Homeಮುಖಪುಟ8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; 'ನನ್ನ ಮಗ ಎಲ್ಲಿದ್ದಾನೆ..?' ಎಂದು ಕಣ್ಣೀರಿಡುತ್ತಿರುವ ಹೆತ್ತವರು

8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

- Advertisement -
- Advertisement -

ಕರ್ತವ್ಯನಿರತರಾಗಿದ್ದಾಗಲೇ ನಿಗೂಢವಾಗಿ ನಾಪತ್ತೆಯಾಗಿರುವ ಭಾರತೀಯ ನೌಕಾಪಡೆ ಯೋಧ ಸಾಹಿಲ್ ವರ್ಮಾ ಕಣ್ಮರೆಯಾಗಿ ಎಂಟು ದಿನಗಳು ಕಳೆಯುತ್ತಿದ್ದು, ಹಲವಾರು ಹಡಗುಗಳು ಮತ್ತು ವಿಮಾನಗಳನ್ನು ಒಳಗೊಂಡ ಬೃಹತ್ ನೌಕಾಪಡೆಯ ಕಾರ್ಯಚರಣೆ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ. ಇಲಾಖೆಯ ಉತ್ತರಗಳಿಂದ ಹತಾಶರಾಗಿರುವವರ್ಮಾ ಅವರ ಪೋಷಕರು, ‘ನನ್ನ ಮಗ ಎಲ್ಲಿದ್ದಾನೆ?’ ಎಂದು ದುಃಖದಿಂದ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತೀಯ ನೌಕಾಪಡೆಯಿಂದ ಸಮುದ್ರ ನೌಕೆಯಲ್ಲಿ ನಿಯೋಜನೆಗೊಂಡಿದ್ದ ಸಾಹಿಲ್ ವರ್ಮಾ ಎಂಬ ಯೋಧ ಫೆಬ್ರವರಿ 27ರಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎನ್ನಲಾಗಿದೆ.

ವರ್ಮಾ ಅವರ ಪೋಷಕರಾಧ ಸುಬಾಷ್ ಚಂದರ್ ಮತ್ತು ರಾಮ ಕುಮಾರಿ, ಜಮ್ಮುವಿನ ಘೌ ಮನ್ಹಾಸನ್ ಪ್ರದೇಶದಲ್ಲಿ ನೆಲೆಸಿದ್ದಾರೆ. ತಮ್ಮ ಮಗನ ನಿಗೂಢ ನಾಪತ್ತೆ ಪ್ರಕರಣದ ಬಗ್ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಒತ್ತಾಯಿದ್ದಾರೆ. ಕಾಣೆಯಾಗಿರುವ ತಮ್ಮ ಮಗನನ್ನು ಸುರಕ್ಷಿತವಾಗಿ ಹಿಂದಿರುಗಿಸಲು ಕುಟುಂಬವು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಭಾರತ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಂದ ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದಾರೆ.

ಕಣ್ಮರೆಯಾಗಿರುವ ಯೋಧ ಸಾಹಿಲ್ ವರ್ಮಾ ಪೋಷಕರು

ನೌಕಾಪಡೆಯ ಹಡಗಿನಿಂದ ಸೈನಿಕನು ಯಾವುದೇ ಕುರುಹು ಇಲ್ಲದೆ ಕಣ್ಮರೆಯಾಗಬಹುದೆ ಎಂದು ಚಂದರ್ ಆಶ್ಚರ್ಯ ವ್ಯಕ್ತಪಡಿಸಿದರು. ‘ಯೋಧನೊಬ್ಬ ತನ್ನ ನೌಕಾ ಹಡಗಿನಿಂದ ನಾಪತ್ತೆಯಾಗಿದ್ದು, ಪತ್ತೆಯಾಗದಿರುವುದು ಆಶ್ಚರ್ಯಕರವಾಗಿದೆ. ಹಡಗಿನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸಮುದ್ರಕ್ಕೆ ಬಿದ್ದವರು ಯಾರೂ ಕಂಡುಬಂದಿಲ್ಲ ಎಂದು ನನಗೆ ತಿಳಿಸಲಾಗಿದೆ. ಹಾಗಾದರೆ ನನ್ನ ಮಗ ಎಲ್ಲಿದ್ದಾನೆ?’ ಚಂದರ್ ಅವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮಗ ನಾಪತ್ತೆಯಾದ ಎಂಟು ದಿನಗಳವರೆಗೆ ಘಟನೆಯ ಬಗ್ಗೆ ಕತ್ತಲಲ್ಲಿಯೇ ಉಳಿದಿರುವ ಕುಟುಂಬವು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ‘ನಮ್ಮ ಮಗ ಹಡಗಿನಲ್ಲಿ ಎರಡು ದಿನಗಳ ಮೊದಲು ನಾಪತ್ತೆಯಾಗಿದ್ದಾರೆ ಎಂದು ನಮಗೆ ಫೆಬ್ರವರಿ 29 ರಂದು ಕರೆ ಬಂದಿತು… ನಾವು ಭಾನುವಾರ (ಫೆಬ್ರವರಿ 25) ಕೊನೆಯದಾಗಿ ಅವರೊಂದಿಗೆ ಮಾತನಾಡಿದ್ದೇವೆ ಮತ್ತು ಅವನಿಗೆ ಏನಾಯಿತು (ಬಗ್ಗೆ) ಏನೂ ತಿಳಿದಿಲ್ಲ’ ಎಂದು ಚಂದರ್ ಹೇಳಿದರು.

ವರ್ಮಾ ಅವರ ಪತ್ತೆಗೆ ಉನ್ನತ ಮಟ್ಟದ ತನಿಖಾ ಮಂಡಳಿಯನ್ನು ಆರಂಭಿಸಲಾಗಿದೆ ಎಂದು ಮುಂಬೈ ಪ್ರಧಾನ ಕಚೇರಿಯ ಪಶ್ಚಿಮ ನೌಕಾ ಕಮಾಂಡ್ ತಿಳಿಸಿದೆ. ‘ದುರಾದೃಷ್ಟಕರ ಘಟನೆಯಲ್ಲಿ, ಫೆಬ್ರವರಿ 27, 2024 ರಿಂದ ನಿಯೋಜನೆಯಲ್ಲಿರುವ ಭಾರತೀಯ ನೌಕಾ ನೌಕೆಯಿಂದ (ಎ) ಸೀಮನ್ II, ಸಾಹಿಲ್ ವರ್ಮಾ ಸಮುದ್ರದಲ್ಲಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಹುಡುಕಾಟ ಇನ್ನೂ ಚಾಲ್ತಿಯಲ್ಲಿದೆ’ ಇದೆ ಎಂದು ಶನಿವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದೆ.

‘ಮಾಹಿತಿಯನ್ನು ಮರೆಮಾಚಲಾಗುತ್ತಿದೆ’ ಎಂದು ವರ್ಮಾ ಅವರ ತಾಯಿ ರಮಾ ಕುಮಾರಿ ಅವರು ಆರೋಪಿಸಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ.

‘ಹಡಗಿನಲ್ಲಿ 400 ಜನರಿದ್ದರು ಮತ್ತು ನನ್ನ ಮಗ ಮಾತ್ರ ನಾಪತ್ತೆಯಾಗಿದ್ದಾನೆ. ನನ್ನ ಪ್ರಾರ್ಥನೆ ಮತ್ತು ಬೇಡಿಕೆಗಳು ನನ್ನ ಮಗ ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿ ಹಿಂದಿರುಗಲಿ’ ಎಂದು ಅವರು ಹೇಳಿದರು.

ನಾಪತ್ತೆಯಾದ ಸೀಮನ್‌ನ ತಾಯಿಯ ಚಿಕ್ಕಪ್ಪ ಗೌತಮ್, ಹಡಗು ಮತ್ತೆ ನೌಕಾಯಾನ ಮಾಡುವ ಮೊದಲು ಒಂದು ದಿನ ಬೇಸ್‌ಗೆ ಮರಳಿದೆ ಎಂದು ಹೇಳಿದ್ದಾರೆ. ‘ಮತ್ತೆ ಹೊರಡುವ ಮೊದಲು ಹಡಗು ಒಂದು ದಿನ ಬೇಸ್‌ಗೆ ಮರಳಿದೆ ಎಂದು ನಾವು ಕೇಳಿದ್ದೇವೆ. ಅವನು ಹಡಗಿನಿಂದ ನಾಪತ್ತೆಯಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

‘ಘಟನೆ ನಡೆದ 24 ಗಂಟೆಯೊಳಗೆ ಕುಟುಂಬದವರಿಗೆ ಮಾಹಿತಿ ನೀಡಿ, ತನಿಖಾ ಮಂಡಳಿಗೆ ಆದೇಶ ನೀಡಬೇಕಿತ್ತು. ಆದರೆ ಈ ಎರಡೂ ಘಟನೆಗಳು ಎರಡು ದಿನಗಳ ನಂತರ ಸಂಭವಿಸಿದವು’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಇಎನ್‌ಟಿ ಕ್ಲಿನಿಕ್ ಕೂಡ ನನ್ನ ವಾಪಸಾತಿಗಾಗಿ ಕಾಯುತ್ತಿದೆ..’ ರಾಜಕೀಯ ನಿವೃತ್ತಿ ಘೋಷಿಸಿ ಡಾ. ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...