Homeಕರ್ನಾಟಕನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ 'ಶಾಂತಿಗಾಗಿ ನಾಗರಿಕರ ವೇದಿಕೆ' ಆಗ್ರಹ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ ‘ಶಾಂತಿಗಾಗಿ ನಾಗರಿಕರ ವೇದಿಕೆ’ ಆಗ್ರಹ

- Advertisement -
- Advertisement -

ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸಿದ್ದು, “ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ವೇದಿಕೆ ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯವಾಗಿ, ಈಗಾಗಲೇ ಜಾರಿಯಲ್ಲಿರುವ ನಕ್ಸಲ್ ಶರಣಾಗತಿ ನೀತಿಯನ್ನು ಇನ್ನಷ್ಟು ಸರಳಗೊಳಿಸಿ, ಸಮರ್ಪಕವಾಗಿ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಕೂಡಾ ಸರ್ಕಾರ ನೀಡಿದೆ. ಇದು ಶಾಂತಿ ಸ್ಥಾಪನೆಗೆ ಅತ್ಯಂತ ಅಗತ್ಯವಾದ ಮುನ್ನಡೆ ಎಂದು ನಾವು ಭಾವಿಸುತ್ತೇವೆ. ಮುಖ್ಯಮಂತ್ರಿಗಳ ಈ ಕರೆಗೆ ನಕ್ಸಲ್ ಹೋರಾಟಗಾರರು ಇತ್ಯಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ನಾಗರಿಕ ಸಮಾಜ ಆಶಿಸುತ್ತದೆ. ಸಂವಿಧಾನಾತ್ಮಕ, ಪ್ರಜಾ ತಾಂತ್ರಿಕ ಹೋರಾಟಗಳು ಆರೋಗ್ಯಕರ ಸಮಾಜಕ್ಕೆ ಮುಖ್ಯ. ಆದರೆ, ಅದನ್ನು ಹಿಂಸಾತ್ಮಕ ಚಳುವಳಿಗಳ ಮೂಲಕವೇ ಮಾಡಬೇಕೆನ್ನುವುದು ಸರಿಯಾದ ಮಾರ್ಗವಲ್ಲ. ಈ ವಾಸ್ತವವನ್ನು ಮನಗಂಡ ಅನೇಕ ನಕ್ಸಲ್‌ ಹೋರಾಟಗಾರರು ಈಗ ಮುಖ್ಯವಾಹಿನಿಯ ಭಾಗವಾಗಿ ಪ್ರಜಾಸತ್ತಾತ್ಮಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿರುವ ಉದಾಹರಣೆಗಳು ನಮ್ಮ ಮುಂದಿವೆ. ಈ ವಾಸ್ತವವನ್ನು ಗ್ರಹಿಸಿ, ನಕ್ಸಲರು ತಮ್ಮ ಶಸ್ತ್ರಗಳನ್ನು ತ್ಯಜಿಸಿ ಹೊರಬಂದು, ತಮ್ಮ ಹೋರಾಟಗಳನ್ನು ಕಾನೂನಾತ್ಮಕವಾಗಿ ಮುಂದುವರೆಸಲು ಇದೊಂದು ಅವಕಾಶ ಎಂದು ಶಾಂತಿಗಾಗಿ ನಾಗರಿಕ ವೇದಿಕೆ ಹೇಳಿದೆ.

ವೇದಿಕೆಯ ಪರವಾಗಿ ಎನ್‌. ವೆಂಕಟೇಶ್‌, ಬಿ.ಟಿ ಲಲಿತಾ ನಾಯ್ಕ್, ಡಾ. ಕಲ್ಕುಳಿ ವಿಠ್ಠಲ್‌ ಹೆಗಡೆ, ಪ್ರೊ. ವಿ.ಎಸ್‌. ಶ್ರೀಧರ, ಪ್ರೊ. ನಗರಗೆರೆ ರಮೇಶ್ ಮತ್ತು ತಾರಾ ರಾವ್ ಈ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಸರ್ಕಾರವೂ ಕೂಡ ತಾನು ಹೇಳಿರುವ ರೀತಿಯಲ್ಲಿ ಸರಳವಾಗಿ ಮತ್ತು ಶೀಘ್ರಗತಿಯಲ್ಲಿ ಇತ್ಯರ್ಥವಾಗುವ ʼಶರಣಾಗತಿ ಯೋಜನೆʼಯನ್ನು ಜಾರಿಗೆ ತರುತ್ತದೆ ಎಂದು ನಾವು ನಂಬುತ್ತೇವೆ. ಮುಖ್ಯವಾಹಿನಿ ಸಮಾಜ ಬಯಸಿ ಬರುವವರ ಜೀವನ ನಿರ್ವಹಣೆಗೆ ಬೇಕಾದ ಸೌಲಭ್ಯ ಮತ್ತು ಕಾನೂನು ನೆರವನ್ನು ನೀಡುವುದರ ಮೂಲಕ ಇವರನ್ನು ಘನತೆಯಿಂದ ನಡೆಸಿಕೊಳ್ಳುವುದು ಸರ್ಕಾರದ ಹೊಣೆ. ಇದರ ಮೊದಲ ಹೆಜ್ಜೆಯಾಗಿ, ಈಗಾಗಲೇ  ಹೊರಗೆ ಬಂದಿರುವ ನಕ್ಸಲರಿಗೆ ಬೇಕಾದ ಕಾನೂನಾತ್ಮಕ ನೆರವನ್ನು ಮತ್ತು ಬದುಕಿಗೆ ಆಧಾರವನ್ನು ಒದಗಿಸಬೇಕಾಗಿದೆ. ಆದರೆ, ಈಗ ಅವರ ಪರಿಸ್ಥಿತಿ ಅಯೋಮಯವಾಗಿದೆ. ಹಲವಾರು ಕೋರ್ಟುಗಳಲ್ಲಿ ಹರಡಿಹೋಗಿರುವ ಅಸಂಖ್ಯಾತ  ಕೇಸುಗಳು, ನಿಧಾನಗತಿಯ ವಿಚಾರಣೆ, ಕೊಟ್ಟ ಭರವಸೆಯಂತೆ ನೀಡಬೇಕಾದ ಭೂಮಿ ಹಂಚಿಕೆಯಲ್ಲಿನ ಆಡಳಿತ ನಿರ್ಲಕ್ಷ್ಯ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಂದಾಗಿ ಅವರ ಬದುಕು ಅತಂತ್ರವಾಗಿದೆ. ವಕೀಲರಿಗೆ ಕೊಡಬೇಕಾದ ಹಣ ಇರಲಿ, ದೈನಂದಿನ ಜೀವನ ನಿರ್ವಹಣೆಗೇ ತೊಳಲಾಟ ಉಂಟಾಗಿದೆ. ಸರ್ಕಾರವು ತಕ್ಷಣವೇ ಇವರ ಸಮಸ್ಯೆಗಳಿಗೆ ಪರಿಹಾರ ರೂಪಿಸಬೇಕು; ಅದರ ಮೂಲಕ ಹೊರ ಬರಲು ಇಚ್ಛಿಸುವವರಲ್ಲಿ ಭರವಸೆಯನ್ನು ಮೂಡಿಸಲು ಸಾಧ್ಯ ಎಂಬುದು ನಮ್ಮ ಗ್ರಹಿಕೆಯಾಗಿದೆ” ಎಂದು ವೇದಿಕೆ ಹೇಳಿದೆ.

“ಶಾಂತಿ ಬಯಸುವ ನಾಗರಿಕರಾಗಿ ನಕ್ಸಲ್‌ ಚಳುವಳಿಗಾರರನ್ನು ಮುಖ್ಯವಾಹಿಗೆ ಕರೆತಂದು ಸರ್ಕಾರಕ್ಕೆ ಒಪ್ಪಿಸುವುದಕ್ಕೆ, ಮೇಲೆ ಸೂಚಿಸುರುವ ಸರ್ಕಾರದ ಪರಿಹಾರ ನೆರವಾಗುತ್ತದೆ. ಈ ಭರವಸೆಯ ಮೂಲಕ ಮಾತ್ರ ಮುಖ್ಯವಾಹಿನಿಗೆ ಬರುವವರ ಜತೆ ಮಾತುಕತೆ ನಡೆಸಲು ಬೇಕಾದ ಸನ್ನಿವೇಶ ನಿರ್ಮಾಣವಾಗುತ್ತದೆ; ಶಾಂತಿಯುತ ಪರಿಹಾರಕ್ಕೆ ದಾರಿಮಾಡಿಕೊಡುತ್ತದೆ. ಹೀಗಾಗಿ, ಸರ್ಕಾರವು ಈಗಾಗಲೇ ಹೊರಬಂದಿರುವವರ ಮರುವಸತಿ ಮತ್ತು ಕಾನೂನು ನೆರವಿಗೆ ಅದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ನಾವು ಮನವಿ ಮಾಡುತ್ತೇವೆ” ಎಂದು ಹೇಳಿಯಲ್ಲಿ ಮನವಿ ಮಾಡಲಾಗಿದೆ.

“ಇದೇ ಸಂದರ್ಭದಲ್ಲಿ, ನವೆಂಬರ್‌ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಬೇಕು ಎಂದು ಕೂಡ ಮಾನವ ಹಕ್ಕುಗಳ ಕಾರ್ಯಕರ್ತರಾಗಿ ನಾವು ಆಗ್ರಹಿಸುತ್ತೇವೆ. ನಾಗರಿಕ ಸಮಾಜ ಮುಂದಿಡುವ ಈ ನ್ಯಾಯೋಚಿತ ಬೇಡಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ವಂದಿಸುತ್ತಾರೆ” ಎಂದು ವೇದಿಕೆ ವಿಶ್ವಾಸ ವ್ಯಕ್ತಪಡಿಸಿದೆ.

ಇದನ್ನೂ ಓದಿ; ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...