Homeಕರ್ನಾಟಕನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ 'ಶಾಂತಿಗಾಗಿ ನಾಗರಿಕರ ವೇದಿಕೆ' ಆಗ್ರಹ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ ‘ಶಾಂತಿಗಾಗಿ ನಾಗರಿಕರ ವೇದಿಕೆ’ ಆಗ್ರಹ

- Advertisement -
- Advertisement -

ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸಿದ್ದು, “ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ವೇದಿಕೆ ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯವಾಗಿ, ಈಗಾಗಲೇ ಜಾರಿಯಲ್ಲಿರುವ ನಕ್ಸಲ್ ಶರಣಾಗತಿ ನೀತಿಯನ್ನು ಇನ್ನಷ್ಟು ಸರಳಗೊಳಿಸಿ, ಸಮರ್ಪಕವಾಗಿ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಕೂಡಾ ಸರ್ಕಾರ ನೀಡಿದೆ. ಇದು ಶಾಂತಿ ಸ್ಥಾಪನೆಗೆ ಅತ್ಯಂತ ಅಗತ್ಯವಾದ ಮುನ್ನಡೆ ಎಂದು ನಾವು ಭಾವಿಸುತ್ತೇವೆ. ಮುಖ್ಯಮಂತ್ರಿಗಳ ಈ ಕರೆಗೆ ನಕ್ಸಲ್ ಹೋರಾಟಗಾರರು ಇತ್ಯಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ನಾಗರಿಕ ಸಮಾಜ ಆಶಿಸುತ್ತದೆ. ಸಂವಿಧಾನಾತ್ಮಕ, ಪ್ರಜಾ ತಾಂತ್ರಿಕ ಹೋರಾಟಗಳು ಆರೋಗ್ಯಕರ ಸಮಾಜಕ್ಕೆ ಮುಖ್ಯ. ಆದರೆ, ಅದನ್ನು ಹಿಂಸಾತ್ಮಕ ಚಳುವಳಿಗಳ ಮೂಲಕವೇ ಮಾಡಬೇಕೆನ್ನುವುದು ಸರಿಯಾದ ಮಾರ್ಗವಲ್ಲ. ಈ ವಾಸ್ತವವನ್ನು ಮನಗಂಡ ಅನೇಕ ನಕ್ಸಲ್‌ ಹೋರಾಟಗಾರರು ಈಗ ಮುಖ್ಯವಾಹಿನಿಯ ಭಾಗವಾಗಿ ಪ್ರಜಾಸತ್ತಾತ್ಮಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿರುವ ಉದಾಹರಣೆಗಳು ನಮ್ಮ ಮುಂದಿವೆ. ಈ ವಾಸ್ತವವನ್ನು ಗ್ರಹಿಸಿ, ನಕ್ಸಲರು ತಮ್ಮ ಶಸ್ತ್ರಗಳನ್ನು ತ್ಯಜಿಸಿ ಹೊರಬಂದು, ತಮ್ಮ ಹೋರಾಟಗಳನ್ನು ಕಾನೂನಾತ್ಮಕವಾಗಿ ಮುಂದುವರೆಸಲು ಇದೊಂದು ಅವಕಾಶ ಎಂದು ಶಾಂತಿಗಾಗಿ ನಾಗರಿಕ ವೇದಿಕೆ ಹೇಳಿದೆ.

ವೇದಿಕೆಯ ಪರವಾಗಿ ಎನ್‌. ವೆಂಕಟೇಶ್‌, ಬಿ.ಟಿ ಲಲಿತಾ ನಾಯ್ಕ್, ಡಾ. ಕಲ್ಕುಳಿ ವಿಠ್ಠಲ್‌ ಹೆಗಡೆ, ಪ್ರೊ. ವಿ.ಎಸ್‌. ಶ್ರೀಧರ, ಪ್ರೊ. ನಗರಗೆರೆ ರಮೇಶ್ ಮತ್ತು ತಾರಾ ರಾವ್ ಈ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಸರ್ಕಾರವೂ ಕೂಡ ತಾನು ಹೇಳಿರುವ ರೀತಿಯಲ್ಲಿ ಸರಳವಾಗಿ ಮತ್ತು ಶೀಘ್ರಗತಿಯಲ್ಲಿ ಇತ್ಯರ್ಥವಾಗುವ ʼಶರಣಾಗತಿ ಯೋಜನೆʼಯನ್ನು ಜಾರಿಗೆ ತರುತ್ತದೆ ಎಂದು ನಾವು ನಂಬುತ್ತೇವೆ. ಮುಖ್ಯವಾಹಿನಿ ಸಮಾಜ ಬಯಸಿ ಬರುವವರ ಜೀವನ ನಿರ್ವಹಣೆಗೆ ಬೇಕಾದ ಸೌಲಭ್ಯ ಮತ್ತು ಕಾನೂನು ನೆರವನ್ನು ನೀಡುವುದರ ಮೂಲಕ ಇವರನ್ನು ಘನತೆಯಿಂದ ನಡೆಸಿಕೊಳ್ಳುವುದು ಸರ್ಕಾರದ ಹೊಣೆ. ಇದರ ಮೊದಲ ಹೆಜ್ಜೆಯಾಗಿ, ಈಗಾಗಲೇ  ಹೊರಗೆ ಬಂದಿರುವ ನಕ್ಸಲರಿಗೆ ಬೇಕಾದ ಕಾನೂನಾತ್ಮಕ ನೆರವನ್ನು ಮತ್ತು ಬದುಕಿಗೆ ಆಧಾರವನ್ನು ಒದಗಿಸಬೇಕಾಗಿದೆ. ಆದರೆ, ಈಗ ಅವರ ಪರಿಸ್ಥಿತಿ ಅಯೋಮಯವಾಗಿದೆ. ಹಲವಾರು ಕೋರ್ಟುಗಳಲ್ಲಿ ಹರಡಿಹೋಗಿರುವ ಅಸಂಖ್ಯಾತ  ಕೇಸುಗಳು, ನಿಧಾನಗತಿಯ ವಿಚಾರಣೆ, ಕೊಟ್ಟ ಭರವಸೆಯಂತೆ ನೀಡಬೇಕಾದ ಭೂಮಿ ಹಂಚಿಕೆಯಲ್ಲಿನ ಆಡಳಿತ ನಿರ್ಲಕ್ಷ್ಯ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಂದಾಗಿ ಅವರ ಬದುಕು ಅತಂತ್ರವಾಗಿದೆ. ವಕೀಲರಿಗೆ ಕೊಡಬೇಕಾದ ಹಣ ಇರಲಿ, ದೈನಂದಿನ ಜೀವನ ನಿರ್ವಹಣೆಗೇ ತೊಳಲಾಟ ಉಂಟಾಗಿದೆ. ಸರ್ಕಾರವು ತಕ್ಷಣವೇ ಇವರ ಸಮಸ್ಯೆಗಳಿಗೆ ಪರಿಹಾರ ರೂಪಿಸಬೇಕು; ಅದರ ಮೂಲಕ ಹೊರ ಬರಲು ಇಚ್ಛಿಸುವವರಲ್ಲಿ ಭರವಸೆಯನ್ನು ಮೂಡಿಸಲು ಸಾಧ್ಯ ಎಂಬುದು ನಮ್ಮ ಗ್ರಹಿಕೆಯಾಗಿದೆ” ಎಂದು ವೇದಿಕೆ ಹೇಳಿದೆ.

“ಶಾಂತಿ ಬಯಸುವ ನಾಗರಿಕರಾಗಿ ನಕ್ಸಲ್‌ ಚಳುವಳಿಗಾರರನ್ನು ಮುಖ್ಯವಾಹಿಗೆ ಕರೆತಂದು ಸರ್ಕಾರಕ್ಕೆ ಒಪ್ಪಿಸುವುದಕ್ಕೆ, ಮೇಲೆ ಸೂಚಿಸುರುವ ಸರ್ಕಾರದ ಪರಿಹಾರ ನೆರವಾಗುತ್ತದೆ. ಈ ಭರವಸೆಯ ಮೂಲಕ ಮಾತ್ರ ಮುಖ್ಯವಾಹಿನಿಗೆ ಬರುವವರ ಜತೆ ಮಾತುಕತೆ ನಡೆಸಲು ಬೇಕಾದ ಸನ್ನಿವೇಶ ನಿರ್ಮಾಣವಾಗುತ್ತದೆ; ಶಾಂತಿಯುತ ಪರಿಹಾರಕ್ಕೆ ದಾರಿಮಾಡಿಕೊಡುತ್ತದೆ. ಹೀಗಾಗಿ, ಸರ್ಕಾರವು ಈಗಾಗಲೇ ಹೊರಬಂದಿರುವವರ ಮರುವಸತಿ ಮತ್ತು ಕಾನೂನು ನೆರವಿಗೆ ಅದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ನಾವು ಮನವಿ ಮಾಡುತ್ತೇವೆ” ಎಂದು ಹೇಳಿಯಲ್ಲಿ ಮನವಿ ಮಾಡಲಾಗಿದೆ.

“ಇದೇ ಸಂದರ್ಭದಲ್ಲಿ, ನವೆಂಬರ್‌ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಬೇಕು ಎಂದು ಕೂಡ ಮಾನವ ಹಕ್ಕುಗಳ ಕಾರ್ಯಕರ್ತರಾಗಿ ನಾವು ಆಗ್ರಹಿಸುತ್ತೇವೆ. ನಾಗರಿಕ ಸಮಾಜ ಮುಂದಿಡುವ ಈ ನ್ಯಾಯೋಚಿತ ಬೇಡಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ವಂದಿಸುತ್ತಾರೆ” ಎಂದು ವೇದಿಕೆ ವಿಶ್ವಾಸ ವ್ಯಕ್ತಪಡಿಸಿದೆ.

ಇದನ್ನೂ ಓದಿ; ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...