ಲಿ, ಭೂಮಿಯಲ್ಲಿ ಲಭ್ಯವಿರುವ ಪೋಷಕಾಂಶಗಳನ್ನು ಡಿಎಪಿ ಮತ್ತು ಮುಂತಾದ ಹೆಸರಿನ ಬ್ಯಾಗ್‍ನಲ್ಲಿ, ಸಹಜವಾಗಿ ನಮ್ಮದೇ ಭೂಮಿಯಲ್ಲಿ ನೆಲೆಸುತ್ತಿದ್ದ ಎರೆಹುಳುಗಳು, ಜೀವಾಣುಗಳನ್ನು ಬಾಟಲ್‍ನಲ್ಲಿಟ್ಟು ಕೊಂಡುಕೊಳ್ಳುವಂತೆ ಮಾಡಿದ್ದಾರೆ. ರಾಸಾಯನಿಕಗಳ ಬಳಕೆಯಿಂದ ಪ್ರಕೃತಿದತ್ತವಾಗಿ ಲಭ್ಯವಿದ್ದ ಎಲ್ಲವನ್ನೂ ಕೊಲ್ಲುವಂತೆ ಮಾಡಿದ್ದಾರೆ. ಇದಕ್ಕೆ ಯಾರು ಹೊಣೆ? ಕಂಪನಿಗಳು, ಮಾರುಕಟ್ಟೆ ತಮ್ಮ ಸ್ವಂತ ಲಾಭಕ್ಕಾಗಿ ಕೆಲಸ ಮಾಡುತ್ತವೆಯೇ ಹೊರತು ರೈತನ ಹಿತಾಸಕ್ತಿಗಾಗಿ ಅಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ.

ಕೃಷಿ ವಿಜ್ಞಾನಿಗಳಾಗಲಿ, ಸರ್ಕಾರಗಳಾಗಲಿ ಈ ನೈಜ ಸಮಸ್ಯೆಯ ಕಡೆಗೆ ಕಣ್ಣೆತ್ತಿಯೂ ನೋಡುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಕಳೆದ ಇಪ್ಪತ್ತು ವರ್ಷಗಳ ಕೆಳಗೆ ಶೇ 70ಕ್ಕಿಂತ ಹೆಚ್ಚಿದ್ದ ಕೃಷಿಕರ ಸಂಖ್ಯೆ ಇಂದು ಶೇ 55ಕ್ಕೆ ಇಳಿದಿದೆ. ಯುವಜನತೆ ಕೃಷಿಯಲ್ಲಿ ಯಶಸ್ಸಿಲ್ಲ, ಆದಾಯವಿಲ್ಲ ಎನ್ನುವ ಕಾರಣಕ್ಕೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಪ್ರಸ್ತುತ ಕೃಷಿಯನ್ನು ಮಾಡುತ್ತಿರುವವರಲ್ಲಿ ಬಹಳಷ್ಟು ಮಂದಿಯ ವಯಸ್ಸು 40ರಿಂದ 60 ವರ್ಷಗಳು. ಇವರ ಕಾರ್ಯಕ್ಷಮತೆ ಇನ್ನು ಹೆಚ್ಚೆಂದರೆ 20ರಿಂದ 30 ವರ್ಷಗಳ ಕಾಲವಿರಬಹುದು. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನೋಡಿದರೆ ಮುಂದಿನ ದಿನಗಳಲ್ಲಿ ಆಹಾರದ ಕ್ಷಾಮಕ್ಕೆ ತುತ್ತಾಗುತ್ತಿದ್ದೆವೇನೋ ಅನ್ನಿಸುತ್ತಿದೆ. ಹಸಿರುಕ್ರಾಂತಿಯ ಆ ದಿನಗಳಲ್ಲಿ ನಮ್ಮ ದೇಶಕ್ಕೆ ಆಹಾರ ಪದಾರ್ಥಗಳನ್ನು ಒದಗಿಸಲು ಹಲವಾರು ದೇಶಗಳ ಮುಂದೆ ಕೈಚಾಚಬೇಕಿತ್ತು. ಕಡೆಗೂ ಅಂದಿನ ಸಂಕಷ್ಟದ ದಿನಗಳಿಂದ ಪಾರಾಗಿ ಹೊರಬಂದೆವು.

ಆದರೆ ಇಂದು, ಪ್ರಪಂಚದಲ್ಲಿರುವ 195 ದೇಶಗಳ ಪೈಕಿ 90ರಿಂದ 100 ದೇಶಗಳು ಮಾತ್ರ ಆಹಾರೋತ್ಪಾದನೆಯಲ್ಲಿ ತೊಡಗಿವೆ. ಅಂದರೆ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿವೆ. ಮುಂದಿನ ದಿನಗಳಲ್ಲಿ ಈ ದೇಶಗಳಿಂದಷ್ಟೇ ಆಹಾರವನ್ನು ಒದಗಿಸುವುದು ಕಷ್ಟ ಸಾಧ್ಯವಾದ ಮಾತು. ಒಂದು ಕಡೆ ಕೃಷಿಯು ಕಂಪನಿಗಳ ಪಾಲಾಗುತ್ತಿದ್ದರೆ ಇನ್ನೊಂದು ಕಡೆ ನಾವು ಅಳವಡಿಸಿಕೊಂಡಿರುವ ಕೃಷಿ ಪದ್ಧತಿಯೂ ನಮ್ಮ ಕೈ ಹಿಡಿಯುತ್ತಿಲ್ಲ. ಕಳೆದ 20 ವರ್ಷಗಳಿಗೆ ಹೋಲಿಸಿದರೆ ಇಂದು ನಮ್ಮ ವ್ಯವಸಾಯ ಭೂಮಿ ಶೇ 20ಕ್ಕಿಂತ ಹೆಚ್ಚು ಪ್ರದೇಶ ಬೆಳೆಗಳಿಲ್ಲದೆ ಪಾಳುಬಿದ್ದಿದೆ. ಇದರ ಜೊತೆಯಲ್ಲಿ ನೂರಾರು ರೈತರು ತಾವು ಬೆಳೆದ ಬೆಳೆಗಳನ್ನು ಸುಟ್ಟುಹಾಕುತ್ತಿದ್ದಾರೆ; ಕ್ರಿಮಿನಾಶಕಗಳನ್ನು ಸಿಂಪಡಿಸುವಾಗ ರೈತರು ಸತ್ತಿದ್ದಾರೆ; ರೈತರ ದೇಹದಲ್ಲಿ ರಾಸಾಯನಿಕಗಳು ಸೇರುತ್ತಿವೆ ಎನ್ನುವ ಹಲವಾರು ವರದಿಗಳು ನಮ್ಮ ಇಂದಿನ ಆಧುನಿಕ ಕೃಷಿಗೆ ಹಿಡಿದ ಕನ್ನಡಿಯಾಗಿದೆ.

ಈ ಸಮಸ್ಯೆಯಿಂದ ನಾವು ಪಾರಾಗಬೇಕಾದರೆ ಸಹಜ ಕೃಷಿಯ ಪರಿಚಯವನ್ನು ಮಾಡಿಕೊಡಬೇಕು. ಯುವಶಕ್ತಿಗೆ ಕೃಷಿಯಲ್ಲಿ ನೆಮ್ಮದಿಯ ಬದುಕಿದೆ ಎನ್ನುವುದನ್ನು ಮನವರಿಕೆ ಮಾಡಿಕೊಡಬೇಕು. ಇದರ ಜೊತೆಜೊತೆಯಲ್ಲಿ ರೈತರ ಸಣ್ಣಸಣ್ಣ ಗುಂಪುಗಳನ್ನು ಮಾಡಿ, ಅವರು ಬೆಳೆದ ಬೆಳೆಗಳನ್ನು ಮೌಲ್ಯವರ್ಧನೆ ಮಾಡುತ್ತಾ, ನಮ್ಮ ಅಕ್ಕಪಕ್ಕದಲ್ಲೆ ಮಾರುಕಟ್ಟೆಯನ್ನು ಸೃಷ್ಟಿಮಾಡುವತ್ತ ಆಲೋಚಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...