Homeಕರ್ನಾಟಕನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

- Advertisement -
- Advertisement -

ಬೆಂಗಳೂರು: ಉಡುಪಿಯ ಕಬ್ಬಿನಾಲೆ ಸಮೀಪ, ನಕಲಿ ಎನ್ ಕೌಂಟರ್ ಮೂಲಕ ವಿಕ್ರಂ ಗೌಡ ನನ್ನು ಹತ್ಯೆ ಮಾಡಿರುವ ಪೋಲಿಸ್ ಇಲಾಖೆಯ ಕ್ರಮವನ್ನು   ಸಿಪಿಐ (ಎಂಎಲ್) ಮಾಸ್ ಲೈನ್ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಡಿ.ಹೆಚ್.ಪೂಜಾರ ರಾಜ್ಯ ಕಾರ್ಯದರ್ಶಿ ಹೇಳಿದ್ದಾರೆ.

ನಮ್ಮ ಸಿಪಿಐಎಂಎಲ್ ಮಾಸ್ ಲೈನ್ ಪಕ್ಷವು ನಕ್ಸಲ್ ರಾಜಕೀಯ ಸಿದ್ಧಾಂತವನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ  ಪ್ರಜಾತಾಂತ್ರಿಕ ಹಕ್ಕುಗಳನ್ನು ದಮನ  ಮಾಡುವ  ಮತ್ತು ಸರ್ಕಾದ   ಸಂವಿಧಾನ ವಿರೋಧಿ  ಕೃತ್ಯಗಳನ್ನು ಸಹಿಸಿಕೊಳ್ಳುವುದಿಲ್ಲ. ಸಾಮಾಜಿಕ ನ್ಯಾಯ ಮತ್ತು ಸಮಾಜವಾದಿ ಸಿದ್ದಾಂತದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಿಂದ ನಡೆದ ಈ ಹತ್ಯೆ ಕೆಲವರಿಗೆ ತೀವ್ರ  ಆಘಾತವಾಗಿದೆ ಎಂದು ಪಕ್ಷದ ವತಿಯಿಂದ ಹೊರಡಿಸಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ವಾರದ ಹಿಂದೆ ಬಂಧಿಸಿ ಕೊಲೆ ಮಾಡಲಾಗಿದೆ ಎಂದು ರಾಜ್ಯದ ಅನೇಕ ಪ್ರಗತಿಪರರು ಅನುಮಾನ ವ್ಯಕ್ತಪಡಿಸಿದ್ದಾರೆ. ಎನ್ ಕೌಂಟರ್ ಕಾರ್ಯ ನಡೆದಿದ್ದರೆ, ಪೋಲಿಸ್ ರಿಗೆ ಗಾಯಗಳಾಗಬೇಕಿತ್ತು. ಸತತ ಒಂದು ವಾರದ ಬೆಳವಣಿಗೆಯನ್ನು ಗಮನಿಸಿದರೆ ನಕಲಿ ಎನ್ ಕೌಂಟರ್ ಎನ್ನುವುದ ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ದೂರಿದ್ದಾರೆ.

ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ನಕ್ಸಲ್ ಕಾರ್ಯಚಟುವಟಿಕೆಗಳು ಮತ್ತು ಹಿಂಸಾತ್ಮಕ ಕೃತ್ಯಗಳು ನಡೆದಿಲ್ಲ. ಈ ರೀತಿಯ ವ್ಯಕ್ತಿಗಳನ್ನು ಕೊಲ್ಲುವುದರೊಂದಿಗೆ ಪ್ರಜಾತಂತ್ರಿಕ ಚಳುವಳಿಗಾರರನ್ನು ಬೆದರಿಸುವ ರಾಜಕೀಯ ತಂತ್ರವನ್ನು ಪ್ರತಿಯೊಬ್ಬರು ಖಂಡಿಸಬೇಕು. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಿ ಸತ್ಯಾಸತ್ಯತೆಯ ವಾಸ್ತವವನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.

ನಕ್ಸಲರ ಹೋರಾಟದ ದಾರಿ ಸರಿ ಇಲ್ಲದಿರಬಹುದು, ಅವರ ಬೇಡಿಕೆಗಳನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಎಷ್ಟೋ ಬಾರಿ ಸರ್ಕಾರದ ಮುಖ್ಯಸ್ಥರುಗಳೇ ನಕ್ಸಲ್ ಚಳವಳಿಯ ಬದ್ದತೆಯನ್ನು ಶ್ಲಾಘಿಸಿದ್ದಿದೆ. “ನಕ್ಸಲರು ಎಂದರೆ ಅನ್ಯಾಯದ ವಿರುದ್ದ ಹೋರಾಡುವ ಪಡೆ” ಎಂದು ವಿಧಾನಸಭೆ ಅಧ್ಯಕ್ಷ ಪೀಠದಿಂದಲೇ ಕಾಗೋಡು ತಿಮ್ಮಪ್ಪನವರು ಹೇಳಿದ್ದರು‌. ನಕ್ಸಲ್ ಚಳವಳಿ ಎನ್ನುವುದು ಶೋಕಿಗಾಗಿಯೋ, ವೈಯುಕ್ತಿಕ ಲಾಭಕ್ಕಾಗಿಯೋ ನಡೆಸುವ ಅಪರಾಧ ಅಲ್ಲ. ನಕ್ಸಲರ ಬೇಡಿಕೆಗಳು ದಲಿತ, ಆದಿವಾಸಿಗಳ ‘ಕನಿಷ್ಠ ಘನತೆಯ ಬದುಕಿಗಾಗಿ’ ನಡೆಯುವ ಹೋರಾಟ. ಎನ್ ಕೌಂಟರ್ ಗಳನ್ನು ಸಂಭ್ರಮಿಸುವುದಕ್ಕೂ ಮೊದಲು ನಕ್ಸಲರು ಯಾರಿಗಾಗಿ, ಯಾಕಾಗಿ ಹೋರಾಟ ಮಾಡುತ್ತಾರೆ ಎಂಬುದನ್ನು ತಿಳಿಯಬೇಕು ಎಂದು ಪೂಜಾರ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅರಣ್ಯದಲ್ಲಿ ವಾಸಿಸುವ ಆದಿವಾಸಿ, ದಲಿತರು ತಮ್ಮ ವಾಸಿಸುವ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಅವರನ್ನು ಅಭಯಾರಣ್ಯ, ರಾಷ್ಟ್ರೀಯ ಉದ್ಯಾನವನ ನಿರ್ಮಾಣ ಕಾರಣಕ್ಕಾಗಿ ಒಕ್ಕಲೆಬ್ಬಿಸುತ್ತಿದ್ದಾರೆ. ಆದಿವಾಸಿಗಳನ್ನು ಹೊರಹಾಕಿ ರೆಸಾರ್ಟ್, ಗಣಿಗಾರಿಕೆಗೆ ಸರ್ಕಾರ ಅನುಮತಿ ನೀಡುತ್ತದೆ. ನಾಗರಿಕ ಸಮಾಜದಿಂದ ನಿರ್ಲಕ್ಷಿತವಾಗಿರುವ ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಕ್ಸಲರು ಹೋರಾಡುತ್ತಾರೆ. ಅರಣ್ಯವಾಸಿ ದಲಿತ, ಬುಡಕಟ್ಟುಗಳ ಬಹಳಷ್ಟು ಜಮೀನುಗಳನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ತೆಗೆದುಕೊಂಡಿರುವುದರಿಂದ ಅವರ ಬದುಕು ದುಸ್ಥರವಾಗಿದೆ. ಈಗ ಆದಿವಾಸಿಗಳು ಅರಣ್ಯದಲ್ಲಿ ಕೃಷಿ ಮಾಡುವಂತಿಲ್ಲ, ಅರಣ್ಯ ಉತ್ಪತ್ತಿ ಸಂಗ್ರಹಿಸುವಂತಿಲ್ಲ. ಬಡತನ ಮತ್ತು ಸಮಾನತೆ ಕೊರತೆಯ ವಿರುದ್ಧ ನಕ್ಸಲರು ಹೋರಾಟವನ್ನು ನಡೆಸಿದ್ದಾರೆ. ಅದು ಅವರಿಗೆ ಸ್ಥಳೀಯ ಜನರಿಂದ ಕೆಲವು ಮಟ್ಟದ ಬೆಂಬಲವನ್ನು ತಂದುಕೊಟ್ಟಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಲೆನಾಡು ಪ್ರದೇಶದಲ್ಲಿ ತೋಟದ ಕಾರ್ಮಿಕರ ಸಮಸ್ಯೆಗಳನ್ನು ಕೇಳುವವರೇ ಇಲ್ಲ. ನೂರಾರು, ಸಾವಿರಾರು ಎಕರೆ ತೋಟ ಹೊಂದಿರುವ ಭೂಮಾಲಕರು ತೋಟದ ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳುತ್ತಾರೆ. ಅದರ ವಿರುದ್ದದ ಜನಚಳವಳಿಯನ್ನೂ ನಕ್ಸಲರು ನಡೆಸುತ್ತಾರೆ.  ಮೂಲನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು‌. ಶತಶತಮಾನದಿಂದ ಬಾಳಿ ಬದುಕಿರುವ ಭೂಮಿ ಅವರದ್ದಾಗಬೇಕು. ರಸ್ತೆ, ನೀರು, ವಿದ್ಯುತ್ ಒದಗಿಸಬೇಕು. ಮಲೆನಾಡು ಭಾಗದಲ್ಲಿ ಇನ್ನೂ ಜಮೀನ್ದಾರಿ ಪದ್ದತಿ ಜಾರಿಯಲ್ಲಿದೆ. ಒಬ್ಬೊಬ್ಬ ಜಮೀನ್ದಾರನೂ ಸಾವಿರಾರು ಎಕರೆ ಭೂಮಿ ಹೊಂದಿದ್ದಾನೆ. ಆತ ದುಡಿಮೆಯ ಹಣದಿಂದ ಅಷ್ಟೊಂದು ಪ್ರಮಾಣದ ಭೂಮಿ ಖರೀಧಿಸಿಲ್ಲ. ವಂಶಪಾರಂಪರ್ಯವಾಗಿ ಸಾವಿರಾರು ಎಕರೆ ಭೂಮಿ ಬಂದಿದೆ. ಅದು ಜಮೀನ್ದಾರಿ ಪದ್ದತಿಯ ಮುಂದುವರಿಕೆ ಆಗುತ್ತದೆ. ಹಾಗಾಗಿ ಅಂತಹ ಭೂಮಿಗಳನ್ನು ಸಮಾನ ಹಂಚಿಕೆ ಮಾಡಿ ಜಮೀನ್ದಾರಿ ಪದ್ದತಿಯನ್ನು ಕೊನೆಗಾಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ...ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮ

ರಾಜಕಾರಣಿಗಳು ಮತ್ತು ವ್ಯವಸ್ಥೆಯು ಆದಿವಾಸಿ, ದಲಿತರು, ಅಲ್ಪಸಂಖ್ಯಾತರ ಬದುಕಿನ ನೈಜ ಸಮಸ್ಯೆಗಳ ಬಗ್ಗೆ ಮಾತನಾಡಬೇಕೇ ಹೊರತು ಕೋಮುವಾದದ ಮೂಲಕ ಜನರನ್ನು ಒಡೆದು ಆಳಬಾರದು. ಈ ಬೇಡಿಕೆಗಳಿಗೆ ನಕ್ಸಲರನ್ನು ಎನ್ ಕೌಂಟರ್ ಮಾಡುವುದು ಪರಿಹಾರವೇ ? ನಕ್ಸಲರ ಕೊಲೆಯಿಂದ ಜನರ ಈ ಸಮಸ್ಯೆ ಬಗೆಹರಿಯುತ್ತದೆಯೇ ? 2015 ಫೆಬ್ರವರಿ 03 ರಂದು ನಡೆದ ವಿಧಾನಸಭೆ ಕಲಾಪದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರು ನಕ್ಸಲ್ ನಿಗ್ರಹಕ್ಕೆ ಬಹಳ ಸರಳವಾದ ಪರಿಹಾರ ಸೂಚಿಸುತ್ತಾರೆ. “ಕಾಡಿನ ನಿವಾಸಿಗಳಿಗೆ ಹಕ್ಕುಪತ್ರ, ನೀರು, ವಿದ್ಯುತ್, ರಸ್ತೆ ಒದಗಿಸಿ. ಅರಣ್ಯಾಧಿಕಾರಿಗಳು, ಪೊಲೀಸರು ರಾಜರಂತೆ ವರ್ತಿಸುವುದು ನಿಲ್ಲಿಸಿ. ನಕ್ಸಲ್ ಸಮಸ್ಯೆ ಪರಿಹಾರ ಆಗುತ್ತದೆ” ಎಂದು ಸರ್ಕಾರಕ್ಕೆ ಸ್ಪೀಕರ್ ಸೂಚಿಸುತ್ತಾರೆ. ಇಷ್ಟೇ ಆಗಬೇಕಿರೋದು. ನಕ್ಸಲರ ಸಾವು ನಕ್ಸಲ್ ಸಮಸ್ಯೆಗೆ ಪರಿಹಾರ ಅಲ್ಲ ಎಂಬುದನ್ನು ಸರ್ಕಾರಗಳು ಮನಗಾಣಬೇಕು ಎಂದು ತಮ್ಮ ಹೇಳಿಕೆಯಲ್ಲಿ ಪೂಜಾರ ಅವರು ಸರಕಾರಕ್ಕೆ ತಿಳಿ ಹೇಳಿದ್ದಾರೆ.

ಇದನ್ನೂ ಓದಿ….ಉಡುಪಿ : ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...