Homeಕರ್ನಾಟಕನಕ್ಸಲ್ ಮುಕ್ತ ಕರ್ನಾಟಕ: ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ಹೋರಾಟಗಾರ ರವೀಂದ್ರ

ನಕ್ಸಲ್ ಮುಕ್ತ ಕರ್ನಾಟಕ: ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ಹೋರಾಟಗಾರ ರವೀಂದ್ರ

- Advertisement -
- Advertisement -

ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆರು ಜನ ಸಶಸ್ತ್ರ ಹೋರಾಟಗಾರರು ಮುಖ್ಯವಾಹಿನಿಗೆ ಮರಳುವ ಮೂಲಕ ಕರ್ನಾಟಕವು ನಕ್ಸಲ್ ಮುಕ್ತವಾಗುವತ್ತ ಹೆಜ್ಜೆ ಇಟ್ಟಿತ್ತು. ಇಂದು, ಆ ತಂಡದ ಕೊನೆಯ ನಾಯಕ ಕೋಟೆಹೊಂಡ ರವೀಂದ್ರ ಮುಖ್ಯವಾಹಿನಿಗೆ ಮರಳುವ ಮೂಲಕ ರಾಜ್ಯ ಅಧಿಕೃತವಾಗಿ ನಕ್ಸಲ್ ಮುಕ್ತವಾಗಿದೆ.

ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್ ನಾಯಕ ರವೀಂದ್ರ ಅವರು ಇಂದು ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದಾರೆ. ಕಳೆದ 18 ವರ್ಷಗಳಿಂದ ಭೂಗತರಾಗಿದ್ದ ಅವರು ಇಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮುಂದೆ ಶರಣಾಗಿದ್ದಾರೆ. ರವೀಂದ್ರಗೆ ಚಿಕ್ಕಮಗಳೂರು ಜಿಲ್ಲಾಡಳಿತ ₹7 ಲಕ್ಷ ಪ್ಯಾಕೇಜ್ ಘೋಷಣೆ ಮಾಡಿದೆ.

ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಕೋಟೆಹೊಂಡ ನಿವಾಸಿಯಾಗಿರುವ ರವೀಂದ್ರ, ಕಳೆದ‌ 18 ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ನಕ್ಸಲ್‌ರ ನಾಯಕ ವಿಕ್ರಮ್ ಗೌಡ ಎನ್‌ಕೌಂಟರ್ ಬಳಿಕ ರವೀಂದ್ರ ನಾಪತ್ತೆಯಾಗಿದ್ದರು. ಅವರ ಶರಣಾಗತಿಗೆ ನಕ್ಸಲ್ ಶರಣಾಗತಿ ಕಮಿಟಿ ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಸದಸ್ಯರು ಹರಸಾಹಸ ಪಟ್ಟಿದ್ದರು. ಕೊನೆಗೂ ರಾಜ್ಯ ಸರ್ಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಗೆ ಒಪ್ಪಿರುವ ರವಿಂದ್ರ ಅವರ ಮೇಲೆ ಒಟ್ಟು 26 ಪ್ರಕರಣಗಳು ದಾಖಲಾಗಿವೆ. ಇವರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ 14 ಪ್ರಕರಣಗಳು ಸೇರಿ ಕರ್ನಾಟಕದಲ್ಲಿ 17, ಕೇರಳದಲ್ಲಿ 9 ಪ್ರಕರಣಗಳು ದಾಖಲಾಗಿವೆ.

“17 ವರ್ಷಗಳ ಹಿಂದೆ ಮೂಲಭೂತ ಹಕ್ಕುಗಳಿಗಾಗಿ ನಕ್ಸಲ್ ಚಳವಳಿಗೆ ದುಮುಕಿದ್ದೆ. ವಾಸದ ಮನೆ ಸೇರಿದಂತೆ ಮೂಲಭೂತ ಸೌಕರ್ಯ ನೀಡಲು ಸರ್ಕಾರ ವಿಫಲವಾಗಿತ್ತು. ಈಗ ಸ್ವಲ್ಪ ಬದಲಾವಣೆ ಕಂಡು ಬರುತ್ತಿದೆ. ಇದರಿಂದ ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧಾರ ಮಾಡಿದ್ದೇನೆ. ಸರ್ಕಾರಕ್ಕೆ ನನ್ನ ಬೇಡಿಕೆಯ ಕುರಿತು ಪತ್ರ ನೀಡಿದ್ದೇನೆ” ಎಂದು ರವೀಂದ್ರ ಹೇಳಿದ್ದಾರೆ.

“ಆದಿವಾಸಿಗಳಿಗೆ ಹಾಗೂ ಕಾಡಂಚಿನ ಜನರಿಗೆ ಜಮೀನಿನ ಹಕ್ಕು ಪತ್ರ ನೀಡಬೇಕು ಹಾಗೂ ಅವರು ವಾಸಿಸುವ ಪ್ರದೇಶಗಳಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿ ಮಾಡಬೇಕು” ಎಂಬ ಎರಡು ಪ್ರಮುಖ ಬೇಡಿಕೆ ಇಟ್ಟಿದ್ದಾರೆ.

ಈ ಸಂದರ್ಭದಲ್ಲಿ ಶಾಂತಿಗಾಗಿ ನಾಗರೀಕರ ವೇದಿಕೆಯ ನೂರ್ ಶ್ರೀಧರ್, ಕೆಎಲ್ ಅಶೋಕ್, ನಗರಗೆರೆ ರಮೇಶ್, ವಿಎಸ್ ಶ್ರೀಧರ್, ನಕ್ಸಲ್ ಪುನರ್ವಸತಿ ಸಮಿತಿಯಿಂದ ಕೆಪಿ ಶ್ರೀಪಾಲ್ ಹಾಗೂ ಗೌಸ್ ಮೊಹಿಯುದ್ದೀನ್, ಹಾಗಲಗಂಚಿ ವೆಂಕಟೇಶ್ ಮತ್ತು ಇಸಾಬೆಲ್ಲಾ ಇದ್ದರು.

ಶರಣಾಗತಿ ಬಳಿಕ ರವೀಂದ್ರ ಅವರನ್ನು ಡಿವೈಎಸ್‌ಪಿ ವಶಕ್ಕೆ ಒಪ್ಪಿಸಲಾಗಿದೆ; ಶೃಂಗೇರಿ ಪೊಲೀಸ್ ಠಾಣೆಗೆ ಅವರನ್ನು ಒಪ್ಪಿಸುವ ಸಾಧ್ಯತೆ ಇದೆ.

ನಕ್ಸಲ್ ರವೀಂದ್ರ ಶರಣಾಗಿರುವುದು ಉತ್ತಮ ಬೆಳವಣಿಗೆ ಎಂದು ಕಾನೂನು‌ ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ. ಮನಸ್ಸು ಪರಿವರ್ತನೆ, ಬದಲಾವಣೆ ಮಾಡಿಕೊಂಡು ಮುಖ್ಯ ವೇದಿಕೆಗೆ ಬರುವುದು ಅಗತ್ಯ. ಸಂವಿಧಾನದ ಅಡಿ ಕೆಲಸ ಮಾಡಬೇಕಿರುವುದು ಅತ್ಯಂತ ಮಹತ್ವದ್ದು. ಆ ಹಿನ್ನೆಯಲ್ಲಿ ಅವರು ಮುಖ್ಯ ವಾಹಿನಿಗೆ ಬಂದಿರುವುದನ್ನು ನಾನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಶರಣಾಗತಿ ಆಪರೇಷನ್ ಮುಕ್ತಾಯಗೊಂಡಿದೆ. ನಕ್ಸಲ್ ಶರಣಾಗತಿ ಸಂಬಂಧ ಕಾರ್ಯ ನಿರ್ವಹಿಸಿರುವ 22 ಪೊಲೀಸ್ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...