Homeಮುಖಪುಟಅಪಹರಣಕ್ಕೊಳಗಾಗಿದ್ದ ಹಡಗಿನಿಂದ 21 ಮಂದಿಯನ್ನು ರಕ್ಷಿಸಿದ ಭಾರತೀಯ ನೌಕಾಪಡೆ

ಅಪಹರಣಕ್ಕೊಳಗಾಗಿದ್ದ ಹಡಗಿನಿಂದ 21 ಮಂದಿಯನ್ನು ರಕ್ಷಿಸಿದ ಭಾರತೀಯ ನೌಕಾಪಡೆ

- Advertisement -
- Advertisement -

ಅರಬ್ಬಿ ಸಮುದ್ರದಲ್ಲಿ ಅಪಹರಣಕ್ಕೊಳಗಾಗಿದ್ದ ವ್ಯಾಪಾರಿ ಹಡಗಿನಿಂದ 15 ಭಾರತೀಯರು ಸೇರಿದಂತೆ 21 ಸಿಬ್ಬಂದಿಯನ್ನು ಭಾರತೀಯ ನೌಕಾಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಶುಕ್ರವಾರ ರಕ್ಷಿಸಿದೆ.

ಭಾರತೀಯ ನೌಕಾಪಡೆಯ ವಿಶೇಷ ಮಾರ್ಕೋಸ್ ತಂಡ ಕಾರ್ಯಾಚರಣೆ ನಡೆಸಿ ಸಿಬ್ಬಂದಿಯನ್ನು ರಕ್ಷಿಸಿದ್ದು, ಅಪಹೃತ ಹಗಡಗಿಗೆ ಕಮಾಂಡೋಗಳು ತಲುಪುತ್ತಿದ್ದಂತೆ ಅಪಹರಣಕಾರರು ಪಲಾಯಣ ಮಾಡಿದ್ದಾರೆ ಎನ್ನಲಾಗಿದೆ.

ಲೈಬೀರಿಯನ್ ಧ್ವಜ ಹೊಂದಿದ್ದ ವ್ಯಾಪಾರಿ ಹಡಗು ಎಂ.ವಿ ಲೀಲಾ ನಾರ್ಫೋಕ್ ಅಪಹರಣಕ್ಕೊಳಗಾಗಿತ್ತು. ಈ ಕುರಿತು ಯುನೈಟೆಡ್ ಕಿಂಗ್‌ಡಮ್ ಮೆರೈನ್ ಟ್ರೇಡ್ ಆಪರೇಷನ್ಸ್ ಪೋರ್ಟಲ್‌ಗೆ ಗುರುವಾರ ಸಂಜೆ ಸಂದೇಶ ರವಾನೆಯಾಗಿತ್ತು. ಈ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಐಎನ್‌ಎಸ್ ಚೆನ್ನೈನ ನೌಕಾಪಡೆಯು ಯುದ್ಧ ನೌಕೆಯನ್ನು ರಕ್ಷಣಾ ಕಾರ್ಯಾಚರಣೆಗೆ ಕಳುಹಿಸಿತ್ತು. ಶುಕ್ರವಾರ ಅಪಹೃತ ಹಡಗು ಏರಿದ್ದ ಕಮಾಂಡೋಗಳು ಸಿಬ್ಬಂದಿಯನ್ನು ರಕ್ಷಿಸಿದ್ದಾರೆ.

ಬ್ರೆಝಿಲ್‌ನ ಡು ಅಕೊ ಬಂದರಿನಿಂದ ಹೊರಟಿದ್ದ ಹಡಗು, ಬಹರೇನ್‌ನ ಖಲೀಫಾ ಬಿನ್ ಸಲ್ಮಾನ್‌ ಬಂದರಿಗೆ ತೆರಳುತಿತ್ತು. ಈ ವೇಳೆ ಸೊಮಾಲಿಯಾದ ಪೂರ್ವಕ್ಕೆ 300 ನಾಟಿಕಲ್ ಮೈಲ್ ದೂರದಲ್ಲಿ ಅಪಹರಣಕ್ಕೊಳಗಾಗಿತ್ತು. ಈ ಹಡಗಿನ ಸಮೀಪದಲ್ಲೇ ಐಎನ್‌ಎಸ್‌ ಚೆನ್ನೈ ಇದ್ದುದರಿಂದ ಕಾರ್ಯಾಚರಣೆಯಲ್ಲಿ ತೊಡಗಿಸಲಾಗಿತ್ತು.

ನೌಕಾಪಡೆ ಹಡಗಿನ ಬಳಿ ತಲುಪುವ ಮೊದಲೇ ವಿಮಾನದ ಮೂಲಕ ಕಣ್ಗಾವಲಿಡಲಾಗಿತ್ತು. ಹಡಗಿನಲ್ಲಿದ್ದವರು ಸುರಕ್ಷಿತವಾಗಿರವುದನ್ನು ಖಚಿತಪಡಿಸಲಾಗಿತ್ತು. ಸುಮಾರು 5-6 ಜನರ ಶಸ್ತ್ರ ಸಜ್ಜಿತ ಗುಂಪು ಜನವರಿ 4ರಂದು ಹಡಗನ್ನು ಏರಿತ್ತು ಎಂದು ತಿಳಿದು ಬಂದಿದೆ.

ಕೆಂಪು ಸಮುದ್ರ ಮತ್ತು ಅರಬೀ ಸಮುದ್ರದಲ್ಲಿ ಸತತವಾಗಿ ಹಡಗುಗಳ ಅಪಹರಣ ಮತ್ತು ದಾಳಿಯ ಬೆನ್ನಲ್ಲೇ ಈ ಘಟನೆ ನಡೆದಿದೆ. ಡಿಸೆಂಬರ್ 16 ರಿಂದ ಭಾರತೀಯ ನೌಕಾಪಡೆಯು ಕಡಲ ಗಸ್ತು ವಿಮಾನವನ್ನು ನಿಯೋಜಿಸಿದೆ. ಗಲ್ಫ್ ಆಫ್ ಏಡೆನ್‌ನಲ್ಲಿ 18 ಸಿಬ್ಬಂದಿಯಿದ್ದ ಮಾಲ್ಟಾ ಧ್ವಜದ ನೌಕೆ ಎಂ.ವಿ ರಿಆನ್‌ ಮೇಲಿನ ದಾಳಿ ಬಳಿಕ ಕಡಲ ಕಣ್ಗಾವಲು ಹೆಚ್ಚಿಸಲಾಗಿದೆ.

ಇದನ್ನೂ ಓದಿ : ಮತ್ತೆ ಗರಿಗೆದರಿದ ಇವಿಎಂ ಚರ್ಚೆಯನ್ನು ಕೊನೆಗಾಣಿಸುವುದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...