Homeಕರ್ನಾಟಕವಿದ್ಯಾರ್ಥಿ ನವೀನ್ ಸಾವಿಗೆ ಭಾರತದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯೆ ಕಾರಣ: SFI ಆಕ್ರೋಶ

ವಿದ್ಯಾರ್ಥಿ ನವೀನ್ ಸಾವಿಗೆ ಭಾರತದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯೆ ಕಾರಣ: SFI ಆಕ್ರೋಶ

- Advertisement -
- Advertisement -

ಉಕ್ರೇನ್‌ನಲ್ಲಿ ರಷ್ಯಾ ಸೇನೆಯ ದಾಳಿಗೆ ಹಾವೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಬಲಿಯಾಗಿರುವುದು‌ ಅತ್ಯಂತ ನೋವಿನ ಸಂಗತಿಯಾಗಿದ್ದು, ನವೀನ್ ಸಾವಿಗೆ ಯುದ್ದದಾಹಿ ರಷ್ಯಾ ಸೇನೆ ಎಷ್ಟು ಹೊಣೆಯೋ, ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಸಕಾಲದಲ್ಲಿ ನೆರವಾಗದೆ ನಿರ್ಲಕ್ಷಿಸಿದ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ನಿರ್ಲಕ್ಷ್ಯ ಅಷ್ಟೇ ಹೊಣೆಯಾಗಿದೆ ಎಂದು ಎಸ್‌ಎಫ್‌ಯ ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ರಷ್ಯಾ-ಯುಕ್ರೇನ್‌‌ ಯುದ್ದಕ್ಕೆ ಅಮಾಯಕ ನಾಗರಿಕರು ಬಲಿಯಾಗುತ್ತಿದ್ದು, ಎರಡು ರಾಷ್ಟ್ರಗಳು ಶಾಂತಿಯುತ ಮಾತುಕತೆಗೆ ಮಂದಾಗಿ ಯುದ್ದ ನಿಲ್ಲಿಸಬೇಕು ಎಂದು ಎಸ್‌ಎಫ್‌ಐ ಆಗ್ರಹಿಸಿದೆ. ಭಾರತದ ಪ್ರಧಾನಿಗಳು ಮತ್ತು ವಿದೇಶಾಂಗ ಇಲಾಖೆ ಅಂತರರಾಷ್ಟ್ರೀಯ ಸಂಬಂಧಗಳನ್ನು‌ ಬಳಸಿಕೊಂಡು ಯುದ್ಧದಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಪ್ರಯತ್ನಿಸಬೇಕು ಎಂದು ಒಕ್ಕೂಟ ಸರ್ಕಾರಕ್ಕೆ SFI ಒತ್ತಾಯಿಸಿದೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

“ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ನವೀನ್ ಸಾವಿಗೆ ಕಾರಣವಾಗಿರುವ ಭಾರತದ ವೈಧ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸುವ ಕುರಿತು ಕೇಂದ್ರ ಸರ್ಕಾರ ಗಂಭೀರವಾಗಿ ಪ್ರಯತ್ನಿಸಬೇಕು. ನಮ್ಮ ದೇಶ ಬಿಟ್ಟು ವೈಧ್ಯಕೀಯ ಶಿಕ್ಷಣಕ್ಕಾಗಿ ಹತ್ತಾರು ಸಾವಿರ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ ಹೋಗಲು ನಿಜವಾದ ಕಾರಣವಾಗಿರುವ ಅಂಶಗಳನ್ನು ಭಾರತ ಸರ್ಕಾರ ಮನಗಾಣಬೇಕು.

ಭಾರತದಲ್ಲಿ ವೈದ್ಯಕೀಯ ಶಿಕ್ಷಣದ ಅತಿಯಾದ ಖಾಸಗೀಕರಣ, ಕೇಂದ್ರೀಕರಣ ಹಾಗೂ ನೀಟ್ ಪ್ರವೇಶ ಪರೀಕ್ಷೆಯ ದುಷ್ಪರಿಣಾಮವಾಗಿ ‘ಭಾರತದಲ್ಲಿ ಪ್ರತಿವರ್ಷ ಸುಮಾರು 1.20 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯುತ್ತಿದ್ದು, ಅವರಲ್ಲಿ 8 ಸಾವಿರ ಮಂದಿಗೆ ಮಾತ್ರ ಸರ್ಕಾರಿ ಸೀಟುಗಳು ಸೇರಿದಂತೆ 60 ಸಾವಿರ ವಿದ್ಯಾರ್ಥಿಗಳಿಗೆ ಸೀಟು ಸಿಗುತ್ತದೆ. ಇನ್ನು ಮಿಕ್ಕ ಬಡ, ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳಿಗೆ ಕೋಟ್ಯಂತರ ರುಪಾಯಿ ದುಬಾರಿ ಶುಲ್ಕ ಪಾವತಿ ಕಷ್ಟಕರವಾಗಿದ್ದು, ನಿಗದಿತ ಸಂಖ್ಯೆಯಲ್ಲಿರುವ ಸೀಟುಗಳು ಸಿಗುವುದಿಲ್ಲ. ಜೊತೆಗೆ ಭಾರತದಲ್ಲಿ ಕಲಿಯಲು ಶಿಕ್ಷಣ ಸಾಲ ಕೂಡ ಸಮರ್ಪಕವಾಗಿ ಸಿಗುವುದಿಲ್ಲ, ಉಕ್ರೇನ್‌ನಲ್ಲಿ ಕಲಿಯುವುದಾದರೆ ಶೈಕ್ಷಣಿಕ ಸಾಲ ಸಹ ಸಿಗುತ್ತದೆ. ಇದರಿಂದಾಗಿ ಜನರು ವಿದೇಶಕ್ಕೆ ಹೋಗುತ್ತಿದ್ದಾರೆ” ಎಂದು ಎಸ್‌ಎಫ್‌ಐ ಹೇಳಿದೆ.

“ಭಾರತದಲ್ಲಿ ನೀಟ್ ಪ್ರವೇಶ ಪರೀಕ್ಷೆ ಕಡ್ಡಾಯ ವಾಗಿದ್ದು, ನೀಟ್ ನಲ್ಲಿ ಕಡಿಮೆ ಅಂಕ ಪಡೆದವರಿಗೆ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ದೊರೆಯುವುದಿಲ್ಲ. ಈ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳಲು ಖಾಸಗಿ ಕೋಚಿಂಗ್ ಕೇಂದ್ರಗಳಿಗೆ ಐದಾರು ಲಕ್ಷ ರೂಪಾಯಿ ಸುರಿದು ತರಬೇತಿ ಪಡೆದುಕೊಳ್ಳಬೇಕು. ಈ ನೀಟ್ ಖಾಸಗಿ ಕೋಚಿಂಗ್ ಮಾಫಿಯಾ ಭಾರತದಲ್ಲಿ ಹತ್ತಾರು ಸಾವಿರ ಕೋಟಿ ರುಪಾಯಿಗಳ ದೊಡ್ಡ ವ್ಯವಹಾರವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಈ ನೀಟ್ ಪರೀಕ್ಷೆಯಲ್ಲಿ ಅಗತ್ಯ ರ್‍ಯಾಂಕ್ ಪಡೆಯದ ಕಾರಣದಿಂದಾಗಿ ತಮಿಳುನಾಡು ಸೇರಿದಂತೆ ದೇಶದೆಲ್ಲೆಡೆ ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಬಲಿಯಾಗುತ್ತಿದ್ದಾರೆ ಎಂದು ತಮಿಳುನಾಡು ರಾಜ್ಯ ಸರ್ಕಾರ ನೇಮಿಸಿದ ಎ.ಕೆ. ರಾಜನ್ ಆಯೋಗದ ತಿಳಿಸಿದೆ. ಆದ್ದರಿಂದ ನೀಟ್ ಪರೀಕ್ಷೆ ರದ್ದುಗೊಳಿಸಿ ಏಕ ರೂಪದ ಕೇಂದ್ರೀಯ ಶಾಸನ ಜಾರಿಗೆ ತರಲು ಆಗ್ರಹಿಸಿ ತಮಿಳುನಾಡಿನಾದ್ಯಂತ ವಿದ್ಯಾರ್ಥಿ ಚಳುವಳಿ ತೀವ್ರಗೊಂಡಿದೆ. ಇದರ ಪರಿಣಾಮವಾಗಿ ತಮಿಳುನಾಡಿನ ಸರ್ವಪಕ್ಷಗಳ ಸಂಸದರು ನೀಟ್ ಪರೀಕ್ಷೆ ರದ್ದುಗೊಳಿಸಲು ಒಕ್ಕೂಟ ಸರ್ಕಾರದ ಮೇಲೆ ಒತ್ತಡ ಹೇರಲು ಸಂಸತ್ ಅಧಿವೇಶನದಲ್ಲಿ ಪ್ರತಿಭಟಿಸಿದ್ದಾರೆ” ಎಂದು ಎಸ್‌ಎಫ್‌ಐ ಹೇಳಿದೆ.

“ಪಿಯುಸಿ ಸೈನ್ಸ್ ಓದಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ವಿದ್ಯಾಭ್ಯಾಸದ ಕನಸು ದೊಡ್ಡದಾಗಿರುತ್ತದೆ. ಆದರೆ ಈ ನೀಟ್ ಎಂಬ ಅಸಮತೋಲನ ಪೈಪೋಟಿಯ ವೇದಿಕೆ ಅಸಂಖ್ಯಾತ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನಾಶಗೊಳಿಸಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಯಾವುದೇ ಪ್ರವೇಶ ಪರೀಕ್ಷೆ ಇಲ್ಲದ ಉಕ್ರೇನ್‌ಗೆ ಹೋಗಲು ಇಚ್ಚಿಸುತ್ತಾರೆ. ಉಕ್ರೇನ್‌ನಲ್ಲಿ ವಿವಿಧ ದೇಶಗಳ 75 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ 20 ಸಾವಿರ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ” ಎಂದು ಎಸ್‌ಎಫ್‌ಐ ಹೇಳಿದೆ.

“ಭಾರತೀಯ ವಿದ್ಯಾರ್ಥಿಗಳಿಗೆ ಇದು ಏಕೆ ನೆಚ್ಚಿನ ದೇಶವಾಯಿತು ಎಂದರೆ ಉಕ್ರೇನ್‌ನ ಖಾಸಗಿ ವೈದ್ಯಕೀಯ ಬೋಧನಾ ಶುಲ್ಕ ಭಾರತದ ಕಾಲೇಜುಗಳಿಗೆ ಹೋಲಿಸಿದರೆ ತುಂಬ ಅಗ್ಗ, ಉಕ್ರೇನಿಯನ್ ಕಾಲೇಜುಗಳು ವಿಶ್ವ ಆರೋಗ್ಯ ಮಂಡಳಿ ಮತ್ತು ಭಾರತೀಯ ವೈದ್ಯಕೀಯ ಮಂಡಳಿಗಳ ಮಾನ್ಯತೆ ಗಳಿಸಿವೆ. ಯೂರೋಪ್ ವೈದ್ಯಕೀಯ ಮಂಡಳಿ, ಬ್ರಿಟನ್ ಜನರಲ್ ವೈದ್ಯಕೀಯ ಮಂಡಳಿಗಳು ಕೂಡ ಮಾನ್ಯತೆ ನೀಡಿರುವುದರಿಂದ ಯುರೋಪ್ ಸೇರಿದಂತೆ ಇಡೀ ವಿಶ್ವದಲ್ಲಿ ಅತ್ಯಂತ ಕಡಿಮೆ ವೆಚ್ಚದ ವೈಧ್ಯಕೀಯ ಶಿಕ್ಷಣ ನೀಡುವ ದೇಶ ಎಂಬ ಹಿರಿಮೆ ಉಕ್ರೇನ್‌ಗೆ ಇದೆ” ಎಂದು ಎಸ್‌ಎಫ್‌ಐ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: 352 ಉಕ್ರೇನಿಯನ್ ನಾಗರಿಕರು ಸಾವು, 1,684 ಮಂದಿಗೆ ಗಾಯ

“ಈ ಮೊದಲು ಯೂನಿಯನ್ ಆಫ್ ಸೋವಿಯತ್ ಸೋಷಿಯಲಿಸ್ಟ್ ರಿಪಬ್ಲಿಕ್ಸ್ ಆಡಳಿತಕ್ಕೆ ಒಳಪಟ್ಟಿದ್ದ ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಭಾರಿ ಅಗ್ಗ ಎಂಬುದು ಜನಜನಿತ. ಇದೇ ಕಾರಣಕ್ಕಾಗಿ ಭಾರತದಿಂದ ಸಾಕಷ್ಟು ಮಂದಿ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗುವ ದುಸ್ಥಿತಿ ಉಂಟಾಗಿದೆ. ಈ ಅಂಶಗಳನ್ನು ಮರೆಮಾಚಲು ‘ಉಕ್ರೇನ್‌ನಂತಹ ಸಣ್ಣ ರಾಷ್ಟ್ರದಲ್ಲಿ ಶಿಕ್ಷಣ ಪಡೆಯುವುದಕ್ಕಿಂತ ಭಾರತದಲ್ಲೇ ಶಿಕ್ಷಣ ಪಡೆಯಿರಿ ಎಂದು ಹೇಳಿರುವ ಪ್ರಧಾನಿ ಮೋದಿಯವರ ಬೇಜವಾಬ್ದಾರಿ ಹೇಳಿಕೆಯು ತೀರಾ ಹಾಸ್ಯಾಸ್ಪದವಾಗಿದೆ” ಎಂದು ಅದು ವಿದ್ಯಾರ್ಥಿ ಸಂಘಟನೆ ಹೇಳಿದೆ.

“ಈ ಉಪದೇಶ ನೀಡುವ ಮೋದಿ ಸರ್ಕಾರ ಭಾರತ ದೇಶದಲ್ಲಿ ವೈಧ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕನಿಷ್ಠ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ನಿರ್ಮಿಸಬೇಕು. ಆದರೆ ಒಕ್ಕೂಟ ಸರ್ಕಾರ ಈ ಯಾವುದೇ ಕೆಲಸಗಳು ಮಾಡದೆ ಜನರ ತೆರಿಗೆಯ ಹಣದಲ್ಲಿ ಪ್ರಚಾರಕ್ಕೆ ಪ್ರತಿಮೆಗಳು, ಮಂದಿರ, ಸೆಂಟ್ರಲ್ ವಿಸ್ಟಾ, ದುಬಾರಿ ವಿಮಾನ ಖರೀದಿಸುವ ಮೂಲಕ ದೇಶದ ಶಿಕ್ಷಣ, ಆರೋಗ್ಯವನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ” ಎಂದು ಆಕ್ರೋಶ ವ್ಯಕ್ತವಾಗಿದೆ.

“ಕೊವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಭಾರತದ ವೈಧ್ಯಕೀಯ ವ್ಯವಸ್ಥೆ ಅಗತ್ಯ ವೈದ್ಯರ ಕೊರತೆಯನ್ನು ತೀವ್ರವಾಗಿ ಎದುರಿಸಿತು. ಇದರಿಂದ ಭಾರತ ಸರ್ಕಾರ ಯಾವುದೇ ಪಾಠ ಕುರಿತಂತೆ ಕಾಣುತ್ತಿಲ್ಲ. ಈ ಸಾಂಕ್ರಾಮಿಕ ದುರಿತ ಕಾಲದಲ್ಲಾದರೂ ಒಕ್ಕೂಟ ಸರ್ಕಾರ ಎಚ್ಚೆತ್ತುಕೊಂಡು ವೈದ್ಯಕೀಯ ಶಿಕ್ಷಣ, ಆರೋಗ್ಯಕ್ಕೆ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಸಿಂಹಪಾಲು ಮೀಸಲಿಡಬೇಕಿತ್ತು. ಆದರೆ ಮೋದಿ ಸರ್ಕಾರ ಭಾರತದ ಪ್ರಜೆಗಳಿಗೆ ಆರೋಗ್ಯ, ಶಿಕ್ಷಣವನ್ನು ನೀಡುವ ಕನಿಷ್ಠ ಕರ್ತವ್ಯಕ್ಕೆ ಬೆನ್ನು ತೋರಿಸಿ ದೇಶದ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸುತ್ತಿದೆ” ಎಂದು ಎಸ್‌ಎಫ್‌ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...