Homeಕರ್ನಾಟಕನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ 'ಶಾಂತಿಗಾಗಿ ನಾಗರಿಕರ ವೇದಿಕೆ' ಆಗ್ರಹ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ ‘ಶಾಂತಿಗಾಗಿ ನಾಗರಿಕರ ವೇದಿಕೆ’ ಆಗ್ರಹ

- Advertisement -
- Advertisement -

ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸಿದ್ದು, “ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ವೇದಿಕೆ ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯವಾಗಿ, ಈಗಾಗಲೇ ಜಾರಿಯಲ್ಲಿರುವ ನಕ್ಸಲ್ ಶರಣಾಗತಿ ನೀತಿಯನ್ನು ಇನ್ನಷ್ಟು ಸರಳಗೊಳಿಸಿ, ಸಮರ್ಪಕವಾಗಿ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಕೂಡಾ ಸರ್ಕಾರ ನೀಡಿದೆ. ಇದು ಶಾಂತಿ ಸ್ಥಾಪನೆಗೆ ಅತ್ಯಂತ ಅಗತ್ಯವಾದ ಮುನ್ನಡೆ ಎಂದು ನಾವು ಭಾವಿಸುತ್ತೇವೆ. ಮುಖ್ಯಮಂತ್ರಿಗಳ ಈ ಕರೆಗೆ ನಕ್ಸಲ್ ಹೋರಾಟಗಾರರು ಇತ್ಯಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ನಾಗರಿಕ ಸಮಾಜ ಆಶಿಸುತ್ತದೆ. ಸಂವಿಧಾನಾತ್ಮಕ, ಪ್ರಜಾ ತಾಂತ್ರಿಕ ಹೋರಾಟಗಳು ಆರೋಗ್ಯಕರ ಸಮಾಜಕ್ಕೆ ಮುಖ್ಯ. ಆದರೆ, ಅದನ್ನು ಹಿಂಸಾತ್ಮಕ ಚಳುವಳಿಗಳ ಮೂಲಕವೇ ಮಾಡಬೇಕೆನ್ನುವುದು ಸರಿಯಾದ ಮಾರ್ಗವಲ್ಲ. ಈ ವಾಸ್ತವವನ್ನು ಮನಗಂಡ ಅನೇಕ ನಕ್ಸಲ್‌ ಹೋರಾಟಗಾರರು ಈಗ ಮುಖ್ಯವಾಹಿನಿಯ ಭಾಗವಾಗಿ ಪ್ರಜಾಸತ್ತಾತ್ಮಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿರುವ ಉದಾಹರಣೆಗಳು ನಮ್ಮ ಮುಂದಿವೆ. ಈ ವಾಸ್ತವವನ್ನು ಗ್ರಹಿಸಿ, ನಕ್ಸಲರು ತಮ್ಮ ಶಸ್ತ್ರಗಳನ್ನು ತ್ಯಜಿಸಿ ಹೊರಬಂದು, ತಮ್ಮ ಹೋರಾಟಗಳನ್ನು ಕಾನೂನಾತ್ಮಕವಾಗಿ ಮುಂದುವರೆಸಲು ಇದೊಂದು ಅವಕಾಶ ಎಂದು ಶಾಂತಿಗಾಗಿ ನಾಗರಿಕ ವೇದಿಕೆ ಹೇಳಿದೆ.

ವೇದಿಕೆಯ ಪರವಾಗಿ ಎನ್‌. ವೆಂಕಟೇಶ್‌, ಬಿ.ಟಿ ಲಲಿತಾ ನಾಯ್ಕ್, ಡಾ. ಕಲ್ಕುಳಿ ವಿಠ್ಠಲ್‌ ಹೆಗಡೆ, ಪ್ರೊ. ವಿ.ಎಸ್‌. ಶ್ರೀಧರ, ಪ್ರೊ. ನಗರಗೆರೆ ರಮೇಶ್ ಮತ್ತು ತಾರಾ ರಾವ್ ಈ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಸರ್ಕಾರವೂ ಕೂಡ ತಾನು ಹೇಳಿರುವ ರೀತಿಯಲ್ಲಿ ಸರಳವಾಗಿ ಮತ್ತು ಶೀಘ್ರಗತಿಯಲ್ಲಿ ಇತ್ಯರ್ಥವಾಗುವ ʼಶರಣಾಗತಿ ಯೋಜನೆʼಯನ್ನು ಜಾರಿಗೆ ತರುತ್ತದೆ ಎಂದು ನಾವು ನಂಬುತ್ತೇವೆ. ಮುಖ್ಯವಾಹಿನಿ ಸಮಾಜ ಬಯಸಿ ಬರುವವರ ಜೀವನ ನಿರ್ವಹಣೆಗೆ ಬೇಕಾದ ಸೌಲಭ್ಯ ಮತ್ತು ಕಾನೂನು ನೆರವನ್ನು ನೀಡುವುದರ ಮೂಲಕ ಇವರನ್ನು ಘನತೆಯಿಂದ ನಡೆಸಿಕೊಳ್ಳುವುದು ಸರ್ಕಾರದ ಹೊಣೆ. ಇದರ ಮೊದಲ ಹೆಜ್ಜೆಯಾಗಿ, ಈಗಾಗಲೇ  ಹೊರಗೆ ಬಂದಿರುವ ನಕ್ಸಲರಿಗೆ ಬೇಕಾದ ಕಾನೂನಾತ್ಮಕ ನೆರವನ್ನು ಮತ್ತು ಬದುಕಿಗೆ ಆಧಾರವನ್ನು ಒದಗಿಸಬೇಕಾಗಿದೆ. ಆದರೆ, ಈಗ ಅವರ ಪರಿಸ್ಥಿತಿ ಅಯೋಮಯವಾಗಿದೆ. ಹಲವಾರು ಕೋರ್ಟುಗಳಲ್ಲಿ ಹರಡಿಹೋಗಿರುವ ಅಸಂಖ್ಯಾತ  ಕೇಸುಗಳು, ನಿಧಾನಗತಿಯ ವಿಚಾರಣೆ, ಕೊಟ್ಟ ಭರವಸೆಯಂತೆ ನೀಡಬೇಕಾದ ಭೂಮಿ ಹಂಚಿಕೆಯಲ್ಲಿನ ಆಡಳಿತ ನಿರ್ಲಕ್ಷ್ಯ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಂದಾಗಿ ಅವರ ಬದುಕು ಅತಂತ್ರವಾಗಿದೆ. ವಕೀಲರಿಗೆ ಕೊಡಬೇಕಾದ ಹಣ ಇರಲಿ, ದೈನಂದಿನ ಜೀವನ ನಿರ್ವಹಣೆಗೇ ತೊಳಲಾಟ ಉಂಟಾಗಿದೆ. ಸರ್ಕಾರವು ತಕ್ಷಣವೇ ಇವರ ಸಮಸ್ಯೆಗಳಿಗೆ ಪರಿಹಾರ ರೂಪಿಸಬೇಕು; ಅದರ ಮೂಲಕ ಹೊರ ಬರಲು ಇಚ್ಛಿಸುವವರಲ್ಲಿ ಭರವಸೆಯನ್ನು ಮೂಡಿಸಲು ಸಾಧ್ಯ ಎಂಬುದು ನಮ್ಮ ಗ್ರಹಿಕೆಯಾಗಿದೆ” ಎಂದು ವೇದಿಕೆ ಹೇಳಿದೆ.

“ಶಾಂತಿ ಬಯಸುವ ನಾಗರಿಕರಾಗಿ ನಕ್ಸಲ್‌ ಚಳುವಳಿಗಾರರನ್ನು ಮುಖ್ಯವಾಹಿಗೆ ಕರೆತಂದು ಸರ್ಕಾರಕ್ಕೆ ಒಪ್ಪಿಸುವುದಕ್ಕೆ, ಮೇಲೆ ಸೂಚಿಸುರುವ ಸರ್ಕಾರದ ಪರಿಹಾರ ನೆರವಾಗುತ್ತದೆ. ಈ ಭರವಸೆಯ ಮೂಲಕ ಮಾತ್ರ ಮುಖ್ಯವಾಹಿನಿಗೆ ಬರುವವರ ಜತೆ ಮಾತುಕತೆ ನಡೆಸಲು ಬೇಕಾದ ಸನ್ನಿವೇಶ ನಿರ್ಮಾಣವಾಗುತ್ತದೆ; ಶಾಂತಿಯುತ ಪರಿಹಾರಕ್ಕೆ ದಾರಿಮಾಡಿಕೊಡುತ್ತದೆ. ಹೀಗಾಗಿ, ಸರ್ಕಾರವು ಈಗಾಗಲೇ ಹೊರಬಂದಿರುವವರ ಮರುವಸತಿ ಮತ್ತು ಕಾನೂನು ನೆರವಿಗೆ ಅದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ನಾವು ಮನವಿ ಮಾಡುತ್ತೇವೆ” ಎಂದು ಹೇಳಿಯಲ್ಲಿ ಮನವಿ ಮಾಡಲಾಗಿದೆ.

“ಇದೇ ಸಂದರ್ಭದಲ್ಲಿ, ನವೆಂಬರ್‌ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಬೇಕು ಎಂದು ಕೂಡ ಮಾನವ ಹಕ್ಕುಗಳ ಕಾರ್ಯಕರ್ತರಾಗಿ ನಾವು ಆಗ್ರಹಿಸುತ್ತೇವೆ. ನಾಗರಿಕ ಸಮಾಜ ಮುಂದಿಡುವ ಈ ನ್ಯಾಯೋಚಿತ ಬೇಡಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ವಂದಿಸುತ್ತಾರೆ” ಎಂದು ವೇದಿಕೆ ವಿಶ್ವಾಸ ವ್ಯಕ್ತಪಡಿಸಿದೆ.

ಇದನ್ನೂ ಓದಿ; ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...