Homeಮುಖಪುಟ8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; 'ನನ್ನ ಮಗ ಎಲ್ಲಿದ್ದಾನೆ..?' ಎಂದು ಕಣ್ಣೀರಿಡುತ್ತಿರುವ ಹೆತ್ತವರು

8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

- Advertisement -
- Advertisement -

ಕರ್ತವ್ಯನಿರತರಾಗಿದ್ದಾಗಲೇ ನಿಗೂಢವಾಗಿ ನಾಪತ್ತೆಯಾಗಿರುವ ಭಾರತೀಯ ನೌಕಾಪಡೆ ಯೋಧ ಸಾಹಿಲ್ ವರ್ಮಾ ಕಣ್ಮರೆಯಾಗಿ ಎಂಟು ದಿನಗಳು ಕಳೆಯುತ್ತಿದ್ದು, ಹಲವಾರು ಹಡಗುಗಳು ಮತ್ತು ವಿಮಾನಗಳನ್ನು ಒಳಗೊಂಡ ಬೃಹತ್ ನೌಕಾಪಡೆಯ ಕಾರ್ಯಚರಣೆ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ. ಇಲಾಖೆಯ ಉತ್ತರಗಳಿಂದ ಹತಾಶರಾಗಿರುವವರ್ಮಾ ಅವರ ಪೋಷಕರು, ‘ನನ್ನ ಮಗ ಎಲ್ಲಿದ್ದಾನೆ?’ ಎಂದು ದುಃಖದಿಂದ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತೀಯ ನೌಕಾಪಡೆಯಿಂದ ಸಮುದ್ರ ನೌಕೆಯಲ್ಲಿ ನಿಯೋಜನೆಗೊಂಡಿದ್ದ ಸಾಹಿಲ್ ವರ್ಮಾ ಎಂಬ ಯೋಧ ಫೆಬ್ರವರಿ 27ರಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎನ್ನಲಾಗಿದೆ.

ವರ್ಮಾ ಅವರ ಪೋಷಕರಾಧ ಸುಬಾಷ್ ಚಂದರ್ ಮತ್ತು ರಾಮ ಕುಮಾರಿ, ಜಮ್ಮುವಿನ ಘೌ ಮನ್ಹಾಸನ್ ಪ್ರದೇಶದಲ್ಲಿ ನೆಲೆಸಿದ್ದಾರೆ. ತಮ್ಮ ಮಗನ ನಿಗೂಢ ನಾಪತ್ತೆ ಪ್ರಕರಣದ ಬಗ್ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಒತ್ತಾಯಿದ್ದಾರೆ. ಕಾಣೆಯಾಗಿರುವ ತಮ್ಮ ಮಗನನ್ನು ಸುರಕ್ಷಿತವಾಗಿ ಹಿಂದಿರುಗಿಸಲು ಕುಟುಂಬವು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಭಾರತ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಂದ ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದಾರೆ.

ಕಣ್ಮರೆಯಾಗಿರುವ ಯೋಧ ಸಾಹಿಲ್ ವರ್ಮಾ ಪೋಷಕರು

ನೌಕಾಪಡೆಯ ಹಡಗಿನಿಂದ ಸೈನಿಕನು ಯಾವುದೇ ಕುರುಹು ಇಲ್ಲದೆ ಕಣ್ಮರೆಯಾಗಬಹುದೆ ಎಂದು ಚಂದರ್ ಆಶ್ಚರ್ಯ ವ್ಯಕ್ತಪಡಿಸಿದರು. ‘ಯೋಧನೊಬ್ಬ ತನ್ನ ನೌಕಾ ಹಡಗಿನಿಂದ ನಾಪತ್ತೆಯಾಗಿದ್ದು, ಪತ್ತೆಯಾಗದಿರುವುದು ಆಶ್ಚರ್ಯಕರವಾಗಿದೆ. ಹಡಗಿನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸಮುದ್ರಕ್ಕೆ ಬಿದ್ದವರು ಯಾರೂ ಕಂಡುಬಂದಿಲ್ಲ ಎಂದು ನನಗೆ ತಿಳಿಸಲಾಗಿದೆ. ಹಾಗಾದರೆ ನನ್ನ ಮಗ ಎಲ್ಲಿದ್ದಾನೆ?’ ಚಂದರ್ ಅವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮಗ ನಾಪತ್ತೆಯಾದ ಎಂಟು ದಿನಗಳವರೆಗೆ ಘಟನೆಯ ಬಗ್ಗೆ ಕತ್ತಲಲ್ಲಿಯೇ ಉಳಿದಿರುವ ಕುಟುಂಬವು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ‘ನಮ್ಮ ಮಗ ಹಡಗಿನಲ್ಲಿ ಎರಡು ದಿನಗಳ ಮೊದಲು ನಾಪತ್ತೆಯಾಗಿದ್ದಾರೆ ಎಂದು ನಮಗೆ ಫೆಬ್ರವರಿ 29 ರಂದು ಕರೆ ಬಂದಿತು… ನಾವು ಭಾನುವಾರ (ಫೆಬ್ರವರಿ 25) ಕೊನೆಯದಾಗಿ ಅವರೊಂದಿಗೆ ಮಾತನಾಡಿದ್ದೇವೆ ಮತ್ತು ಅವನಿಗೆ ಏನಾಯಿತು (ಬಗ್ಗೆ) ಏನೂ ತಿಳಿದಿಲ್ಲ’ ಎಂದು ಚಂದರ್ ಹೇಳಿದರು.

ವರ್ಮಾ ಅವರ ಪತ್ತೆಗೆ ಉನ್ನತ ಮಟ್ಟದ ತನಿಖಾ ಮಂಡಳಿಯನ್ನು ಆರಂಭಿಸಲಾಗಿದೆ ಎಂದು ಮುಂಬೈ ಪ್ರಧಾನ ಕಚೇರಿಯ ಪಶ್ಚಿಮ ನೌಕಾ ಕಮಾಂಡ್ ತಿಳಿಸಿದೆ. ‘ದುರಾದೃಷ್ಟಕರ ಘಟನೆಯಲ್ಲಿ, ಫೆಬ್ರವರಿ 27, 2024 ರಿಂದ ನಿಯೋಜನೆಯಲ್ಲಿರುವ ಭಾರತೀಯ ನೌಕಾ ನೌಕೆಯಿಂದ (ಎ) ಸೀಮನ್ II, ಸಾಹಿಲ್ ವರ್ಮಾ ಸಮುದ್ರದಲ್ಲಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಹುಡುಕಾಟ ಇನ್ನೂ ಚಾಲ್ತಿಯಲ್ಲಿದೆ’ ಇದೆ ಎಂದು ಶನಿವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದೆ.

‘ಮಾಹಿತಿಯನ್ನು ಮರೆಮಾಚಲಾಗುತ್ತಿದೆ’ ಎಂದು ವರ್ಮಾ ಅವರ ತಾಯಿ ರಮಾ ಕುಮಾರಿ ಅವರು ಆರೋಪಿಸಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ.

‘ಹಡಗಿನಲ್ಲಿ 400 ಜನರಿದ್ದರು ಮತ್ತು ನನ್ನ ಮಗ ಮಾತ್ರ ನಾಪತ್ತೆಯಾಗಿದ್ದಾನೆ. ನನ್ನ ಪ್ರಾರ್ಥನೆ ಮತ್ತು ಬೇಡಿಕೆಗಳು ನನ್ನ ಮಗ ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿ ಹಿಂದಿರುಗಲಿ’ ಎಂದು ಅವರು ಹೇಳಿದರು.

ನಾಪತ್ತೆಯಾದ ಸೀಮನ್‌ನ ತಾಯಿಯ ಚಿಕ್ಕಪ್ಪ ಗೌತಮ್, ಹಡಗು ಮತ್ತೆ ನೌಕಾಯಾನ ಮಾಡುವ ಮೊದಲು ಒಂದು ದಿನ ಬೇಸ್‌ಗೆ ಮರಳಿದೆ ಎಂದು ಹೇಳಿದ್ದಾರೆ. ‘ಮತ್ತೆ ಹೊರಡುವ ಮೊದಲು ಹಡಗು ಒಂದು ದಿನ ಬೇಸ್‌ಗೆ ಮರಳಿದೆ ಎಂದು ನಾವು ಕೇಳಿದ್ದೇವೆ. ಅವನು ಹಡಗಿನಿಂದ ನಾಪತ್ತೆಯಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

‘ಘಟನೆ ನಡೆದ 24 ಗಂಟೆಯೊಳಗೆ ಕುಟುಂಬದವರಿಗೆ ಮಾಹಿತಿ ನೀಡಿ, ತನಿಖಾ ಮಂಡಳಿಗೆ ಆದೇಶ ನೀಡಬೇಕಿತ್ತು. ಆದರೆ ಈ ಎರಡೂ ಘಟನೆಗಳು ಎರಡು ದಿನಗಳ ನಂತರ ಸಂಭವಿಸಿದವು’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಇಎನ್‌ಟಿ ಕ್ಲಿನಿಕ್ ಕೂಡ ನನ್ನ ವಾಪಸಾತಿಗಾಗಿ ಕಾಯುತ್ತಿದೆ..’ ರಾಜಕೀಯ ನಿವೃತ್ತಿ ಘೋಷಿಸಿ ಡಾ. ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...