Homeಕರ್ನಾಟಕನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ 'ಶಾಂತಿಗಾಗಿ ನಾಗರಿಕರ ವೇದಿಕೆ' ಆಗ್ರಹ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ ‘ಶಾಂತಿಗಾಗಿ ನಾಗರಿಕರ ವೇದಿಕೆ’ ಆಗ್ರಹ

- Advertisement -
- Advertisement -

ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸಿದ್ದು, “ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ವೇದಿಕೆ ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯವಾಗಿ, ಈಗಾಗಲೇ ಜಾರಿಯಲ್ಲಿರುವ ನಕ್ಸಲ್ ಶರಣಾಗತಿ ನೀತಿಯನ್ನು ಇನ್ನಷ್ಟು ಸರಳಗೊಳಿಸಿ, ಸಮರ್ಪಕವಾಗಿ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಕೂಡಾ ಸರ್ಕಾರ ನೀಡಿದೆ. ಇದು ಶಾಂತಿ ಸ್ಥಾಪನೆಗೆ ಅತ್ಯಂತ ಅಗತ್ಯವಾದ ಮುನ್ನಡೆ ಎಂದು ನಾವು ಭಾವಿಸುತ್ತೇವೆ. ಮುಖ್ಯಮಂತ್ರಿಗಳ ಈ ಕರೆಗೆ ನಕ್ಸಲ್ ಹೋರಾಟಗಾರರು ಇತ್ಯಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ನಾಗರಿಕ ಸಮಾಜ ಆಶಿಸುತ್ತದೆ. ಸಂವಿಧಾನಾತ್ಮಕ, ಪ್ರಜಾ ತಾಂತ್ರಿಕ ಹೋರಾಟಗಳು ಆರೋಗ್ಯಕರ ಸಮಾಜಕ್ಕೆ ಮುಖ್ಯ. ಆದರೆ, ಅದನ್ನು ಹಿಂಸಾತ್ಮಕ ಚಳುವಳಿಗಳ ಮೂಲಕವೇ ಮಾಡಬೇಕೆನ್ನುವುದು ಸರಿಯಾದ ಮಾರ್ಗವಲ್ಲ. ಈ ವಾಸ್ತವವನ್ನು ಮನಗಂಡ ಅನೇಕ ನಕ್ಸಲ್‌ ಹೋರಾಟಗಾರರು ಈಗ ಮುಖ್ಯವಾಹಿನಿಯ ಭಾಗವಾಗಿ ಪ್ರಜಾಸತ್ತಾತ್ಮಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿರುವ ಉದಾಹರಣೆಗಳು ನಮ್ಮ ಮುಂದಿವೆ. ಈ ವಾಸ್ತವವನ್ನು ಗ್ರಹಿಸಿ, ನಕ್ಸಲರು ತಮ್ಮ ಶಸ್ತ್ರಗಳನ್ನು ತ್ಯಜಿಸಿ ಹೊರಬಂದು, ತಮ್ಮ ಹೋರಾಟಗಳನ್ನು ಕಾನೂನಾತ್ಮಕವಾಗಿ ಮುಂದುವರೆಸಲು ಇದೊಂದು ಅವಕಾಶ ಎಂದು ಶಾಂತಿಗಾಗಿ ನಾಗರಿಕ ವೇದಿಕೆ ಹೇಳಿದೆ.

ವೇದಿಕೆಯ ಪರವಾಗಿ ಎನ್‌. ವೆಂಕಟೇಶ್‌, ಬಿ.ಟಿ ಲಲಿತಾ ನಾಯ್ಕ್, ಡಾ. ಕಲ್ಕುಳಿ ವಿಠ್ಠಲ್‌ ಹೆಗಡೆ, ಪ್ರೊ. ವಿ.ಎಸ್‌. ಶ್ರೀಧರ, ಪ್ರೊ. ನಗರಗೆರೆ ರಮೇಶ್ ಮತ್ತು ತಾರಾ ರಾವ್ ಈ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಸರ್ಕಾರವೂ ಕೂಡ ತಾನು ಹೇಳಿರುವ ರೀತಿಯಲ್ಲಿ ಸರಳವಾಗಿ ಮತ್ತು ಶೀಘ್ರಗತಿಯಲ್ಲಿ ಇತ್ಯರ್ಥವಾಗುವ ʼಶರಣಾಗತಿ ಯೋಜನೆʼಯನ್ನು ಜಾರಿಗೆ ತರುತ್ತದೆ ಎಂದು ನಾವು ನಂಬುತ್ತೇವೆ. ಮುಖ್ಯವಾಹಿನಿ ಸಮಾಜ ಬಯಸಿ ಬರುವವರ ಜೀವನ ನಿರ್ವಹಣೆಗೆ ಬೇಕಾದ ಸೌಲಭ್ಯ ಮತ್ತು ಕಾನೂನು ನೆರವನ್ನು ನೀಡುವುದರ ಮೂಲಕ ಇವರನ್ನು ಘನತೆಯಿಂದ ನಡೆಸಿಕೊಳ್ಳುವುದು ಸರ್ಕಾರದ ಹೊಣೆ. ಇದರ ಮೊದಲ ಹೆಜ್ಜೆಯಾಗಿ, ಈಗಾಗಲೇ  ಹೊರಗೆ ಬಂದಿರುವ ನಕ್ಸಲರಿಗೆ ಬೇಕಾದ ಕಾನೂನಾತ್ಮಕ ನೆರವನ್ನು ಮತ್ತು ಬದುಕಿಗೆ ಆಧಾರವನ್ನು ಒದಗಿಸಬೇಕಾಗಿದೆ. ಆದರೆ, ಈಗ ಅವರ ಪರಿಸ್ಥಿತಿ ಅಯೋಮಯವಾಗಿದೆ. ಹಲವಾರು ಕೋರ್ಟುಗಳಲ್ಲಿ ಹರಡಿಹೋಗಿರುವ ಅಸಂಖ್ಯಾತ  ಕೇಸುಗಳು, ನಿಧಾನಗತಿಯ ವಿಚಾರಣೆ, ಕೊಟ್ಟ ಭರವಸೆಯಂತೆ ನೀಡಬೇಕಾದ ಭೂಮಿ ಹಂಚಿಕೆಯಲ್ಲಿನ ಆಡಳಿತ ನಿರ್ಲಕ್ಷ್ಯ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಂದಾಗಿ ಅವರ ಬದುಕು ಅತಂತ್ರವಾಗಿದೆ. ವಕೀಲರಿಗೆ ಕೊಡಬೇಕಾದ ಹಣ ಇರಲಿ, ದೈನಂದಿನ ಜೀವನ ನಿರ್ವಹಣೆಗೇ ತೊಳಲಾಟ ಉಂಟಾಗಿದೆ. ಸರ್ಕಾರವು ತಕ್ಷಣವೇ ಇವರ ಸಮಸ್ಯೆಗಳಿಗೆ ಪರಿಹಾರ ರೂಪಿಸಬೇಕು; ಅದರ ಮೂಲಕ ಹೊರ ಬರಲು ಇಚ್ಛಿಸುವವರಲ್ಲಿ ಭರವಸೆಯನ್ನು ಮೂಡಿಸಲು ಸಾಧ್ಯ ಎಂಬುದು ನಮ್ಮ ಗ್ರಹಿಕೆಯಾಗಿದೆ” ಎಂದು ವೇದಿಕೆ ಹೇಳಿದೆ.

“ಶಾಂತಿ ಬಯಸುವ ನಾಗರಿಕರಾಗಿ ನಕ್ಸಲ್‌ ಚಳುವಳಿಗಾರರನ್ನು ಮುಖ್ಯವಾಹಿಗೆ ಕರೆತಂದು ಸರ್ಕಾರಕ್ಕೆ ಒಪ್ಪಿಸುವುದಕ್ಕೆ, ಮೇಲೆ ಸೂಚಿಸುರುವ ಸರ್ಕಾರದ ಪರಿಹಾರ ನೆರವಾಗುತ್ತದೆ. ಈ ಭರವಸೆಯ ಮೂಲಕ ಮಾತ್ರ ಮುಖ್ಯವಾಹಿನಿಗೆ ಬರುವವರ ಜತೆ ಮಾತುಕತೆ ನಡೆಸಲು ಬೇಕಾದ ಸನ್ನಿವೇಶ ನಿರ್ಮಾಣವಾಗುತ್ತದೆ; ಶಾಂತಿಯುತ ಪರಿಹಾರಕ್ಕೆ ದಾರಿಮಾಡಿಕೊಡುತ್ತದೆ. ಹೀಗಾಗಿ, ಸರ್ಕಾರವು ಈಗಾಗಲೇ ಹೊರಬಂದಿರುವವರ ಮರುವಸತಿ ಮತ್ತು ಕಾನೂನು ನೆರವಿಗೆ ಅದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ನಾವು ಮನವಿ ಮಾಡುತ್ತೇವೆ” ಎಂದು ಹೇಳಿಯಲ್ಲಿ ಮನವಿ ಮಾಡಲಾಗಿದೆ.

“ಇದೇ ಸಂದರ್ಭದಲ್ಲಿ, ನವೆಂಬರ್‌ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಬೇಕು ಎಂದು ಕೂಡ ಮಾನವ ಹಕ್ಕುಗಳ ಕಾರ್ಯಕರ್ತರಾಗಿ ನಾವು ಆಗ್ರಹಿಸುತ್ತೇವೆ. ನಾಗರಿಕ ಸಮಾಜ ಮುಂದಿಡುವ ಈ ನ್ಯಾಯೋಚಿತ ಬೇಡಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ವಂದಿಸುತ್ತಾರೆ” ಎಂದು ವೇದಿಕೆ ವಿಶ್ವಾಸ ವ್ಯಕ್ತಪಡಿಸಿದೆ.

ಇದನ್ನೂ ಓದಿ; ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....