Homeಮುಖಪುಟಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

ಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

- Advertisement -
- Advertisement -

ಪಂಜಾಬ್ ರಾಜ್ಯ ಕಾಂಗ್ರೆಸ್‌ ಒಡೆದ ಮನೆಯಾಗಿರುವುದು ಹಳೆಯ ಸುದ್ದಿ. ಆದರೆ, ಕ್ರಿಕೆಟಿಗ ಮಾಜಿ ಸಚಿವ ನವಜೋತ್‌ ಸಿಂಗ್ ಸಿಧು ಇದೀಗ ಎಎಪಿ ಪಾಲಾಗಲಿದ್ದಾರೆ ಎಂಬುದು ಹೊಸ ಸುದ್ದಿ. ಹೌದು..! ಕಳೆದ ಹಲವು ದಿನಗಳಿಂದ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಜೊತೆಗೆ ವೈಮನಸ್ಸು ಹೊಂದಿದ್ದ ಸಿಧು ಕೊನೆಗೂ ಆಮ್ ಆದ್ಮಿ ಪಾರ್ಟಿಯ ಪಾಲಾಗಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಸಿಧುಗೆ ಆದರದ ಸ್ವಾಗತ ನೀಡಿರುವುದು ಈ ಎಲ್ಲಾ ಗುಮಾನಿಗೆ ಕಾರಣವಾಗಿದೆ.

ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ ನಂತರ ಸಿಧು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ, ಬಿಜೆಪಿಯಲ್ಲಿ ಸರಿಯಾದ ಸ್ಥಾನಮಾನ ಸಿಗದಿದ್ದ ಕಾರಣ ಅವರು ಬಿಜೆಪಿ ತ್ಯಜಿಸಿ 2017ರ ವಿಧಾನಸಭಾ ಚುನಾವಣೆ ಸಂದರ್ಭದ್ಲಲಿ ಕಾಂಗ್ರೆಸ್ ಪಾಲಾಗಿದ್ದರು. ಅಸಲಿಗೆ ಅವರು ಕಾಂಗ್ರೆಸ್‌ ಸೇರುವ ಮುನ್ನವೇ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿತ್ತು. ಈ ಸಂಬಂಧ ನವಜೋತ್ ಸಿಂಗ್ ಸಿಧು ಜೊತೆಗೆ ಚುನಾವಣಾ ತಂತ್ರಗಾರ ನಿಪುಣ ಪ್ರಶಾಂತ್ ಕಿಶೋರ್ ಮಾತುಕತೆಯನ್ನೂ ನಡೆಸಿದ್ದರು.

ಆದರೆ, ಈ ಮಾತುಕತೆ ಫಲಪ್ರದವಾಗಲಿಲ್ಲ. ಹೀಗಾಗಿ ಸಿಧು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಅಲ್ಲದೆ, 2017ರ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಿಎಂ ಅಮರಿಂದರ್ ಸಿಂಗ್ ಅವರ ಸಚಿವ ಸಂಪುಟದಲ್ಲಿ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾದರು. ಆದರೆ, ದಿನ ಕಳೆದಂತೆ ಸಿಎಂ ಅಮರಿಂದರ್‌ ಸಿಂಗ್ ಹಾಗೂ ಸಿಧು ನಡುವಿನ ಭಿನ್ನಾಭಿಪ್ರಾಯ ಬೆಳೆಯುತ್ತಲೇ ಇತ್ತು. ಈ ಕುರಿತು ಸಿಧು ಕಾಂಗ್ರೆಸ್‌ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್‌ ಗಾಂಧಿಗೆ ಹಲವು ಬಾರಿ ದೂರು ನೀಡಿದ್ದರು. ಆದರೆ, ಇದರಿಂದ ಯಾವುದೇ ಪ್ರಯೋಜನವಾಗಿರಲಿಲ್ಲ.
ಹೀಗಾಗಿ ಕೊನೆಗೂ ಸಿಧು ಕಾಂಗ್ರೆಸ್‌ ತೊರೆಯಲಿರುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ, ಪಂಜಾಬ್‌ನಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ವಿರುದ್ಧ ಬಲವಾದ ಮತ್ತೊಂದು ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಅವರು ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ರಾಷ್ಟ್ರ ರಾಜಕಾರಣದಲ್ಲಿ ಪ್ರಸ್ತುತ ಸದ್ದು ಮಾಡುತ್ತಿದೆ.

ಇದಕ್ಕೆ ಇಂಬು ನೀಡುವಂತೆ ದೆಹಲಿಯ ಎಎಪಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, “ಕ್ರಿಕೆಟಿಗ ಮಾಜಿ ಸಚಿವ ನವಜೋತ್‌ ಸಿಂಗ್ ಸಿಧು ಎಎಪಿ ಸೇರಲು ಸಮ್ಮಿತಿ ಸೂಚಿಸಿದರೆ ಅವರನ್ನು ಸಂತೋಷದಿಂದ ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು” ಎಂಬ ಹೇಳಿಕೆ ಹಲವಾರು ಗುಮಾನಿಗಳಿಗೆ ಕಾರಣವಾಗಿದೆ. ಆದರೆ, ದೆಹಲಿ ಮೂಲಗಳ ಪ್ರಕಾರ ಸಿಧು ಎಎಪಿ ಸೇರ್ಪಡೆ ಖಚಿತ ಎನ್ನಲಾಗುತ್ತಿದೆ.

2017ರಲ್ಲಿ ನಡೆದ ಪಂಜಾಬ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುವಲ್ಲಿ ಸಫಲವಾಗಿತ್ತು. ಶಿರೋಮಣಿ ಅಕಾಲಿ ದಳ ಮತ್ತು ಬಿಜೆಪಿಯನ್ನು ಸೋಲಿಸಿ ಅಧಿಕಾರಕ್ಕೆ ಬಂದಿತ್ತು. 117 ಸದಸ್ಯಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 77 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಎಎಪಿ 20, ಎಸ್ಎಡಿ 15, ಬಿಜೆಪಿ 3 ಹಾಗೂ ಲೋಕ ಇನ್ಸಾಫ್ ಪಾರ್ಟಿ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಚುನಾವಣೆಯಲ್ಲಿ ರಾಜಕೀಯ ತಂತ್ರಗಾರ ನಿಪುಣ ಪ್ರಶಾಂತ್‌ ಕಿಶೋರ್‌ ಕಾಂಗ್ರೆಸ್‌ ಪರ ಕೆಲಸ ಮಾಡಿದ್ದರು ಎಂಬುದು ಉಲ್ಲೇಖಾರ್ಹ.


ಓದಿ: ಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ…


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...