Homeಕರ್ನಾಟಕನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ 'ಶಾಂತಿಗಾಗಿ ನಾಗರಿಕರ ವೇದಿಕೆ' ಆಗ್ರಹ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ ‘ಶಾಂತಿಗಾಗಿ ನಾಗರಿಕರ ವೇದಿಕೆ’ ಆಗ್ರಹ

- Advertisement -
- Advertisement -

ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸಿದ್ದು, “ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ವೇದಿಕೆ ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯವಾಗಿ, ಈಗಾಗಲೇ ಜಾರಿಯಲ್ಲಿರುವ ನಕ್ಸಲ್ ಶರಣಾಗತಿ ನೀತಿಯನ್ನು ಇನ್ನಷ್ಟು ಸರಳಗೊಳಿಸಿ, ಸಮರ್ಪಕವಾಗಿ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಕೂಡಾ ಸರ್ಕಾರ ನೀಡಿದೆ. ಇದು ಶಾಂತಿ ಸ್ಥಾಪನೆಗೆ ಅತ್ಯಂತ ಅಗತ್ಯವಾದ ಮುನ್ನಡೆ ಎಂದು ನಾವು ಭಾವಿಸುತ್ತೇವೆ. ಮುಖ್ಯಮಂತ್ರಿಗಳ ಈ ಕರೆಗೆ ನಕ್ಸಲ್ ಹೋರಾಟಗಾರರು ಇತ್ಯಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ನಾಗರಿಕ ಸಮಾಜ ಆಶಿಸುತ್ತದೆ. ಸಂವಿಧಾನಾತ್ಮಕ, ಪ್ರಜಾ ತಾಂತ್ರಿಕ ಹೋರಾಟಗಳು ಆರೋಗ್ಯಕರ ಸಮಾಜಕ್ಕೆ ಮುಖ್ಯ. ಆದರೆ, ಅದನ್ನು ಹಿಂಸಾತ್ಮಕ ಚಳುವಳಿಗಳ ಮೂಲಕವೇ ಮಾಡಬೇಕೆನ್ನುವುದು ಸರಿಯಾದ ಮಾರ್ಗವಲ್ಲ. ಈ ವಾಸ್ತವವನ್ನು ಮನಗಂಡ ಅನೇಕ ನಕ್ಸಲ್‌ ಹೋರಾಟಗಾರರು ಈಗ ಮುಖ್ಯವಾಹಿನಿಯ ಭಾಗವಾಗಿ ಪ್ರಜಾಸತ್ತಾತ್ಮಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿರುವ ಉದಾಹರಣೆಗಳು ನಮ್ಮ ಮುಂದಿವೆ. ಈ ವಾಸ್ತವವನ್ನು ಗ್ರಹಿಸಿ, ನಕ್ಸಲರು ತಮ್ಮ ಶಸ್ತ್ರಗಳನ್ನು ತ್ಯಜಿಸಿ ಹೊರಬಂದು, ತಮ್ಮ ಹೋರಾಟಗಳನ್ನು ಕಾನೂನಾತ್ಮಕವಾಗಿ ಮುಂದುವರೆಸಲು ಇದೊಂದು ಅವಕಾಶ ಎಂದು ಶಾಂತಿಗಾಗಿ ನಾಗರಿಕ ವೇದಿಕೆ ಹೇಳಿದೆ.

ವೇದಿಕೆಯ ಪರವಾಗಿ ಎನ್‌. ವೆಂಕಟೇಶ್‌, ಬಿ.ಟಿ ಲಲಿತಾ ನಾಯ್ಕ್, ಡಾ. ಕಲ್ಕುಳಿ ವಿಠ್ಠಲ್‌ ಹೆಗಡೆ, ಪ್ರೊ. ವಿ.ಎಸ್‌. ಶ್ರೀಧರ, ಪ್ರೊ. ನಗರಗೆರೆ ರಮೇಶ್ ಮತ್ತು ತಾರಾ ರಾವ್ ಈ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಸರ್ಕಾರವೂ ಕೂಡ ತಾನು ಹೇಳಿರುವ ರೀತಿಯಲ್ಲಿ ಸರಳವಾಗಿ ಮತ್ತು ಶೀಘ್ರಗತಿಯಲ್ಲಿ ಇತ್ಯರ್ಥವಾಗುವ ʼಶರಣಾಗತಿ ಯೋಜನೆʼಯನ್ನು ಜಾರಿಗೆ ತರುತ್ತದೆ ಎಂದು ನಾವು ನಂಬುತ್ತೇವೆ. ಮುಖ್ಯವಾಹಿನಿ ಸಮಾಜ ಬಯಸಿ ಬರುವವರ ಜೀವನ ನಿರ್ವಹಣೆಗೆ ಬೇಕಾದ ಸೌಲಭ್ಯ ಮತ್ತು ಕಾನೂನು ನೆರವನ್ನು ನೀಡುವುದರ ಮೂಲಕ ಇವರನ್ನು ಘನತೆಯಿಂದ ನಡೆಸಿಕೊಳ್ಳುವುದು ಸರ್ಕಾರದ ಹೊಣೆ. ಇದರ ಮೊದಲ ಹೆಜ್ಜೆಯಾಗಿ, ಈಗಾಗಲೇ  ಹೊರಗೆ ಬಂದಿರುವ ನಕ್ಸಲರಿಗೆ ಬೇಕಾದ ಕಾನೂನಾತ್ಮಕ ನೆರವನ್ನು ಮತ್ತು ಬದುಕಿಗೆ ಆಧಾರವನ್ನು ಒದಗಿಸಬೇಕಾಗಿದೆ. ಆದರೆ, ಈಗ ಅವರ ಪರಿಸ್ಥಿತಿ ಅಯೋಮಯವಾಗಿದೆ. ಹಲವಾರು ಕೋರ್ಟುಗಳಲ್ಲಿ ಹರಡಿಹೋಗಿರುವ ಅಸಂಖ್ಯಾತ  ಕೇಸುಗಳು, ನಿಧಾನಗತಿಯ ವಿಚಾರಣೆ, ಕೊಟ್ಟ ಭರವಸೆಯಂತೆ ನೀಡಬೇಕಾದ ಭೂಮಿ ಹಂಚಿಕೆಯಲ್ಲಿನ ಆಡಳಿತ ನಿರ್ಲಕ್ಷ್ಯ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಂದಾಗಿ ಅವರ ಬದುಕು ಅತಂತ್ರವಾಗಿದೆ. ವಕೀಲರಿಗೆ ಕೊಡಬೇಕಾದ ಹಣ ಇರಲಿ, ದೈನಂದಿನ ಜೀವನ ನಿರ್ವಹಣೆಗೇ ತೊಳಲಾಟ ಉಂಟಾಗಿದೆ. ಸರ್ಕಾರವು ತಕ್ಷಣವೇ ಇವರ ಸಮಸ್ಯೆಗಳಿಗೆ ಪರಿಹಾರ ರೂಪಿಸಬೇಕು; ಅದರ ಮೂಲಕ ಹೊರ ಬರಲು ಇಚ್ಛಿಸುವವರಲ್ಲಿ ಭರವಸೆಯನ್ನು ಮೂಡಿಸಲು ಸಾಧ್ಯ ಎಂಬುದು ನಮ್ಮ ಗ್ರಹಿಕೆಯಾಗಿದೆ” ಎಂದು ವೇದಿಕೆ ಹೇಳಿದೆ.

“ಶಾಂತಿ ಬಯಸುವ ನಾಗರಿಕರಾಗಿ ನಕ್ಸಲ್‌ ಚಳುವಳಿಗಾರರನ್ನು ಮುಖ್ಯವಾಹಿಗೆ ಕರೆತಂದು ಸರ್ಕಾರಕ್ಕೆ ಒಪ್ಪಿಸುವುದಕ್ಕೆ, ಮೇಲೆ ಸೂಚಿಸುರುವ ಸರ್ಕಾರದ ಪರಿಹಾರ ನೆರವಾಗುತ್ತದೆ. ಈ ಭರವಸೆಯ ಮೂಲಕ ಮಾತ್ರ ಮುಖ್ಯವಾಹಿನಿಗೆ ಬರುವವರ ಜತೆ ಮಾತುಕತೆ ನಡೆಸಲು ಬೇಕಾದ ಸನ್ನಿವೇಶ ನಿರ್ಮಾಣವಾಗುತ್ತದೆ; ಶಾಂತಿಯುತ ಪರಿಹಾರಕ್ಕೆ ದಾರಿಮಾಡಿಕೊಡುತ್ತದೆ. ಹೀಗಾಗಿ, ಸರ್ಕಾರವು ಈಗಾಗಲೇ ಹೊರಬಂದಿರುವವರ ಮರುವಸತಿ ಮತ್ತು ಕಾನೂನು ನೆರವಿಗೆ ಅದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ನಾವು ಮನವಿ ಮಾಡುತ್ತೇವೆ” ಎಂದು ಹೇಳಿಯಲ್ಲಿ ಮನವಿ ಮಾಡಲಾಗಿದೆ.

“ಇದೇ ಸಂದರ್ಭದಲ್ಲಿ, ನವೆಂಬರ್‌ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಬೇಕು ಎಂದು ಕೂಡ ಮಾನವ ಹಕ್ಕುಗಳ ಕಾರ್ಯಕರ್ತರಾಗಿ ನಾವು ಆಗ್ರಹಿಸುತ್ತೇವೆ. ನಾಗರಿಕ ಸಮಾಜ ಮುಂದಿಡುವ ಈ ನ್ಯಾಯೋಚಿತ ಬೇಡಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ವಂದಿಸುತ್ತಾರೆ” ಎಂದು ವೇದಿಕೆ ವಿಶ್ವಾಸ ವ್ಯಕ್ತಪಡಿಸಿದೆ.

ಇದನ್ನೂ ಓದಿ; ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...