Homeಮುಖಪುಟ2,000 ಸರಕಾರಿ ಬಂದೂಕುಗಳ ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದ ನಕ್ಸಲ್ ಬಸವರಾಜ್: ಬಸ್ತಾರ್ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರರಾಜ್

2,000 ಸರಕಾರಿ ಬಂದೂಕುಗಳ ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದ ನಕ್ಸಲ್ ಬಸವರಾಜ್: ಬಸ್ತಾರ್ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರರಾಜ್

- Advertisement -
- Advertisement -

ನಾರಾಯಣಪುರ: ಬುಧವಾರದಂದು ಭದ್ರತಾ ಪಡೆಗಳಿಂದ ಹತ್ಯೆಯಾಗಿರುವ ಸಿಪಿಎಂ ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಂಬಲಾ ಕೇಶವ್ ರಾವ್ ಅಲಿಯಾಸ್ ಬಸವರಾಜ್ ಅವರು 2004ರಲ್ಲಿ ಕೊರಾಪುತ್ (ಒಡಿಶಾ)ದಲ್ಲಿ ನಡೆದ ಶಸ್ತ್ರಾಸ್ತ್ರ ಲೂಟಿಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಆಗ ನಕ್ಸಲರಿಂದ 1,000 ಅತ್ಯಾಧುನಿಕ ಬಂದೂಕುಗಳು ಮತ್ತು ಸುಮಾರು 50 ಕೋಟಿ ರೂ. ಮೌಲ್ಯದ 1,000 ಇತರ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಗಿತ್ತು. ಈ ದಾಳಿಯಲ್ಲಿ ಮೂವರು ಜೀವಗಳು ಬಲಿಯಾಗಿದ್ದವು ಎಂದು ಬಸ್ತಾರ್ ವಲಯದ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರ್ ರಾಜ್ ಹೇಳಿದ್ದಾರೆ.

2005ರಲ್ಲಿ ನಡೆದ ಜೆಹನಾಬಾದ್ ಜೈಲು ಲೂಟಿಯಲ್ಲಿ (ಬಿಹಾರ) ಬಸವರಾಜ್ ಭಾಗಿಯಾಗಿದ್ದರು. ಈ ದಾಳಿಯಲ್ಲಿ ಮಾವೋವಾದಿಗಳು ಮತ್ತು ಕುಖ್ಯಾತ ಅಪರಾಧಿಗಳು ಸೇರಿದಂತೆ 389 ಕೈದಿಗಳು ಪರಾರಿಯಾಗಿದ್ದರು ಎಂದು ಐಜಿ ಮಾಹಿತಿ ನೀಡಿದರು.

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಹತರಾದವರಲ್ಲಿ 12 ಮಹಿಳೆಯರು ಸೇರಿದಂತೆ 27 ನಕ್ಸಲರ ಕಟ್ಟಾ ಕಾರ್ಯಕರ್ತರಾಗಿದ್ದಾರೆ. ಇವರೆಲ್ಲಾ ರಾಜ್ಯದಲ್ಲಿ 3.33 ಕೋಟಿ ರೂ.ಗಳ ಒಟ್ಟು ಬಹುಮಾನ ಹೊಂದಿದ್ದರು ಎಂದು ಅವರು ತಿಳಿಸಿದ್ದಾರೆ.

ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಇದರಲ್ಲಿ ಭದ್ರತಾ ಪಡೆಗಳು ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು ಮತ್ತು ಇತರ 26 ಜನರನ್ನು ಬುಧವಾರ ಬಿಜಾಪುರ-ನಾರಾಯಣಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದ ಅಭುಜ್‌ಮದ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಕೊಂದಿವೆ ಎಂದು ಅವರು ಹೇಳಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಇಬ್ಬರು ಜವಾನರು ಸಹ ಪ್ರಾಣ ಕಳೆದುಕೊಂಡರು. “ಮೃತರಾದ ನಕ್ಸಲರಲ್ಲಿ ಬಸವರಾಜು (70) ಎಂದು ಬುಧವಾರವೇ ಗುರುತಿಸಲಾಗಿದ್ದು, ಛತ್ತೀಸ್‌ಗಢದಲ್ಲಿ ಈತನಿಗೆ 1 ಕೋಟಿ ರೂ. ಬಹುಮಾನ ನೀಡಲಾಗಿತ್ತು. ಉಳಿದವರ ಗುರುತು ಗುರುವಾರ ಪತ್ತೆಯಾಗಿದೆ” ಎಂದು ಬಸ್ತಾರ್ ವಲಯದ ಪೊಲೀಸ್ ಮಹಾನಿರ್ದೇಶಕ ಸುಂದರರಾಜ್ ಪಿ ಪಿಟಿಐಗೆ ತಿಳಿಸಿದ್ದಾರೆ.

ಮಾವೋವಾದಿಗಳ ಕೇಂದ್ರ ಸಮಿತಿ ಮತ್ತು ಪಾಲಿಟ್‌ಬ್ಯೂರೋ ಸದಸ್ಯರು ಹಾಗೂ ಮಾದ್ ವಿಭಾಗದ ಹಿರಿಯ ಕಾರ್ಯಕರ್ತರು ಮತ್ತು ಪಿಎಲ್‌ಜಿಎ (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಸದಸ್ಯರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಮೇ 18ರಂದು ನಾರಾಯಣಪುರ, ದಂತೇವಾಡ, ಬಿಜಾಪುರ ಮತ್ತು ಕೊಂಡಗಾಂವ್ ಜಿಲ್ಲೆಗಳ ಡಿಆರ್‌ಜಿ ಸಿಬ್ಬಂದಿಯನ್ನು ಒಳಗೊಂಡ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದರು.

ಮೂರು ದಿನಗಳ ಹುಡುಕಾಟದ ನಂತರ ಬುಧವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಮಾವೋವಾದಿಗಳ ದಂಡಕಾರಣ್ಯ ವಿಶೇಷ ವಲಯ ಸಮಿತಿ ಸದಸ್ಯ ಜಂಗು ನವೀನ್ ಅವರಿಗೆ 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ನಕ್ಸಲರ ಶಸ್ತ್ರ ವಿಭಾಗವಾದ ‘ಕಂಪನಿ’ ಸಮಿತಿ ಸದಸ್ಯರಾದ (ಸಿವೈಪಿಸಿಎಂ) ಸಂಗೀತಾ (35), ಭೂಮಿಕಾ (35), ಸೋಮ್ಲಿ (30) ಅವರಿಗೆ ತಲಾ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ರೋಷನ್ ಅಲಿಯಾಸ್ ಟಿಪ್ಪು (35) ಸಹ ಕೊಲ್ಲಲ್ಪಟ್ಟವರಲ್ಲಿ ಸೇರಿದ್ದಾರೆ ಎಂದು ಅವರು ಹೇಳಿದರು.

“ನಕ್ಸಲರ ಇನ್ನೊಂದು ಶಸ್ತ್ರ ವಿಭಾಗವಾದ ‘ಕಂಪನಿ’ಯ ಕೆಳ ಸಮಿತಿಯಾದ ‘ಪ್ಲಟೂನ್’ ಸಮಿತಿ ಸದಸ್ಯರು ಮತ್ತು ಪಿಎಲ್‌ಜಿಎ ಕಂಪನಿ ಸಂಖ್ಯೆ-7ರ 18 ಸದಸ್ಯರನ್ನು ಒಳಗೊಂಡ ಉಳಿದ 21 ಕಾರ್ಯಕರ್ತರ ತಲೆಗೆ ತಲಾ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಹತ್ಯೆಗೀಡಾದ ನಕ್ಸಲರಲ್ಲಿ ಮೂವರು ತೆಲಂಗಾಣಕ್ಕೆ ಸೇರಿದವರು ಮತ್ತು ಇಬ್ಬರು ಆಂಧ್ರಪ್ರದೇಶಕ್ಕೆ ಸೇರಿದವರು ಎಂದು ಅವರು ಮಾಹಿತಿ ನೀಡಿದ್ದಾರೆ.

“ಎನ್‌ಕೌಂಟರ್ ಸ್ಥಳದಿಂದ ಮೂರು ಎಕೆ-47 ರೈಫಲ್‌ಗಳು, ನಾಲ್ಕು ಸೆಲ್ಫ್ ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್), ಆರು ಇನ್ಸಾಸ್ ರೈಫಲ್‌ಗಳು, ಒಂದು ಕಾರ್ಬೈನ್, ಆರು .303 ರೈಫಲ್‌ಗಳು, ಒಂದು ಬ್ಯಾರೆಲ್ ಗ್ರೆನೇಡ್ ಲಾಂಚರ್ (ಬಿಜಿಎಲ್), ಎರಡು ರಾಕೆಟ್ ಲಾಂಚರ್‌ಗಳು, ಎರಡು 12 ಬೋರ್ ಗನ್‌ಗಳು, ಒಂದು ದೇಶೀಯ ನಿರ್ಮಿತ ಪಿಸ್ತೂಲ್, ಎರಡು ಮಜಲ್ ಲೋಡಿಂಗ್ ಗನ್‌ಗಳು ಮತ್ತು ಸ್ಫೋಟಕಗಳ ಬೃಹತ್ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಐಜಿ ಹೇಳಿದರು.

“ಬಸವರಾಜು ಕೇಂದ್ರ ಗೃಹ ಸಚಿವಾಲಯ ಘೋಷಿಸಿದ 1 ಕೋಟಿ ರೂ., ರಾಷ್ಟ್ರೀಯ ತನಿಖಾ ಸಂಸ್ಥೆ 50 ಲಕ್ಷ ರೂ. ಮತ್ತು ಆಂಧ್ರಪ್ರದೇಶ ಮತ್ತು ಒಡಿಶಾ ಸರ್ಕಾರಗಳು ತಲಾ 25 ಲಕ್ಷ ರೂ. ಬಹುಮಾನವನ್ನು ಸಹ ಹೊಂದಿದ್ದನು. ದೇಶದ ಎಲ್ಲಾ ಎಲ್‌ಡಬ್ಲ್ಯೂಇ ಪೀಡಿತ ರಾಜ್ಯಗಳಲ್ಲಿ ಅವನು ಒಟ್ಟು 10 ಕೋಟಿ ರೂ. ಬಹುಮಾನವನ್ನು ಹೊಂದಿದ್ದನು ಎಂದು ಅಂದಾಜಿಸಲಾಗಿದೆ. ಇದರ ಬಗ್ಗೆ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ,” ಎಂದು ಅವರು ತಿಳಿಸಿದರು.

ಗಂಗಣ್ಣ, ಬಿ.ಆರ್.ದಾದಾ ಮತ್ತು ಪ್ರಕಾಶ್, ಕೃಷ್ಣ, ದರಪು ನರಸಿಂಗ್ ರೆಡ್ಡಿ ಎಂಬ ಅಡ್ಡಹೆಸರುಗಳಿಂದ ಪರಿಚಿತರಾದ ಬಸವರಾಜು 1970ರ ದಶಕದಲ್ಲಿ ಈ ನಕ್ಸಲ್ ಚಳುವಳಿಗೆ ಸೇರಿದ್ದರು. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಜಿಯಣ್ಣಪೇಟೆ ಗ್ರಾಮದ ನಿವಾಸಿಯಾಗಿದ್ದ ಈ ಉನ್ನತ ಮಾವೋವಾದಿ ನಾಯಕ, ಆಗಿನ ವಾರಂಗಲ್‌ನ ಪ್ರಾದೇಶಿಕ ಎಂಜಿನಿಯರಿಂಗ್ ಕಾಲೇಜಿನಿಂದ ಬಿ.ಟೆಕ್ ಪದವಿ ಪಡೆದಿದ್ದರು ಎಂದು ಅವರು ಹೇಳಿದರು.

ಬಸವರಾಜು 2018ರಲ್ಲಿ ನಿಷೇಧಿತ ಸಂಘಟನೆ ಸಿಪಿಐ (ಮಾವೋವಾದಿ) ನ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು, ಆಗ 71 ವರ್ಷ ವಯಸ್ಸಿನ ಮುಪ್ಪಳ ಲಕ್ಷ್ಮಣ ರಾವ್ ಅಲಿಯಾಸ್ ಗಣಪತಿ ಅವರು ಆರೋಗ್ಯ ಕ್ಷೀಣಿಸುವಿಕೆ ಮತ್ತು ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ರಾಜೀನಾಮೆ ನೀಡಿದ್ದರು. ಬಸವರಾಜು ಅವರು ಮಾವೋವಾದಿಗಳ ಕೇಂದ್ರ ಸಮಿತಿಯ ಸ್ಥಾಪಕ ಸದಸ್ಯರಾಗಿದ್ದರು, ಹಾಲಿ ಪಾಲಿಟ್‌ಬ್ಯೂರೋ ಸದಸ್ಯ ಮತ್ತು ಮಾವೋವಾದಿಗಳ ಕೇಂದ್ರ ಮಿಲಿಟರಿ ಆಯೋಗದ ಮುಖ್ಯಸ್ಥರಾಗಿದ್ದರು ಎಂದು ಐಜಿ ತಿಳಿಸಿದರು.

ಬಸವರಾಜು ಮಿಲಿಟರಿ ತರಬೇತಿಯಲ್ಲಿ, ವಿಶೇಷವಾಗಿ ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು) ಮತ್ತು ಸ್ಫೋಟಕಗಳ ಬಳಕೆ ಮತ್ತು ಭದ್ರತಾ ಪಡೆಗಳ ಮೇಲಿನ ದಾಳಿಗಳಲ್ಲಿ ಪರಿಣತರಾಗಿದ್ದರು ಮತ್ತು ಪೊಲೀಸ್ ಠಾಣೆಗಳಲ್ಲಿ ನಡೆದ ದಾಳಿಯಲ್ಲಿ ಅವರು ಪ್ರಮುಖವಾಗಿ ಭಾಗಿಯಾಗಿದ್ದರು.  2010ರ ದಂತೇವಾಡ (ಛತ್ತೀಸ್‌ಗಢ) ಹತ್ಯಾಕಾಂಡದಲ್ಲಿ 76 ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ ಪ್ರಕರಣ ಮತ್ತು 2013ರ ಝಿರಾಮ್ ಘಾಟಿ ದಾಳಿಯಲ್ಲಿ (ಛತ್ತೀಸ್‌ಗಢದ ಬಸ್ತಾರ್) ಈ ಬಸವರಾಜು ಭಾಗಿಯಾಗಿದ್ದರು, ಇದರಲ್ಲಿ ಹಿರಿಯ ಕಾಂಗ್ರೆಸ್ ನಾಯಕರು ಸೇರಿದಂತೆ 27 ಜನರು ಸಾವನ್ನಪ್ಪಿದ್ದರು ಮತ್ತು 2018ರಲ್ಲಿ ಆಂಧ್ರಪ್ರದೇಶದಲ್ಲಿ ಶಾಸಕರೊಬ್ಬರ ಹತ್ಯೆಯಲ್ಲಿಯೂ ಈ ಬಸವರಾಜ್ ಭಾಗಿಯಾಗಿದ್ದರು ಎಂದು ಐಜಿ ಹೇಳಿದರು.

ಭದ್ರತಾ ಪಡೆಗಳು ಈತನ ಹತ್ಯೆಯೊಂದಿಗೆ ಮಾವೋವಾದಿಗಳಿಗೆ ದೊಡ್ಡ ಹೊಡೆತ ನೀಡಿವೆ ಎಂದು ಅವರು ಹೇಳಿದರು.

ಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...