Homeಮುಖಪುಟನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

ನವರಾತ್ರಿ | ಸುಪ್ರೀಂಕೋರ್ಟ್‌ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಇಲ್ಲ; ಪ್ರತಿಭಟನೆ ಹಿನ್ನಲೆ ನಿರ್ಧಾರ ವಾಪಾಸ್!

- Advertisement -
- Advertisement -

ನವರಾತ್ರಿ ಆಚರಣೆ ಹಿನ್ನಲೆ ಮಾಂಸಾಹಾರಿ ಆಹಾರವನ್ನು ನೀಡುವುದನ್ನು ನಿಲ್ಲಿಸುವ ಸುಪ್ರೀಂ ಕೋರ್ಟ್ ಕ್ಯಾಂಟೀನ್‌ನ ನಿರ್ಧಾರದ ಬಗ್ಗೆ ವಕೀಲರ ಗುಂಪು ಗುರುವಾರ ಅತೃಪ್ತಿ ವ್ಯಕ್ತಪಡಿಸಿದ್ದು, ಈ ಸಂಪ್ರದಾಯವನ್ನು ಮೊದಲ ಬಾರಿಗೆ ಹೇರಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಅದಾಗ್ಯೂ, ವಕೀಲರ ತೀವ್ರ ಪ್ರತಿಭಟನೆಯ ಹಿನ್ನಲೆ ಶನಿವಾರದಿಂದ ಕ್ಯಾಂಟೀನ್‌ನಲ್ಲಿ ಮತ್ತೆ ಮಾಂಸಾಹಾರವನ್ನು ನೀಡಲಾಗುತ್ತಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವರಾತ್ರಿ ಆಚರಣೆ ಉಲ್ಲೇಖಿಸಿ ಮಾಂಸಾಹಾರ ನೀಡದಿರುವ  ಬಗ್ಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(SCBA) ಅಧ್ಯಕ್ಷರಾದ ಕಪಿಲ್ ಸಿಬಲ್ ಮತ್ತು ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್-ಆನ್-ರೆಕಾರ್ಡ್ ಅಸೋಸಿಯೇಷನ್ ​​(SCAORA) ಅಧ್ಯಕ್ಷರಾದ ವಿಪಿನ್ ನಾಯರ್ ಅವರಿಗೆ ಬರೆದ ಪತ್ರದಲ್ಲಿ ವಕೀಲರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದು, ಇಂತಹ ನಿರ್ಧಾರವು ಅಸಮಂಜಸವಾಗಿದ್ದು, ವಕೀಲ ವೃತ್ತಿಯ “ಬಹುತ್ವದ” ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ನ್ಯಾಯಾಲಯದ ಕ್ಯಾಂಟೀನ್ ಸಾಂಪ್ರದಾಯಿಕವಾಗಿ ವೈವಿಧ್ಯಮಯ ಆಹಾರದ ಆದ್ಯತೆಗಳನ್ನು ಪೂರೈಸುತ್ತಿದೆ. ಕೆಲವರ ಧಾರ್ಮಿಕ ಭಾವನೆಗಳನ್ನು ಪೂರೈಸಲು ಮಾಂಸಾಹಾರಿ ಆಹಾರವನ್ನು ಸ್ಥಗಿತಗೊಳಿಸುವುದು ಸೂಕ್ತವಲ್ಲ ಎಂದು ಅದು ಪತ್ರವೂ ಒತ್ತಿಹೇಳಿತ್ತು. ಇಂತಹ ಕೋರಿಕೆಗಳಿಗೆ ಮನ್ನಣೆ ನೀಡುವುದು ಭವಿಷ್ಯದಲ್ಲಿ ಮತ್ತಷ್ಟು ಹೇರಿಕೆಗೆ ಕಾರಣವಾಗಬಹುದು ಎಂದು ಅದು ಎಚ್ಚರಿಸಿದೆ.

ಇದನ್ನೂಓದಿ: ’24 ಗಂಟೆಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ..’; ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಿರಿಯ ವೈದ್ಯರಿಂದ ಗಡುವು

ಅದಾಗ್ಯೂ, ಕ್ಯಾಂಟೀನ್ ಗುತ್ತಿಗೆದಾರರು ಮಾಂಸಾಹಾರಿ ಆಹಾರವನ್ನು ನೀಡುವುದನ್ನು ನಿಲ್ಲಿಸಲು ಯಾವುದೇ ಸರ್ಕಾರಿ ನಿರ್ದೇಶನವನ್ನು ಪಡೆದಿಲ್ಲ ಎಂದು SCBA ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ. ಕೆಲವು ವಕೀಲರ ಮನವಿ ಮೇರೆಗೆ ಗುತ್ತಿಗೆದಾರರು ಸ್ವತಂತ್ರವಾಗಿ ಈ ನಿರ್ಧಾರ ಕೈಗೊಂಡಿದ್ದರು. ಈ ನಡುವೆ SCBA ಮಧ್ಯಪ್ರವೇಶಿಸಿದ್ದು, ನಾಳೆಯಿಂದ ಮಾಂಸಾಹಾರಿ ಆಹಾರವನ್ನು ನೀಡುವುದನ್ನು ಪುನರಾರಂಭಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದೆ ಎಂದು ವರದಿ ಹೇಳಿದೆ.

ದಸರಾ ಪ್ರಾರಂಭವಾದ ಶುಕ್ರವಾರ ಒಂದು ದಿನ ಮಾತ್ರ ಸುಪ್ರೀಂ ಕೋರ್ಟ್‌ ಕೆಲಸ ನಿರ್ವಹಿಸುತ್ತದೆ. ಇದರ ನಂತರ ನವರಾತ್ರಿ ಅವಧಿ ಮುಗಿದ ನಂತರ ಅಕ್ಟೋಬರ್ 14 ರಂದು ನ್ಯಾಯಾಲಯ ಮತ್ತೆ ತೆರೆಯುತ್ತದೆ. ಅಷ್ಟೆ ಅಲ್ಲದೆ, ವಿವಾದಿತ ಕ್ಯಾಂಟೀನ್ ಸುಪ್ರೀಂಕೋರ್ಟ್‌ನ ವಕೀಲರಿಗೆ ಆಹಾರ ಪೂರೈಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದು, ಅದನ್ನು ಗುತ್ತಿಗೆದಾರರಿಂದ ಖಾಸಗಿಯಾಗಿ ನಿರ್ವಹಿಸಲಾಗುತ್ತಿದೆ.

ವಿವಾದದ ಬಗ್ಗೆ ಮಾತನಾಡಿದ SCBA ಅಧಿಕಾರಿಯೊಬ್ಬರು, ಕ್ಯಾಂಟೀನ್‌ನ ಮೆನು ನಿರ್ಧಾರಗಳನ್ನು ಸಾಮಾನ್ಯವಾಗಿ ಗುತ್ತಿಗೆದಾರರು ಮಾಡುತ್ತಾರೆ. ಅದರಲ್ಲಿ SCBA ಅಥವಾ SCAORA ಯಿಂದ ಯಾವುದೇ ನೇರ ಒಳಗೊಳ್ಳುವಿಕೆ ಇರುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...