Homeಕರ್ನಾಟಕನಕ್ಸಲ್ ಮುಕ್ತ ಕರ್ನಾಟಕ: ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ಹೋರಾಟಗಾರ ರವೀಂದ್ರ

ನಕ್ಸಲ್ ಮುಕ್ತ ಕರ್ನಾಟಕ: ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ಹೋರಾಟಗಾರ ರವೀಂದ್ರ

- Advertisement -
- Advertisement -

ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆರು ಜನ ಸಶಸ್ತ್ರ ಹೋರಾಟಗಾರರು ಮುಖ್ಯವಾಹಿನಿಗೆ ಮರಳುವ ಮೂಲಕ ಕರ್ನಾಟಕವು ನಕ್ಸಲ್ ಮುಕ್ತವಾಗುವತ್ತ ಹೆಜ್ಜೆ ಇಟ್ಟಿತ್ತು. ಇಂದು, ಆ ತಂಡದ ಕೊನೆಯ ನಾಯಕ ಕೋಟೆಹೊಂಡ ರವೀಂದ್ರ ಮುಖ್ಯವಾಹಿನಿಗೆ ಮರಳುವ ಮೂಲಕ ರಾಜ್ಯ ಅಧಿಕೃತವಾಗಿ ನಕ್ಸಲ್ ಮುಕ್ತವಾಗಿದೆ.

ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್ ನಾಯಕ ರವೀಂದ್ರ ಅವರು ಇಂದು ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದಾರೆ. ಕಳೆದ 18 ವರ್ಷಗಳಿಂದ ಭೂಗತರಾಗಿದ್ದ ಅವರು ಇಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮುಂದೆ ಶರಣಾಗಿದ್ದಾರೆ. ರವೀಂದ್ರಗೆ ಚಿಕ್ಕಮಗಳೂರು ಜಿಲ್ಲಾಡಳಿತ ₹7 ಲಕ್ಷ ಪ್ಯಾಕೇಜ್ ಘೋಷಣೆ ಮಾಡಿದೆ.

ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಕೋಟೆಹೊಂಡ ನಿವಾಸಿಯಾಗಿರುವ ರವೀಂದ್ರ, ಕಳೆದ‌ 18 ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ನಕ್ಸಲ್‌ರ ನಾಯಕ ವಿಕ್ರಮ್ ಗೌಡ ಎನ್‌ಕೌಂಟರ್ ಬಳಿಕ ರವೀಂದ್ರ ನಾಪತ್ತೆಯಾಗಿದ್ದರು. ಅವರ ಶರಣಾಗತಿಗೆ ನಕ್ಸಲ್ ಶರಣಾಗತಿ ಕಮಿಟಿ ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಸದಸ್ಯರು ಹರಸಾಹಸ ಪಟ್ಟಿದ್ದರು. ಕೊನೆಗೂ ರಾಜ್ಯ ಸರ್ಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಗೆ ಒಪ್ಪಿರುವ ರವಿಂದ್ರ ಅವರ ಮೇಲೆ ಒಟ್ಟು 26 ಪ್ರಕರಣಗಳು ದಾಖಲಾಗಿವೆ. ಇವರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ 14 ಪ್ರಕರಣಗಳು ಸೇರಿ ಕರ್ನಾಟಕದಲ್ಲಿ 17, ಕೇರಳದಲ್ಲಿ 9 ಪ್ರಕರಣಗಳು ದಾಖಲಾಗಿವೆ.

“17 ವರ್ಷಗಳ ಹಿಂದೆ ಮೂಲಭೂತ ಹಕ್ಕುಗಳಿಗಾಗಿ ನಕ್ಸಲ್ ಚಳವಳಿಗೆ ದುಮುಕಿದ್ದೆ. ವಾಸದ ಮನೆ ಸೇರಿದಂತೆ ಮೂಲಭೂತ ಸೌಕರ್ಯ ನೀಡಲು ಸರ್ಕಾರ ವಿಫಲವಾಗಿತ್ತು. ಈಗ ಸ್ವಲ್ಪ ಬದಲಾವಣೆ ಕಂಡು ಬರುತ್ತಿದೆ. ಇದರಿಂದ ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧಾರ ಮಾಡಿದ್ದೇನೆ. ಸರ್ಕಾರಕ್ಕೆ ನನ್ನ ಬೇಡಿಕೆಯ ಕುರಿತು ಪತ್ರ ನೀಡಿದ್ದೇನೆ” ಎಂದು ರವೀಂದ್ರ ಹೇಳಿದ್ದಾರೆ.

“ಆದಿವಾಸಿಗಳಿಗೆ ಹಾಗೂ ಕಾಡಂಚಿನ ಜನರಿಗೆ ಜಮೀನಿನ ಹಕ್ಕು ಪತ್ರ ನೀಡಬೇಕು ಹಾಗೂ ಅವರು ವಾಸಿಸುವ ಪ್ರದೇಶಗಳಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿ ಮಾಡಬೇಕು” ಎಂಬ ಎರಡು ಪ್ರಮುಖ ಬೇಡಿಕೆ ಇಟ್ಟಿದ್ದಾರೆ.

ಈ ಸಂದರ್ಭದಲ್ಲಿ ಶಾಂತಿಗಾಗಿ ನಾಗರೀಕರ ವೇದಿಕೆಯ ನೂರ್ ಶ್ರೀಧರ್, ಕೆಎಲ್ ಅಶೋಕ್, ನಗರಗೆರೆ ರಮೇಶ್, ವಿಎಸ್ ಶ್ರೀಧರ್, ನಕ್ಸಲ್ ಪುನರ್ವಸತಿ ಸಮಿತಿಯಿಂದ ಕೆಪಿ ಶ್ರೀಪಾಲ್ ಹಾಗೂ ಗೌಸ್ ಮೊಹಿಯುದ್ದೀನ್, ಹಾಗಲಗಂಚಿ ವೆಂಕಟೇಶ್ ಮತ್ತು ಇಸಾಬೆಲ್ಲಾ ಇದ್ದರು.

ಶರಣಾಗತಿ ಬಳಿಕ ರವೀಂದ್ರ ಅವರನ್ನು ಡಿವೈಎಸ್‌ಪಿ ವಶಕ್ಕೆ ಒಪ್ಪಿಸಲಾಗಿದೆ; ಶೃಂಗೇರಿ ಪೊಲೀಸ್ ಠಾಣೆಗೆ ಅವರನ್ನು ಒಪ್ಪಿಸುವ ಸಾಧ್ಯತೆ ಇದೆ.

ನಕ್ಸಲ್ ರವೀಂದ್ರ ಶರಣಾಗಿರುವುದು ಉತ್ತಮ ಬೆಳವಣಿಗೆ ಎಂದು ಕಾನೂನು‌ ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ. ಮನಸ್ಸು ಪರಿವರ್ತನೆ, ಬದಲಾವಣೆ ಮಾಡಿಕೊಂಡು ಮುಖ್ಯ ವೇದಿಕೆಗೆ ಬರುವುದು ಅಗತ್ಯ. ಸಂವಿಧಾನದ ಅಡಿ ಕೆಲಸ ಮಾಡಬೇಕಿರುವುದು ಅತ್ಯಂತ ಮಹತ್ವದ್ದು. ಆ ಹಿನ್ನೆಯಲ್ಲಿ ಅವರು ಮುಖ್ಯ ವಾಹಿನಿಗೆ ಬಂದಿರುವುದನ್ನು ನಾನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಶರಣಾಗತಿ ಆಪರೇಷನ್ ಮುಕ್ತಾಯಗೊಂಡಿದೆ. ನಕ್ಸಲ್ ಶರಣಾಗತಿ ಸಂಬಂಧ ಕಾರ್ಯ ನಿರ್ವಹಿಸಿರುವ 22 ಪೊಲೀಸ್ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು| ನಕ್ಸಲ್ ನಾಯಕ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...