Homeಕರ್ನಾಟಕವಿದ್ಯಾರ್ಥಿ ನವೀನ್ ಸಾವಿಗೆ ಭಾರತದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯೆ ಕಾರಣ: SFI ಆಕ್ರೋಶ

ವಿದ್ಯಾರ್ಥಿ ನವೀನ್ ಸಾವಿಗೆ ಭಾರತದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯೆ ಕಾರಣ: SFI ಆಕ್ರೋಶ

- Advertisement -
- Advertisement -

ಉಕ್ರೇನ್‌ನಲ್ಲಿ ರಷ್ಯಾ ಸೇನೆಯ ದಾಳಿಗೆ ಹಾವೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಬಲಿಯಾಗಿರುವುದು‌ ಅತ್ಯಂತ ನೋವಿನ ಸಂಗತಿಯಾಗಿದ್ದು, ನವೀನ್ ಸಾವಿಗೆ ಯುದ್ದದಾಹಿ ರಷ್ಯಾ ಸೇನೆ ಎಷ್ಟು ಹೊಣೆಯೋ, ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಸಕಾಲದಲ್ಲಿ ನೆರವಾಗದೆ ನಿರ್ಲಕ್ಷಿಸಿದ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ನಿರ್ಲಕ್ಷ್ಯ ಅಷ್ಟೇ ಹೊಣೆಯಾಗಿದೆ ಎಂದು ಎಸ್‌ಎಫ್‌ಯ ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ರಷ್ಯಾ-ಯುಕ್ರೇನ್‌‌ ಯುದ್ದಕ್ಕೆ ಅಮಾಯಕ ನಾಗರಿಕರು ಬಲಿಯಾಗುತ್ತಿದ್ದು, ಎರಡು ರಾಷ್ಟ್ರಗಳು ಶಾಂತಿಯುತ ಮಾತುಕತೆಗೆ ಮಂದಾಗಿ ಯುದ್ದ ನಿಲ್ಲಿಸಬೇಕು ಎಂದು ಎಸ್‌ಎಫ್‌ಐ ಆಗ್ರಹಿಸಿದೆ. ಭಾರತದ ಪ್ರಧಾನಿಗಳು ಮತ್ತು ವಿದೇಶಾಂಗ ಇಲಾಖೆ ಅಂತರರಾಷ್ಟ್ರೀಯ ಸಂಬಂಧಗಳನ್ನು‌ ಬಳಸಿಕೊಂಡು ಯುದ್ಧದಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಪ್ರಯತ್ನಿಸಬೇಕು ಎಂದು ಒಕ್ಕೂಟ ಸರ್ಕಾರಕ್ಕೆ SFI ಒತ್ತಾಯಿಸಿದೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

“ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ನವೀನ್ ಸಾವಿಗೆ ಕಾರಣವಾಗಿರುವ ಭಾರತದ ವೈಧ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸುವ ಕುರಿತು ಕೇಂದ್ರ ಸರ್ಕಾರ ಗಂಭೀರವಾಗಿ ಪ್ರಯತ್ನಿಸಬೇಕು. ನಮ್ಮ ದೇಶ ಬಿಟ್ಟು ವೈಧ್ಯಕೀಯ ಶಿಕ್ಷಣಕ್ಕಾಗಿ ಹತ್ತಾರು ಸಾವಿರ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ ಹೋಗಲು ನಿಜವಾದ ಕಾರಣವಾಗಿರುವ ಅಂಶಗಳನ್ನು ಭಾರತ ಸರ್ಕಾರ ಮನಗಾಣಬೇಕು.

ಭಾರತದಲ್ಲಿ ವೈದ್ಯಕೀಯ ಶಿಕ್ಷಣದ ಅತಿಯಾದ ಖಾಸಗೀಕರಣ, ಕೇಂದ್ರೀಕರಣ ಹಾಗೂ ನೀಟ್ ಪ್ರವೇಶ ಪರೀಕ್ಷೆಯ ದುಷ್ಪರಿಣಾಮವಾಗಿ ‘ಭಾರತದಲ್ಲಿ ಪ್ರತಿವರ್ಷ ಸುಮಾರು 1.20 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯುತ್ತಿದ್ದು, ಅವರಲ್ಲಿ 8 ಸಾವಿರ ಮಂದಿಗೆ ಮಾತ್ರ ಸರ್ಕಾರಿ ಸೀಟುಗಳು ಸೇರಿದಂತೆ 60 ಸಾವಿರ ವಿದ್ಯಾರ್ಥಿಗಳಿಗೆ ಸೀಟು ಸಿಗುತ್ತದೆ. ಇನ್ನು ಮಿಕ್ಕ ಬಡ, ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳಿಗೆ ಕೋಟ್ಯಂತರ ರುಪಾಯಿ ದುಬಾರಿ ಶುಲ್ಕ ಪಾವತಿ ಕಷ್ಟಕರವಾಗಿದ್ದು, ನಿಗದಿತ ಸಂಖ್ಯೆಯಲ್ಲಿರುವ ಸೀಟುಗಳು ಸಿಗುವುದಿಲ್ಲ. ಜೊತೆಗೆ ಭಾರತದಲ್ಲಿ ಕಲಿಯಲು ಶಿಕ್ಷಣ ಸಾಲ ಕೂಡ ಸಮರ್ಪಕವಾಗಿ ಸಿಗುವುದಿಲ್ಲ, ಉಕ್ರೇನ್‌ನಲ್ಲಿ ಕಲಿಯುವುದಾದರೆ ಶೈಕ್ಷಣಿಕ ಸಾಲ ಸಹ ಸಿಗುತ್ತದೆ. ಇದರಿಂದಾಗಿ ಜನರು ವಿದೇಶಕ್ಕೆ ಹೋಗುತ್ತಿದ್ದಾರೆ” ಎಂದು ಎಸ್‌ಎಫ್‌ಐ ಹೇಳಿದೆ.

“ಭಾರತದಲ್ಲಿ ನೀಟ್ ಪ್ರವೇಶ ಪರೀಕ್ಷೆ ಕಡ್ಡಾಯ ವಾಗಿದ್ದು, ನೀಟ್ ನಲ್ಲಿ ಕಡಿಮೆ ಅಂಕ ಪಡೆದವರಿಗೆ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ದೊರೆಯುವುದಿಲ್ಲ. ಈ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳಲು ಖಾಸಗಿ ಕೋಚಿಂಗ್ ಕೇಂದ್ರಗಳಿಗೆ ಐದಾರು ಲಕ್ಷ ರೂಪಾಯಿ ಸುರಿದು ತರಬೇತಿ ಪಡೆದುಕೊಳ್ಳಬೇಕು. ಈ ನೀಟ್ ಖಾಸಗಿ ಕೋಚಿಂಗ್ ಮಾಫಿಯಾ ಭಾರತದಲ್ಲಿ ಹತ್ತಾರು ಸಾವಿರ ಕೋಟಿ ರುಪಾಯಿಗಳ ದೊಡ್ಡ ವ್ಯವಹಾರವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಈ ನೀಟ್ ಪರೀಕ್ಷೆಯಲ್ಲಿ ಅಗತ್ಯ ರ್‍ಯಾಂಕ್ ಪಡೆಯದ ಕಾರಣದಿಂದಾಗಿ ತಮಿಳುನಾಡು ಸೇರಿದಂತೆ ದೇಶದೆಲ್ಲೆಡೆ ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಬಲಿಯಾಗುತ್ತಿದ್ದಾರೆ ಎಂದು ತಮಿಳುನಾಡು ರಾಜ್ಯ ಸರ್ಕಾರ ನೇಮಿಸಿದ ಎ.ಕೆ. ರಾಜನ್ ಆಯೋಗದ ತಿಳಿಸಿದೆ. ಆದ್ದರಿಂದ ನೀಟ್ ಪರೀಕ್ಷೆ ರದ್ದುಗೊಳಿಸಿ ಏಕ ರೂಪದ ಕೇಂದ್ರೀಯ ಶಾಸನ ಜಾರಿಗೆ ತರಲು ಆಗ್ರಹಿಸಿ ತಮಿಳುನಾಡಿನಾದ್ಯಂತ ವಿದ್ಯಾರ್ಥಿ ಚಳುವಳಿ ತೀವ್ರಗೊಂಡಿದೆ. ಇದರ ಪರಿಣಾಮವಾಗಿ ತಮಿಳುನಾಡಿನ ಸರ್ವಪಕ್ಷಗಳ ಸಂಸದರು ನೀಟ್ ಪರೀಕ್ಷೆ ರದ್ದುಗೊಳಿಸಲು ಒಕ್ಕೂಟ ಸರ್ಕಾರದ ಮೇಲೆ ಒತ್ತಡ ಹೇರಲು ಸಂಸತ್ ಅಧಿವೇಶನದಲ್ಲಿ ಪ್ರತಿಭಟಿಸಿದ್ದಾರೆ” ಎಂದು ಎಸ್‌ಎಫ್‌ಐ ಹೇಳಿದೆ.

“ಪಿಯುಸಿ ಸೈನ್ಸ್ ಓದಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ವಿದ್ಯಾಭ್ಯಾಸದ ಕನಸು ದೊಡ್ಡದಾಗಿರುತ್ತದೆ. ಆದರೆ ಈ ನೀಟ್ ಎಂಬ ಅಸಮತೋಲನ ಪೈಪೋಟಿಯ ವೇದಿಕೆ ಅಸಂಖ್ಯಾತ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನಾಶಗೊಳಿಸಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಯಾವುದೇ ಪ್ರವೇಶ ಪರೀಕ್ಷೆ ಇಲ್ಲದ ಉಕ್ರೇನ್‌ಗೆ ಹೋಗಲು ಇಚ್ಚಿಸುತ್ತಾರೆ. ಉಕ್ರೇನ್‌ನಲ್ಲಿ ವಿವಿಧ ದೇಶಗಳ 75 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ 20 ಸಾವಿರ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ” ಎಂದು ಎಸ್‌ಎಫ್‌ಐ ಹೇಳಿದೆ.

“ಭಾರತೀಯ ವಿದ್ಯಾರ್ಥಿಗಳಿಗೆ ಇದು ಏಕೆ ನೆಚ್ಚಿನ ದೇಶವಾಯಿತು ಎಂದರೆ ಉಕ್ರೇನ್‌ನ ಖಾಸಗಿ ವೈದ್ಯಕೀಯ ಬೋಧನಾ ಶುಲ್ಕ ಭಾರತದ ಕಾಲೇಜುಗಳಿಗೆ ಹೋಲಿಸಿದರೆ ತುಂಬ ಅಗ್ಗ, ಉಕ್ರೇನಿಯನ್ ಕಾಲೇಜುಗಳು ವಿಶ್ವ ಆರೋಗ್ಯ ಮಂಡಳಿ ಮತ್ತು ಭಾರತೀಯ ವೈದ್ಯಕೀಯ ಮಂಡಳಿಗಳ ಮಾನ್ಯತೆ ಗಳಿಸಿವೆ. ಯೂರೋಪ್ ವೈದ್ಯಕೀಯ ಮಂಡಳಿ, ಬ್ರಿಟನ್ ಜನರಲ್ ವೈದ್ಯಕೀಯ ಮಂಡಳಿಗಳು ಕೂಡ ಮಾನ್ಯತೆ ನೀಡಿರುವುದರಿಂದ ಯುರೋಪ್ ಸೇರಿದಂತೆ ಇಡೀ ವಿಶ್ವದಲ್ಲಿ ಅತ್ಯಂತ ಕಡಿಮೆ ವೆಚ್ಚದ ವೈಧ್ಯಕೀಯ ಶಿಕ್ಷಣ ನೀಡುವ ದೇಶ ಎಂಬ ಹಿರಿಮೆ ಉಕ್ರೇನ್‌ಗೆ ಇದೆ” ಎಂದು ಎಸ್‌ಎಫ್‌ಐ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: 352 ಉಕ್ರೇನಿಯನ್ ನಾಗರಿಕರು ಸಾವು, 1,684 ಮಂದಿಗೆ ಗಾಯ

“ಈ ಮೊದಲು ಯೂನಿಯನ್ ಆಫ್ ಸೋವಿಯತ್ ಸೋಷಿಯಲಿಸ್ಟ್ ರಿಪಬ್ಲಿಕ್ಸ್ ಆಡಳಿತಕ್ಕೆ ಒಳಪಟ್ಟಿದ್ದ ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಭಾರಿ ಅಗ್ಗ ಎಂಬುದು ಜನಜನಿತ. ಇದೇ ಕಾರಣಕ್ಕಾಗಿ ಭಾರತದಿಂದ ಸಾಕಷ್ಟು ಮಂದಿ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗುವ ದುಸ್ಥಿತಿ ಉಂಟಾಗಿದೆ. ಈ ಅಂಶಗಳನ್ನು ಮರೆಮಾಚಲು ‘ಉಕ್ರೇನ್‌ನಂತಹ ಸಣ್ಣ ರಾಷ್ಟ್ರದಲ್ಲಿ ಶಿಕ್ಷಣ ಪಡೆಯುವುದಕ್ಕಿಂತ ಭಾರತದಲ್ಲೇ ಶಿಕ್ಷಣ ಪಡೆಯಿರಿ ಎಂದು ಹೇಳಿರುವ ಪ್ರಧಾನಿ ಮೋದಿಯವರ ಬೇಜವಾಬ್ದಾರಿ ಹೇಳಿಕೆಯು ತೀರಾ ಹಾಸ್ಯಾಸ್ಪದವಾಗಿದೆ” ಎಂದು ಅದು ವಿದ್ಯಾರ್ಥಿ ಸಂಘಟನೆ ಹೇಳಿದೆ.

“ಈ ಉಪದೇಶ ನೀಡುವ ಮೋದಿ ಸರ್ಕಾರ ಭಾರತ ದೇಶದಲ್ಲಿ ವೈಧ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕನಿಷ್ಠ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ನಿರ್ಮಿಸಬೇಕು. ಆದರೆ ಒಕ್ಕೂಟ ಸರ್ಕಾರ ಈ ಯಾವುದೇ ಕೆಲಸಗಳು ಮಾಡದೆ ಜನರ ತೆರಿಗೆಯ ಹಣದಲ್ಲಿ ಪ್ರಚಾರಕ್ಕೆ ಪ್ರತಿಮೆಗಳು, ಮಂದಿರ, ಸೆಂಟ್ರಲ್ ವಿಸ್ಟಾ, ದುಬಾರಿ ವಿಮಾನ ಖರೀದಿಸುವ ಮೂಲಕ ದೇಶದ ಶಿಕ್ಷಣ, ಆರೋಗ್ಯವನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ” ಎಂದು ಆಕ್ರೋಶ ವ್ಯಕ್ತವಾಗಿದೆ.

“ಕೊವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಭಾರತದ ವೈಧ್ಯಕೀಯ ವ್ಯವಸ್ಥೆ ಅಗತ್ಯ ವೈದ್ಯರ ಕೊರತೆಯನ್ನು ತೀವ್ರವಾಗಿ ಎದುರಿಸಿತು. ಇದರಿಂದ ಭಾರತ ಸರ್ಕಾರ ಯಾವುದೇ ಪಾಠ ಕುರಿತಂತೆ ಕಾಣುತ್ತಿಲ್ಲ. ಈ ಸಾಂಕ್ರಾಮಿಕ ದುರಿತ ಕಾಲದಲ್ಲಾದರೂ ಒಕ್ಕೂಟ ಸರ್ಕಾರ ಎಚ್ಚೆತ್ತುಕೊಂಡು ವೈದ್ಯಕೀಯ ಶಿಕ್ಷಣ, ಆರೋಗ್ಯಕ್ಕೆ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಸಿಂಹಪಾಲು ಮೀಸಲಿಡಬೇಕಿತ್ತು. ಆದರೆ ಮೋದಿ ಸರ್ಕಾರ ಭಾರತದ ಪ್ರಜೆಗಳಿಗೆ ಆರೋಗ್ಯ, ಶಿಕ್ಷಣವನ್ನು ನೀಡುವ ಕನಿಷ್ಠ ಕರ್ತವ್ಯಕ್ಕೆ ಬೆನ್ನು ತೋರಿಸಿ ದೇಶದ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸುತ್ತಿದೆ” ಎಂದು ಎಸ್‌ಎಫ್‌ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...