Homeಮುಖಪುಟ8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; 'ನನ್ನ ಮಗ ಎಲ್ಲಿದ್ದಾನೆ..?' ಎಂದು ಕಣ್ಣೀರಿಡುತ್ತಿರುವ ಹೆತ್ತವರು

8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

- Advertisement -
- Advertisement -

ಕರ್ತವ್ಯನಿರತರಾಗಿದ್ದಾಗಲೇ ನಿಗೂಢವಾಗಿ ನಾಪತ್ತೆಯಾಗಿರುವ ಭಾರತೀಯ ನೌಕಾಪಡೆ ಯೋಧ ಸಾಹಿಲ್ ವರ್ಮಾ ಕಣ್ಮರೆಯಾಗಿ ಎಂಟು ದಿನಗಳು ಕಳೆಯುತ್ತಿದ್ದು, ಹಲವಾರು ಹಡಗುಗಳು ಮತ್ತು ವಿಮಾನಗಳನ್ನು ಒಳಗೊಂಡ ಬೃಹತ್ ನೌಕಾಪಡೆಯ ಕಾರ್ಯಚರಣೆ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ. ಇಲಾಖೆಯ ಉತ್ತರಗಳಿಂದ ಹತಾಶರಾಗಿರುವವರ್ಮಾ ಅವರ ಪೋಷಕರು, ‘ನನ್ನ ಮಗ ಎಲ್ಲಿದ್ದಾನೆ?’ ಎಂದು ದುಃಖದಿಂದ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತೀಯ ನೌಕಾಪಡೆಯಿಂದ ಸಮುದ್ರ ನೌಕೆಯಲ್ಲಿ ನಿಯೋಜನೆಗೊಂಡಿದ್ದ ಸಾಹಿಲ್ ವರ್ಮಾ ಎಂಬ ಯೋಧ ಫೆಬ್ರವರಿ 27ರಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎನ್ನಲಾಗಿದೆ.

ವರ್ಮಾ ಅವರ ಪೋಷಕರಾಧ ಸುಬಾಷ್ ಚಂದರ್ ಮತ್ತು ರಾಮ ಕುಮಾರಿ, ಜಮ್ಮುವಿನ ಘೌ ಮನ್ಹಾಸನ್ ಪ್ರದೇಶದಲ್ಲಿ ನೆಲೆಸಿದ್ದಾರೆ. ತಮ್ಮ ಮಗನ ನಿಗೂಢ ನಾಪತ್ತೆ ಪ್ರಕರಣದ ಬಗ್ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಒತ್ತಾಯಿದ್ದಾರೆ. ಕಾಣೆಯಾಗಿರುವ ತಮ್ಮ ಮಗನನ್ನು ಸುರಕ್ಷಿತವಾಗಿ ಹಿಂದಿರುಗಿಸಲು ಕುಟುಂಬವು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಭಾರತ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಂದ ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದಾರೆ.

ಕಣ್ಮರೆಯಾಗಿರುವ ಯೋಧ ಸಾಹಿಲ್ ವರ್ಮಾ ಪೋಷಕರು

ನೌಕಾಪಡೆಯ ಹಡಗಿನಿಂದ ಸೈನಿಕನು ಯಾವುದೇ ಕುರುಹು ಇಲ್ಲದೆ ಕಣ್ಮರೆಯಾಗಬಹುದೆ ಎಂದು ಚಂದರ್ ಆಶ್ಚರ್ಯ ವ್ಯಕ್ತಪಡಿಸಿದರು. ‘ಯೋಧನೊಬ್ಬ ತನ್ನ ನೌಕಾ ಹಡಗಿನಿಂದ ನಾಪತ್ತೆಯಾಗಿದ್ದು, ಪತ್ತೆಯಾಗದಿರುವುದು ಆಶ್ಚರ್ಯಕರವಾಗಿದೆ. ಹಡಗಿನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸಮುದ್ರಕ್ಕೆ ಬಿದ್ದವರು ಯಾರೂ ಕಂಡುಬಂದಿಲ್ಲ ಎಂದು ನನಗೆ ತಿಳಿಸಲಾಗಿದೆ. ಹಾಗಾದರೆ ನನ್ನ ಮಗ ಎಲ್ಲಿದ್ದಾನೆ?’ ಚಂದರ್ ಅವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮಗ ನಾಪತ್ತೆಯಾದ ಎಂಟು ದಿನಗಳವರೆಗೆ ಘಟನೆಯ ಬಗ್ಗೆ ಕತ್ತಲಲ್ಲಿಯೇ ಉಳಿದಿರುವ ಕುಟುಂಬವು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ‘ನಮ್ಮ ಮಗ ಹಡಗಿನಲ್ಲಿ ಎರಡು ದಿನಗಳ ಮೊದಲು ನಾಪತ್ತೆಯಾಗಿದ್ದಾರೆ ಎಂದು ನಮಗೆ ಫೆಬ್ರವರಿ 29 ರಂದು ಕರೆ ಬಂದಿತು… ನಾವು ಭಾನುವಾರ (ಫೆಬ್ರವರಿ 25) ಕೊನೆಯದಾಗಿ ಅವರೊಂದಿಗೆ ಮಾತನಾಡಿದ್ದೇವೆ ಮತ್ತು ಅವನಿಗೆ ಏನಾಯಿತು (ಬಗ್ಗೆ) ಏನೂ ತಿಳಿದಿಲ್ಲ’ ಎಂದು ಚಂದರ್ ಹೇಳಿದರು.

ವರ್ಮಾ ಅವರ ಪತ್ತೆಗೆ ಉನ್ನತ ಮಟ್ಟದ ತನಿಖಾ ಮಂಡಳಿಯನ್ನು ಆರಂಭಿಸಲಾಗಿದೆ ಎಂದು ಮುಂಬೈ ಪ್ರಧಾನ ಕಚೇರಿಯ ಪಶ್ಚಿಮ ನೌಕಾ ಕಮಾಂಡ್ ತಿಳಿಸಿದೆ. ‘ದುರಾದೃಷ್ಟಕರ ಘಟನೆಯಲ್ಲಿ, ಫೆಬ್ರವರಿ 27, 2024 ರಿಂದ ನಿಯೋಜನೆಯಲ್ಲಿರುವ ಭಾರತೀಯ ನೌಕಾ ನೌಕೆಯಿಂದ (ಎ) ಸೀಮನ್ II, ಸಾಹಿಲ್ ವರ್ಮಾ ಸಮುದ್ರದಲ್ಲಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಹುಡುಕಾಟ ಇನ್ನೂ ಚಾಲ್ತಿಯಲ್ಲಿದೆ’ ಇದೆ ಎಂದು ಶನಿವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದೆ.

‘ಮಾಹಿತಿಯನ್ನು ಮರೆಮಾಚಲಾಗುತ್ತಿದೆ’ ಎಂದು ವರ್ಮಾ ಅವರ ತಾಯಿ ರಮಾ ಕುಮಾರಿ ಅವರು ಆರೋಪಿಸಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ.

‘ಹಡಗಿನಲ್ಲಿ 400 ಜನರಿದ್ದರು ಮತ್ತು ನನ್ನ ಮಗ ಮಾತ್ರ ನಾಪತ್ತೆಯಾಗಿದ್ದಾನೆ. ನನ್ನ ಪ್ರಾರ್ಥನೆ ಮತ್ತು ಬೇಡಿಕೆಗಳು ನನ್ನ ಮಗ ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿ ಹಿಂದಿರುಗಲಿ’ ಎಂದು ಅವರು ಹೇಳಿದರು.

ನಾಪತ್ತೆಯಾದ ಸೀಮನ್‌ನ ತಾಯಿಯ ಚಿಕ್ಕಪ್ಪ ಗೌತಮ್, ಹಡಗು ಮತ್ತೆ ನೌಕಾಯಾನ ಮಾಡುವ ಮೊದಲು ಒಂದು ದಿನ ಬೇಸ್‌ಗೆ ಮರಳಿದೆ ಎಂದು ಹೇಳಿದ್ದಾರೆ. ‘ಮತ್ತೆ ಹೊರಡುವ ಮೊದಲು ಹಡಗು ಒಂದು ದಿನ ಬೇಸ್‌ಗೆ ಮರಳಿದೆ ಎಂದು ನಾವು ಕೇಳಿದ್ದೇವೆ. ಅವನು ಹಡಗಿನಿಂದ ನಾಪತ್ತೆಯಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

‘ಘಟನೆ ನಡೆದ 24 ಗಂಟೆಯೊಳಗೆ ಕುಟುಂಬದವರಿಗೆ ಮಾಹಿತಿ ನೀಡಿ, ತನಿಖಾ ಮಂಡಳಿಗೆ ಆದೇಶ ನೀಡಬೇಕಿತ್ತು. ಆದರೆ ಈ ಎರಡೂ ಘಟನೆಗಳು ಎರಡು ದಿನಗಳ ನಂತರ ಸಂಭವಿಸಿದವು’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಇಎನ್‌ಟಿ ಕ್ಲಿನಿಕ್ ಕೂಡ ನನ್ನ ವಾಪಸಾತಿಗಾಗಿ ಕಾಯುತ್ತಿದೆ..’ ರಾಜಕೀಯ ನಿವೃತ್ತಿ ಘೋಷಿಸಿ ಡಾ. ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...