Homeಕರ್ನಾಟಕನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

- Advertisement -
- Advertisement -

ಬೆಂಗಳೂರು: ಉಡುಪಿಯ ಕಬ್ಬಿನಾಲೆ ಸಮೀಪ, ನಕಲಿ ಎನ್ ಕೌಂಟರ್ ಮೂಲಕ ವಿಕ್ರಂ ಗೌಡ ನನ್ನು ಹತ್ಯೆ ಮಾಡಿರುವ ಪೋಲಿಸ್ ಇಲಾಖೆಯ ಕ್ರಮವನ್ನು   ಸಿಪಿಐ (ಎಂಎಲ್) ಮಾಸ್ ಲೈನ್ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಡಿ.ಹೆಚ್.ಪೂಜಾರ ರಾಜ್ಯ ಕಾರ್ಯದರ್ಶಿ ಹೇಳಿದ್ದಾರೆ.

ನಮ್ಮ ಸಿಪಿಐಎಂಎಲ್ ಮಾಸ್ ಲೈನ್ ಪಕ್ಷವು ನಕ್ಸಲ್ ರಾಜಕೀಯ ಸಿದ್ಧಾಂತವನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ  ಪ್ರಜಾತಾಂತ್ರಿಕ ಹಕ್ಕುಗಳನ್ನು ದಮನ  ಮಾಡುವ  ಮತ್ತು ಸರ್ಕಾದ   ಸಂವಿಧಾನ ವಿರೋಧಿ  ಕೃತ್ಯಗಳನ್ನು ಸಹಿಸಿಕೊಳ್ಳುವುದಿಲ್ಲ. ಸಾಮಾಜಿಕ ನ್ಯಾಯ ಮತ್ತು ಸಮಾಜವಾದಿ ಸಿದ್ದಾಂತದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಿಂದ ನಡೆದ ಈ ಹತ್ಯೆ ಕೆಲವರಿಗೆ ತೀವ್ರ  ಆಘಾತವಾಗಿದೆ ಎಂದು ಪಕ್ಷದ ವತಿಯಿಂದ ಹೊರಡಿಸಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ವಾರದ ಹಿಂದೆ ಬಂಧಿಸಿ ಕೊಲೆ ಮಾಡಲಾಗಿದೆ ಎಂದು ರಾಜ್ಯದ ಅನೇಕ ಪ್ರಗತಿಪರರು ಅನುಮಾನ ವ್ಯಕ್ತಪಡಿಸಿದ್ದಾರೆ. ಎನ್ ಕೌಂಟರ್ ಕಾರ್ಯ ನಡೆದಿದ್ದರೆ, ಪೋಲಿಸ್ ರಿಗೆ ಗಾಯಗಳಾಗಬೇಕಿತ್ತು. ಸತತ ಒಂದು ವಾರದ ಬೆಳವಣಿಗೆಯನ್ನು ಗಮನಿಸಿದರೆ ನಕಲಿ ಎನ್ ಕೌಂಟರ್ ಎನ್ನುವುದ ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ದೂರಿದ್ದಾರೆ.

ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ನಕ್ಸಲ್ ಕಾರ್ಯಚಟುವಟಿಕೆಗಳು ಮತ್ತು ಹಿಂಸಾತ್ಮಕ ಕೃತ್ಯಗಳು ನಡೆದಿಲ್ಲ. ಈ ರೀತಿಯ ವ್ಯಕ್ತಿಗಳನ್ನು ಕೊಲ್ಲುವುದರೊಂದಿಗೆ ಪ್ರಜಾತಂತ್ರಿಕ ಚಳುವಳಿಗಾರರನ್ನು ಬೆದರಿಸುವ ರಾಜಕೀಯ ತಂತ್ರವನ್ನು ಪ್ರತಿಯೊಬ್ಬರು ಖಂಡಿಸಬೇಕು. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಿ ಸತ್ಯಾಸತ್ಯತೆಯ ವಾಸ್ತವವನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.

ನಕ್ಸಲರ ಹೋರಾಟದ ದಾರಿ ಸರಿ ಇಲ್ಲದಿರಬಹುದು, ಅವರ ಬೇಡಿಕೆಗಳನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಎಷ್ಟೋ ಬಾರಿ ಸರ್ಕಾರದ ಮುಖ್ಯಸ್ಥರುಗಳೇ ನಕ್ಸಲ್ ಚಳವಳಿಯ ಬದ್ದತೆಯನ್ನು ಶ್ಲಾಘಿಸಿದ್ದಿದೆ. “ನಕ್ಸಲರು ಎಂದರೆ ಅನ್ಯಾಯದ ವಿರುದ್ದ ಹೋರಾಡುವ ಪಡೆ” ಎಂದು ವಿಧಾನಸಭೆ ಅಧ್ಯಕ್ಷ ಪೀಠದಿಂದಲೇ ಕಾಗೋಡು ತಿಮ್ಮಪ್ಪನವರು ಹೇಳಿದ್ದರು‌. ನಕ್ಸಲ್ ಚಳವಳಿ ಎನ್ನುವುದು ಶೋಕಿಗಾಗಿಯೋ, ವೈಯುಕ್ತಿಕ ಲಾಭಕ್ಕಾಗಿಯೋ ನಡೆಸುವ ಅಪರಾಧ ಅಲ್ಲ. ನಕ್ಸಲರ ಬೇಡಿಕೆಗಳು ದಲಿತ, ಆದಿವಾಸಿಗಳ ‘ಕನಿಷ್ಠ ಘನತೆಯ ಬದುಕಿಗಾಗಿ’ ನಡೆಯುವ ಹೋರಾಟ. ಎನ್ ಕೌಂಟರ್ ಗಳನ್ನು ಸಂಭ್ರಮಿಸುವುದಕ್ಕೂ ಮೊದಲು ನಕ್ಸಲರು ಯಾರಿಗಾಗಿ, ಯಾಕಾಗಿ ಹೋರಾಟ ಮಾಡುತ್ತಾರೆ ಎಂಬುದನ್ನು ತಿಳಿಯಬೇಕು ಎಂದು ಪೂಜಾರ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅರಣ್ಯದಲ್ಲಿ ವಾಸಿಸುವ ಆದಿವಾಸಿ, ದಲಿತರು ತಮ್ಮ ವಾಸಿಸುವ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಅವರನ್ನು ಅಭಯಾರಣ್ಯ, ರಾಷ್ಟ್ರೀಯ ಉದ್ಯಾನವನ ನಿರ್ಮಾಣ ಕಾರಣಕ್ಕಾಗಿ ಒಕ್ಕಲೆಬ್ಬಿಸುತ್ತಿದ್ದಾರೆ. ಆದಿವಾಸಿಗಳನ್ನು ಹೊರಹಾಕಿ ರೆಸಾರ್ಟ್, ಗಣಿಗಾರಿಕೆಗೆ ಸರ್ಕಾರ ಅನುಮತಿ ನೀಡುತ್ತದೆ. ನಾಗರಿಕ ಸಮಾಜದಿಂದ ನಿರ್ಲಕ್ಷಿತವಾಗಿರುವ ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಕ್ಸಲರು ಹೋರಾಡುತ್ತಾರೆ. ಅರಣ್ಯವಾಸಿ ದಲಿತ, ಬುಡಕಟ್ಟುಗಳ ಬಹಳಷ್ಟು ಜಮೀನುಗಳನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ತೆಗೆದುಕೊಂಡಿರುವುದರಿಂದ ಅವರ ಬದುಕು ದುಸ್ಥರವಾಗಿದೆ. ಈಗ ಆದಿವಾಸಿಗಳು ಅರಣ್ಯದಲ್ಲಿ ಕೃಷಿ ಮಾಡುವಂತಿಲ್ಲ, ಅರಣ್ಯ ಉತ್ಪತ್ತಿ ಸಂಗ್ರಹಿಸುವಂತಿಲ್ಲ. ಬಡತನ ಮತ್ತು ಸಮಾನತೆ ಕೊರತೆಯ ವಿರುದ್ಧ ನಕ್ಸಲರು ಹೋರಾಟವನ್ನು ನಡೆಸಿದ್ದಾರೆ. ಅದು ಅವರಿಗೆ ಸ್ಥಳೀಯ ಜನರಿಂದ ಕೆಲವು ಮಟ್ಟದ ಬೆಂಬಲವನ್ನು ತಂದುಕೊಟ್ಟಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಲೆನಾಡು ಪ್ರದೇಶದಲ್ಲಿ ತೋಟದ ಕಾರ್ಮಿಕರ ಸಮಸ್ಯೆಗಳನ್ನು ಕೇಳುವವರೇ ಇಲ್ಲ. ನೂರಾರು, ಸಾವಿರಾರು ಎಕರೆ ತೋಟ ಹೊಂದಿರುವ ಭೂಮಾಲಕರು ತೋಟದ ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳುತ್ತಾರೆ. ಅದರ ವಿರುದ್ದದ ಜನಚಳವಳಿಯನ್ನೂ ನಕ್ಸಲರು ನಡೆಸುತ್ತಾರೆ.  ಮೂಲನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು‌. ಶತಶತಮಾನದಿಂದ ಬಾಳಿ ಬದುಕಿರುವ ಭೂಮಿ ಅವರದ್ದಾಗಬೇಕು. ರಸ್ತೆ, ನೀರು, ವಿದ್ಯುತ್ ಒದಗಿಸಬೇಕು. ಮಲೆನಾಡು ಭಾಗದಲ್ಲಿ ಇನ್ನೂ ಜಮೀನ್ದಾರಿ ಪದ್ದತಿ ಜಾರಿಯಲ್ಲಿದೆ. ಒಬ್ಬೊಬ್ಬ ಜಮೀನ್ದಾರನೂ ಸಾವಿರಾರು ಎಕರೆ ಭೂಮಿ ಹೊಂದಿದ್ದಾನೆ. ಆತ ದುಡಿಮೆಯ ಹಣದಿಂದ ಅಷ್ಟೊಂದು ಪ್ರಮಾಣದ ಭೂಮಿ ಖರೀಧಿಸಿಲ್ಲ. ವಂಶಪಾರಂಪರ್ಯವಾಗಿ ಸಾವಿರಾರು ಎಕರೆ ಭೂಮಿ ಬಂದಿದೆ. ಅದು ಜಮೀನ್ದಾರಿ ಪದ್ದತಿಯ ಮುಂದುವರಿಕೆ ಆಗುತ್ತದೆ. ಹಾಗಾಗಿ ಅಂತಹ ಭೂಮಿಗಳನ್ನು ಸಮಾನ ಹಂಚಿಕೆ ಮಾಡಿ ಜಮೀನ್ದಾರಿ ಪದ್ದತಿಯನ್ನು ಕೊನೆಗಾಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ...ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮ

ರಾಜಕಾರಣಿಗಳು ಮತ್ತು ವ್ಯವಸ್ಥೆಯು ಆದಿವಾಸಿ, ದಲಿತರು, ಅಲ್ಪಸಂಖ್ಯಾತರ ಬದುಕಿನ ನೈಜ ಸಮಸ್ಯೆಗಳ ಬಗ್ಗೆ ಮಾತನಾಡಬೇಕೇ ಹೊರತು ಕೋಮುವಾದದ ಮೂಲಕ ಜನರನ್ನು ಒಡೆದು ಆಳಬಾರದು. ಈ ಬೇಡಿಕೆಗಳಿಗೆ ನಕ್ಸಲರನ್ನು ಎನ್ ಕೌಂಟರ್ ಮಾಡುವುದು ಪರಿಹಾರವೇ ? ನಕ್ಸಲರ ಕೊಲೆಯಿಂದ ಜನರ ಈ ಸಮಸ್ಯೆ ಬಗೆಹರಿಯುತ್ತದೆಯೇ ? 2015 ಫೆಬ್ರವರಿ 03 ರಂದು ನಡೆದ ವಿಧಾನಸಭೆ ಕಲಾಪದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರು ನಕ್ಸಲ್ ನಿಗ್ರಹಕ್ಕೆ ಬಹಳ ಸರಳವಾದ ಪರಿಹಾರ ಸೂಚಿಸುತ್ತಾರೆ. “ಕಾಡಿನ ನಿವಾಸಿಗಳಿಗೆ ಹಕ್ಕುಪತ್ರ, ನೀರು, ವಿದ್ಯುತ್, ರಸ್ತೆ ಒದಗಿಸಿ. ಅರಣ್ಯಾಧಿಕಾರಿಗಳು, ಪೊಲೀಸರು ರಾಜರಂತೆ ವರ್ತಿಸುವುದು ನಿಲ್ಲಿಸಿ. ನಕ್ಸಲ್ ಸಮಸ್ಯೆ ಪರಿಹಾರ ಆಗುತ್ತದೆ” ಎಂದು ಸರ್ಕಾರಕ್ಕೆ ಸ್ಪೀಕರ್ ಸೂಚಿಸುತ್ತಾರೆ. ಇಷ್ಟೇ ಆಗಬೇಕಿರೋದು. ನಕ್ಸಲರ ಸಾವು ನಕ್ಸಲ್ ಸಮಸ್ಯೆಗೆ ಪರಿಹಾರ ಅಲ್ಲ ಎಂಬುದನ್ನು ಸರ್ಕಾರಗಳು ಮನಗಾಣಬೇಕು ಎಂದು ತಮ್ಮ ಹೇಳಿಕೆಯಲ್ಲಿ ಪೂಜಾರ ಅವರು ಸರಕಾರಕ್ಕೆ ತಿಳಿ ಹೇಳಿದ್ದಾರೆ.

ಇದನ್ನೂ ಓದಿ….ಉಡುಪಿ : ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....