Homeಮುಖಪುಟಪ್ರಕೃತಿ ಸಹಜ ಕೃಷಿಯಿಂದ ಮಾತ್ರ ಲಾಭ ಸಾಧ್ಯ : ಅವಿನಾಶ್

ಪ್ರಕೃತಿ ಸಹಜ ಕೃಷಿಯಿಂದ ಮಾತ್ರ ಲಾಭ ಸಾಧ್ಯ : ಅವಿನಾಶ್

- Advertisement -
- Advertisement -

ನನ್ನ ಗುರುಗಳಾದ ನಾಡೋಜ ಶ್ರೀ ನಾರಾಯಣರೆಡ್ಡಿಯವರ ಒಂದು ಮಾತು ಮತ್ತೆ ಮತ್ತೆ ನೆನಪಿಗೆ ಬರುತ್ತದೆ. ‘ನಮಗೆ ಈ ಸಬ್ಸಿಡಿಗಳು, ಈ ಡ್ಯಾಂಗಳು, ಸಾಲಸೋಲಗಳು ಯಾವುದೂ ಬೇಡ. ಭೂಮಿಯಲ್ಲಿ ಮಳೆ ನೀರನ್ನು ಹಿಡಿದಿಟ್ಟುಕೊಳ್ಳಂಗೆ ಹ್ಯೂಮಸ್ ಉತ್ಪತ್ತಿ ಮಾಡಿ, ಜೀವಾಣುಗಳನ್ನು ಹೆಚ್ಚಿಗೆ ಮಾಡುವಂಗೆ ಮಣ್ಣಿನಲ್ಲಿ ಸೂಕ್ಷ್ಮವಾತಾವರಣ ಸೃಷ್ಟಿ ಮಾಡುವುದು ಹಾಗು ಸಾವಯವ ಇಂಗಾಲವನ್ನು ಶೇ 4ಕ್ಕಿಂತ ಹೆಚ್ಚಾಗಂಗೆ ಮಾಡುವುದನ್ನು ನಮ್ಮ ರೈತರಿಗೆ ಹೇಳ್ಕೊಟ್ಟುಬಿಟ್ರೇ ನೆಮ್ಮದಿಯಿಂದ ಬದುಕುತ್ತಾರೆ’ ಅಂತ.

ನಾನು ಪ್ರತಿ ಬಾರಿ ಅವರನ್ನು ಭೇಟಿಯಾದಾಗಲೂ ಪ್ರಶ್ನೆಗಳ ಸರಮಾಲೆಯನ್ನೇ ಹೊತ್ತೊಯ್ಯುತ್ತಿದ್ದೆ. ಕೃಷಿ ವಿಜ್ಞಾನವನ್ನು ಬಹಳ ಸುಲಭವಾಗಿ ನಮಗೆ ಅರ್ಥಮಾಡಿಸುತ್ತಿದ್ದರು. ‘ಬೇರುಗಳು ಭೂಮಿಯಲ್ಲಿ ಬೆಳೆಯುವುದು, ಸೂಕ್ಷ್ಮ ಜೀವಾಣುಗಳ ಚಟುವಟಿಕೆ ಅಂದರೆ ರಂಧ್ರಗಳನ್ನು ಮಾಡುವುದು, ಓಡಾಡುವುದು… ಭೌತಿಕಕ್ರಿಯೆ’. ‘ಬೇರುಗಳ ರಸ ಮತ್ತು ಜೀವಾಣುಗಳು ಬಿಡುವ ಜೊಲ್ಲು… ರಾಸಾಯನಿಕ ಕ್ರಿಯೆ’. ‘ಜೀವಾಣುಗಳು, ಎರೆಹುಳುಗಳು, ಕೀಟಗಳು ಇತ್ಯಾದಿ ಮಣ್ಣಿನಲ್ಲಿ ಸಹಜವಾಗಿ ಸತ್ತರೆ ಅದು ಜೈವಿಕ ಕ್ರಿಯೆ’ ಎಂದು.

ಮುಂದೆ ಅವರು ತಮ್ಮ ಮಾತನ್ನು ಮುಂದುವರಿಸುತ್ತ ‘ಈ ಮೂರು ಕ್ರಿಯೆಗಳು ಭೂಮಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಅದರ ಜೊತೆ ಬೇರುಗಳು ಹೊರಸೂಸುವ ರಸ (ರಾಸಾಯನಿಕಗಳು) ಸೇರಿದರೆ ಫ್ಲೋರಿಕ್ ಆಸಿಡ್ ತಯಾರಾಗುತ್ತದೆ. ಈ ಫ್ಲೋರಿಕ್ ಆಸಿಡ್ ಕಲ್ಲನ್ನು ಕರಗಿಸುವ ಶಕ್ತಿಯನ್ನು ಹೊಂದಿರುತ್ತದೆ. ಭೂಮಿಯಲ್ಲಿ ಸಹಜವಾಗಿ ಲಭ್ಯವಿರುವ ಹಲವು ಬಣ್ಣದ ಕಲ್ಲಿನಲ್ಲಿ ಸಸ್ಯ ಪೋಷಕಾಂಶಗಳಿರುತ್ತವೆ. ಒಂದು ಕೆ.ಜಿ ಕಲ್ಲಿನಲ್ಲಿ 350ರಿಂದ 500 ಗ್ರಾಮ್ ವಿವಿಧ ಸಸ್ಯ ಪೋಷಕಾಂಶಗಳು ಲಭ್ಯವಿರುತ್ತವೆ. ಈ ಫ್ಲೋರಿಕ್ ಆಸಿಡ್ ಭೂಮಿಯೊಳಗಡೆಯಿರುವ ಕಲ್ಲುಗಳನ್ನು ನಿರಂತರವಾಗಿ ಕರಗಿಸುತ್ತದೆ ಹಾಗೂ ಈ ಪೋಷಕಾಂಶಗಳನ್ನು ಜೀವಾಣುಗಳು ವಾಹಕದಂತೆ ಬೇರುಗಳಿಗೆ ರವಾನಿಸುತ್ತದೆ. ಇದರಿಂದ ಸಸ್ಯಗಳಿಗೆ ಪೋಷಕಾಂಶಗಳು ನಿರಂತರವಾಗಿ ಲಭ್ಯವಾಗಿ ಹೆಚ್ಚು ಸಮೃದ್ಧಿಯಾಗಿ ಬೆಳೆಯಲು ಸಾಧ್ಯವಾಗುತ್ತದೆ. ಇದು ಸರಳವಾದ ವಿಜ್ಞಾನ’ ಎಂದು ಹೇಳುತ್ತಿದ್ದರು. ಇದನ್ನರಿಯದ ನಾವು ನಮ್ಮಲ್ಲಿರುವ ಕಲ್ಲುಗಳನ್ನು ಕೈಗೆಟುಕದ ಸ್ಥಳದಲ್ಲಿ ಬಿಸಾಡಿದ್ದೇವೆ.

ಹಾಗೆಯೇ ಹ್ಯೂಮಸ್ ಹಾಗು ಸಾವಯವ ಇಂಗಾಲವನ್ನು ವೃದ್ಧಿಸಲಿಲ್ಲ. ಇದರಿಂದ ಪೋಷಕಾಂಶಗಳ ಕೊರತೆಯುಂಟಾಗಿದೆ. ಸಹಜವಾದ ಕೃಷಿ ನಮ್ಮ ಕೈ ತಪ್ಪಿದೆ. ಸಹಜವಾಗಿ ಪೋಷಕಾಂಶಗಳನ್ನು ಪೂರೈಸುವ ವಿಧಾನಗಳನ್ನು ಹೇಳಿಕೊಡುವುದನ್ನು ಬಿಟ್ಟು ಕಂಪನಿಗಳಿಂದ ಉತ್ಪಾದಿಸಿ ನಮಗೆ ದೊರೆಯುವಂತೆ ಮಾಡುತ್ತಿದ್ದಾರೆ. ವಾತಾವರಣದಲ್ಲಿರುವ ಸಾರಜನಕವನ್ನು ಯೂರಿಯಾ ಬ್ಯಾಗ್‍ನಲ್ಲಿ, ಭೂಮಿಯಲ್ಲಿ ಲಭ್ಯವಿರುವ ಪೋಷಕಾಂಶಗಳನ್ನು ಡಿಎಪಿ ಮತ್ತು ಮುಂತಾದ ಹೆಸರಿನ ಬ್ಯಾಗ್‍ನಲ್ಲಿ, ಸಹಜವಾಗಿ ನಮ್ಮದೇ ಭೂಮಿಯಲ್ಲಿ ನೆಲೆಸುತ್ತಿದ್ದ ಎರೆಹುಳುಗಳು, ಜೀವಾಣುಗಳನ್ನು ಬಾಟಲ್‍ನಲ್ಲಿಟ್ಟು ಕೊಂಡುಕೊಳ್ಳುವಂತೆ ಮಾಡಿದ್ದಾರೆ. ರಾಸಾಯನಿಕಗಳ ಬಳಕೆಯಿಂದ ಪ್ರಕೃತಿದತ್ತವಾಗಿ ಲಭ್ಯವಿದ್ದ ಎಲ್ಲವನ್ನೂ ಕೊಲ್ಲುವಂತೆ ಮಾಡಿದ್ದಾರೆ. ಇದಕ್ಕೆ ಯಾರು ಹೊಣೆ? ಕಂಪನಿಗಳು, ಮಾರುಕಟ್ಟೆ ತಮ್ಮ ಸ್ವಂತ ಲಾಭಕ್ಕಾಗಿ ಕೆಲಸ ಮಾಡುತ್ತವೆಯೇ ಹೊರತು ರೈತನ ಹಿತಾಸಕ್ತಿಗಾಗಿ ಅಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ.

ಕೃಷಿ ವಿಜ್ಞಾನಿಗಳಾಗಲಿ, ಸರ್ಕಾರಗಳಾಗಲಿ ಈ ನೈಜ ಸಮಸ್ಯೆಯ ಕಡೆಗೆ ಕಣ್ಣೆತ್ತಿಯೂ ನೋಡುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಕಳೆದ ಇಪ್ಪತ್ತು ವರ್ಷಗಳ ಕೆಳಗೆ ಶೇ 70ಕ್ಕಿಂತ ಹೆಚ್ಚಿದ್ದ ಕೃಷಿಕರ ಸಂಖ್ಯೆ ಇಂದು ಶೇ 55ಕ್ಕೆ ಇಳಿದಿದೆ. ಯುವಜನತೆ ಕೃಷಿಯಲ್ಲಿ ಯಶಸ್ಸಿಲ್ಲ, ಆದಾಯವಿಲ್ಲ ಎನ್ನುವ ಕಾರಣಕ್ಕೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಪ್ರಸ್ತುತ ಕೃಷಿಯನ್ನು ಮಾಡುತ್ತಿರುವವರಲ್ಲಿ ಬಹಳಷ್ಟು ಮಂದಿಯ ವಯಸ್ಸು 40ರಿಂದ 60 ವರ್ಷಗಳು. ಇವರ ಕಾರ್ಯಕ್ಷಮತೆ ಇನ್ನು ಹೆಚ್ಚೆಂದರೆ 20ರಿಂದ 30 ವರ್ಷಗಳ ಕಾಲವಿರಬಹುದು. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನೋಡಿದರೆ ಮುಂದಿನ ದಿನಗಳಲ್ಲಿ ಆಹಾರದ ಕ್ಷಾಮಕ್ಕೆ ತುತ್ತಾಗುತ್ತಿದ್ದೆವೇನೋ ಅನ್ನಿಸುತ್ತಿದೆ. ಹಸಿರುಕ್ರಾಂತಿಯ ಆ ದಿನಗಳಲ್ಲಿ ನಮ್ಮ ದೇಶಕ್ಕೆ ಆಹಾರ ಪದಾರ್ಥಗಳನ್ನು ಒದಗಿಸಲು ಹಲವಾರು ದೇಶಗಳ ಮುಂದೆ ಕೈಚಾಚಬೇಕಿತ್ತು. ಕಡೆಗೂ ಅಂದಿನ ಸಂಕಷ್ಟದ ದಿನಗಳಿಂದ ಪಾರಾಗಿ ಹೊರಬಂದೆವು.

ಆದರೆ ಇಂದು, ಪ್ರಪಂಚದಲ್ಲಿರುವ 195 ದೇಶಗಳ ಪೈಕಿ 90ರಿಂದ 100 ದೇಶಗಳು ಮಾತ್ರ ಆಹಾರೋತ್ಪಾದನೆಯಲ್ಲಿ ತೊಡಗಿವೆ. ಅಂದರೆ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿವೆ. ಮುಂದಿನ ದಿನಗಳಲ್ಲಿ ಈ ದೇಶಗಳಿಂದಷ್ಟೇ ಆಹಾರವನ್ನು ಒದಗಿಸುವುದು ಕಷ್ಟ ಸಾಧ್ಯವಾದ ಮಾತು. ಒಂದು ಕಡೆ ಕೃಷಿಯು ಕಂಪನಿಗಳ ಪಾಲಾಗುತ್ತಿದ್ದರೆ ಇನ್ನೊಂದು ಕಡೆ ನಾವು ಅಳವಡಿಸಿಕೊಂಡಿರುವ ಕೃಷಿ ಪದ್ಧತಿಯೂ ನಮ್ಮ ಕೈ ಹಿಡಿಯುತ್ತಿಲ್ಲ. ಕಳೆದ 20 ವರ್ಷಗಳಿಗೆ ಹೋಲಿಸಿದರೆ ಇಂದು ನಮ್ಮ ವ್ಯವಸಾಯ ಭೂಮಿ ಶೇ 20ಕ್ಕಿಂತ ಹೆಚ್ಚು ಪ್ರದೇಶ ಬೆಳೆಗಳಿಲ್ಲದೆ ಪಾಳುಬಿದ್ದಿದೆ. ಇದರ ಜೊತೆಯಲ್ಲಿ ನೂರಾರು ರೈತರು ತಾವು ಬೆಳೆದ ಬೆಳೆಗಳನ್ನು ಸುಟ್ಟುಹಾಕುತ್ತಿದ್ದಾರೆ; ಕ್ರಿಮಿನಾಶಕಗಳನ್ನು ಸಿಂಪಡಿಸುವಾಗ ರೈತರು ಸತ್ತಿದ್ದಾರೆ; ರೈತರ ದೇಹದಲ್ಲಿ ರಾಸಾಯನಿಕಗಳು ಸೇರುತ್ತಿವೆ ಎನ್ನುವ ಹಲವಾರು ವರದಿಗಳು ನಮ್ಮ ಇಂದಿನ ಆಧುನಿಕ ಕೃಷಿಗೆ ಹಿಡಿದ ಕನ್ನಡಿಯಾಗಿದೆ.

ಈ ಸಮಸ್ಯೆಯಿಂದ ನಾವು ಪಾರಾಗಬೇಕಾದರೆ ಸಹಜ ಕೃಷಿಯ ಪರಿಚಯವನ್ನು ಮಾಡಿಕೊಡಬೇಕು. ಯುವಶಕ್ತಿಗೆ ಕೃಷಿಯಲ್ಲಿ ನೆಮ್ಮದಿಯ ಬದುಕಿದೆ ಎನ್ನುವುದನ್ನು ಮನವರಿಕೆ ಮಾಡಿಕೊಡಬೇಕು. ಇದರ ಜೊತೆಜೊತೆಯಲ್ಲಿ ರೈತರ ಸಣ್ಣಸಣ್ಣ ಗುಂಪುಗಳನ್ನು ಮಾಡಿ, ಅವರು ಬೆಳೆದ ಬೆಳೆಗಳನ್ನು ಮೌಲ್ಯವರ್ಧನೆ ಮಾಡುತ್ತಾ, ನಮ್ಮ ಅಕ್ಕಪಕ್ಕದಲ್ಲೆ ಮಾರುಕಟ್ಟೆಯನ್ನು ಸೃಷ್ಟಿಮಾಡುವತ್ತ ಆಲೋಚಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...