Homeಕರ್ನಾಟಕನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ 'ಶಾಂತಿಗಾಗಿ ನಾಗರಿಕರ ವೇದಿಕೆ' ಆಗ್ರಹ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ ‘ಶಾಂತಿಗಾಗಿ ನಾಗರಿಕರ ವೇದಿಕೆ’ ಆಗ್ರಹ

- Advertisement -
- Advertisement -

ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸಿದ್ದು, “ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ವೇದಿಕೆ ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯವಾಗಿ, ಈಗಾಗಲೇ ಜಾರಿಯಲ್ಲಿರುವ ನಕ್ಸಲ್ ಶರಣಾಗತಿ ನೀತಿಯನ್ನು ಇನ್ನಷ್ಟು ಸರಳಗೊಳಿಸಿ, ಸಮರ್ಪಕವಾಗಿ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಕೂಡಾ ಸರ್ಕಾರ ನೀಡಿದೆ. ಇದು ಶಾಂತಿ ಸ್ಥಾಪನೆಗೆ ಅತ್ಯಂತ ಅಗತ್ಯವಾದ ಮುನ್ನಡೆ ಎಂದು ನಾವು ಭಾವಿಸುತ್ತೇವೆ. ಮುಖ್ಯಮಂತ್ರಿಗಳ ಈ ಕರೆಗೆ ನಕ್ಸಲ್ ಹೋರಾಟಗಾರರು ಇತ್ಯಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ನಾಗರಿಕ ಸಮಾಜ ಆಶಿಸುತ್ತದೆ. ಸಂವಿಧಾನಾತ್ಮಕ, ಪ್ರಜಾ ತಾಂತ್ರಿಕ ಹೋರಾಟಗಳು ಆರೋಗ್ಯಕರ ಸಮಾಜಕ್ಕೆ ಮುಖ್ಯ. ಆದರೆ, ಅದನ್ನು ಹಿಂಸಾತ್ಮಕ ಚಳುವಳಿಗಳ ಮೂಲಕವೇ ಮಾಡಬೇಕೆನ್ನುವುದು ಸರಿಯಾದ ಮಾರ್ಗವಲ್ಲ. ಈ ವಾಸ್ತವವನ್ನು ಮನಗಂಡ ಅನೇಕ ನಕ್ಸಲ್‌ ಹೋರಾಟಗಾರರು ಈಗ ಮುಖ್ಯವಾಹಿನಿಯ ಭಾಗವಾಗಿ ಪ್ರಜಾಸತ್ತಾತ್ಮಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿರುವ ಉದಾಹರಣೆಗಳು ನಮ್ಮ ಮುಂದಿವೆ. ಈ ವಾಸ್ತವವನ್ನು ಗ್ರಹಿಸಿ, ನಕ್ಸಲರು ತಮ್ಮ ಶಸ್ತ್ರಗಳನ್ನು ತ್ಯಜಿಸಿ ಹೊರಬಂದು, ತಮ್ಮ ಹೋರಾಟಗಳನ್ನು ಕಾನೂನಾತ್ಮಕವಾಗಿ ಮುಂದುವರೆಸಲು ಇದೊಂದು ಅವಕಾಶ ಎಂದು ಶಾಂತಿಗಾಗಿ ನಾಗರಿಕ ವೇದಿಕೆ ಹೇಳಿದೆ.

ವೇದಿಕೆಯ ಪರವಾಗಿ ಎನ್‌. ವೆಂಕಟೇಶ್‌, ಬಿ.ಟಿ ಲಲಿತಾ ನಾಯ್ಕ್, ಡಾ. ಕಲ್ಕುಳಿ ವಿಠ್ಠಲ್‌ ಹೆಗಡೆ, ಪ್ರೊ. ವಿ.ಎಸ್‌. ಶ್ರೀಧರ, ಪ್ರೊ. ನಗರಗೆರೆ ರಮೇಶ್ ಮತ್ತು ತಾರಾ ರಾವ್ ಈ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಸರ್ಕಾರವೂ ಕೂಡ ತಾನು ಹೇಳಿರುವ ರೀತಿಯಲ್ಲಿ ಸರಳವಾಗಿ ಮತ್ತು ಶೀಘ್ರಗತಿಯಲ್ಲಿ ಇತ್ಯರ್ಥವಾಗುವ ʼಶರಣಾಗತಿ ಯೋಜನೆʼಯನ್ನು ಜಾರಿಗೆ ತರುತ್ತದೆ ಎಂದು ನಾವು ನಂಬುತ್ತೇವೆ. ಮುಖ್ಯವಾಹಿನಿ ಸಮಾಜ ಬಯಸಿ ಬರುವವರ ಜೀವನ ನಿರ್ವಹಣೆಗೆ ಬೇಕಾದ ಸೌಲಭ್ಯ ಮತ್ತು ಕಾನೂನು ನೆರವನ್ನು ನೀಡುವುದರ ಮೂಲಕ ಇವರನ್ನು ಘನತೆಯಿಂದ ನಡೆಸಿಕೊಳ್ಳುವುದು ಸರ್ಕಾರದ ಹೊಣೆ. ಇದರ ಮೊದಲ ಹೆಜ್ಜೆಯಾಗಿ, ಈಗಾಗಲೇ  ಹೊರಗೆ ಬಂದಿರುವ ನಕ್ಸಲರಿಗೆ ಬೇಕಾದ ಕಾನೂನಾತ್ಮಕ ನೆರವನ್ನು ಮತ್ತು ಬದುಕಿಗೆ ಆಧಾರವನ್ನು ಒದಗಿಸಬೇಕಾಗಿದೆ. ಆದರೆ, ಈಗ ಅವರ ಪರಿಸ್ಥಿತಿ ಅಯೋಮಯವಾಗಿದೆ. ಹಲವಾರು ಕೋರ್ಟುಗಳಲ್ಲಿ ಹರಡಿಹೋಗಿರುವ ಅಸಂಖ್ಯಾತ  ಕೇಸುಗಳು, ನಿಧಾನಗತಿಯ ವಿಚಾರಣೆ, ಕೊಟ್ಟ ಭರವಸೆಯಂತೆ ನೀಡಬೇಕಾದ ಭೂಮಿ ಹಂಚಿಕೆಯಲ್ಲಿನ ಆಡಳಿತ ನಿರ್ಲಕ್ಷ್ಯ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಂದಾಗಿ ಅವರ ಬದುಕು ಅತಂತ್ರವಾಗಿದೆ. ವಕೀಲರಿಗೆ ಕೊಡಬೇಕಾದ ಹಣ ಇರಲಿ, ದೈನಂದಿನ ಜೀವನ ನಿರ್ವಹಣೆಗೇ ತೊಳಲಾಟ ಉಂಟಾಗಿದೆ. ಸರ್ಕಾರವು ತಕ್ಷಣವೇ ಇವರ ಸಮಸ್ಯೆಗಳಿಗೆ ಪರಿಹಾರ ರೂಪಿಸಬೇಕು; ಅದರ ಮೂಲಕ ಹೊರ ಬರಲು ಇಚ್ಛಿಸುವವರಲ್ಲಿ ಭರವಸೆಯನ್ನು ಮೂಡಿಸಲು ಸಾಧ್ಯ ಎಂಬುದು ನಮ್ಮ ಗ್ರಹಿಕೆಯಾಗಿದೆ” ಎಂದು ವೇದಿಕೆ ಹೇಳಿದೆ.

“ಶಾಂತಿ ಬಯಸುವ ನಾಗರಿಕರಾಗಿ ನಕ್ಸಲ್‌ ಚಳುವಳಿಗಾರರನ್ನು ಮುಖ್ಯವಾಹಿಗೆ ಕರೆತಂದು ಸರ್ಕಾರಕ್ಕೆ ಒಪ್ಪಿಸುವುದಕ್ಕೆ, ಮೇಲೆ ಸೂಚಿಸುರುವ ಸರ್ಕಾರದ ಪರಿಹಾರ ನೆರವಾಗುತ್ತದೆ. ಈ ಭರವಸೆಯ ಮೂಲಕ ಮಾತ್ರ ಮುಖ್ಯವಾಹಿನಿಗೆ ಬರುವವರ ಜತೆ ಮಾತುಕತೆ ನಡೆಸಲು ಬೇಕಾದ ಸನ್ನಿವೇಶ ನಿರ್ಮಾಣವಾಗುತ್ತದೆ; ಶಾಂತಿಯುತ ಪರಿಹಾರಕ್ಕೆ ದಾರಿಮಾಡಿಕೊಡುತ್ತದೆ. ಹೀಗಾಗಿ, ಸರ್ಕಾರವು ಈಗಾಗಲೇ ಹೊರಬಂದಿರುವವರ ಮರುವಸತಿ ಮತ್ತು ಕಾನೂನು ನೆರವಿಗೆ ಅದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ನಾವು ಮನವಿ ಮಾಡುತ್ತೇವೆ” ಎಂದು ಹೇಳಿಯಲ್ಲಿ ಮನವಿ ಮಾಡಲಾಗಿದೆ.

“ಇದೇ ಸಂದರ್ಭದಲ್ಲಿ, ನವೆಂಬರ್‌ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಬೇಕು ಎಂದು ಕೂಡ ಮಾನವ ಹಕ್ಕುಗಳ ಕಾರ್ಯಕರ್ತರಾಗಿ ನಾವು ಆಗ್ರಹಿಸುತ್ತೇವೆ. ನಾಗರಿಕ ಸಮಾಜ ಮುಂದಿಡುವ ಈ ನ್ಯಾಯೋಚಿತ ಬೇಡಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ವಂದಿಸುತ್ತಾರೆ” ಎಂದು ವೇದಿಕೆ ವಿಶ್ವಾಸ ವ್ಯಕ್ತಪಡಿಸಿದೆ.

ಇದನ್ನೂ ಓದಿ; ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...