Homeಮುಖಪುಟ8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; 'ನನ್ನ ಮಗ ಎಲ್ಲಿದ್ದಾನೆ..?' ಎಂದು ಕಣ್ಣೀರಿಡುತ್ತಿರುವ ಹೆತ್ತವರು

8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

- Advertisement -
- Advertisement -

ಕರ್ತವ್ಯನಿರತರಾಗಿದ್ದಾಗಲೇ ನಿಗೂಢವಾಗಿ ನಾಪತ್ತೆಯಾಗಿರುವ ಭಾರತೀಯ ನೌಕಾಪಡೆ ಯೋಧ ಸಾಹಿಲ್ ವರ್ಮಾ ಕಣ್ಮರೆಯಾಗಿ ಎಂಟು ದಿನಗಳು ಕಳೆಯುತ್ತಿದ್ದು, ಹಲವಾರು ಹಡಗುಗಳು ಮತ್ತು ವಿಮಾನಗಳನ್ನು ಒಳಗೊಂಡ ಬೃಹತ್ ನೌಕಾಪಡೆಯ ಕಾರ್ಯಚರಣೆ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ. ಇಲಾಖೆಯ ಉತ್ತರಗಳಿಂದ ಹತಾಶರಾಗಿರುವವರ್ಮಾ ಅವರ ಪೋಷಕರು, ‘ನನ್ನ ಮಗ ಎಲ್ಲಿದ್ದಾನೆ?’ ಎಂದು ದುಃಖದಿಂದ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತೀಯ ನೌಕಾಪಡೆಯಿಂದ ಸಮುದ್ರ ನೌಕೆಯಲ್ಲಿ ನಿಯೋಜನೆಗೊಂಡಿದ್ದ ಸಾಹಿಲ್ ವರ್ಮಾ ಎಂಬ ಯೋಧ ಫೆಬ್ರವರಿ 27ರಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎನ್ನಲಾಗಿದೆ.

ವರ್ಮಾ ಅವರ ಪೋಷಕರಾಧ ಸುಬಾಷ್ ಚಂದರ್ ಮತ್ತು ರಾಮ ಕುಮಾರಿ, ಜಮ್ಮುವಿನ ಘೌ ಮನ್ಹಾಸನ್ ಪ್ರದೇಶದಲ್ಲಿ ನೆಲೆಸಿದ್ದಾರೆ. ತಮ್ಮ ಮಗನ ನಿಗೂಢ ನಾಪತ್ತೆ ಪ್ರಕರಣದ ಬಗ್ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಒತ್ತಾಯಿದ್ದಾರೆ. ಕಾಣೆಯಾಗಿರುವ ತಮ್ಮ ಮಗನನ್ನು ಸುರಕ್ಷಿತವಾಗಿ ಹಿಂದಿರುಗಿಸಲು ಕುಟುಂಬವು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಭಾರತ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಂದ ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದಾರೆ.

ಕಣ್ಮರೆಯಾಗಿರುವ ಯೋಧ ಸಾಹಿಲ್ ವರ್ಮಾ ಪೋಷಕರು

ನೌಕಾಪಡೆಯ ಹಡಗಿನಿಂದ ಸೈನಿಕನು ಯಾವುದೇ ಕುರುಹು ಇಲ್ಲದೆ ಕಣ್ಮರೆಯಾಗಬಹುದೆ ಎಂದು ಚಂದರ್ ಆಶ್ಚರ್ಯ ವ್ಯಕ್ತಪಡಿಸಿದರು. ‘ಯೋಧನೊಬ್ಬ ತನ್ನ ನೌಕಾ ಹಡಗಿನಿಂದ ನಾಪತ್ತೆಯಾಗಿದ್ದು, ಪತ್ತೆಯಾಗದಿರುವುದು ಆಶ್ಚರ್ಯಕರವಾಗಿದೆ. ಹಡಗಿನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸಮುದ್ರಕ್ಕೆ ಬಿದ್ದವರು ಯಾರೂ ಕಂಡುಬಂದಿಲ್ಲ ಎಂದು ನನಗೆ ತಿಳಿಸಲಾಗಿದೆ. ಹಾಗಾದರೆ ನನ್ನ ಮಗ ಎಲ್ಲಿದ್ದಾನೆ?’ ಚಂದರ್ ಅವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮಗ ನಾಪತ್ತೆಯಾದ ಎಂಟು ದಿನಗಳವರೆಗೆ ಘಟನೆಯ ಬಗ್ಗೆ ಕತ್ತಲಲ್ಲಿಯೇ ಉಳಿದಿರುವ ಕುಟುಂಬವು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ‘ನಮ್ಮ ಮಗ ಹಡಗಿನಲ್ಲಿ ಎರಡು ದಿನಗಳ ಮೊದಲು ನಾಪತ್ತೆಯಾಗಿದ್ದಾರೆ ಎಂದು ನಮಗೆ ಫೆಬ್ರವರಿ 29 ರಂದು ಕರೆ ಬಂದಿತು… ನಾವು ಭಾನುವಾರ (ಫೆಬ್ರವರಿ 25) ಕೊನೆಯದಾಗಿ ಅವರೊಂದಿಗೆ ಮಾತನಾಡಿದ್ದೇವೆ ಮತ್ತು ಅವನಿಗೆ ಏನಾಯಿತು (ಬಗ್ಗೆ) ಏನೂ ತಿಳಿದಿಲ್ಲ’ ಎಂದು ಚಂದರ್ ಹೇಳಿದರು.

ವರ್ಮಾ ಅವರ ಪತ್ತೆಗೆ ಉನ್ನತ ಮಟ್ಟದ ತನಿಖಾ ಮಂಡಳಿಯನ್ನು ಆರಂಭಿಸಲಾಗಿದೆ ಎಂದು ಮುಂಬೈ ಪ್ರಧಾನ ಕಚೇರಿಯ ಪಶ್ಚಿಮ ನೌಕಾ ಕಮಾಂಡ್ ತಿಳಿಸಿದೆ. ‘ದುರಾದೃಷ್ಟಕರ ಘಟನೆಯಲ್ಲಿ, ಫೆಬ್ರವರಿ 27, 2024 ರಿಂದ ನಿಯೋಜನೆಯಲ್ಲಿರುವ ಭಾರತೀಯ ನೌಕಾ ನೌಕೆಯಿಂದ (ಎ) ಸೀಮನ್ II, ಸಾಹಿಲ್ ವರ್ಮಾ ಸಮುದ್ರದಲ್ಲಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಹುಡುಕಾಟ ಇನ್ನೂ ಚಾಲ್ತಿಯಲ್ಲಿದೆ’ ಇದೆ ಎಂದು ಶನಿವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದೆ.

‘ಮಾಹಿತಿಯನ್ನು ಮರೆಮಾಚಲಾಗುತ್ತಿದೆ’ ಎಂದು ವರ್ಮಾ ಅವರ ತಾಯಿ ರಮಾ ಕುಮಾರಿ ಅವರು ಆರೋಪಿಸಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ.

‘ಹಡಗಿನಲ್ಲಿ 400 ಜನರಿದ್ದರು ಮತ್ತು ನನ್ನ ಮಗ ಮಾತ್ರ ನಾಪತ್ತೆಯಾಗಿದ್ದಾನೆ. ನನ್ನ ಪ್ರಾರ್ಥನೆ ಮತ್ತು ಬೇಡಿಕೆಗಳು ನನ್ನ ಮಗ ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿ ಹಿಂದಿರುಗಲಿ’ ಎಂದು ಅವರು ಹೇಳಿದರು.

ನಾಪತ್ತೆಯಾದ ಸೀಮನ್‌ನ ತಾಯಿಯ ಚಿಕ್ಕಪ್ಪ ಗೌತಮ್, ಹಡಗು ಮತ್ತೆ ನೌಕಾಯಾನ ಮಾಡುವ ಮೊದಲು ಒಂದು ದಿನ ಬೇಸ್‌ಗೆ ಮರಳಿದೆ ಎಂದು ಹೇಳಿದ್ದಾರೆ. ‘ಮತ್ತೆ ಹೊರಡುವ ಮೊದಲು ಹಡಗು ಒಂದು ದಿನ ಬೇಸ್‌ಗೆ ಮರಳಿದೆ ಎಂದು ನಾವು ಕೇಳಿದ್ದೇವೆ. ಅವನು ಹಡಗಿನಿಂದ ನಾಪತ್ತೆಯಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

‘ಘಟನೆ ನಡೆದ 24 ಗಂಟೆಯೊಳಗೆ ಕುಟುಂಬದವರಿಗೆ ಮಾಹಿತಿ ನೀಡಿ, ತನಿಖಾ ಮಂಡಳಿಗೆ ಆದೇಶ ನೀಡಬೇಕಿತ್ತು. ಆದರೆ ಈ ಎರಡೂ ಘಟನೆಗಳು ಎರಡು ದಿನಗಳ ನಂತರ ಸಂಭವಿಸಿದವು’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಇಎನ್‌ಟಿ ಕ್ಲಿನಿಕ್ ಕೂಡ ನನ್ನ ವಾಪಸಾತಿಗಾಗಿ ಕಾಯುತ್ತಿದೆ..’ ರಾಜಕೀಯ ನಿವೃತ್ತಿ ಘೋಷಿಸಿ ಡಾ. ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...