Homeಮುಖಪುಟಪ್ರಕೃತಿ ಸಹಜ ಕೃಷಿಯಿಂದ ಮಾತ್ರ ಲಾಭ ಸಾಧ್ಯ : ಅವಿನಾಶ್

ಪ್ರಕೃತಿ ಸಹಜ ಕೃಷಿಯಿಂದ ಮಾತ್ರ ಲಾಭ ಸಾಧ್ಯ : ಅವಿನಾಶ್

- Advertisement -
- Advertisement -

ನನ್ನ ಗುರುಗಳಾದ ನಾಡೋಜ ಶ್ರೀ ನಾರಾಯಣರೆಡ್ಡಿಯವರ ಒಂದು ಮಾತು ಮತ್ತೆ ಮತ್ತೆ ನೆನಪಿಗೆ ಬರುತ್ತದೆ. ‘ನಮಗೆ ಈ ಸಬ್ಸಿಡಿಗಳು, ಈ ಡ್ಯಾಂಗಳು, ಸಾಲಸೋಲಗಳು ಯಾವುದೂ ಬೇಡ. ಭೂಮಿಯಲ್ಲಿ ಮಳೆ ನೀರನ್ನು ಹಿಡಿದಿಟ್ಟುಕೊಳ್ಳಂಗೆ ಹ್ಯೂಮಸ್ ಉತ್ಪತ್ತಿ ಮಾಡಿ, ಜೀವಾಣುಗಳನ್ನು ಹೆಚ್ಚಿಗೆ ಮಾಡುವಂಗೆ ಮಣ್ಣಿನಲ್ಲಿ ಸೂಕ್ಷ್ಮವಾತಾವರಣ ಸೃಷ್ಟಿ ಮಾಡುವುದು ಹಾಗು ಸಾವಯವ ಇಂಗಾಲವನ್ನು ಶೇ 4ಕ್ಕಿಂತ ಹೆಚ್ಚಾಗಂಗೆ ಮಾಡುವುದನ್ನು ನಮ್ಮ ರೈತರಿಗೆ ಹೇಳ್ಕೊಟ್ಟುಬಿಟ್ರೇ ನೆಮ್ಮದಿಯಿಂದ ಬದುಕುತ್ತಾರೆ’ ಅಂತ.

ನಾನು ಪ್ರತಿ ಬಾರಿ ಅವರನ್ನು ಭೇಟಿಯಾದಾಗಲೂ ಪ್ರಶ್ನೆಗಳ ಸರಮಾಲೆಯನ್ನೇ ಹೊತ್ತೊಯ್ಯುತ್ತಿದ್ದೆ. ಕೃಷಿ ವಿಜ್ಞಾನವನ್ನು ಬಹಳ ಸುಲಭವಾಗಿ ನಮಗೆ ಅರ್ಥಮಾಡಿಸುತ್ತಿದ್ದರು. ‘ಬೇರುಗಳು ಭೂಮಿಯಲ್ಲಿ ಬೆಳೆಯುವುದು, ಸೂಕ್ಷ್ಮ ಜೀವಾಣುಗಳ ಚಟುವಟಿಕೆ ಅಂದರೆ ರಂಧ್ರಗಳನ್ನು ಮಾಡುವುದು, ಓಡಾಡುವುದು… ಭೌತಿಕಕ್ರಿಯೆ’. ‘ಬೇರುಗಳ ರಸ ಮತ್ತು ಜೀವಾಣುಗಳು ಬಿಡುವ ಜೊಲ್ಲು… ರಾಸಾಯನಿಕ ಕ್ರಿಯೆ’. ‘ಜೀವಾಣುಗಳು, ಎರೆಹುಳುಗಳು, ಕೀಟಗಳು ಇತ್ಯಾದಿ ಮಣ್ಣಿನಲ್ಲಿ ಸಹಜವಾಗಿ ಸತ್ತರೆ ಅದು ಜೈವಿಕ ಕ್ರಿಯೆ’ ಎಂದು.

ಮುಂದೆ ಅವರು ತಮ್ಮ ಮಾತನ್ನು ಮುಂದುವರಿಸುತ್ತ ‘ಈ ಮೂರು ಕ್ರಿಯೆಗಳು ಭೂಮಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಅದರ ಜೊತೆ ಬೇರುಗಳು ಹೊರಸೂಸುವ ರಸ (ರಾಸಾಯನಿಕಗಳು) ಸೇರಿದರೆ ಫ್ಲೋರಿಕ್ ಆಸಿಡ್ ತಯಾರಾಗುತ್ತದೆ. ಈ ಫ್ಲೋರಿಕ್ ಆಸಿಡ್ ಕಲ್ಲನ್ನು ಕರಗಿಸುವ ಶಕ್ತಿಯನ್ನು ಹೊಂದಿರುತ್ತದೆ. ಭೂಮಿಯಲ್ಲಿ ಸಹಜವಾಗಿ ಲಭ್ಯವಿರುವ ಹಲವು ಬಣ್ಣದ ಕಲ್ಲಿನಲ್ಲಿ ಸಸ್ಯ ಪೋಷಕಾಂಶಗಳಿರುತ್ತವೆ. ಒಂದು ಕೆ.ಜಿ ಕಲ್ಲಿನಲ್ಲಿ 350ರಿಂದ 500 ಗ್ರಾಮ್ ವಿವಿಧ ಸಸ್ಯ ಪೋಷಕಾಂಶಗಳು ಲಭ್ಯವಿರುತ್ತವೆ. ಈ ಫ್ಲೋರಿಕ್ ಆಸಿಡ್ ಭೂಮಿಯೊಳಗಡೆಯಿರುವ ಕಲ್ಲುಗಳನ್ನು ನಿರಂತರವಾಗಿ ಕರಗಿಸುತ್ತದೆ ಹಾಗೂ ಈ ಪೋಷಕಾಂಶಗಳನ್ನು ಜೀವಾಣುಗಳು ವಾಹಕದಂತೆ ಬೇರುಗಳಿಗೆ ರವಾನಿಸುತ್ತದೆ. ಇದರಿಂದ ಸಸ್ಯಗಳಿಗೆ ಪೋಷಕಾಂಶಗಳು ನಿರಂತರವಾಗಿ ಲಭ್ಯವಾಗಿ ಹೆಚ್ಚು ಸಮೃದ್ಧಿಯಾಗಿ ಬೆಳೆಯಲು ಸಾಧ್ಯವಾಗುತ್ತದೆ. ಇದು ಸರಳವಾದ ವಿಜ್ಞಾನ’ ಎಂದು ಹೇಳುತ್ತಿದ್ದರು. ಇದನ್ನರಿಯದ ನಾವು ನಮ್ಮಲ್ಲಿರುವ ಕಲ್ಲುಗಳನ್ನು ಕೈಗೆಟುಕದ ಸ್ಥಳದಲ್ಲಿ ಬಿಸಾಡಿದ್ದೇವೆ.

ಹಾಗೆಯೇ ಹ್ಯೂಮಸ್ ಹಾಗು ಸಾವಯವ ಇಂಗಾಲವನ್ನು ವೃದ್ಧಿಸಲಿಲ್ಲ. ಇದರಿಂದ ಪೋಷಕಾಂಶಗಳ ಕೊರತೆಯುಂಟಾಗಿದೆ. ಸಹಜವಾದ ಕೃಷಿ ನಮ್ಮ ಕೈ ತಪ್ಪಿದೆ. ಸಹಜವಾಗಿ ಪೋಷಕಾಂಶಗಳನ್ನು ಪೂರೈಸುವ ವಿಧಾನಗಳನ್ನು ಹೇಳಿಕೊಡುವುದನ್ನು ಬಿಟ್ಟು ಕಂಪನಿಗಳಿಂದ ಉತ್ಪಾದಿಸಿ ನಮಗೆ ದೊರೆಯುವಂತೆ ಮಾಡುತ್ತಿದ್ದಾರೆ. ವಾತಾವರಣದಲ್ಲಿರುವ ಸಾರಜನಕವನ್ನು ಯೂರಿಯಾ ಬ್ಯಾಗ್‍ನಲ್ಲಿ, ಭೂಮಿಯಲ್ಲಿ ಲಭ್ಯವಿರುವ ಪೋಷಕಾಂಶಗಳನ್ನು ಡಿಎಪಿ ಮತ್ತು ಮುಂತಾದ ಹೆಸರಿನ ಬ್ಯಾಗ್‍ನಲ್ಲಿ, ಸಹಜವಾಗಿ ನಮ್ಮದೇ ಭೂಮಿಯಲ್ಲಿ ನೆಲೆಸುತ್ತಿದ್ದ ಎರೆಹುಳುಗಳು, ಜೀವಾಣುಗಳನ್ನು ಬಾಟಲ್‍ನಲ್ಲಿಟ್ಟು ಕೊಂಡುಕೊಳ್ಳುವಂತೆ ಮಾಡಿದ್ದಾರೆ. ರಾಸಾಯನಿಕಗಳ ಬಳಕೆಯಿಂದ ಪ್ರಕೃತಿದತ್ತವಾಗಿ ಲಭ್ಯವಿದ್ದ ಎಲ್ಲವನ್ನೂ ಕೊಲ್ಲುವಂತೆ ಮಾಡಿದ್ದಾರೆ. ಇದಕ್ಕೆ ಯಾರು ಹೊಣೆ? ಕಂಪನಿಗಳು, ಮಾರುಕಟ್ಟೆ ತಮ್ಮ ಸ್ವಂತ ಲಾಭಕ್ಕಾಗಿ ಕೆಲಸ ಮಾಡುತ್ತವೆಯೇ ಹೊರತು ರೈತನ ಹಿತಾಸಕ್ತಿಗಾಗಿ ಅಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ.

ಕೃಷಿ ವಿಜ್ಞಾನಿಗಳಾಗಲಿ, ಸರ್ಕಾರಗಳಾಗಲಿ ಈ ನೈಜ ಸಮಸ್ಯೆಯ ಕಡೆಗೆ ಕಣ್ಣೆತ್ತಿಯೂ ನೋಡುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಕಳೆದ ಇಪ್ಪತ್ತು ವರ್ಷಗಳ ಕೆಳಗೆ ಶೇ 70ಕ್ಕಿಂತ ಹೆಚ್ಚಿದ್ದ ಕೃಷಿಕರ ಸಂಖ್ಯೆ ಇಂದು ಶೇ 55ಕ್ಕೆ ಇಳಿದಿದೆ. ಯುವಜನತೆ ಕೃಷಿಯಲ್ಲಿ ಯಶಸ್ಸಿಲ್ಲ, ಆದಾಯವಿಲ್ಲ ಎನ್ನುವ ಕಾರಣಕ್ಕೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಪ್ರಸ್ತುತ ಕೃಷಿಯನ್ನು ಮಾಡುತ್ತಿರುವವರಲ್ಲಿ ಬಹಳಷ್ಟು ಮಂದಿಯ ವಯಸ್ಸು 40ರಿಂದ 60 ವರ್ಷಗಳು. ಇವರ ಕಾರ್ಯಕ್ಷಮತೆ ಇನ್ನು ಹೆಚ್ಚೆಂದರೆ 20ರಿಂದ 30 ವರ್ಷಗಳ ಕಾಲವಿರಬಹುದು. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನೋಡಿದರೆ ಮುಂದಿನ ದಿನಗಳಲ್ಲಿ ಆಹಾರದ ಕ್ಷಾಮಕ್ಕೆ ತುತ್ತಾಗುತ್ತಿದ್ದೆವೇನೋ ಅನ್ನಿಸುತ್ತಿದೆ. ಹಸಿರುಕ್ರಾಂತಿಯ ಆ ದಿನಗಳಲ್ಲಿ ನಮ್ಮ ದೇಶಕ್ಕೆ ಆಹಾರ ಪದಾರ್ಥಗಳನ್ನು ಒದಗಿಸಲು ಹಲವಾರು ದೇಶಗಳ ಮುಂದೆ ಕೈಚಾಚಬೇಕಿತ್ತು. ಕಡೆಗೂ ಅಂದಿನ ಸಂಕಷ್ಟದ ದಿನಗಳಿಂದ ಪಾರಾಗಿ ಹೊರಬಂದೆವು.

ಆದರೆ ಇಂದು, ಪ್ರಪಂಚದಲ್ಲಿರುವ 195 ದೇಶಗಳ ಪೈಕಿ 90ರಿಂದ 100 ದೇಶಗಳು ಮಾತ್ರ ಆಹಾರೋತ್ಪಾದನೆಯಲ್ಲಿ ತೊಡಗಿವೆ. ಅಂದರೆ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿವೆ. ಮುಂದಿನ ದಿನಗಳಲ್ಲಿ ಈ ದೇಶಗಳಿಂದಷ್ಟೇ ಆಹಾರವನ್ನು ಒದಗಿಸುವುದು ಕಷ್ಟ ಸಾಧ್ಯವಾದ ಮಾತು. ಒಂದು ಕಡೆ ಕೃಷಿಯು ಕಂಪನಿಗಳ ಪಾಲಾಗುತ್ತಿದ್ದರೆ ಇನ್ನೊಂದು ಕಡೆ ನಾವು ಅಳವಡಿಸಿಕೊಂಡಿರುವ ಕೃಷಿ ಪದ್ಧತಿಯೂ ನಮ್ಮ ಕೈ ಹಿಡಿಯುತ್ತಿಲ್ಲ. ಕಳೆದ 20 ವರ್ಷಗಳಿಗೆ ಹೋಲಿಸಿದರೆ ಇಂದು ನಮ್ಮ ವ್ಯವಸಾಯ ಭೂಮಿ ಶೇ 20ಕ್ಕಿಂತ ಹೆಚ್ಚು ಪ್ರದೇಶ ಬೆಳೆಗಳಿಲ್ಲದೆ ಪಾಳುಬಿದ್ದಿದೆ. ಇದರ ಜೊತೆಯಲ್ಲಿ ನೂರಾರು ರೈತರು ತಾವು ಬೆಳೆದ ಬೆಳೆಗಳನ್ನು ಸುಟ್ಟುಹಾಕುತ್ತಿದ್ದಾರೆ; ಕ್ರಿಮಿನಾಶಕಗಳನ್ನು ಸಿಂಪಡಿಸುವಾಗ ರೈತರು ಸತ್ತಿದ್ದಾರೆ; ರೈತರ ದೇಹದಲ್ಲಿ ರಾಸಾಯನಿಕಗಳು ಸೇರುತ್ತಿವೆ ಎನ್ನುವ ಹಲವಾರು ವರದಿಗಳು ನಮ್ಮ ಇಂದಿನ ಆಧುನಿಕ ಕೃಷಿಗೆ ಹಿಡಿದ ಕನ್ನಡಿಯಾಗಿದೆ.

ಈ ಸಮಸ್ಯೆಯಿಂದ ನಾವು ಪಾರಾಗಬೇಕಾದರೆ ಸಹಜ ಕೃಷಿಯ ಪರಿಚಯವನ್ನು ಮಾಡಿಕೊಡಬೇಕು. ಯುವಶಕ್ತಿಗೆ ಕೃಷಿಯಲ್ಲಿ ನೆಮ್ಮದಿಯ ಬದುಕಿದೆ ಎನ್ನುವುದನ್ನು ಮನವರಿಕೆ ಮಾಡಿಕೊಡಬೇಕು. ಇದರ ಜೊತೆಜೊತೆಯಲ್ಲಿ ರೈತರ ಸಣ್ಣಸಣ್ಣ ಗುಂಪುಗಳನ್ನು ಮಾಡಿ, ಅವರು ಬೆಳೆದ ಬೆಳೆಗಳನ್ನು ಮೌಲ್ಯವರ್ಧನೆ ಮಾಡುತ್ತಾ, ನಮ್ಮ ಅಕ್ಕಪಕ್ಕದಲ್ಲೆ ಮಾರುಕಟ್ಟೆಯನ್ನು ಸೃಷ್ಟಿಮಾಡುವತ್ತ ಆಲೋಚಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...