Homeಕರ್ನಾಟಕನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

- Advertisement -
- Advertisement -

ಬೆಂಗಳೂರು: ಉಡುಪಿಯ ಕಬ್ಬಿನಾಲೆ ಸಮೀಪ, ನಕಲಿ ಎನ್ ಕೌಂಟರ್ ಮೂಲಕ ವಿಕ್ರಂ ಗೌಡ ನನ್ನು ಹತ್ಯೆ ಮಾಡಿರುವ ಪೋಲಿಸ್ ಇಲಾಖೆಯ ಕ್ರಮವನ್ನು   ಸಿಪಿಐ (ಎಂಎಲ್) ಮಾಸ್ ಲೈನ್ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಡಿ.ಹೆಚ್.ಪೂಜಾರ ರಾಜ್ಯ ಕಾರ್ಯದರ್ಶಿ ಹೇಳಿದ್ದಾರೆ.

ನಮ್ಮ ಸಿಪಿಐಎಂಎಲ್ ಮಾಸ್ ಲೈನ್ ಪಕ್ಷವು ನಕ್ಸಲ್ ರಾಜಕೀಯ ಸಿದ್ಧಾಂತವನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ  ಪ್ರಜಾತಾಂತ್ರಿಕ ಹಕ್ಕುಗಳನ್ನು ದಮನ  ಮಾಡುವ  ಮತ್ತು ಸರ್ಕಾದ   ಸಂವಿಧಾನ ವಿರೋಧಿ  ಕೃತ್ಯಗಳನ್ನು ಸಹಿಸಿಕೊಳ್ಳುವುದಿಲ್ಲ. ಸಾಮಾಜಿಕ ನ್ಯಾಯ ಮತ್ತು ಸಮಾಜವಾದಿ ಸಿದ್ದಾಂತದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಿಂದ ನಡೆದ ಈ ಹತ್ಯೆ ಕೆಲವರಿಗೆ ತೀವ್ರ  ಆಘಾತವಾಗಿದೆ ಎಂದು ಪಕ್ಷದ ವತಿಯಿಂದ ಹೊರಡಿಸಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ವಾರದ ಹಿಂದೆ ಬಂಧಿಸಿ ಕೊಲೆ ಮಾಡಲಾಗಿದೆ ಎಂದು ರಾಜ್ಯದ ಅನೇಕ ಪ್ರಗತಿಪರರು ಅನುಮಾನ ವ್ಯಕ್ತಪಡಿಸಿದ್ದಾರೆ. ಎನ್ ಕೌಂಟರ್ ಕಾರ್ಯ ನಡೆದಿದ್ದರೆ, ಪೋಲಿಸ್ ರಿಗೆ ಗಾಯಗಳಾಗಬೇಕಿತ್ತು. ಸತತ ಒಂದು ವಾರದ ಬೆಳವಣಿಗೆಯನ್ನು ಗಮನಿಸಿದರೆ ನಕಲಿ ಎನ್ ಕೌಂಟರ್ ಎನ್ನುವುದ ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ದೂರಿದ್ದಾರೆ.

ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ನಕ್ಸಲ್ ಕಾರ್ಯಚಟುವಟಿಕೆಗಳು ಮತ್ತು ಹಿಂಸಾತ್ಮಕ ಕೃತ್ಯಗಳು ನಡೆದಿಲ್ಲ. ಈ ರೀತಿಯ ವ್ಯಕ್ತಿಗಳನ್ನು ಕೊಲ್ಲುವುದರೊಂದಿಗೆ ಪ್ರಜಾತಂತ್ರಿಕ ಚಳುವಳಿಗಾರರನ್ನು ಬೆದರಿಸುವ ರಾಜಕೀಯ ತಂತ್ರವನ್ನು ಪ್ರತಿಯೊಬ್ಬರು ಖಂಡಿಸಬೇಕು. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಿ ಸತ್ಯಾಸತ್ಯತೆಯ ವಾಸ್ತವವನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.

ನಕ್ಸಲರ ಹೋರಾಟದ ದಾರಿ ಸರಿ ಇಲ್ಲದಿರಬಹುದು, ಅವರ ಬೇಡಿಕೆಗಳನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಎಷ್ಟೋ ಬಾರಿ ಸರ್ಕಾರದ ಮುಖ್ಯಸ್ಥರುಗಳೇ ನಕ್ಸಲ್ ಚಳವಳಿಯ ಬದ್ದತೆಯನ್ನು ಶ್ಲಾಘಿಸಿದ್ದಿದೆ. “ನಕ್ಸಲರು ಎಂದರೆ ಅನ್ಯಾಯದ ವಿರುದ್ದ ಹೋರಾಡುವ ಪಡೆ” ಎಂದು ವಿಧಾನಸಭೆ ಅಧ್ಯಕ್ಷ ಪೀಠದಿಂದಲೇ ಕಾಗೋಡು ತಿಮ್ಮಪ್ಪನವರು ಹೇಳಿದ್ದರು‌. ನಕ್ಸಲ್ ಚಳವಳಿ ಎನ್ನುವುದು ಶೋಕಿಗಾಗಿಯೋ, ವೈಯುಕ್ತಿಕ ಲಾಭಕ್ಕಾಗಿಯೋ ನಡೆಸುವ ಅಪರಾಧ ಅಲ್ಲ. ನಕ್ಸಲರ ಬೇಡಿಕೆಗಳು ದಲಿತ, ಆದಿವಾಸಿಗಳ ‘ಕನಿಷ್ಠ ಘನತೆಯ ಬದುಕಿಗಾಗಿ’ ನಡೆಯುವ ಹೋರಾಟ. ಎನ್ ಕೌಂಟರ್ ಗಳನ್ನು ಸಂಭ್ರಮಿಸುವುದಕ್ಕೂ ಮೊದಲು ನಕ್ಸಲರು ಯಾರಿಗಾಗಿ, ಯಾಕಾಗಿ ಹೋರಾಟ ಮಾಡುತ್ತಾರೆ ಎಂಬುದನ್ನು ತಿಳಿಯಬೇಕು ಎಂದು ಪೂಜಾರ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅರಣ್ಯದಲ್ಲಿ ವಾಸಿಸುವ ಆದಿವಾಸಿ, ದಲಿತರು ತಮ್ಮ ವಾಸಿಸುವ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಅವರನ್ನು ಅಭಯಾರಣ್ಯ, ರಾಷ್ಟ್ರೀಯ ಉದ್ಯಾನವನ ನಿರ್ಮಾಣ ಕಾರಣಕ್ಕಾಗಿ ಒಕ್ಕಲೆಬ್ಬಿಸುತ್ತಿದ್ದಾರೆ. ಆದಿವಾಸಿಗಳನ್ನು ಹೊರಹಾಕಿ ರೆಸಾರ್ಟ್, ಗಣಿಗಾರಿಕೆಗೆ ಸರ್ಕಾರ ಅನುಮತಿ ನೀಡುತ್ತದೆ. ನಾಗರಿಕ ಸಮಾಜದಿಂದ ನಿರ್ಲಕ್ಷಿತವಾಗಿರುವ ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಕ್ಸಲರು ಹೋರಾಡುತ್ತಾರೆ. ಅರಣ್ಯವಾಸಿ ದಲಿತ, ಬುಡಕಟ್ಟುಗಳ ಬಹಳಷ್ಟು ಜಮೀನುಗಳನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ತೆಗೆದುಕೊಂಡಿರುವುದರಿಂದ ಅವರ ಬದುಕು ದುಸ್ಥರವಾಗಿದೆ. ಈಗ ಆದಿವಾಸಿಗಳು ಅರಣ್ಯದಲ್ಲಿ ಕೃಷಿ ಮಾಡುವಂತಿಲ್ಲ, ಅರಣ್ಯ ಉತ್ಪತ್ತಿ ಸಂಗ್ರಹಿಸುವಂತಿಲ್ಲ. ಬಡತನ ಮತ್ತು ಸಮಾನತೆ ಕೊರತೆಯ ವಿರುದ್ಧ ನಕ್ಸಲರು ಹೋರಾಟವನ್ನು ನಡೆಸಿದ್ದಾರೆ. ಅದು ಅವರಿಗೆ ಸ್ಥಳೀಯ ಜನರಿಂದ ಕೆಲವು ಮಟ್ಟದ ಬೆಂಬಲವನ್ನು ತಂದುಕೊಟ್ಟಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಲೆನಾಡು ಪ್ರದೇಶದಲ್ಲಿ ತೋಟದ ಕಾರ್ಮಿಕರ ಸಮಸ್ಯೆಗಳನ್ನು ಕೇಳುವವರೇ ಇಲ್ಲ. ನೂರಾರು, ಸಾವಿರಾರು ಎಕರೆ ತೋಟ ಹೊಂದಿರುವ ಭೂಮಾಲಕರು ತೋಟದ ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳುತ್ತಾರೆ. ಅದರ ವಿರುದ್ದದ ಜನಚಳವಳಿಯನ್ನೂ ನಕ್ಸಲರು ನಡೆಸುತ್ತಾರೆ.  ಮೂಲನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು‌. ಶತಶತಮಾನದಿಂದ ಬಾಳಿ ಬದುಕಿರುವ ಭೂಮಿ ಅವರದ್ದಾಗಬೇಕು. ರಸ್ತೆ, ನೀರು, ವಿದ್ಯುತ್ ಒದಗಿಸಬೇಕು. ಮಲೆನಾಡು ಭಾಗದಲ್ಲಿ ಇನ್ನೂ ಜಮೀನ್ದಾರಿ ಪದ್ದತಿ ಜಾರಿಯಲ್ಲಿದೆ. ಒಬ್ಬೊಬ್ಬ ಜಮೀನ್ದಾರನೂ ಸಾವಿರಾರು ಎಕರೆ ಭೂಮಿ ಹೊಂದಿದ್ದಾನೆ. ಆತ ದುಡಿಮೆಯ ಹಣದಿಂದ ಅಷ್ಟೊಂದು ಪ್ರಮಾಣದ ಭೂಮಿ ಖರೀಧಿಸಿಲ್ಲ. ವಂಶಪಾರಂಪರ್ಯವಾಗಿ ಸಾವಿರಾರು ಎಕರೆ ಭೂಮಿ ಬಂದಿದೆ. ಅದು ಜಮೀನ್ದಾರಿ ಪದ್ದತಿಯ ಮುಂದುವರಿಕೆ ಆಗುತ್ತದೆ. ಹಾಗಾಗಿ ಅಂತಹ ಭೂಮಿಗಳನ್ನು ಸಮಾನ ಹಂಚಿಕೆ ಮಾಡಿ ಜಮೀನ್ದಾರಿ ಪದ್ದತಿಯನ್ನು ಕೊನೆಗಾಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ...ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮ

ರಾಜಕಾರಣಿಗಳು ಮತ್ತು ವ್ಯವಸ್ಥೆಯು ಆದಿವಾಸಿ, ದಲಿತರು, ಅಲ್ಪಸಂಖ್ಯಾತರ ಬದುಕಿನ ನೈಜ ಸಮಸ್ಯೆಗಳ ಬಗ್ಗೆ ಮಾತನಾಡಬೇಕೇ ಹೊರತು ಕೋಮುವಾದದ ಮೂಲಕ ಜನರನ್ನು ಒಡೆದು ಆಳಬಾರದು. ಈ ಬೇಡಿಕೆಗಳಿಗೆ ನಕ್ಸಲರನ್ನು ಎನ್ ಕೌಂಟರ್ ಮಾಡುವುದು ಪರಿಹಾರವೇ ? ನಕ್ಸಲರ ಕೊಲೆಯಿಂದ ಜನರ ಈ ಸಮಸ್ಯೆ ಬಗೆಹರಿಯುತ್ತದೆಯೇ ? 2015 ಫೆಬ್ರವರಿ 03 ರಂದು ನಡೆದ ವಿಧಾನಸಭೆ ಕಲಾಪದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರು ನಕ್ಸಲ್ ನಿಗ್ರಹಕ್ಕೆ ಬಹಳ ಸರಳವಾದ ಪರಿಹಾರ ಸೂಚಿಸುತ್ತಾರೆ. “ಕಾಡಿನ ನಿವಾಸಿಗಳಿಗೆ ಹಕ್ಕುಪತ್ರ, ನೀರು, ವಿದ್ಯುತ್, ರಸ್ತೆ ಒದಗಿಸಿ. ಅರಣ್ಯಾಧಿಕಾರಿಗಳು, ಪೊಲೀಸರು ರಾಜರಂತೆ ವರ್ತಿಸುವುದು ನಿಲ್ಲಿಸಿ. ನಕ್ಸಲ್ ಸಮಸ್ಯೆ ಪರಿಹಾರ ಆಗುತ್ತದೆ” ಎಂದು ಸರ್ಕಾರಕ್ಕೆ ಸ್ಪೀಕರ್ ಸೂಚಿಸುತ್ತಾರೆ. ಇಷ್ಟೇ ಆಗಬೇಕಿರೋದು. ನಕ್ಸಲರ ಸಾವು ನಕ್ಸಲ್ ಸಮಸ್ಯೆಗೆ ಪರಿಹಾರ ಅಲ್ಲ ಎಂಬುದನ್ನು ಸರ್ಕಾರಗಳು ಮನಗಾಣಬೇಕು ಎಂದು ತಮ್ಮ ಹೇಳಿಕೆಯಲ್ಲಿ ಪೂಜಾರ ಅವರು ಸರಕಾರಕ್ಕೆ ತಿಳಿ ಹೇಳಿದ್ದಾರೆ.

ಇದನ್ನೂ ಓದಿ….ಉಡುಪಿ : ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...