Homeಕರ್ನಾಟಕನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

- Advertisement -
- Advertisement -

ಬೆಂಗಳೂರು: ಉಡುಪಿಯ ಕಬ್ಬಿನಾಲೆ ಸಮೀಪ, ನಕಲಿ ಎನ್ ಕೌಂಟರ್ ಮೂಲಕ ವಿಕ್ರಂ ಗೌಡ ನನ್ನು ಹತ್ಯೆ ಮಾಡಿರುವ ಪೋಲಿಸ್ ಇಲಾಖೆಯ ಕ್ರಮವನ್ನು   ಸಿಪಿಐ (ಎಂಎಲ್) ಮಾಸ್ ಲೈನ್ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಡಿ.ಹೆಚ್.ಪೂಜಾರ ರಾಜ್ಯ ಕಾರ್ಯದರ್ಶಿ ಹೇಳಿದ್ದಾರೆ.

ನಮ್ಮ ಸಿಪಿಐಎಂಎಲ್ ಮಾಸ್ ಲೈನ್ ಪಕ್ಷವು ನಕ್ಸಲ್ ರಾಜಕೀಯ ಸಿದ್ಧಾಂತವನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ  ಪ್ರಜಾತಾಂತ್ರಿಕ ಹಕ್ಕುಗಳನ್ನು ದಮನ  ಮಾಡುವ  ಮತ್ತು ಸರ್ಕಾದ   ಸಂವಿಧಾನ ವಿರೋಧಿ  ಕೃತ್ಯಗಳನ್ನು ಸಹಿಸಿಕೊಳ್ಳುವುದಿಲ್ಲ. ಸಾಮಾಜಿಕ ನ್ಯಾಯ ಮತ್ತು ಸಮಾಜವಾದಿ ಸಿದ್ದಾಂತದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಿಂದ ನಡೆದ ಈ ಹತ್ಯೆ ಕೆಲವರಿಗೆ ತೀವ್ರ  ಆಘಾತವಾಗಿದೆ ಎಂದು ಪಕ್ಷದ ವತಿಯಿಂದ ಹೊರಡಿಸಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ವಾರದ ಹಿಂದೆ ಬಂಧಿಸಿ ಕೊಲೆ ಮಾಡಲಾಗಿದೆ ಎಂದು ರಾಜ್ಯದ ಅನೇಕ ಪ್ರಗತಿಪರರು ಅನುಮಾನ ವ್ಯಕ್ತಪಡಿಸಿದ್ದಾರೆ. ಎನ್ ಕೌಂಟರ್ ಕಾರ್ಯ ನಡೆದಿದ್ದರೆ, ಪೋಲಿಸ್ ರಿಗೆ ಗಾಯಗಳಾಗಬೇಕಿತ್ತು. ಸತತ ಒಂದು ವಾರದ ಬೆಳವಣಿಗೆಯನ್ನು ಗಮನಿಸಿದರೆ ನಕಲಿ ಎನ್ ಕೌಂಟರ್ ಎನ್ನುವುದ ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ದೂರಿದ್ದಾರೆ.

ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ನಕ್ಸಲ್ ಕಾರ್ಯಚಟುವಟಿಕೆಗಳು ಮತ್ತು ಹಿಂಸಾತ್ಮಕ ಕೃತ್ಯಗಳು ನಡೆದಿಲ್ಲ. ಈ ರೀತಿಯ ವ್ಯಕ್ತಿಗಳನ್ನು ಕೊಲ್ಲುವುದರೊಂದಿಗೆ ಪ್ರಜಾತಂತ್ರಿಕ ಚಳುವಳಿಗಾರರನ್ನು ಬೆದರಿಸುವ ರಾಜಕೀಯ ತಂತ್ರವನ್ನು ಪ್ರತಿಯೊಬ್ಬರು ಖಂಡಿಸಬೇಕು. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಿ ಸತ್ಯಾಸತ್ಯತೆಯ ವಾಸ್ತವವನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.

ನಕ್ಸಲರ ಹೋರಾಟದ ದಾರಿ ಸರಿ ಇಲ್ಲದಿರಬಹುದು, ಅವರ ಬೇಡಿಕೆಗಳನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಎಷ್ಟೋ ಬಾರಿ ಸರ್ಕಾರದ ಮುಖ್ಯಸ್ಥರುಗಳೇ ನಕ್ಸಲ್ ಚಳವಳಿಯ ಬದ್ದತೆಯನ್ನು ಶ್ಲಾಘಿಸಿದ್ದಿದೆ. “ನಕ್ಸಲರು ಎಂದರೆ ಅನ್ಯಾಯದ ವಿರುದ್ದ ಹೋರಾಡುವ ಪಡೆ” ಎಂದು ವಿಧಾನಸಭೆ ಅಧ್ಯಕ್ಷ ಪೀಠದಿಂದಲೇ ಕಾಗೋಡು ತಿಮ್ಮಪ್ಪನವರು ಹೇಳಿದ್ದರು‌. ನಕ್ಸಲ್ ಚಳವಳಿ ಎನ್ನುವುದು ಶೋಕಿಗಾಗಿಯೋ, ವೈಯುಕ್ತಿಕ ಲಾಭಕ್ಕಾಗಿಯೋ ನಡೆಸುವ ಅಪರಾಧ ಅಲ್ಲ. ನಕ್ಸಲರ ಬೇಡಿಕೆಗಳು ದಲಿತ, ಆದಿವಾಸಿಗಳ ‘ಕನಿಷ್ಠ ಘನತೆಯ ಬದುಕಿಗಾಗಿ’ ನಡೆಯುವ ಹೋರಾಟ. ಎನ್ ಕೌಂಟರ್ ಗಳನ್ನು ಸಂಭ್ರಮಿಸುವುದಕ್ಕೂ ಮೊದಲು ನಕ್ಸಲರು ಯಾರಿಗಾಗಿ, ಯಾಕಾಗಿ ಹೋರಾಟ ಮಾಡುತ್ತಾರೆ ಎಂಬುದನ್ನು ತಿಳಿಯಬೇಕು ಎಂದು ಪೂಜಾರ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅರಣ್ಯದಲ್ಲಿ ವಾಸಿಸುವ ಆದಿವಾಸಿ, ದಲಿತರು ತಮ್ಮ ವಾಸಿಸುವ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಅವರನ್ನು ಅಭಯಾರಣ್ಯ, ರಾಷ್ಟ್ರೀಯ ಉದ್ಯಾನವನ ನಿರ್ಮಾಣ ಕಾರಣಕ್ಕಾಗಿ ಒಕ್ಕಲೆಬ್ಬಿಸುತ್ತಿದ್ದಾರೆ. ಆದಿವಾಸಿಗಳನ್ನು ಹೊರಹಾಕಿ ರೆಸಾರ್ಟ್, ಗಣಿಗಾರಿಕೆಗೆ ಸರ್ಕಾರ ಅನುಮತಿ ನೀಡುತ್ತದೆ. ನಾಗರಿಕ ಸಮಾಜದಿಂದ ನಿರ್ಲಕ್ಷಿತವಾಗಿರುವ ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಕ್ಸಲರು ಹೋರಾಡುತ್ತಾರೆ. ಅರಣ್ಯವಾಸಿ ದಲಿತ, ಬುಡಕಟ್ಟುಗಳ ಬಹಳಷ್ಟು ಜಮೀನುಗಳನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ತೆಗೆದುಕೊಂಡಿರುವುದರಿಂದ ಅವರ ಬದುಕು ದುಸ್ಥರವಾಗಿದೆ. ಈಗ ಆದಿವಾಸಿಗಳು ಅರಣ್ಯದಲ್ಲಿ ಕೃಷಿ ಮಾಡುವಂತಿಲ್ಲ, ಅರಣ್ಯ ಉತ್ಪತ್ತಿ ಸಂಗ್ರಹಿಸುವಂತಿಲ್ಲ. ಬಡತನ ಮತ್ತು ಸಮಾನತೆ ಕೊರತೆಯ ವಿರುದ್ಧ ನಕ್ಸಲರು ಹೋರಾಟವನ್ನು ನಡೆಸಿದ್ದಾರೆ. ಅದು ಅವರಿಗೆ ಸ್ಥಳೀಯ ಜನರಿಂದ ಕೆಲವು ಮಟ್ಟದ ಬೆಂಬಲವನ್ನು ತಂದುಕೊಟ್ಟಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಲೆನಾಡು ಪ್ರದೇಶದಲ್ಲಿ ತೋಟದ ಕಾರ್ಮಿಕರ ಸಮಸ್ಯೆಗಳನ್ನು ಕೇಳುವವರೇ ಇಲ್ಲ. ನೂರಾರು, ಸಾವಿರಾರು ಎಕರೆ ತೋಟ ಹೊಂದಿರುವ ಭೂಮಾಲಕರು ತೋಟದ ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳುತ್ತಾರೆ. ಅದರ ವಿರುದ್ದದ ಜನಚಳವಳಿಯನ್ನೂ ನಕ್ಸಲರು ನಡೆಸುತ್ತಾರೆ.  ಮೂಲನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು‌. ಶತಶತಮಾನದಿಂದ ಬಾಳಿ ಬದುಕಿರುವ ಭೂಮಿ ಅವರದ್ದಾಗಬೇಕು. ರಸ್ತೆ, ನೀರು, ವಿದ್ಯುತ್ ಒದಗಿಸಬೇಕು. ಮಲೆನಾಡು ಭಾಗದಲ್ಲಿ ಇನ್ನೂ ಜಮೀನ್ದಾರಿ ಪದ್ದತಿ ಜಾರಿಯಲ್ಲಿದೆ. ಒಬ್ಬೊಬ್ಬ ಜಮೀನ್ದಾರನೂ ಸಾವಿರಾರು ಎಕರೆ ಭೂಮಿ ಹೊಂದಿದ್ದಾನೆ. ಆತ ದುಡಿಮೆಯ ಹಣದಿಂದ ಅಷ್ಟೊಂದು ಪ್ರಮಾಣದ ಭೂಮಿ ಖರೀಧಿಸಿಲ್ಲ. ವಂಶಪಾರಂಪರ್ಯವಾಗಿ ಸಾವಿರಾರು ಎಕರೆ ಭೂಮಿ ಬಂದಿದೆ. ಅದು ಜಮೀನ್ದಾರಿ ಪದ್ದತಿಯ ಮುಂದುವರಿಕೆ ಆಗುತ್ತದೆ. ಹಾಗಾಗಿ ಅಂತಹ ಭೂಮಿಗಳನ್ನು ಸಮಾನ ಹಂಚಿಕೆ ಮಾಡಿ ಜಮೀನ್ದಾರಿ ಪದ್ದತಿಯನ್ನು ಕೊನೆಗಾಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ...ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮ

ರಾಜಕಾರಣಿಗಳು ಮತ್ತು ವ್ಯವಸ್ಥೆಯು ಆದಿವಾಸಿ, ದಲಿತರು, ಅಲ್ಪಸಂಖ್ಯಾತರ ಬದುಕಿನ ನೈಜ ಸಮಸ್ಯೆಗಳ ಬಗ್ಗೆ ಮಾತನಾಡಬೇಕೇ ಹೊರತು ಕೋಮುವಾದದ ಮೂಲಕ ಜನರನ್ನು ಒಡೆದು ಆಳಬಾರದು. ಈ ಬೇಡಿಕೆಗಳಿಗೆ ನಕ್ಸಲರನ್ನು ಎನ್ ಕೌಂಟರ್ ಮಾಡುವುದು ಪರಿಹಾರವೇ ? ನಕ್ಸಲರ ಕೊಲೆಯಿಂದ ಜನರ ಈ ಸಮಸ್ಯೆ ಬಗೆಹರಿಯುತ್ತದೆಯೇ ? 2015 ಫೆಬ್ರವರಿ 03 ರಂದು ನಡೆದ ವಿಧಾನಸಭೆ ಕಲಾಪದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರು ನಕ್ಸಲ್ ನಿಗ್ರಹಕ್ಕೆ ಬಹಳ ಸರಳವಾದ ಪರಿಹಾರ ಸೂಚಿಸುತ್ತಾರೆ. “ಕಾಡಿನ ನಿವಾಸಿಗಳಿಗೆ ಹಕ್ಕುಪತ್ರ, ನೀರು, ವಿದ್ಯುತ್, ರಸ್ತೆ ಒದಗಿಸಿ. ಅರಣ್ಯಾಧಿಕಾರಿಗಳು, ಪೊಲೀಸರು ರಾಜರಂತೆ ವರ್ತಿಸುವುದು ನಿಲ್ಲಿಸಿ. ನಕ್ಸಲ್ ಸಮಸ್ಯೆ ಪರಿಹಾರ ಆಗುತ್ತದೆ” ಎಂದು ಸರ್ಕಾರಕ್ಕೆ ಸ್ಪೀಕರ್ ಸೂಚಿಸುತ್ತಾರೆ. ಇಷ್ಟೇ ಆಗಬೇಕಿರೋದು. ನಕ್ಸಲರ ಸಾವು ನಕ್ಸಲ್ ಸಮಸ್ಯೆಗೆ ಪರಿಹಾರ ಅಲ್ಲ ಎಂಬುದನ್ನು ಸರ್ಕಾರಗಳು ಮನಗಾಣಬೇಕು ಎಂದು ತಮ್ಮ ಹೇಳಿಕೆಯಲ್ಲಿ ಪೂಜಾರ ಅವರು ಸರಕಾರಕ್ಕೆ ತಿಳಿ ಹೇಳಿದ್ದಾರೆ.

ಇದನ್ನೂ ಓದಿ….ಉಡುಪಿ : ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...