Homeಮುಖಪುಟಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

- Advertisement -
- Advertisement -

ಪಂಜಾಬ್‌ ಕಾಂಗ್ರೆಸ್‌ನಲ್ಲಿ ಒಡಕು ಮೂಡಿದ್ದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಅವರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಕಾಂಗ್ರೆಸ್‌ ಹೈಕಮಾಂಡ್ 2 ಬಾರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ದೆಹಲಿಗೆ ಕರೆಸಿಕೊಂಡು ಭಿನ್ನಮತ ಶಮನಕ್ಕೆ ಪ್ರಯತ್ನ ನಡೆಸಿದೆ. ಹೈಕಮಾಂಡ್ ಪ್ರಯತ್ನ ಯಶಸ್ವಿಯಾಗುವ ಸೂಚನೆಗಳು ಸದ್ಯಕ್ಕೆ ಕಾಣುತ್ತಿಲ್ಲ.

ಇಂದು ಪಂಜಾಬ್‌ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ನವಜೋತ್ ಸಿಂಗ್ ಸಿಧು ಅವರು AICC ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿ ಚರ್ಚೆಯನ್ನು ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿಯವರ ನಡುವಿನ ತಮ್ಮ ಭೇಟಿಯನ್ನು ಸಿಧು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದು ಪಂಜಾಬ್ ಚುನಾವಣಾ ತಯಾರಿಯ ಕುರಿತು ದೀರ್ಘವಾದ ಚರ್ಚೆ ನಡೆದಿದೆ ಎಂದಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ನವಜೋತ್ ಸಿಂಗ್ ಸಿಧು ನಿನ್ನೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಕೇಳಿದ್ದು ರಾಹುಲ್‌ ಭೇಟಿಯನ್ನು ನಿರಾಕರಿಸಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ನವಜೋತ್‌ ಸಿಂಗ್ ಮತ್ತು ರಾಹುಲ್ ಭೇಟಿಯ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ ಆ ರೀತಿಯ ಯಾವ ಸಭೆ ಕೂಡ ನಡೆಯುತ್ತಿಲ್ಲ. ಸಿಧು ಭೇಟಿಯ ವಿಷಯ ತಮಗೆ ತಿಳಿದಿಲ್ಲ ಎಂದು ರಾಹುಲ್ ವದಂತಿಯನ್ನು ತಳ್ಳಿ ಹಾಕಿದ್ದರು.

ನವಜೋತ್ ಸಿಂಗ್ ಸಿಧು ಅವರು ಉಪಮುಖ್ಯ ಮಂತ್ರಿ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದು ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್‌ ಸಿಧು ಬೇಡಿಕೆಗೆ ಒಪ್ಪಿಲ್ಲ. ಹೀಗಾಗಿ ಕ್ಯಾಪ್ಟನ್ ಮತ್ತು ಸಿಧು ನಡುವೆ ಆಂತರಿಕ ಕಚ್ಚಾಟ ಆರಂಭವಾಗಿದೆ ಎಂದು ಪಂಜಾಬ್ ಕಾಂಗ್ರೆಸ್‌ನ ನಾಯಕರೊಬ್ಬರು ತಿಳಿಸಿದ್ದಾರೆ. ನವಜೋತ್ ಸಿಂಗ್ ಸಿಧು ಜೂನ್‌ ಆರಂಭದಿಂದಲೂ ಕಾಂಗ್ರೆಸ್‌ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿಯವರ ಭೇಟಿಗೆ ಅವಕಾಶ ಕೇಳುತ್ತಿದ್ದು ಸಿಧು ಅವರಿಗೆ ಸೋನಿಯಾ ಅವರನ್ನು ಭೇಟಿಯಾಗುವ ಅವಕಾಶ ಇದುವರೆಗೆ ಸಿಕ್ಕಿಲ್ಲ.

ಇದನ್ನೂ ಓದಿ: ಕಾಸರಗೋಡು ಗಡಿ ಗ್ರಾಮಗಳ ಹೆಸರು ಬದಲಿಸುವಿಕೆ: ಸತ್ಯ ಮತ್ತು ಅರೆಸತ್ಯಗಳು

2022 ರ ಆರಂಭದಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ವಿರೋಧ ಪಕ್ಷಗಳಾದ ಶಿರೋಮಣಿ ಅಕಾಲಿದಳ, ಆಮ್‌ ಆದ್ಮಿ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ದಿನ ನಿತ್ಯದ ವಿದ್ಯಮಾನವಾಗಿದೆ. ಪಂಜಾಬ್ ಕಾಂಗ್ರೆಸ್‌ನ ಭಿನ್ನಾಭಿಪ್ರಾಯಗಳು ದೆಹಲಿಯ ನಾಯಕರಿಗೆ ನಿದ್ದೆಗೆಡಿಸಿದ್ದು ಸಮಸ್ಯೆಯನ್ನು ಬಗೆಹರಿಸುವ ಎಲ್ಲ ಪ್ರಯತ್ನಗಳು ವಿಫಲವಾಗುತ್ತಲೇ ಇದೆ.

ಈ ನಡುವೆ ನವಜೋತ್‌ ಸಿಂಗ್ ಸಿಧು ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿದ್ದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೊತೆ ಈ ಸಂಬಂಧ ಚರ್ಚೆ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈ ಹಿಂದೆ ಆರೋಪಿಸಿದ್ದರು.

ಇದನ್ನೂ ಓದಿ: ಪಿಕೆ ಟಾಕೀಸ್; ಮುಂದುವರೆದ ದೇಶದ ಸಾಮಾಜಿಕ, ಆರ್ಥಿಕ, ಧಾರ್ಮಿಕ ಸಂಕೋಲೆಗಳಲ್ಲಿ ಸಿಕ್ಕಿಕೊಂಡವರ ಕಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...