ಪ್ರವಾದಿಗಳ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿ, ಬೆಂಗಳೂರು ಗಲಭೆಗೆ ಕಾರಣನಾಗಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ನವೀನ್ನ ಮೊಬೈಲ್ ಫೋನ್ ಸಿಕ್ಕಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಪ್ರವಾದಿ ಮಹಮ್ಮದರ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಎಂಬಾತ ಗಲಭೆಯ ವಿಷಯ ತಿಳಿಯುತ್ತಿದ್ದಂತೆ ಮನೆಯಿಂದ ಪರಾರಿಯಾಗಿದ್ದ. ಆಗ ಆತ ತನ್ನ ಮೊಬೈಲ್ ಕಳೆದು ಹೋಗಿದೆ ಎಂದು ಪೋಲೀಸರಿಗೆ ತಿಳಿಸಿದ್ದ. ಶನಿವಾರ ಆ ಮೊಬೈಲ್ ಪೋಲೀಸರಿಗೆ ಸಿಕ್ಕಿದೆ.
ನವೀನ್ ಈ ಮೊಬೈಲ್ನಿಂದ ಮನೆಯಲ್ಲೇ ಕುಳಿತು ಫೇಸ್ಬುಕ್ಗೆ ಪೋಸ್ಟ್ಗಳನ್ನು ಹಾಕುತ್ತಿದ್ದ ಎಂದು ತಿಳಿದು ಬಂದಿದೆ. ಹಾಗಾಗಿ ಇದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಹಾಗೆಯೇ ಆತ ಮಾಡಿರುವ ಪೋಸ್ಟ್ ಗಳು ಡಿಲೀಟ್ ಆಗಿರುವ ಕಾರಣ ಅದನ್ನು ಮರು ಪಡೆಯುವ ಸಲುವಾಗಿ ಪೋಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿ ನವೀನ್ ನನ್ನು ಆಗಸ್ಟ್ 11, ಮಂಗಳವಾರ ರಾತ್ರಿಯೇ ಬಂಧಿಸಲಾಗಿತ್ತು. ಶನಿವಾರ ಆತನ ಮನೆಗೆ ಕರೆದೊಯ್ದು ಮಹಜರು ಮಾಡಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು