Homeಮುಖಪುಟ8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; 'ನನ್ನ ಮಗ ಎಲ್ಲಿದ್ದಾನೆ..?' ಎಂದು ಕಣ್ಣೀರಿಡುತ್ತಿರುವ ಹೆತ್ತವರು

8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

- Advertisement -
- Advertisement -

ಕರ್ತವ್ಯನಿರತರಾಗಿದ್ದಾಗಲೇ ನಿಗೂಢವಾಗಿ ನಾಪತ್ತೆಯಾಗಿರುವ ಭಾರತೀಯ ನೌಕಾಪಡೆ ಯೋಧ ಸಾಹಿಲ್ ವರ್ಮಾ ಕಣ್ಮರೆಯಾಗಿ ಎಂಟು ದಿನಗಳು ಕಳೆಯುತ್ತಿದ್ದು, ಹಲವಾರು ಹಡಗುಗಳು ಮತ್ತು ವಿಮಾನಗಳನ್ನು ಒಳಗೊಂಡ ಬೃಹತ್ ನೌಕಾಪಡೆಯ ಕಾರ್ಯಚರಣೆ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ. ಇಲಾಖೆಯ ಉತ್ತರಗಳಿಂದ ಹತಾಶರಾಗಿರುವವರ್ಮಾ ಅವರ ಪೋಷಕರು, ‘ನನ್ನ ಮಗ ಎಲ್ಲಿದ್ದಾನೆ?’ ಎಂದು ದುಃಖದಿಂದ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತೀಯ ನೌಕಾಪಡೆಯಿಂದ ಸಮುದ್ರ ನೌಕೆಯಲ್ಲಿ ನಿಯೋಜನೆಗೊಂಡಿದ್ದ ಸಾಹಿಲ್ ವರ್ಮಾ ಎಂಬ ಯೋಧ ಫೆಬ್ರವರಿ 27ರಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎನ್ನಲಾಗಿದೆ.

ವರ್ಮಾ ಅವರ ಪೋಷಕರಾಧ ಸುಬಾಷ್ ಚಂದರ್ ಮತ್ತು ರಾಮ ಕುಮಾರಿ, ಜಮ್ಮುವಿನ ಘೌ ಮನ್ಹಾಸನ್ ಪ್ರದೇಶದಲ್ಲಿ ನೆಲೆಸಿದ್ದಾರೆ. ತಮ್ಮ ಮಗನ ನಿಗೂಢ ನಾಪತ್ತೆ ಪ್ರಕರಣದ ಬಗ್ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಒತ್ತಾಯಿದ್ದಾರೆ. ಕಾಣೆಯಾಗಿರುವ ತಮ್ಮ ಮಗನನ್ನು ಸುರಕ್ಷಿತವಾಗಿ ಹಿಂದಿರುಗಿಸಲು ಕುಟುಂಬವು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಭಾರತ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಂದ ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದಾರೆ.

ಕಣ್ಮರೆಯಾಗಿರುವ ಯೋಧ ಸಾಹಿಲ್ ವರ್ಮಾ ಪೋಷಕರು

ನೌಕಾಪಡೆಯ ಹಡಗಿನಿಂದ ಸೈನಿಕನು ಯಾವುದೇ ಕುರುಹು ಇಲ್ಲದೆ ಕಣ್ಮರೆಯಾಗಬಹುದೆ ಎಂದು ಚಂದರ್ ಆಶ್ಚರ್ಯ ವ್ಯಕ್ತಪಡಿಸಿದರು. ‘ಯೋಧನೊಬ್ಬ ತನ್ನ ನೌಕಾ ಹಡಗಿನಿಂದ ನಾಪತ್ತೆಯಾಗಿದ್ದು, ಪತ್ತೆಯಾಗದಿರುವುದು ಆಶ್ಚರ್ಯಕರವಾಗಿದೆ. ಹಡಗಿನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸಮುದ್ರಕ್ಕೆ ಬಿದ್ದವರು ಯಾರೂ ಕಂಡುಬಂದಿಲ್ಲ ಎಂದು ನನಗೆ ತಿಳಿಸಲಾಗಿದೆ. ಹಾಗಾದರೆ ನನ್ನ ಮಗ ಎಲ್ಲಿದ್ದಾನೆ?’ ಚಂದರ್ ಅವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮಗ ನಾಪತ್ತೆಯಾದ ಎಂಟು ದಿನಗಳವರೆಗೆ ಘಟನೆಯ ಬಗ್ಗೆ ಕತ್ತಲಲ್ಲಿಯೇ ಉಳಿದಿರುವ ಕುಟುಂಬವು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ‘ನಮ್ಮ ಮಗ ಹಡಗಿನಲ್ಲಿ ಎರಡು ದಿನಗಳ ಮೊದಲು ನಾಪತ್ತೆಯಾಗಿದ್ದಾರೆ ಎಂದು ನಮಗೆ ಫೆಬ್ರವರಿ 29 ರಂದು ಕರೆ ಬಂದಿತು… ನಾವು ಭಾನುವಾರ (ಫೆಬ್ರವರಿ 25) ಕೊನೆಯದಾಗಿ ಅವರೊಂದಿಗೆ ಮಾತನಾಡಿದ್ದೇವೆ ಮತ್ತು ಅವನಿಗೆ ಏನಾಯಿತು (ಬಗ್ಗೆ) ಏನೂ ತಿಳಿದಿಲ್ಲ’ ಎಂದು ಚಂದರ್ ಹೇಳಿದರು.

ವರ್ಮಾ ಅವರ ಪತ್ತೆಗೆ ಉನ್ನತ ಮಟ್ಟದ ತನಿಖಾ ಮಂಡಳಿಯನ್ನು ಆರಂಭಿಸಲಾಗಿದೆ ಎಂದು ಮುಂಬೈ ಪ್ರಧಾನ ಕಚೇರಿಯ ಪಶ್ಚಿಮ ನೌಕಾ ಕಮಾಂಡ್ ತಿಳಿಸಿದೆ. ‘ದುರಾದೃಷ್ಟಕರ ಘಟನೆಯಲ್ಲಿ, ಫೆಬ್ರವರಿ 27, 2024 ರಿಂದ ನಿಯೋಜನೆಯಲ್ಲಿರುವ ಭಾರತೀಯ ನೌಕಾ ನೌಕೆಯಿಂದ (ಎ) ಸೀಮನ್ II, ಸಾಹಿಲ್ ವರ್ಮಾ ಸಮುದ್ರದಲ್ಲಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಹುಡುಕಾಟ ಇನ್ನೂ ಚಾಲ್ತಿಯಲ್ಲಿದೆ’ ಇದೆ ಎಂದು ಶನಿವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದೆ.

‘ಮಾಹಿತಿಯನ್ನು ಮರೆಮಾಚಲಾಗುತ್ತಿದೆ’ ಎಂದು ವರ್ಮಾ ಅವರ ತಾಯಿ ರಮಾ ಕುಮಾರಿ ಅವರು ಆರೋಪಿಸಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ.

‘ಹಡಗಿನಲ್ಲಿ 400 ಜನರಿದ್ದರು ಮತ್ತು ನನ್ನ ಮಗ ಮಾತ್ರ ನಾಪತ್ತೆಯಾಗಿದ್ದಾನೆ. ನನ್ನ ಪ್ರಾರ್ಥನೆ ಮತ್ತು ಬೇಡಿಕೆಗಳು ನನ್ನ ಮಗ ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿ ಹಿಂದಿರುಗಲಿ’ ಎಂದು ಅವರು ಹೇಳಿದರು.

ನಾಪತ್ತೆಯಾದ ಸೀಮನ್‌ನ ತಾಯಿಯ ಚಿಕ್ಕಪ್ಪ ಗೌತಮ್, ಹಡಗು ಮತ್ತೆ ನೌಕಾಯಾನ ಮಾಡುವ ಮೊದಲು ಒಂದು ದಿನ ಬೇಸ್‌ಗೆ ಮರಳಿದೆ ಎಂದು ಹೇಳಿದ್ದಾರೆ. ‘ಮತ್ತೆ ಹೊರಡುವ ಮೊದಲು ಹಡಗು ಒಂದು ದಿನ ಬೇಸ್‌ಗೆ ಮರಳಿದೆ ಎಂದು ನಾವು ಕೇಳಿದ್ದೇವೆ. ಅವನು ಹಡಗಿನಿಂದ ನಾಪತ್ತೆಯಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

‘ಘಟನೆ ನಡೆದ 24 ಗಂಟೆಯೊಳಗೆ ಕುಟುಂಬದವರಿಗೆ ಮಾಹಿತಿ ನೀಡಿ, ತನಿಖಾ ಮಂಡಳಿಗೆ ಆದೇಶ ನೀಡಬೇಕಿತ್ತು. ಆದರೆ ಈ ಎರಡೂ ಘಟನೆಗಳು ಎರಡು ದಿನಗಳ ನಂತರ ಸಂಭವಿಸಿದವು’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಇಎನ್‌ಟಿ ಕ್ಲಿನಿಕ್ ಕೂಡ ನನ್ನ ವಾಪಸಾತಿಗಾಗಿ ಕಾಯುತ್ತಿದೆ..’ ರಾಜಕೀಯ ನಿವೃತ್ತಿ ಘೋಷಿಸಿ ಡಾ. ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...