Homeಮುಖಪುಟ8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; 'ನನ್ನ ಮಗ ಎಲ್ಲಿದ್ದಾನೆ..?' ಎಂದು ಕಣ್ಣೀರಿಡುತ್ತಿರುವ ಹೆತ್ತವರು

8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

- Advertisement -
- Advertisement -

ಕರ್ತವ್ಯನಿರತರಾಗಿದ್ದಾಗಲೇ ನಿಗೂಢವಾಗಿ ನಾಪತ್ತೆಯಾಗಿರುವ ಭಾರತೀಯ ನೌಕಾಪಡೆ ಯೋಧ ಸಾಹಿಲ್ ವರ್ಮಾ ಕಣ್ಮರೆಯಾಗಿ ಎಂಟು ದಿನಗಳು ಕಳೆಯುತ್ತಿದ್ದು, ಹಲವಾರು ಹಡಗುಗಳು ಮತ್ತು ವಿಮಾನಗಳನ್ನು ಒಳಗೊಂಡ ಬೃಹತ್ ನೌಕಾಪಡೆಯ ಕಾರ್ಯಚರಣೆ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ. ಇಲಾಖೆಯ ಉತ್ತರಗಳಿಂದ ಹತಾಶರಾಗಿರುವವರ್ಮಾ ಅವರ ಪೋಷಕರು, ‘ನನ್ನ ಮಗ ಎಲ್ಲಿದ್ದಾನೆ?’ ಎಂದು ದುಃಖದಿಂದ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತೀಯ ನೌಕಾಪಡೆಯಿಂದ ಸಮುದ್ರ ನೌಕೆಯಲ್ಲಿ ನಿಯೋಜನೆಗೊಂಡಿದ್ದ ಸಾಹಿಲ್ ವರ್ಮಾ ಎಂಬ ಯೋಧ ಫೆಬ್ರವರಿ 27ರಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎನ್ನಲಾಗಿದೆ.

ವರ್ಮಾ ಅವರ ಪೋಷಕರಾಧ ಸುಬಾಷ್ ಚಂದರ್ ಮತ್ತು ರಾಮ ಕುಮಾರಿ, ಜಮ್ಮುವಿನ ಘೌ ಮನ್ಹಾಸನ್ ಪ್ರದೇಶದಲ್ಲಿ ನೆಲೆಸಿದ್ದಾರೆ. ತಮ್ಮ ಮಗನ ನಿಗೂಢ ನಾಪತ್ತೆ ಪ್ರಕರಣದ ಬಗ್ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಒತ್ತಾಯಿದ್ದಾರೆ. ಕಾಣೆಯಾಗಿರುವ ತಮ್ಮ ಮಗನನ್ನು ಸುರಕ್ಷಿತವಾಗಿ ಹಿಂದಿರುಗಿಸಲು ಕುಟುಂಬವು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಭಾರತ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಂದ ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದಾರೆ.

ಕಣ್ಮರೆಯಾಗಿರುವ ಯೋಧ ಸಾಹಿಲ್ ವರ್ಮಾ ಪೋಷಕರು

ನೌಕಾಪಡೆಯ ಹಡಗಿನಿಂದ ಸೈನಿಕನು ಯಾವುದೇ ಕುರುಹು ಇಲ್ಲದೆ ಕಣ್ಮರೆಯಾಗಬಹುದೆ ಎಂದು ಚಂದರ್ ಆಶ್ಚರ್ಯ ವ್ಯಕ್ತಪಡಿಸಿದರು. ‘ಯೋಧನೊಬ್ಬ ತನ್ನ ನೌಕಾ ಹಡಗಿನಿಂದ ನಾಪತ್ತೆಯಾಗಿದ್ದು, ಪತ್ತೆಯಾಗದಿರುವುದು ಆಶ್ಚರ್ಯಕರವಾಗಿದೆ. ಹಡಗಿನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸಮುದ್ರಕ್ಕೆ ಬಿದ್ದವರು ಯಾರೂ ಕಂಡುಬಂದಿಲ್ಲ ಎಂದು ನನಗೆ ತಿಳಿಸಲಾಗಿದೆ. ಹಾಗಾದರೆ ನನ್ನ ಮಗ ಎಲ್ಲಿದ್ದಾನೆ?’ ಚಂದರ್ ಅವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮಗ ನಾಪತ್ತೆಯಾದ ಎಂಟು ದಿನಗಳವರೆಗೆ ಘಟನೆಯ ಬಗ್ಗೆ ಕತ್ತಲಲ್ಲಿಯೇ ಉಳಿದಿರುವ ಕುಟುಂಬವು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ‘ನಮ್ಮ ಮಗ ಹಡಗಿನಲ್ಲಿ ಎರಡು ದಿನಗಳ ಮೊದಲು ನಾಪತ್ತೆಯಾಗಿದ್ದಾರೆ ಎಂದು ನಮಗೆ ಫೆಬ್ರವರಿ 29 ರಂದು ಕರೆ ಬಂದಿತು… ನಾವು ಭಾನುವಾರ (ಫೆಬ್ರವರಿ 25) ಕೊನೆಯದಾಗಿ ಅವರೊಂದಿಗೆ ಮಾತನಾಡಿದ್ದೇವೆ ಮತ್ತು ಅವನಿಗೆ ಏನಾಯಿತು (ಬಗ್ಗೆ) ಏನೂ ತಿಳಿದಿಲ್ಲ’ ಎಂದು ಚಂದರ್ ಹೇಳಿದರು.

ವರ್ಮಾ ಅವರ ಪತ್ತೆಗೆ ಉನ್ನತ ಮಟ್ಟದ ತನಿಖಾ ಮಂಡಳಿಯನ್ನು ಆರಂಭಿಸಲಾಗಿದೆ ಎಂದು ಮುಂಬೈ ಪ್ರಧಾನ ಕಚೇರಿಯ ಪಶ್ಚಿಮ ನೌಕಾ ಕಮಾಂಡ್ ತಿಳಿಸಿದೆ. ‘ದುರಾದೃಷ್ಟಕರ ಘಟನೆಯಲ್ಲಿ, ಫೆಬ್ರವರಿ 27, 2024 ರಿಂದ ನಿಯೋಜನೆಯಲ್ಲಿರುವ ಭಾರತೀಯ ನೌಕಾ ನೌಕೆಯಿಂದ (ಎ) ಸೀಮನ್ II, ಸಾಹಿಲ್ ವರ್ಮಾ ಸಮುದ್ರದಲ್ಲಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಹುಡುಕಾಟ ಇನ್ನೂ ಚಾಲ್ತಿಯಲ್ಲಿದೆ’ ಇದೆ ಎಂದು ಶನಿವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದೆ.

‘ಮಾಹಿತಿಯನ್ನು ಮರೆಮಾಚಲಾಗುತ್ತಿದೆ’ ಎಂದು ವರ್ಮಾ ಅವರ ತಾಯಿ ರಮಾ ಕುಮಾರಿ ಅವರು ಆರೋಪಿಸಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ.

‘ಹಡಗಿನಲ್ಲಿ 400 ಜನರಿದ್ದರು ಮತ್ತು ನನ್ನ ಮಗ ಮಾತ್ರ ನಾಪತ್ತೆಯಾಗಿದ್ದಾನೆ. ನನ್ನ ಪ್ರಾರ್ಥನೆ ಮತ್ತು ಬೇಡಿಕೆಗಳು ನನ್ನ ಮಗ ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿ ಹಿಂದಿರುಗಲಿ’ ಎಂದು ಅವರು ಹೇಳಿದರು.

ನಾಪತ್ತೆಯಾದ ಸೀಮನ್‌ನ ತಾಯಿಯ ಚಿಕ್ಕಪ್ಪ ಗೌತಮ್, ಹಡಗು ಮತ್ತೆ ನೌಕಾಯಾನ ಮಾಡುವ ಮೊದಲು ಒಂದು ದಿನ ಬೇಸ್‌ಗೆ ಮರಳಿದೆ ಎಂದು ಹೇಳಿದ್ದಾರೆ. ‘ಮತ್ತೆ ಹೊರಡುವ ಮೊದಲು ಹಡಗು ಒಂದು ದಿನ ಬೇಸ್‌ಗೆ ಮರಳಿದೆ ಎಂದು ನಾವು ಕೇಳಿದ್ದೇವೆ. ಅವನು ಹಡಗಿನಿಂದ ನಾಪತ್ತೆಯಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

‘ಘಟನೆ ನಡೆದ 24 ಗಂಟೆಯೊಳಗೆ ಕುಟುಂಬದವರಿಗೆ ಮಾಹಿತಿ ನೀಡಿ, ತನಿಖಾ ಮಂಡಳಿಗೆ ಆದೇಶ ನೀಡಬೇಕಿತ್ತು. ಆದರೆ ಈ ಎರಡೂ ಘಟನೆಗಳು ಎರಡು ದಿನಗಳ ನಂತರ ಸಂಭವಿಸಿದವು’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಇಎನ್‌ಟಿ ಕ್ಲಿನಿಕ್ ಕೂಡ ನನ್ನ ವಾಪಸಾತಿಗಾಗಿ ಕಾಯುತ್ತಿದೆ..’ ರಾಜಕೀಯ ನಿವೃತ್ತಿ ಘೋಷಿಸಿ ಡಾ. ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...