Homeಕರ್ನಾಟಕನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ 'ಶಾಂತಿಗಾಗಿ ನಾಗರಿಕರ ವೇದಿಕೆ' ಆಗ್ರಹ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ ‘ಶಾಂತಿಗಾಗಿ ನಾಗರಿಕರ ವೇದಿಕೆ’ ಆಗ್ರಹ

- Advertisement -
- Advertisement -

ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸಿದ್ದು, “ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ವೇದಿಕೆ ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯವಾಗಿ, ಈಗಾಗಲೇ ಜಾರಿಯಲ್ಲಿರುವ ನಕ್ಸಲ್ ಶರಣಾಗತಿ ನೀತಿಯನ್ನು ಇನ್ನಷ್ಟು ಸರಳಗೊಳಿಸಿ, ಸಮರ್ಪಕವಾಗಿ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಕೂಡಾ ಸರ್ಕಾರ ನೀಡಿದೆ. ಇದು ಶಾಂತಿ ಸ್ಥಾಪನೆಗೆ ಅತ್ಯಂತ ಅಗತ್ಯವಾದ ಮುನ್ನಡೆ ಎಂದು ನಾವು ಭಾವಿಸುತ್ತೇವೆ. ಮುಖ್ಯಮಂತ್ರಿಗಳ ಈ ಕರೆಗೆ ನಕ್ಸಲ್ ಹೋರಾಟಗಾರರು ಇತ್ಯಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ನಾಗರಿಕ ಸಮಾಜ ಆಶಿಸುತ್ತದೆ. ಸಂವಿಧಾನಾತ್ಮಕ, ಪ್ರಜಾ ತಾಂತ್ರಿಕ ಹೋರಾಟಗಳು ಆರೋಗ್ಯಕರ ಸಮಾಜಕ್ಕೆ ಮುಖ್ಯ. ಆದರೆ, ಅದನ್ನು ಹಿಂಸಾತ್ಮಕ ಚಳುವಳಿಗಳ ಮೂಲಕವೇ ಮಾಡಬೇಕೆನ್ನುವುದು ಸರಿಯಾದ ಮಾರ್ಗವಲ್ಲ. ಈ ವಾಸ್ತವವನ್ನು ಮನಗಂಡ ಅನೇಕ ನಕ್ಸಲ್‌ ಹೋರಾಟಗಾರರು ಈಗ ಮುಖ್ಯವಾಹಿನಿಯ ಭಾಗವಾಗಿ ಪ್ರಜಾಸತ್ತಾತ್ಮಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿರುವ ಉದಾಹರಣೆಗಳು ನಮ್ಮ ಮುಂದಿವೆ. ಈ ವಾಸ್ತವವನ್ನು ಗ್ರಹಿಸಿ, ನಕ್ಸಲರು ತಮ್ಮ ಶಸ್ತ್ರಗಳನ್ನು ತ್ಯಜಿಸಿ ಹೊರಬಂದು, ತಮ್ಮ ಹೋರಾಟಗಳನ್ನು ಕಾನೂನಾತ್ಮಕವಾಗಿ ಮುಂದುವರೆಸಲು ಇದೊಂದು ಅವಕಾಶ ಎಂದು ಶಾಂತಿಗಾಗಿ ನಾಗರಿಕ ವೇದಿಕೆ ಹೇಳಿದೆ.

ವೇದಿಕೆಯ ಪರವಾಗಿ ಎನ್‌. ವೆಂಕಟೇಶ್‌, ಬಿ.ಟಿ ಲಲಿತಾ ನಾಯ್ಕ್, ಡಾ. ಕಲ್ಕುಳಿ ವಿಠ್ಠಲ್‌ ಹೆಗಡೆ, ಪ್ರೊ. ವಿ.ಎಸ್‌. ಶ್ರೀಧರ, ಪ್ರೊ. ನಗರಗೆರೆ ರಮೇಶ್ ಮತ್ತು ತಾರಾ ರಾವ್ ಈ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಸರ್ಕಾರವೂ ಕೂಡ ತಾನು ಹೇಳಿರುವ ರೀತಿಯಲ್ಲಿ ಸರಳವಾಗಿ ಮತ್ತು ಶೀಘ್ರಗತಿಯಲ್ಲಿ ಇತ್ಯರ್ಥವಾಗುವ ʼಶರಣಾಗತಿ ಯೋಜನೆʼಯನ್ನು ಜಾರಿಗೆ ತರುತ್ತದೆ ಎಂದು ನಾವು ನಂಬುತ್ತೇವೆ. ಮುಖ್ಯವಾಹಿನಿ ಸಮಾಜ ಬಯಸಿ ಬರುವವರ ಜೀವನ ನಿರ್ವಹಣೆಗೆ ಬೇಕಾದ ಸೌಲಭ್ಯ ಮತ್ತು ಕಾನೂನು ನೆರವನ್ನು ನೀಡುವುದರ ಮೂಲಕ ಇವರನ್ನು ಘನತೆಯಿಂದ ನಡೆಸಿಕೊಳ್ಳುವುದು ಸರ್ಕಾರದ ಹೊಣೆ. ಇದರ ಮೊದಲ ಹೆಜ್ಜೆಯಾಗಿ, ಈಗಾಗಲೇ  ಹೊರಗೆ ಬಂದಿರುವ ನಕ್ಸಲರಿಗೆ ಬೇಕಾದ ಕಾನೂನಾತ್ಮಕ ನೆರವನ್ನು ಮತ್ತು ಬದುಕಿಗೆ ಆಧಾರವನ್ನು ಒದಗಿಸಬೇಕಾಗಿದೆ. ಆದರೆ, ಈಗ ಅವರ ಪರಿಸ್ಥಿತಿ ಅಯೋಮಯವಾಗಿದೆ. ಹಲವಾರು ಕೋರ್ಟುಗಳಲ್ಲಿ ಹರಡಿಹೋಗಿರುವ ಅಸಂಖ್ಯಾತ  ಕೇಸುಗಳು, ನಿಧಾನಗತಿಯ ವಿಚಾರಣೆ, ಕೊಟ್ಟ ಭರವಸೆಯಂತೆ ನೀಡಬೇಕಾದ ಭೂಮಿ ಹಂಚಿಕೆಯಲ್ಲಿನ ಆಡಳಿತ ನಿರ್ಲಕ್ಷ್ಯ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಂದಾಗಿ ಅವರ ಬದುಕು ಅತಂತ್ರವಾಗಿದೆ. ವಕೀಲರಿಗೆ ಕೊಡಬೇಕಾದ ಹಣ ಇರಲಿ, ದೈನಂದಿನ ಜೀವನ ನಿರ್ವಹಣೆಗೇ ತೊಳಲಾಟ ಉಂಟಾಗಿದೆ. ಸರ್ಕಾರವು ತಕ್ಷಣವೇ ಇವರ ಸಮಸ್ಯೆಗಳಿಗೆ ಪರಿಹಾರ ರೂಪಿಸಬೇಕು; ಅದರ ಮೂಲಕ ಹೊರ ಬರಲು ಇಚ್ಛಿಸುವವರಲ್ಲಿ ಭರವಸೆಯನ್ನು ಮೂಡಿಸಲು ಸಾಧ್ಯ ಎಂಬುದು ನಮ್ಮ ಗ್ರಹಿಕೆಯಾಗಿದೆ” ಎಂದು ವೇದಿಕೆ ಹೇಳಿದೆ.

“ಶಾಂತಿ ಬಯಸುವ ನಾಗರಿಕರಾಗಿ ನಕ್ಸಲ್‌ ಚಳುವಳಿಗಾರರನ್ನು ಮುಖ್ಯವಾಹಿಗೆ ಕರೆತಂದು ಸರ್ಕಾರಕ್ಕೆ ಒಪ್ಪಿಸುವುದಕ್ಕೆ, ಮೇಲೆ ಸೂಚಿಸುರುವ ಸರ್ಕಾರದ ಪರಿಹಾರ ನೆರವಾಗುತ್ತದೆ. ಈ ಭರವಸೆಯ ಮೂಲಕ ಮಾತ್ರ ಮುಖ್ಯವಾಹಿನಿಗೆ ಬರುವವರ ಜತೆ ಮಾತುಕತೆ ನಡೆಸಲು ಬೇಕಾದ ಸನ್ನಿವೇಶ ನಿರ್ಮಾಣವಾಗುತ್ತದೆ; ಶಾಂತಿಯುತ ಪರಿಹಾರಕ್ಕೆ ದಾರಿಮಾಡಿಕೊಡುತ್ತದೆ. ಹೀಗಾಗಿ, ಸರ್ಕಾರವು ಈಗಾಗಲೇ ಹೊರಬಂದಿರುವವರ ಮರುವಸತಿ ಮತ್ತು ಕಾನೂನು ನೆರವಿಗೆ ಅದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ನಾವು ಮನವಿ ಮಾಡುತ್ತೇವೆ” ಎಂದು ಹೇಳಿಯಲ್ಲಿ ಮನವಿ ಮಾಡಲಾಗಿದೆ.

“ಇದೇ ಸಂದರ್ಭದಲ್ಲಿ, ನವೆಂಬರ್‌ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಬೇಕು ಎಂದು ಕೂಡ ಮಾನವ ಹಕ್ಕುಗಳ ಕಾರ್ಯಕರ್ತರಾಗಿ ನಾವು ಆಗ್ರಹಿಸುತ್ತೇವೆ. ನಾಗರಿಕ ಸಮಾಜ ಮುಂದಿಡುವ ಈ ನ್ಯಾಯೋಚಿತ ಬೇಡಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ವಂದಿಸುತ್ತಾರೆ” ಎಂದು ವೇದಿಕೆ ವಿಶ್ವಾಸ ವ್ಯಕ್ತಪಡಿಸಿದೆ.

ಇದನ್ನೂ ಓದಿ; ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...