Homeಮುಖಪುಟ8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; 'ನನ್ನ ಮಗ ಎಲ್ಲಿದ್ದಾನೆ..?' ಎಂದು ಕಣ್ಣೀರಿಡುತ್ತಿರುವ ಹೆತ್ತವರು

8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

- Advertisement -
- Advertisement -

ಕರ್ತವ್ಯನಿರತರಾಗಿದ್ದಾಗಲೇ ನಿಗೂಢವಾಗಿ ನಾಪತ್ತೆಯಾಗಿರುವ ಭಾರತೀಯ ನೌಕಾಪಡೆ ಯೋಧ ಸಾಹಿಲ್ ವರ್ಮಾ ಕಣ್ಮರೆಯಾಗಿ ಎಂಟು ದಿನಗಳು ಕಳೆಯುತ್ತಿದ್ದು, ಹಲವಾರು ಹಡಗುಗಳು ಮತ್ತು ವಿಮಾನಗಳನ್ನು ಒಳಗೊಂಡ ಬೃಹತ್ ನೌಕಾಪಡೆಯ ಕಾರ್ಯಚರಣೆ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ. ಇಲಾಖೆಯ ಉತ್ತರಗಳಿಂದ ಹತಾಶರಾಗಿರುವವರ್ಮಾ ಅವರ ಪೋಷಕರು, ‘ನನ್ನ ಮಗ ಎಲ್ಲಿದ್ದಾನೆ?’ ಎಂದು ದುಃಖದಿಂದ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತೀಯ ನೌಕಾಪಡೆಯಿಂದ ಸಮುದ್ರ ನೌಕೆಯಲ್ಲಿ ನಿಯೋಜನೆಗೊಂಡಿದ್ದ ಸಾಹಿಲ್ ವರ್ಮಾ ಎಂಬ ಯೋಧ ಫೆಬ್ರವರಿ 27ರಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎನ್ನಲಾಗಿದೆ.

ವರ್ಮಾ ಅವರ ಪೋಷಕರಾಧ ಸುಬಾಷ್ ಚಂದರ್ ಮತ್ತು ರಾಮ ಕುಮಾರಿ, ಜಮ್ಮುವಿನ ಘೌ ಮನ್ಹಾಸನ್ ಪ್ರದೇಶದಲ್ಲಿ ನೆಲೆಸಿದ್ದಾರೆ. ತಮ್ಮ ಮಗನ ನಿಗೂಢ ನಾಪತ್ತೆ ಪ್ರಕರಣದ ಬಗ್ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಒತ್ತಾಯಿದ್ದಾರೆ. ಕಾಣೆಯಾಗಿರುವ ತಮ್ಮ ಮಗನನ್ನು ಸುರಕ್ಷಿತವಾಗಿ ಹಿಂದಿರುಗಿಸಲು ಕುಟುಂಬವು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಭಾರತ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಂದ ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದಾರೆ.

ಕಣ್ಮರೆಯಾಗಿರುವ ಯೋಧ ಸಾಹಿಲ್ ವರ್ಮಾ ಪೋಷಕರು

ನೌಕಾಪಡೆಯ ಹಡಗಿನಿಂದ ಸೈನಿಕನು ಯಾವುದೇ ಕುರುಹು ಇಲ್ಲದೆ ಕಣ್ಮರೆಯಾಗಬಹುದೆ ಎಂದು ಚಂದರ್ ಆಶ್ಚರ್ಯ ವ್ಯಕ್ತಪಡಿಸಿದರು. ‘ಯೋಧನೊಬ್ಬ ತನ್ನ ನೌಕಾ ಹಡಗಿನಿಂದ ನಾಪತ್ತೆಯಾಗಿದ್ದು, ಪತ್ತೆಯಾಗದಿರುವುದು ಆಶ್ಚರ್ಯಕರವಾಗಿದೆ. ಹಡಗಿನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸಮುದ್ರಕ್ಕೆ ಬಿದ್ದವರು ಯಾರೂ ಕಂಡುಬಂದಿಲ್ಲ ಎಂದು ನನಗೆ ತಿಳಿಸಲಾಗಿದೆ. ಹಾಗಾದರೆ ನನ್ನ ಮಗ ಎಲ್ಲಿದ್ದಾನೆ?’ ಚಂದರ್ ಅವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮಗ ನಾಪತ್ತೆಯಾದ ಎಂಟು ದಿನಗಳವರೆಗೆ ಘಟನೆಯ ಬಗ್ಗೆ ಕತ್ತಲಲ್ಲಿಯೇ ಉಳಿದಿರುವ ಕುಟುಂಬವು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ‘ನಮ್ಮ ಮಗ ಹಡಗಿನಲ್ಲಿ ಎರಡು ದಿನಗಳ ಮೊದಲು ನಾಪತ್ತೆಯಾಗಿದ್ದಾರೆ ಎಂದು ನಮಗೆ ಫೆಬ್ರವರಿ 29 ರಂದು ಕರೆ ಬಂದಿತು… ನಾವು ಭಾನುವಾರ (ಫೆಬ್ರವರಿ 25) ಕೊನೆಯದಾಗಿ ಅವರೊಂದಿಗೆ ಮಾತನಾಡಿದ್ದೇವೆ ಮತ್ತು ಅವನಿಗೆ ಏನಾಯಿತು (ಬಗ್ಗೆ) ಏನೂ ತಿಳಿದಿಲ್ಲ’ ಎಂದು ಚಂದರ್ ಹೇಳಿದರು.

ವರ್ಮಾ ಅವರ ಪತ್ತೆಗೆ ಉನ್ನತ ಮಟ್ಟದ ತನಿಖಾ ಮಂಡಳಿಯನ್ನು ಆರಂಭಿಸಲಾಗಿದೆ ಎಂದು ಮುಂಬೈ ಪ್ರಧಾನ ಕಚೇರಿಯ ಪಶ್ಚಿಮ ನೌಕಾ ಕಮಾಂಡ್ ತಿಳಿಸಿದೆ. ‘ದುರಾದೃಷ್ಟಕರ ಘಟನೆಯಲ್ಲಿ, ಫೆಬ್ರವರಿ 27, 2024 ರಿಂದ ನಿಯೋಜನೆಯಲ್ಲಿರುವ ಭಾರತೀಯ ನೌಕಾ ನೌಕೆಯಿಂದ (ಎ) ಸೀಮನ್ II, ಸಾಹಿಲ್ ವರ್ಮಾ ಸಮುದ್ರದಲ್ಲಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಹುಡುಕಾಟ ಇನ್ನೂ ಚಾಲ್ತಿಯಲ್ಲಿದೆ’ ಇದೆ ಎಂದು ಶನಿವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದೆ.

‘ಮಾಹಿತಿಯನ್ನು ಮರೆಮಾಚಲಾಗುತ್ತಿದೆ’ ಎಂದು ವರ್ಮಾ ಅವರ ತಾಯಿ ರಮಾ ಕುಮಾರಿ ಅವರು ಆರೋಪಿಸಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ.

‘ಹಡಗಿನಲ್ಲಿ 400 ಜನರಿದ್ದರು ಮತ್ತು ನನ್ನ ಮಗ ಮಾತ್ರ ನಾಪತ್ತೆಯಾಗಿದ್ದಾನೆ. ನನ್ನ ಪ್ರಾರ್ಥನೆ ಮತ್ತು ಬೇಡಿಕೆಗಳು ನನ್ನ ಮಗ ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿ ಹಿಂದಿರುಗಲಿ’ ಎಂದು ಅವರು ಹೇಳಿದರು.

ನಾಪತ್ತೆಯಾದ ಸೀಮನ್‌ನ ತಾಯಿಯ ಚಿಕ್ಕಪ್ಪ ಗೌತಮ್, ಹಡಗು ಮತ್ತೆ ನೌಕಾಯಾನ ಮಾಡುವ ಮೊದಲು ಒಂದು ದಿನ ಬೇಸ್‌ಗೆ ಮರಳಿದೆ ಎಂದು ಹೇಳಿದ್ದಾರೆ. ‘ಮತ್ತೆ ಹೊರಡುವ ಮೊದಲು ಹಡಗು ಒಂದು ದಿನ ಬೇಸ್‌ಗೆ ಮರಳಿದೆ ಎಂದು ನಾವು ಕೇಳಿದ್ದೇವೆ. ಅವನು ಹಡಗಿನಿಂದ ನಾಪತ್ತೆಯಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

‘ಘಟನೆ ನಡೆದ 24 ಗಂಟೆಯೊಳಗೆ ಕುಟುಂಬದವರಿಗೆ ಮಾಹಿತಿ ನೀಡಿ, ತನಿಖಾ ಮಂಡಳಿಗೆ ಆದೇಶ ನೀಡಬೇಕಿತ್ತು. ಆದರೆ ಈ ಎರಡೂ ಘಟನೆಗಳು ಎರಡು ದಿನಗಳ ನಂತರ ಸಂಭವಿಸಿದವು’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಇಎನ್‌ಟಿ ಕ್ಲಿನಿಕ್ ಕೂಡ ನನ್ನ ವಾಪಸಾತಿಗಾಗಿ ಕಾಯುತ್ತಿದೆ..’ ರಾಜಕೀಯ ನಿವೃತ್ತಿ ಘೋಷಿಸಿ ಡಾ. ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...