Homeಮುಖಪುಟನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

- Advertisement -
- Advertisement -

ನವರಾತ್ರಿ ಆಚರಣೆ ಹಿನ್ನಲೆ ಮಾಂಸಾಹಾರಿ ಆಹಾರವನ್ನು ನೀಡುವುದನ್ನು ನಿಲ್ಲಿಸುವ ಸುಪ್ರೀಂ ಕೋರ್ಟ್ ಕ್ಯಾಂಟೀನ್‌ನ ನಿರ್ಧಾರದ ಬಗ್ಗೆ ವಕೀಲರ ಗುಂಪು ಗುರುವಾರ ಅತೃಪ್ತಿ ವ್ಯಕ್ತಪಡಿಸಿದ್ದು, ಈ ಸಂಪ್ರದಾಯವನ್ನು ಮೊದಲ ಬಾರಿಗೆ ಹೇರಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಅದಾಗ್ಯೂ, ವಕೀಲರ ತೀವ್ರ ಪ್ರತಿಭಟನೆಯ ಹಿನ್ನಲೆ ಶನಿವಾರದಿಂದ ಕ್ಯಾಂಟೀನ್‌ನಲ್ಲಿ ಮತ್ತೆ ಮಾಂಸಾಹಾರವನ್ನು ನೀಡಲಾಗುತ್ತಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವರಾತ್ರಿ ಆಚರಣೆ ಉಲ್ಲೇಖಿಸಿ ಮಾಂಸಾಹಾರ ನೀಡದಿರುವ  ಬಗ್ಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(SCBA) ಅಧ್ಯಕ್ಷರಾದ ಕಪಿಲ್ ಸಿಬಲ್ ಮತ್ತು ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್-ಆನ್-ರೆಕಾರ್ಡ್ ಅಸೋಸಿಯೇಷನ್ ​​(SCAORA) ಅಧ್ಯಕ್ಷರಾದ ವಿಪಿನ್ ನಾಯರ್ ಅವರಿಗೆ ಬರೆದ ಪತ್ರದಲ್ಲಿ ವಕೀಲರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದು, ಇಂತಹ ನಿರ್ಧಾರವು ಅಸಮಂಜಸವಾಗಿದ್ದು, ವಕೀಲ ವೃತ್ತಿಯ “ಬಹುತ್ವದ” ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ನ್ಯಾಯಾಲಯದ ಕ್ಯಾಂಟೀನ್ ಸಾಂಪ್ರದಾಯಿಕವಾಗಿ ವೈವಿಧ್ಯಮಯ ಆಹಾರದ ಆದ್ಯತೆಗಳನ್ನು ಪೂರೈಸುತ್ತಿದೆ. ಕೆಲವರ ಧಾರ್ಮಿಕ ಭಾವನೆಗಳನ್ನು ಪೂರೈಸಲು ಮಾಂಸಾಹಾರಿ ಆಹಾರವನ್ನು ಸ್ಥಗಿತಗೊಳಿಸುವುದು ಸೂಕ್ತವಲ್ಲ ಎಂದು ಅದು ಪತ್ರವೂ ಒತ್ತಿಹೇಳಿತ್ತು. ಇಂತಹ ಕೋರಿಕೆಗಳಿಗೆ ಮನ್ನಣೆ ನೀಡುವುದು ಭವಿಷ್ಯದಲ್ಲಿ ಮತ್ತಷ್ಟು ಹೇರಿಕೆಗೆ ಕಾರಣವಾಗಬಹುದು ಎಂದು ಅದು ಎಚ್ಚರಿಸಿದೆ.

ಇದನ್ನೂಓದಿ: ’24 ಗಂಟೆಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ..’; ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಿರಿಯ ವೈದ್ಯರಿಂದ ಗಡುವು

ಅದಾಗ್ಯೂ, ಕ್ಯಾಂಟೀನ್ ಗುತ್ತಿಗೆದಾರರು ಮಾಂಸಾಹಾರಿ ಆಹಾರವನ್ನು ನೀಡುವುದನ್ನು ನಿಲ್ಲಿಸಲು ಯಾವುದೇ ಸರ್ಕಾರಿ ನಿರ್ದೇಶನವನ್ನು ಪಡೆದಿಲ್ಲ ಎಂದು SCBA ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ. ಕೆಲವು ವಕೀಲರ ಮನವಿ ಮೇರೆಗೆ ಗುತ್ತಿಗೆದಾರರು ಸ್ವತಂತ್ರವಾಗಿ ಈ ನಿರ್ಧಾರ ಕೈಗೊಂಡಿದ್ದರು. ಈ ನಡುವೆ SCBA ಮಧ್ಯಪ್ರವೇಶಿಸಿದ್ದು, ನಾಳೆಯಿಂದ ಮಾಂಸಾಹಾರಿ ಆಹಾರವನ್ನು ನೀಡುವುದನ್ನು ಪುನರಾರಂಭಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದೆ ಎಂದು ವರದಿ ಹೇಳಿದೆ.

ದಸರಾ ಪ್ರಾರಂಭವಾದ ಶುಕ್ರವಾರ ಒಂದು ದಿನ ಮಾತ್ರ ಸುಪ್ರೀಂ ಕೋರ್ಟ್‌ ಕೆಲಸ ನಿರ್ವಹಿಸುತ್ತದೆ. ಇದರ ನಂತರ ನವರಾತ್ರಿ ಅವಧಿ ಮುಗಿದ ನಂತರ ಅಕ್ಟೋಬರ್ 14 ರಂದು ನ್ಯಾಯಾಲಯ ಮತ್ತೆ ತೆರೆಯುತ್ತದೆ. ಅಷ್ಟೆ ಅಲ್ಲದೆ, ವಿವಾದಿತ ಕ್ಯಾಂಟೀನ್ ಸುಪ್ರೀಂಕೋರ್ಟ್‌ನ ವಕೀಲರಿಗೆ ಆಹಾರ ಪೂರೈಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದು, ಅದನ್ನು ಗುತ್ತಿಗೆದಾರರಿಂದ ಖಾಸಗಿಯಾಗಿ ನಿರ್ವಹಿಸಲಾಗುತ್ತಿದೆ.

ವಿವಾದದ ಬಗ್ಗೆ ಮಾತನಾಡಿದ SCBA ಅಧಿಕಾರಿಯೊಬ್ಬರು, ಕ್ಯಾಂಟೀನ್‌ನ ಮೆನು ನಿರ್ಧಾರಗಳನ್ನು ಸಾಮಾನ್ಯವಾಗಿ ಗುತ್ತಿಗೆದಾರರು ಮಾಡುತ್ತಾರೆ. ಅದರಲ್ಲಿ SCBA ಅಥವಾ SCAORA ಯಿಂದ ಯಾವುದೇ ನೇರ ಒಳಗೊಳ್ಳುವಿಕೆ ಇರುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...