Homeಕರ್ನಾಟಕನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ 'ಶಾಂತಿಗಾಗಿ ನಾಗರಿಕರ ವೇದಿಕೆ' ಆಗ್ರಹ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ ‘ಶಾಂತಿಗಾಗಿ ನಾಗರಿಕರ ವೇದಿಕೆ’ ಆಗ್ರಹ

- Advertisement -
- Advertisement -

ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸಿದ್ದು, “ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ವೇದಿಕೆ ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯವಾಗಿ, ಈಗಾಗಲೇ ಜಾರಿಯಲ್ಲಿರುವ ನಕ್ಸಲ್ ಶರಣಾಗತಿ ನೀತಿಯನ್ನು ಇನ್ನಷ್ಟು ಸರಳಗೊಳಿಸಿ, ಸಮರ್ಪಕವಾಗಿ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಕೂಡಾ ಸರ್ಕಾರ ನೀಡಿದೆ. ಇದು ಶಾಂತಿ ಸ್ಥಾಪನೆಗೆ ಅತ್ಯಂತ ಅಗತ್ಯವಾದ ಮುನ್ನಡೆ ಎಂದು ನಾವು ಭಾವಿಸುತ್ತೇವೆ. ಮುಖ್ಯಮಂತ್ರಿಗಳ ಈ ಕರೆಗೆ ನಕ್ಸಲ್ ಹೋರಾಟಗಾರರು ಇತ್ಯಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ನಾಗರಿಕ ಸಮಾಜ ಆಶಿಸುತ್ತದೆ. ಸಂವಿಧಾನಾತ್ಮಕ, ಪ್ರಜಾ ತಾಂತ್ರಿಕ ಹೋರಾಟಗಳು ಆರೋಗ್ಯಕರ ಸಮಾಜಕ್ಕೆ ಮುಖ್ಯ. ಆದರೆ, ಅದನ್ನು ಹಿಂಸಾತ್ಮಕ ಚಳುವಳಿಗಳ ಮೂಲಕವೇ ಮಾಡಬೇಕೆನ್ನುವುದು ಸರಿಯಾದ ಮಾರ್ಗವಲ್ಲ. ಈ ವಾಸ್ತವವನ್ನು ಮನಗಂಡ ಅನೇಕ ನಕ್ಸಲ್‌ ಹೋರಾಟಗಾರರು ಈಗ ಮುಖ್ಯವಾಹಿನಿಯ ಭಾಗವಾಗಿ ಪ್ರಜಾಸತ್ತಾತ್ಮಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿರುವ ಉದಾಹರಣೆಗಳು ನಮ್ಮ ಮುಂದಿವೆ. ಈ ವಾಸ್ತವವನ್ನು ಗ್ರಹಿಸಿ, ನಕ್ಸಲರು ತಮ್ಮ ಶಸ್ತ್ರಗಳನ್ನು ತ್ಯಜಿಸಿ ಹೊರಬಂದು, ತಮ್ಮ ಹೋರಾಟಗಳನ್ನು ಕಾನೂನಾತ್ಮಕವಾಗಿ ಮುಂದುವರೆಸಲು ಇದೊಂದು ಅವಕಾಶ ಎಂದು ಶಾಂತಿಗಾಗಿ ನಾಗರಿಕ ವೇದಿಕೆ ಹೇಳಿದೆ.

ವೇದಿಕೆಯ ಪರವಾಗಿ ಎನ್‌. ವೆಂಕಟೇಶ್‌, ಬಿ.ಟಿ ಲಲಿತಾ ನಾಯ್ಕ್, ಡಾ. ಕಲ್ಕುಳಿ ವಿಠ್ಠಲ್‌ ಹೆಗಡೆ, ಪ್ರೊ. ವಿ.ಎಸ್‌. ಶ್ರೀಧರ, ಪ್ರೊ. ನಗರಗೆರೆ ರಮೇಶ್ ಮತ್ತು ತಾರಾ ರಾವ್ ಈ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಸರ್ಕಾರವೂ ಕೂಡ ತಾನು ಹೇಳಿರುವ ರೀತಿಯಲ್ಲಿ ಸರಳವಾಗಿ ಮತ್ತು ಶೀಘ್ರಗತಿಯಲ್ಲಿ ಇತ್ಯರ್ಥವಾಗುವ ʼಶರಣಾಗತಿ ಯೋಜನೆʼಯನ್ನು ಜಾರಿಗೆ ತರುತ್ತದೆ ಎಂದು ನಾವು ನಂಬುತ್ತೇವೆ. ಮುಖ್ಯವಾಹಿನಿ ಸಮಾಜ ಬಯಸಿ ಬರುವವರ ಜೀವನ ನಿರ್ವಹಣೆಗೆ ಬೇಕಾದ ಸೌಲಭ್ಯ ಮತ್ತು ಕಾನೂನು ನೆರವನ್ನು ನೀಡುವುದರ ಮೂಲಕ ಇವರನ್ನು ಘನತೆಯಿಂದ ನಡೆಸಿಕೊಳ್ಳುವುದು ಸರ್ಕಾರದ ಹೊಣೆ. ಇದರ ಮೊದಲ ಹೆಜ್ಜೆಯಾಗಿ, ಈಗಾಗಲೇ  ಹೊರಗೆ ಬಂದಿರುವ ನಕ್ಸಲರಿಗೆ ಬೇಕಾದ ಕಾನೂನಾತ್ಮಕ ನೆರವನ್ನು ಮತ್ತು ಬದುಕಿಗೆ ಆಧಾರವನ್ನು ಒದಗಿಸಬೇಕಾಗಿದೆ. ಆದರೆ, ಈಗ ಅವರ ಪರಿಸ್ಥಿತಿ ಅಯೋಮಯವಾಗಿದೆ. ಹಲವಾರು ಕೋರ್ಟುಗಳಲ್ಲಿ ಹರಡಿಹೋಗಿರುವ ಅಸಂಖ್ಯಾತ  ಕೇಸುಗಳು, ನಿಧಾನಗತಿಯ ವಿಚಾರಣೆ, ಕೊಟ್ಟ ಭರವಸೆಯಂತೆ ನೀಡಬೇಕಾದ ಭೂಮಿ ಹಂಚಿಕೆಯಲ್ಲಿನ ಆಡಳಿತ ನಿರ್ಲಕ್ಷ್ಯ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಂದಾಗಿ ಅವರ ಬದುಕು ಅತಂತ್ರವಾಗಿದೆ. ವಕೀಲರಿಗೆ ಕೊಡಬೇಕಾದ ಹಣ ಇರಲಿ, ದೈನಂದಿನ ಜೀವನ ನಿರ್ವಹಣೆಗೇ ತೊಳಲಾಟ ಉಂಟಾಗಿದೆ. ಸರ್ಕಾರವು ತಕ್ಷಣವೇ ಇವರ ಸಮಸ್ಯೆಗಳಿಗೆ ಪರಿಹಾರ ರೂಪಿಸಬೇಕು; ಅದರ ಮೂಲಕ ಹೊರ ಬರಲು ಇಚ್ಛಿಸುವವರಲ್ಲಿ ಭರವಸೆಯನ್ನು ಮೂಡಿಸಲು ಸಾಧ್ಯ ಎಂಬುದು ನಮ್ಮ ಗ್ರಹಿಕೆಯಾಗಿದೆ” ಎಂದು ವೇದಿಕೆ ಹೇಳಿದೆ.

“ಶಾಂತಿ ಬಯಸುವ ನಾಗರಿಕರಾಗಿ ನಕ್ಸಲ್‌ ಚಳುವಳಿಗಾರರನ್ನು ಮುಖ್ಯವಾಹಿಗೆ ಕರೆತಂದು ಸರ್ಕಾರಕ್ಕೆ ಒಪ್ಪಿಸುವುದಕ್ಕೆ, ಮೇಲೆ ಸೂಚಿಸುರುವ ಸರ್ಕಾರದ ಪರಿಹಾರ ನೆರವಾಗುತ್ತದೆ. ಈ ಭರವಸೆಯ ಮೂಲಕ ಮಾತ್ರ ಮುಖ್ಯವಾಹಿನಿಗೆ ಬರುವವರ ಜತೆ ಮಾತುಕತೆ ನಡೆಸಲು ಬೇಕಾದ ಸನ್ನಿವೇಶ ನಿರ್ಮಾಣವಾಗುತ್ತದೆ; ಶಾಂತಿಯುತ ಪರಿಹಾರಕ್ಕೆ ದಾರಿಮಾಡಿಕೊಡುತ್ತದೆ. ಹೀಗಾಗಿ, ಸರ್ಕಾರವು ಈಗಾಗಲೇ ಹೊರಬಂದಿರುವವರ ಮರುವಸತಿ ಮತ್ತು ಕಾನೂನು ನೆರವಿಗೆ ಅದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ನಾವು ಮನವಿ ಮಾಡುತ್ತೇವೆ” ಎಂದು ಹೇಳಿಯಲ್ಲಿ ಮನವಿ ಮಾಡಲಾಗಿದೆ.

“ಇದೇ ಸಂದರ್ಭದಲ್ಲಿ, ನವೆಂಬರ್‌ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಬೇಕು ಎಂದು ಕೂಡ ಮಾನವ ಹಕ್ಕುಗಳ ಕಾರ್ಯಕರ್ತರಾಗಿ ನಾವು ಆಗ್ರಹಿಸುತ್ತೇವೆ. ನಾಗರಿಕ ಸಮಾಜ ಮುಂದಿಡುವ ಈ ನ್ಯಾಯೋಚಿತ ಬೇಡಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ವಂದಿಸುತ್ತಾರೆ” ಎಂದು ವೇದಿಕೆ ವಿಶ್ವಾಸ ವ್ಯಕ್ತಪಡಿಸಿದೆ.

ಇದನ್ನೂ ಓದಿ; ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...