Homeಮುಖಪುಟಹರಿಯಾಣದಲ್ಲಿ ಪ್ರದೇಶ ಸಮಿತಿ ಉಸ್ತುವಾರಿ ನಕ್ಸಲ್ ಸದಸ್ಯನ ಬಂಧನ

ಹರಿಯಾಣದಲ್ಲಿ ಪ್ರದೇಶ ಸಮಿತಿ ಉಸ್ತುವಾರಿ ನಕ್ಸಲ್ ಸದಸ್ಯನ ಬಂಧನ

- Advertisement -
- Advertisement -

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಹರಿಯಾಣದ ಪ್ರಮುಖ ನಕ್ಸಲ್ ಸದಸ್ಯನನ್ನು ಬಂಧಿಸಿದೆ. ಬಂಧಿತ ನಕ್ಸಲನು  “ದೇಶ ವಿರೋಧಿ ಚಟುವಟಿಕೆಗಳನ್ನು ಉತ್ತೇಜಿಸಲು ಹರಿಯಾಣದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದ” ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಛತ್ತೀಸ್‌ಗಢದ ನಕ್ಸಲ್ ಪ್ರಾಬಲ್ಯ ಬಸ್ತಾರ್ ಜಿಲ್ಲೆಯ ಮೂಲದ ಮತ್ತು ಪ್ರಸ್ತುತ ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ನಕ್ಸಲ್ ಸಂಘಟನೆ ವಿಸ್ತರಿಸಲು ವಾಸಿಸುತ್ತಿರುವ ಪ್ರಿಯಾಂಶು ಕಶ್ಯಪ್ ಅವರನ್ನು ಹರಿಯಾಣ ಪೊಲೀಸರು ನೀಡಿದ ಮಾಹಿತಿಯ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಎನ್‌ಐಎ  ತಿಳಿಸಿದೆ.

ಎನ್‌ಐಎ ತಂಡವು ಆರೋಪಿಯಿಂದ ಸಿಮ್ ಕಾರ್ಡ್ ಹೊಂದಿರುವ ಮೊಬೈಲ್ ಫೋನ್, ಒಂದು ಟ್ಯಾಬ್ಲೆಟ್, ಎರಡು ಮೆಮೊರಿ ಕಾರ್ಡ್‌ಗಳು ಮತ್ತು ನಕ್ಸಲ್ ಸಂಘಟನೆ ಸಿಪಿಐ (ಮಾವೋವಾದಿ) ಗೆ ಸಂಬಂಧಿಸಿದ  ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಅದು ಹೇಳಿದೆ.

ಬಂಧಿತ ನಕ್ಸಲ್‌ನನ್ನು ಕಶ್ಯಪ್ ನಿಷೇಧಿತ  ಸಂಘಟನೆ ಸಿಪಿಐ (ಮಾವೋವಾದಿ) ಸದಸ್ಯನೆಂದು ಆರೋಪಿಸಲಾಗಿದೆ ಮತ್ತು ರೋಹ್ಟಕ್‌ನಲ್ಲಿ ಅದರ ಪ್ರದೇಶ ಸಮಿತಿಯ ಉಸ್ತುವಾರಿ ವಹಿಸಿಕೊಂಡು ನಕ್ಸಲ್ ಚಟುವಟಿಕೆಗಳನ್ನು ಉತ್ತೇಜಿಸಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದರು ಎಂದು NIA ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಉತ್ತರಪ್ರದೇಶ, ಉತ್ತರಾಖಂಡ, ದೆಹಲಿ, ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶಗಳನ್ನು ಒಳಗೊಂಡಿರುವ ಉತ್ತರ ಪ್ರಾದೇಶಿಕ ಬ್ಯೂರೋದಲ್ಲಿ (NRB) ಸಿಪಿಐ (ಮಾವೋವಾದಿ) ಪಕ್ಷದ ನಾಯಕರು ತಮ್ಮ ಪ್ರಭಾವವನ್ನು ಮತ್ತೆ ಬಲಪಡಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಅದು ಹೇಳಿದೆ.

ಇಲ್ಲಿ ತಮ್ಮ ಸಂಘಟನೆಯ ಜಾಲವನ್ನು ವಿಸ್ತರಿಸಲು ಹಲವಾರು ನಕ್ಸಲ್ ಭೂಗತ ಕಾರ್ಯಕರ್ತರು (OGWs) ಸೇರಿದ್ದಾರೆ. ಅವರು ಉತ್ತರ ರಾಜ್ಯಗಳಲ್ಲಿ ಕಾರ್ಯಕರ್ತರನ್ನು ನೇಮಿಸಿಕೊಳ್ಳುವ ಮತ್ತು ಸಂಘಟನೆಯನ್ನು ಬಲಪಡಿಸುವಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು NIA ಹೇಳಿದೆ.

ಭಾರತ ಸರ್ಕಾರದ ವಿರುದ್ಧ ಯುದ್ಧ ನಡೆಸುವ ನಕ್ಸಲರ ಪ್ರಯತ್ನಗಳನ್ನು ಸಕಾರಗೊಳಿಸಲು ಇಲ್ಲಿರುವ ಅನೇಕ ಮುಂಚೂಣಿ ಸಂಘಟನೆಗಳು ಮತ್ತು ವಿದ್ಯಾರ್ಥಿ ಘಟಕಗಳು ಬೆಂಬಲಿಸುತ್ತಿವೆ ಎಂದು ಎನ್‌ಐಎ ಹೇಳಿಕೊಂಡಿದೆ.

ನಕ್ಸಲ್ ಸಂಘಟನೆಯ ಭೂಗತ ಕಾರ್ಯಕರ್ತರು ಸಿಪಿಐ (ಮಾವೋವಾದಿ) ಪಕ್ಷದ ಹಿರಿಯ ನಾಯಕರೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ. ಈ ಭೂಗತ ಕಾರ್ಯಕರ್ತರು ನಕ್ಸಲ್ ಸಂಘಟನೆಯ ಕಾರ್ಯಸೂಚಿಯನ್ನು ಮುಂದುವರಿಸಲು ಕಾರ್ಯನಿರತರಾಗಿದ್ದಾರೆ ಎಂದು NIA ಹೇಳಿದೆ.

ಈ ನಕ್ಸಲ್ ಕಾರ್ಯಕರ್ತರಿಗೆ ಸಿಪಿಐ (ಮಾವೋವಾದಿ)ಯ ಪೂರ್ವ ಪ್ರಾದೇಶಿಕ ಬ್ಯೂರೋದಿಂದ, ವಿಶೇಷವಾಗಿ ಜಾರ್ಖಂಡ್‌ನಿಂದ ಹಣವನ್ನು ಒದಗಿಸಲಾಗುತ್ತಿತ್ತು ಎಂದು NIA ತನಿಖೆಗಳು ಬಹಿರಂಗಪಡಿಸಿವೆ.

ಈ ಹಿಂದೆ ಭಯೋತ್ಪಾದನಾ ನಿಗ್ರಹ ಸಂಸ್ಥೆಯು ಹರಿಯಾಣ ಮತ್ತು ಪಂಜಾಬ್ ರಾಜ್ಯ ಸಂಘಟನಾ ಸಮಿತಿ (ಎಸ್‌ಒಸಿ)ಯ ಉಸ್ತುವಾರಿ ಅಜಯ್ ಸಿಂಘಾಲ್ ಅಲಿಯಾಸ್ ಅಮನ್ ಮತ್ತು ಸಿಪಿಐ (ಮಾವೋವಾದಿ) ಸದಸ್ಯ ವಿಶಾಲ್ ಸಿಂಗ್ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಿತ್ತು.

ಲಕ್ಷದ್ವೀಪದ ಬಿತ್ರಾ ದ್ವೀಪದಲ್ಲಿ ಭೂಸ್ವಾಧೀನ ಪ್ರಸ್ತಾವನೆ: ‘ದುರುದ್ದೇಶಪೂರಿತ’ ಯೋಜನೆ ಎಂದ ಲಕ್ಷದ್ವೀಪದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...