Homeಮುಖಪುಟನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

- Advertisement -
- Advertisement -

ನವರಾತ್ರಿ ಆಚರಣೆ ಹಿನ್ನಲೆ ಮಾಂಸಾಹಾರಿ ಆಹಾರವನ್ನು ನೀಡುವುದನ್ನು ನಿಲ್ಲಿಸುವ ಸುಪ್ರೀಂ ಕೋರ್ಟ್ ಕ್ಯಾಂಟೀನ್‌ನ ನಿರ್ಧಾರದ ಬಗ್ಗೆ ವಕೀಲರ ಗುಂಪು ಗುರುವಾರ ಅತೃಪ್ತಿ ವ್ಯಕ್ತಪಡಿಸಿದ್ದು, ಈ ಸಂಪ್ರದಾಯವನ್ನು ಮೊದಲ ಬಾರಿಗೆ ಹೇರಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಅದಾಗ್ಯೂ, ವಕೀಲರ ತೀವ್ರ ಪ್ರತಿಭಟನೆಯ ಹಿನ್ನಲೆ ಶನಿವಾರದಿಂದ ಕ್ಯಾಂಟೀನ್‌ನಲ್ಲಿ ಮತ್ತೆ ಮಾಂಸಾಹಾರವನ್ನು ನೀಡಲಾಗುತ್ತಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವರಾತ್ರಿ ಆಚರಣೆ ಉಲ್ಲೇಖಿಸಿ ಮಾಂಸಾಹಾರ ನೀಡದಿರುವ  ಬಗ್ಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(SCBA) ಅಧ್ಯಕ್ಷರಾದ ಕಪಿಲ್ ಸಿಬಲ್ ಮತ್ತು ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್-ಆನ್-ರೆಕಾರ್ಡ್ ಅಸೋಸಿಯೇಷನ್ ​​(SCAORA) ಅಧ್ಯಕ್ಷರಾದ ವಿಪಿನ್ ನಾಯರ್ ಅವರಿಗೆ ಬರೆದ ಪತ್ರದಲ್ಲಿ ವಕೀಲರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದು, ಇಂತಹ ನಿರ್ಧಾರವು ಅಸಮಂಜಸವಾಗಿದ್ದು, ವಕೀಲ ವೃತ್ತಿಯ “ಬಹುತ್ವದ” ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ನ್ಯಾಯಾಲಯದ ಕ್ಯಾಂಟೀನ್ ಸಾಂಪ್ರದಾಯಿಕವಾಗಿ ವೈವಿಧ್ಯಮಯ ಆಹಾರದ ಆದ್ಯತೆಗಳನ್ನು ಪೂರೈಸುತ್ತಿದೆ. ಕೆಲವರ ಧಾರ್ಮಿಕ ಭಾವನೆಗಳನ್ನು ಪೂರೈಸಲು ಮಾಂಸಾಹಾರಿ ಆಹಾರವನ್ನು ಸ್ಥಗಿತಗೊಳಿಸುವುದು ಸೂಕ್ತವಲ್ಲ ಎಂದು ಅದು ಪತ್ರವೂ ಒತ್ತಿಹೇಳಿತ್ತು. ಇಂತಹ ಕೋರಿಕೆಗಳಿಗೆ ಮನ್ನಣೆ ನೀಡುವುದು ಭವಿಷ್ಯದಲ್ಲಿ ಮತ್ತಷ್ಟು ಹೇರಿಕೆಗೆ ಕಾರಣವಾಗಬಹುದು ಎಂದು ಅದು ಎಚ್ಚರಿಸಿದೆ.

ಇದನ್ನೂಓದಿ: ’24 ಗಂಟೆಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ..’; ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಿರಿಯ ವೈದ್ಯರಿಂದ ಗಡುವು

ಅದಾಗ್ಯೂ, ಕ್ಯಾಂಟೀನ್ ಗುತ್ತಿಗೆದಾರರು ಮಾಂಸಾಹಾರಿ ಆಹಾರವನ್ನು ನೀಡುವುದನ್ನು ನಿಲ್ಲಿಸಲು ಯಾವುದೇ ಸರ್ಕಾರಿ ನಿರ್ದೇಶನವನ್ನು ಪಡೆದಿಲ್ಲ ಎಂದು SCBA ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ. ಕೆಲವು ವಕೀಲರ ಮನವಿ ಮೇರೆಗೆ ಗುತ್ತಿಗೆದಾರರು ಸ್ವತಂತ್ರವಾಗಿ ಈ ನಿರ್ಧಾರ ಕೈಗೊಂಡಿದ್ದರು. ಈ ನಡುವೆ SCBA ಮಧ್ಯಪ್ರವೇಶಿಸಿದ್ದು, ನಾಳೆಯಿಂದ ಮಾಂಸಾಹಾರಿ ಆಹಾರವನ್ನು ನೀಡುವುದನ್ನು ಪುನರಾರಂಭಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದೆ ಎಂದು ವರದಿ ಹೇಳಿದೆ.

ದಸರಾ ಪ್ರಾರಂಭವಾದ ಶುಕ್ರವಾರ ಒಂದು ದಿನ ಮಾತ್ರ ಸುಪ್ರೀಂ ಕೋರ್ಟ್‌ ಕೆಲಸ ನಿರ್ವಹಿಸುತ್ತದೆ. ಇದರ ನಂತರ ನವರಾತ್ರಿ ಅವಧಿ ಮುಗಿದ ನಂತರ ಅಕ್ಟೋಬರ್ 14 ರಂದು ನ್ಯಾಯಾಲಯ ಮತ್ತೆ ತೆರೆಯುತ್ತದೆ. ಅಷ್ಟೆ ಅಲ್ಲದೆ, ವಿವಾದಿತ ಕ್ಯಾಂಟೀನ್ ಸುಪ್ರೀಂಕೋರ್ಟ್‌ನ ವಕೀಲರಿಗೆ ಆಹಾರ ಪೂರೈಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದು, ಅದನ್ನು ಗುತ್ತಿಗೆದಾರರಿಂದ ಖಾಸಗಿಯಾಗಿ ನಿರ್ವಹಿಸಲಾಗುತ್ತಿದೆ.

ವಿವಾದದ ಬಗ್ಗೆ ಮಾತನಾಡಿದ SCBA ಅಧಿಕಾರಿಯೊಬ್ಬರು, ಕ್ಯಾಂಟೀನ್‌ನ ಮೆನು ನಿರ್ಧಾರಗಳನ್ನು ಸಾಮಾನ್ಯವಾಗಿ ಗುತ್ತಿಗೆದಾರರು ಮಾಡುತ್ತಾರೆ. ಅದರಲ್ಲಿ SCBA ಅಥವಾ SCAORA ಯಿಂದ ಯಾವುದೇ ನೇರ ಒಳಗೊಳ್ಳುವಿಕೆ ಇರುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...