Homeಮುಖಪುಟ2,000 ಸರಕಾರಿ ಬಂದೂಕುಗಳ ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದ ನಕ್ಸಲ್ ಬಸವರಾಜ್: ಬಸ್ತಾರ್ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರರಾಜ್

2,000 ಸರಕಾರಿ ಬಂದೂಕುಗಳ ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದ ನಕ್ಸಲ್ ಬಸವರಾಜ್: ಬಸ್ತಾರ್ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರರಾಜ್

- Advertisement -
- Advertisement -

ನಾರಾಯಣಪುರ: ಬುಧವಾರದಂದು ಭದ್ರತಾ ಪಡೆಗಳಿಂದ ಹತ್ಯೆಯಾಗಿರುವ ಸಿಪಿಎಂ ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಂಬಲಾ ಕೇಶವ್ ರಾವ್ ಅಲಿಯಾಸ್ ಬಸವರಾಜ್ ಅವರು 2004ರಲ್ಲಿ ಕೊರಾಪುತ್ (ಒಡಿಶಾ)ದಲ್ಲಿ ನಡೆದ ಶಸ್ತ್ರಾಸ್ತ್ರ ಲೂಟಿಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಆಗ ನಕ್ಸಲರಿಂದ 1,000 ಅತ್ಯಾಧುನಿಕ ಬಂದೂಕುಗಳು ಮತ್ತು ಸುಮಾರು 50 ಕೋಟಿ ರೂ. ಮೌಲ್ಯದ 1,000 ಇತರ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಗಿತ್ತು. ಈ ದಾಳಿಯಲ್ಲಿ ಮೂವರು ಜೀವಗಳು ಬಲಿಯಾಗಿದ್ದವು ಎಂದು ಬಸ್ತಾರ್ ವಲಯದ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರ್ ರಾಜ್ ಹೇಳಿದ್ದಾರೆ.

2005ರಲ್ಲಿ ನಡೆದ ಜೆಹನಾಬಾದ್ ಜೈಲು ಲೂಟಿಯಲ್ಲಿ (ಬಿಹಾರ) ಬಸವರಾಜ್ ಭಾಗಿಯಾಗಿದ್ದರು. ಈ ದಾಳಿಯಲ್ಲಿ ಮಾವೋವಾದಿಗಳು ಮತ್ತು ಕುಖ್ಯಾತ ಅಪರಾಧಿಗಳು ಸೇರಿದಂತೆ 389 ಕೈದಿಗಳು ಪರಾರಿಯಾಗಿದ್ದರು ಎಂದು ಐಜಿ ಮಾಹಿತಿ ನೀಡಿದರು.

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಹತರಾದವರಲ್ಲಿ 12 ಮಹಿಳೆಯರು ಸೇರಿದಂತೆ 27 ನಕ್ಸಲರ ಕಟ್ಟಾ ಕಾರ್ಯಕರ್ತರಾಗಿದ್ದಾರೆ. ಇವರೆಲ್ಲಾ ರಾಜ್ಯದಲ್ಲಿ 3.33 ಕೋಟಿ ರೂ.ಗಳ ಒಟ್ಟು ಬಹುಮಾನ ಹೊಂದಿದ್ದರು ಎಂದು ಅವರು ತಿಳಿಸಿದ್ದಾರೆ.

ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಇದರಲ್ಲಿ ಭದ್ರತಾ ಪಡೆಗಳು ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು ಮತ್ತು ಇತರ 26 ಜನರನ್ನು ಬುಧವಾರ ಬಿಜಾಪುರ-ನಾರಾಯಣಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದ ಅಭುಜ್‌ಮದ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಕೊಂದಿವೆ ಎಂದು ಅವರು ಹೇಳಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಇಬ್ಬರು ಜವಾನರು ಸಹ ಪ್ರಾಣ ಕಳೆದುಕೊಂಡರು. “ಮೃತರಾದ ನಕ್ಸಲರಲ್ಲಿ ಬಸವರಾಜು (70) ಎಂದು ಬುಧವಾರವೇ ಗುರುತಿಸಲಾಗಿದ್ದು, ಛತ್ತೀಸ್‌ಗಢದಲ್ಲಿ ಈತನಿಗೆ 1 ಕೋಟಿ ರೂ. ಬಹುಮಾನ ನೀಡಲಾಗಿತ್ತು. ಉಳಿದವರ ಗುರುತು ಗುರುವಾರ ಪತ್ತೆಯಾಗಿದೆ” ಎಂದು ಬಸ್ತಾರ್ ವಲಯದ ಪೊಲೀಸ್ ಮಹಾನಿರ್ದೇಶಕ ಸುಂದರರಾಜ್ ಪಿ ಪಿಟಿಐಗೆ ತಿಳಿಸಿದ್ದಾರೆ.

ಮಾವೋವಾದಿಗಳ ಕೇಂದ್ರ ಸಮಿತಿ ಮತ್ತು ಪಾಲಿಟ್‌ಬ್ಯೂರೋ ಸದಸ್ಯರು ಹಾಗೂ ಮಾದ್ ವಿಭಾಗದ ಹಿರಿಯ ಕಾರ್ಯಕರ್ತರು ಮತ್ತು ಪಿಎಲ್‌ಜಿಎ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಸದಸ್ಯರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಮೇ 18ರಂದು ನಾರಾಯಣಪುರ, ದಂತೇವಾಡ, ಬಿಜಾಪುರ ಮತ್ತು ಕೊಂಡಗಾಂವ್ ಜಿಲ್ಲೆಗಳ ಡಿಆರ್‌ಜಿ ಸಿಬ್ಬಂದಿಯನ್ನು ಒಳಗೊಂಡ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದರು.

ಮೂರು ದಿನಗಳ ಹುಡುಕಾಟದ ನಂತರ ಬುಧವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಮಾವೋವಾದಿಗಳ ದಂಡಕಾರಣ್ಯ ವಿಶೇಷ ವಲಯ ಸಮಿತಿ ಸದಸ್ಯ ಜಂಗು ನವೀನ್ ಅವರಿಗೆ 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ನಕ್ಸಲರ ಶಸ್ತ್ರ ವಿಭಾಗವಾದ ‘ಕಂಪನಿ’ ಸಮಿತಿ ಸದಸ್ಯರಾದ (ಸಿವೈಪಿಸಿಎಂ) ಸಂಗೀತಾ (35), ಭೂಮಿಕಾ (35), ಸೋಮ್ಲಿ (30) ಅವರಿಗೆ ತಲಾ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ರೋಷನ್ ಅಲಿಯಾಸ್ ಟಿಪ್ಪು (35) ಸಹ ಕೊಲ್ಲಲ್ಪಟ್ಟವರಲ್ಲಿ ಸೇರಿದ್ದಾರೆ ಎಂದು ಅವರು ಹೇಳಿದರು.

“ನಕ್ಸಲರ ಇನ್ನೊಂದು ಶಸ್ತ್ರ ವಿಭಾಗವಾದ ‘ಕಂಪನಿ’ಯ ಕೆಳ ಸಮಿತಿಯಾದ ‘ಪ್ಲಟೂನ್’ ಸಮಿತಿ ಸದಸ್ಯರು ಮತ್ತು ಪಿಎಲ್‌ಜಿಎ ಕಂಪನಿ ಸಂಖ್ಯೆ-7ರ 18 ಸದಸ್ಯರನ್ನು ಒಳಗೊಂಡ ಉಳಿದ 21 ಕಾರ್ಯಕರ್ತರ ತಲೆಗೆ ತಲಾ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಹತ್ಯೆಗೀಡಾದ ನಕ್ಸಲರಲ್ಲಿ ಮೂವರು ತೆಲಂಗಾಣಕ್ಕೆ ಸೇರಿದವರು ಮತ್ತು ಇಬ್ಬರು ಆಂಧ್ರಪ್ರದೇಶಕ್ಕೆ ಸೇರಿದವರು ಎಂದು ಅವರು ಮಾಹಿತಿ ನೀಡಿದ್ದಾರೆ.

“ಎನ್‌ಕೌಂಟರ್ ಸ್ಥಳದಿಂದ ಮೂರು ಎಕೆ-47 ರೈಫಲ್‌ಗಳು, ನಾಲ್ಕು ಸೆಲ್ಫ್ ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್), ಆರು ಇನ್ಸಾಸ್ ರೈಫಲ್‌ಗಳು, ಒಂದು ಕಾರ್ಬೈನ್, ಆರು .303 ರೈಫಲ್‌ಗಳು, ಒಂದು ಬ್ಯಾರೆಲ್ ಗ್ರೆನೇಡ್ ಲಾಂಚರ್ (ಬಿಜಿಎಲ್), ಎರಡು ರಾಕೆಟ್ ಲಾಂಚರ್‌ಗಳು, ಎರಡು 12 ಬೋರ್ ಗನ್‌ಗಳು, ಒಂದು ದೇಶೀಯ ನಿರ್ಮಿತ ಪಿಸ್ತೂಲ್, ಎರಡು ಮಜಲ್ ಲೋಡಿಂಗ್ ಗನ್‌ಗಳು ಮತ್ತು ಸ್ಫೋಟಕಗಳ ಬೃಹತ್ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಐಜಿ ಹೇಳಿದರು.

“ಬಸವರಾಜು ಕೇಂದ್ರ ಗೃಹ ಸಚಿವಾಲಯ ಘೋಷಿಸಿದ 1 ಕೋಟಿ ರೂ., ರಾಷ್ಟ್ರೀಯ ತನಿಖಾ ಸಂಸ್ಥೆ 50 ಲಕ್ಷ ರೂ. ಮತ್ತು ಆಂಧ್ರಪ್ರದೇಶ ಮತ್ತು ಒಡಿಶಾ ಸರ್ಕಾರಗಳು ತಲಾ 25 ಲಕ್ಷ ರೂ. ಬಹುಮಾನವನ್ನು ಸಹ ಹೊಂದಿದ್ದನು. ದೇಶದ ಎಲ್ಲಾ ಎಲ್‌ಡಬ್ಲ್ಯೂಇ ಪೀಡಿತ ರಾಜ್ಯಗಳಲ್ಲಿ ಅವನು ಒಟ್ಟು 10 ಕೋಟಿ ರೂ. ಬಹುಮಾನವನ್ನು ಹೊಂದಿದ್ದನು ಎಂದು ಅಂದಾಜಿಸಲಾಗಿದೆ. ಇದರ ಬಗ್ಗೆ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ,” ಎಂದು ಅವರು ತಿಳಿಸಿದರು.

ಗಂಗಣ್ಣ, ಬಿ.ಆರ್.ದಾದಾ ಮತ್ತು ಪ್ರಕಾಶ್, ಕೃಷ್ಣ, ದರಪು ನರಸಿಂಗ್ ರೆಡ್ಡಿ ಎಂಬ ಅಡ್ಡಹೆಸರುಗಳಿಂದ ಪರಿಚಿತರಾದ ಬಸವರಾಜು 1970ರ ದಶಕದಲ್ಲಿ ಈ ನಕ್ಸಲ್ ಚಳುವಳಿಗೆ ಸೇರಿದ್ದರು. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಜಿಯಣ್ಣಪೇಟೆ ಗ್ರಾಮದ ನಿವಾಸಿಯಾಗಿದ್ದ ಈ ಉನ್ನತ ಮಾವೋವಾದಿ ನಾಯಕ, ಆಗಿನ ವಾರಂಗಲ್‌ನ ಪ್ರಾದೇಶಿಕ ಎಂಜಿನಿಯರಿಂಗ್ ಕಾಲೇಜಿನಿಂದ ಬಿ.ಟೆಕ್ ಪದವಿ ಪಡೆದಿದ್ದರು ಎಂದು ಅವರು ಹೇಳಿದರು.

ಬಸವರಾಜು 2018ರಲ್ಲಿ ನಿಷೇಧಿತ ಸಂಘಟನೆ ಸಿಪಿಐ (ಮಾವೋವಾದಿ) ನ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು, ಆಗ 71 ವರ್ಷ ವಯಸ್ಸಿನ ಮುಪ್ಪಳ ಲಕ್ಷ್ಮಣ ರಾವ್ ಅಲಿಯಾಸ್ ಗಣಪತಿ ಅವರು ಆರೋಗ್ಯ ಕ್ಷೀಣಿಸುವಿಕೆ ಮತ್ತು ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ರಾಜೀನಾಮೆ ನೀಡಿದ್ದರು. ಬಸವರಾಜು ಅವರು ಮಾವೋವಾದಿಗಳ ಕೇಂದ್ರ ಸಮಿತಿಯ ಸ್ಥಾಪಕ ಸದಸ್ಯರಾಗಿದ್ದರು, ಹಾಲಿ ಪಾಲಿಟ್‌ಬ್ಯೂರೋ ಸದಸ್ಯ ಮತ್ತು ಮಾವೋವಾದಿಗಳ ಕೇಂದ್ರ ಮಿಲಿಟರಿ ಆಯೋಗದ ಮುಖ್ಯಸ್ಥರಾಗಿದ್ದರು ಎಂದು ಐಜಿ ತಿಳಿಸಿದರು.

ಬಸವರಾಜು ಮಿಲಿಟರಿ ತರಬೇತಿಯಲ್ಲಿ, ವಿಶೇಷವಾಗಿ ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು) ಮತ್ತು ಸ್ಫೋಟಕಗಳ ಬಳಕೆ ಮತ್ತು ಭದ್ರತಾ ಪಡೆಗಳ ಮೇಲಿನ ದಾಳಿಗಳಲ್ಲಿ ಪರಿಣತರಾಗಿದ್ದರು ಮತ್ತು ಪೊಲೀಸ್ ಠಾಣೆಗಳಲ್ಲಿ ನಡೆದ ದಾಳಿಯಲ್ಲಿ ಅವರು ಪ್ರಮುಖವಾಗಿ ಭಾಗಿಯಾಗಿದ್ದರು.  2010ರ ದಂತೇವಾಡ (ಛತ್ತೀಸ್‌ಗಢ) ಹತ್ಯಾಕಾಂಡದಲ್ಲಿ 76 ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ ಪ್ರಕರಣ ಮತ್ತು 2013ರ ಝಿರಾಮ್ ಘಾಟಿ ದಾಳಿಯಲ್ಲಿ (ಛತ್ತೀಸ್‌ಗಢದ ಬಸ್ತಾರ್) ಈ ಬಸವರಾಜು ಭಾಗಿಯಾಗಿದ್ದರು, ಇದರಲ್ಲಿ ಹಿರಿಯ ಕಾಂಗ್ರೆಸ್ ನಾಯಕರು ಸೇರಿದಂತೆ 27 ಜನರು ಸಾವನ್ನಪ್ಪಿದ್ದರು ಮತ್ತು 2018ರಲ್ಲಿ ಆಂಧ್ರಪ್ರದೇಶದಲ್ಲಿ ಶಾಸಕರೊಬ್ಬರ ಹತ್ಯೆಯಲ್ಲಿಯೂ ಈ ಬಸವರಾಜ್ ಭಾಗಿಯಾಗಿದ್ದರು ಎಂದು ಐಜಿ ಹೇಳಿದರು.

ಭದ್ರತಾ ಪಡೆಗಳು ಈತನ ಹತ್ಯೆಯೊಂದಿಗೆ ಮಾವೋವಾದಿಗಳಿಗೆ ದೊಡ್ಡ ಹೊಡೆತ ನೀಡಿವೆ ಎಂದು ಅವರು ಹೇಳಿದರು.

ಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...