Homeಮುಖಪುಟನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

- Advertisement -
- Advertisement -

ನವರಾತ್ರಿ ಆಚರಣೆ ಹಿನ್ನಲೆ ಮಾಂಸಾಹಾರಿ ಆಹಾರವನ್ನು ನೀಡುವುದನ್ನು ನಿಲ್ಲಿಸುವ ಸುಪ್ರೀಂ ಕೋರ್ಟ್ ಕ್ಯಾಂಟೀನ್‌ನ ನಿರ್ಧಾರದ ಬಗ್ಗೆ ವಕೀಲರ ಗುಂಪು ಗುರುವಾರ ಅತೃಪ್ತಿ ವ್ಯಕ್ತಪಡಿಸಿದ್ದು, ಈ ಸಂಪ್ರದಾಯವನ್ನು ಮೊದಲ ಬಾರಿಗೆ ಹೇರಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಅದಾಗ್ಯೂ, ವಕೀಲರ ತೀವ್ರ ಪ್ರತಿಭಟನೆಯ ಹಿನ್ನಲೆ ಶನಿವಾರದಿಂದ ಕ್ಯಾಂಟೀನ್‌ನಲ್ಲಿ ಮತ್ತೆ ಮಾಂಸಾಹಾರವನ್ನು ನೀಡಲಾಗುತ್ತಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವರಾತ್ರಿ ಆಚರಣೆ ಉಲ್ಲೇಖಿಸಿ ಮಾಂಸಾಹಾರ ನೀಡದಿರುವ  ಬಗ್ಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(SCBA) ಅಧ್ಯಕ್ಷರಾದ ಕಪಿಲ್ ಸಿಬಲ್ ಮತ್ತು ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್-ಆನ್-ರೆಕಾರ್ಡ್ ಅಸೋಸಿಯೇಷನ್ ​​(SCAORA) ಅಧ್ಯಕ್ಷರಾದ ವಿಪಿನ್ ನಾಯರ್ ಅವರಿಗೆ ಬರೆದ ಪತ್ರದಲ್ಲಿ ವಕೀಲರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದು, ಇಂತಹ ನಿರ್ಧಾರವು ಅಸಮಂಜಸವಾಗಿದ್ದು, ವಕೀಲ ವೃತ್ತಿಯ “ಬಹುತ್ವದ” ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ನ್ಯಾಯಾಲಯದ ಕ್ಯಾಂಟೀನ್ ಸಾಂಪ್ರದಾಯಿಕವಾಗಿ ವೈವಿಧ್ಯಮಯ ಆಹಾರದ ಆದ್ಯತೆಗಳನ್ನು ಪೂರೈಸುತ್ತಿದೆ. ಕೆಲವರ ಧಾರ್ಮಿಕ ಭಾವನೆಗಳನ್ನು ಪೂರೈಸಲು ಮಾಂಸಾಹಾರಿ ಆಹಾರವನ್ನು ಸ್ಥಗಿತಗೊಳಿಸುವುದು ಸೂಕ್ತವಲ್ಲ ಎಂದು ಅದು ಪತ್ರವೂ ಒತ್ತಿಹೇಳಿತ್ತು. ಇಂತಹ ಕೋರಿಕೆಗಳಿಗೆ ಮನ್ನಣೆ ನೀಡುವುದು ಭವಿಷ್ಯದಲ್ಲಿ ಮತ್ತಷ್ಟು ಹೇರಿಕೆಗೆ ಕಾರಣವಾಗಬಹುದು ಎಂದು ಅದು ಎಚ್ಚರಿಸಿದೆ.

ಇದನ್ನೂಓದಿ: ’24 ಗಂಟೆಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ..’; ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಿರಿಯ ವೈದ್ಯರಿಂದ ಗಡುವು

ಅದಾಗ್ಯೂ, ಕ್ಯಾಂಟೀನ್ ಗುತ್ತಿಗೆದಾರರು ಮಾಂಸಾಹಾರಿ ಆಹಾರವನ್ನು ನೀಡುವುದನ್ನು ನಿಲ್ಲಿಸಲು ಯಾವುದೇ ಸರ್ಕಾರಿ ನಿರ್ದೇಶನವನ್ನು ಪಡೆದಿಲ್ಲ ಎಂದು SCBA ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ. ಕೆಲವು ವಕೀಲರ ಮನವಿ ಮೇರೆಗೆ ಗುತ್ತಿಗೆದಾರರು ಸ್ವತಂತ್ರವಾಗಿ ಈ ನಿರ್ಧಾರ ಕೈಗೊಂಡಿದ್ದರು. ಈ ನಡುವೆ SCBA ಮಧ್ಯಪ್ರವೇಶಿಸಿದ್ದು, ನಾಳೆಯಿಂದ ಮಾಂಸಾಹಾರಿ ಆಹಾರವನ್ನು ನೀಡುವುದನ್ನು ಪುನರಾರಂಭಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದೆ ಎಂದು ವರದಿ ಹೇಳಿದೆ.

ದಸರಾ ಪ್ರಾರಂಭವಾದ ಶುಕ್ರವಾರ ಒಂದು ದಿನ ಮಾತ್ರ ಸುಪ್ರೀಂ ಕೋರ್ಟ್‌ ಕೆಲಸ ನಿರ್ವಹಿಸುತ್ತದೆ. ಇದರ ನಂತರ ನವರಾತ್ರಿ ಅವಧಿ ಮುಗಿದ ನಂತರ ಅಕ್ಟೋಬರ್ 14 ರಂದು ನ್ಯಾಯಾಲಯ ಮತ್ತೆ ತೆರೆಯುತ್ತದೆ. ಅಷ್ಟೆ ಅಲ್ಲದೆ, ವಿವಾದಿತ ಕ್ಯಾಂಟೀನ್ ಸುಪ್ರೀಂಕೋರ್ಟ್‌ನ ವಕೀಲರಿಗೆ ಆಹಾರ ಪೂರೈಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದು, ಅದನ್ನು ಗುತ್ತಿಗೆದಾರರಿಂದ ಖಾಸಗಿಯಾಗಿ ನಿರ್ವಹಿಸಲಾಗುತ್ತಿದೆ.

ವಿವಾದದ ಬಗ್ಗೆ ಮಾತನಾಡಿದ SCBA ಅಧಿಕಾರಿಯೊಬ್ಬರು, ಕ್ಯಾಂಟೀನ್‌ನ ಮೆನು ನಿರ್ಧಾರಗಳನ್ನು ಸಾಮಾನ್ಯವಾಗಿ ಗುತ್ತಿಗೆದಾರರು ಮಾಡುತ್ತಾರೆ. ಅದರಲ್ಲಿ SCBA ಅಥವಾ SCAORA ಯಿಂದ ಯಾವುದೇ ನೇರ ಒಳಗೊಳ್ಳುವಿಕೆ ಇರುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...