Homeಮುಖಪುಟ8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; 'ನನ್ನ ಮಗ ಎಲ್ಲಿದ್ದಾನೆ..?' ಎಂದು ಕಣ್ಣೀರಿಡುತ್ತಿರುವ ಹೆತ್ತವರು

8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

- Advertisement -
- Advertisement -

ಕರ್ತವ್ಯನಿರತರಾಗಿದ್ದಾಗಲೇ ನಿಗೂಢವಾಗಿ ನಾಪತ್ತೆಯಾಗಿರುವ ಭಾರತೀಯ ನೌಕಾಪಡೆ ಯೋಧ ಸಾಹಿಲ್ ವರ್ಮಾ ಕಣ್ಮರೆಯಾಗಿ ಎಂಟು ದಿನಗಳು ಕಳೆಯುತ್ತಿದ್ದು, ಹಲವಾರು ಹಡಗುಗಳು ಮತ್ತು ವಿಮಾನಗಳನ್ನು ಒಳಗೊಂಡ ಬೃಹತ್ ನೌಕಾಪಡೆಯ ಕಾರ್ಯಚರಣೆ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ. ಇಲಾಖೆಯ ಉತ್ತರಗಳಿಂದ ಹತಾಶರಾಗಿರುವವರ್ಮಾ ಅವರ ಪೋಷಕರು, ‘ನನ್ನ ಮಗ ಎಲ್ಲಿದ್ದಾನೆ?’ ಎಂದು ದುಃಖದಿಂದ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತೀಯ ನೌಕಾಪಡೆಯಿಂದ ಸಮುದ್ರ ನೌಕೆಯಲ್ಲಿ ನಿಯೋಜನೆಗೊಂಡಿದ್ದ ಸಾಹಿಲ್ ವರ್ಮಾ ಎಂಬ ಯೋಧ ಫೆಬ್ರವರಿ 27ರಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎನ್ನಲಾಗಿದೆ.

ವರ್ಮಾ ಅವರ ಪೋಷಕರಾಧ ಸುಬಾಷ್ ಚಂದರ್ ಮತ್ತು ರಾಮ ಕುಮಾರಿ, ಜಮ್ಮುವಿನ ಘೌ ಮನ್ಹಾಸನ್ ಪ್ರದೇಶದಲ್ಲಿ ನೆಲೆಸಿದ್ದಾರೆ. ತಮ್ಮ ಮಗನ ನಿಗೂಢ ನಾಪತ್ತೆ ಪ್ರಕರಣದ ಬಗ್ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಒತ್ತಾಯಿದ್ದಾರೆ. ಕಾಣೆಯಾಗಿರುವ ತಮ್ಮ ಮಗನನ್ನು ಸುರಕ್ಷಿತವಾಗಿ ಹಿಂದಿರುಗಿಸಲು ಕುಟುಂಬವು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಭಾರತ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಂದ ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದಾರೆ.

ಕಣ್ಮರೆಯಾಗಿರುವ ಯೋಧ ಸಾಹಿಲ್ ವರ್ಮಾ ಪೋಷಕರು

ನೌಕಾಪಡೆಯ ಹಡಗಿನಿಂದ ಸೈನಿಕನು ಯಾವುದೇ ಕುರುಹು ಇಲ್ಲದೆ ಕಣ್ಮರೆಯಾಗಬಹುದೆ ಎಂದು ಚಂದರ್ ಆಶ್ಚರ್ಯ ವ್ಯಕ್ತಪಡಿಸಿದರು. ‘ಯೋಧನೊಬ್ಬ ತನ್ನ ನೌಕಾ ಹಡಗಿನಿಂದ ನಾಪತ್ತೆಯಾಗಿದ್ದು, ಪತ್ತೆಯಾಗದಿರುವುದು ಆಶ್ಚರ್ಯಕರವಾಗಿದೆ. ಹಡಗಿನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸಮುದ್ರಕ್ಕೆ ಬಿದ್ದವರು ಯಾರೂ ಕಂಡುಬಂದಿಲ್ಲ ಎಂದು ನನಗೆ ತಿಳಿಸಲಾಗಿದೆ. ಹಾಗಾದರೆ ನನ್ನ ಮಗ ಎಲ್ಲಿದ್ದಾನೆ?’ ಚಂದರ್ ಅವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮಗ ನಾಪತ್ತೆಯಾದ ಎಂಟು ದಿನಗಳವರೆಗೆ ಘಟನೆಯ ಬಗ್ಗೆ ಕತ್ತಲಲ್ಲಿಯೇ ಉಳಿದಿರುವ ಕುಟುಂಬವು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ‘ನಮ್ಮ ಮಗ ಹಡಗಿನಲ್ಲಿ ಎರಡು ದಿನಗಳ ಮೊದಲು ನಾಪತ್ತೆಯಾಗಿದ್ದಾರೆ ಎಂದು ನಮಗೆ ಫೆಬ್ರವರಿ 29 ರಂದು ಕರೆ ಬಂದಿತು… ನಾವು ಭಾನುವಾರ (ಫೆಬ್ರವರಿ 25) ಕೊನೆಯದಾಗಿ ಅವರೊಂದಿಗೆ ಮಾತನಾಡಿದ್ದೇವೆ ಮತ್ತು ಅವನಿಗೆ ಏನಾಯಿತು (ಬಗ್ಗೆ) ಏನೂ ತಿಳಿದಿಲ್ಲ’ ಎಂದು ಚಂದರ್ ಹೇಳಿದರು.

ವರ್ಮಾ ಅವರ ಪತ್ತೆಗೆ ಉನ್ನತ ಮಟ್ಟದ ತನಿಖಾ ಮಂಡಳಿಯನ್ನು ಆರಂಭಿಸಲಾಗಿದೆ ಎಂದು ಮುಂಬೈ ಪ್ರಧಾನ ಕಚೇರಿಯ ಪಶ್ಚಿಮ ನೌಕಾ ಕಮಾಂಡ್ ತಿಳಿಸಿದೆ. ‘ದುರಾದೃಷ್ಟಕರ ಘಟನೆಯಲ್ಲಿ, ಫೆಬ್ರವರಿ 27, 2024 ರಿಂದ ನಿಯೋಜನೆಯಲ್ಲಿರುವ ಭಾರತೀಯ ನೌಕಾ ನೌಕೆಯಿಂದ (ಎ) ಸೀಮನ್ II, ಸಾಹಿಲ್ ವರ್ಮಾ ಸಮುದ್ರದಲ್ಲಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಹುಡುಕಾಟ ಇನ್ನೂ ಚಾಲ್ತಿಯಲ್ಲಿದೆ’ ಇದೆ ಎಂದು ಶನಿವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದೆ.

‘ಮಾಹಿತಿಯನ್ನು ಮರೆಮಾಚಲಾಗುತ್ತಿದೆ’ ಎಂದು ವರ್ಮಾ ಅವರ ತಾಯಿ ರಮಾ ಕುಮಾರಿ ಅವರು ಆರೋಪಿಸಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ.

‘ಹಡಗಿನಲ್ಲಿ 400 ಜನರಿದ್ದರು ಮತ್ತು ನನ್ನ ಮಗ ಮಾತ್ರ ನಾಪತ್ತೆಯಾಗಿದ್ದಾನೆ. ನನ್ನ ಪ್ರಾರ್ಥನೆ ಮತ್ತು ಬೇಡಿಕೆಗಳು ನನ್ನ ಮಗ ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿ ಹಿಂದಿರುಗಲಿ’ ಎಂದು ಅವರು ಹೇಳಿದರು.

ನಾಪತ್ತೆಯಾದ ಸೀಮನ್‌ನ ತಾಯಿಯ ಚಿಕ್ಕಪ್ಪ ಗೌತಮ್, ಹಡಗು ಮತ್ತೆ ನೌಕಾಯಾನ ಮಾಡುವ ಮೊದಲು ಒಂದು ದಿನ ಬೇಸ್‌ಗೆ ಮರಳಿದೆ ಎಂದು ಹೇಳಿದ್ದಾರೆ. ‘ಮತ್ತೆ ಹೊರಡುವ ಮೊದಲು ಹಡಗು ಒಂದು ದಿನ ಬೇಸ್‌ಗೆ ಮರಳಿದೆ ಎಂದು ನಾವು ಕೇಳಿದ್ದೇವೆ. ಅವನು ಹಡಗಿನಿಂದ ನಾಪತ್ತೆಯಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

‘ಘಟನೆ ನಡೆದ 24 ಗಂಟೆಯೊಳಗೆ ಕುಟುಂಬದವರಿಗೆ ಮಾಹಿತಿ ನೀಡಿ, ತನಿಖಾ ಮಂಡಳಿಗೆ ಆದೇಶ ನೀಡಬೇಕಿತ್ತು. ಆದರೆ ಈ ಎರಡೂ ಘಟನೆಗಳು ಎರಡು ದಿನಗಳ ನಂತರ ಸಂಭವಿಸಿದವು’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಇಎನ್‌ಟಿ ಕ್ಲಿನಿಕ್ ಕೂಡ ನನ್ನ ವಾಪಸಾತಿಗಾಗಿ ಕಾಯುತ್ತಿದೆ..’ ರಾಜಕೀಯ ನಿವೃತ್ತಿ ಘೋಷಿಸಿ ಡಾ. ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...