Homeಕರ್ನಾಟಕನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

- Advertisement -
- Advertisement -

ಬೆಂಗಳೂರು: ಉಡುಪಿಯ ಕಬ್ಬಿನಾಲೆ ಸಮೀಪ, ನಕಲಿ ಎನ್ ಕೌಂಟರ್ ಮೂಲಕ ವಿಕ್ರಂ ಗೌಡ ನನ್ನು ಹತ್ಯೆ ಮಾಡಿರುವ ಪೋಲಿಸ್ ಇಲಾಖೆಯ ಕ್ರಮವನ್ನು   ಸಿಪಿಐ (ಎಂಎಲ್) ಮಾಸ್ ಲೈನ್ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಡಿ.ಹೆಚ್.ಪೂಜಾರ ರಾಜ್ಯ ಕಾರ್ಯದರ್ಶಿ ಹೇಳಿದ್ದಾರೆ.

ನಮ್ಮ ಸಿಪಿಐಎಂಎಲ್ ಮಾಸ್ ಲೈನ್ ಪಕ್ಷವು ನಕ್ಸಲ್ ರಾಜಕೀಯ ಸಿದ್ಧಾಂತವನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ  ಪ್ರಜಾತಾಂತ್ರಿಕ ಹಕ್ಕುಗಳನ್ನು ದಮನ  ಮಾಡುವ  ಮತ್ತು ಸರ್ಕಾದ   ಸಂವಿಧಾನ ವಿರೋಧಿ  ಕೃತ್ಯಗಳನ್ನು ಸಹಿಸಿಕೊಳ್ಳುವುದಿಲ್ಲ. ಸಾಮಾಜಿಕ ನ್ಯಾಯ ಮತ್ತು ಸಮಾಜವಾದಿ ಸಿದ್ದಾಂತದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಿಂದ ನಡೆದ ಈ ಹತ್ಯೆ ಕೆಲವರಿಗೆ ತೀವ್ರ  ಆಘಾತವಾಗಿದೆ ಎಂದು ಪಕ್ಷದ ವತಿಯಿಂದ ಹೊರಡಿಸಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ವಾರದ ಹಿಂದೆ ಬಂಧಿಸಿ ಕೊಲೆ ಮಾಡಲಾಗಿದೆ ಎಂದು ರಾಜ್ಯದ ಅನೇಕ ಪ್ರಗತಿಪರರು ಅನುಮಾನ ವ್ಯಕ್ತಪಡಿಸಿದ್ದಾರೆ. ಎನ್ ಕೌಂಟರ್ ಕಾರ್ಯ ನಡೆದಿದ್ದರೆ, ಪೋಲಿಸ್ ರಿಗೆ ಗಾಯಗಳಾಗಬೇಕಿತ್ತು. ಸತತ ಒಂದು ವಾರದ ಬೆಳವಣಿಗೆಯನ್ನು ಗಮನಿಸಿದರೆ ನಕಲಿ ಎನ್ ಕೌಂಟರ್ ಎನ್ನುವುದ ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ದೂರಿದ್ದಾರೆ.

ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ನಕ್ಸಲ್ ಕಾರ್ಯಚಟುವಟಿಕೆಗಳು ಮತ್ತು ಹಿಂಸಾತ್ಮಕ ಕೃತ್ಯಗಳು ನಡೆದಿಲ್ಲ. ಈ ರೀತಿಯ ವ್ಯಕ್ತಿಗಳನ್ನು ಕೊಲ್ಲುವುದರೊಂದಿಗೆ ಪ್ರಜಾತಂತ್ರಿಕ ಚಳುವಳಿಗಾರರನ್ನು ಬೆದರಿಸುವ ರಾಜಕೀಯ ತಂತ್ರವನ್ನು ಪ್ರತಿಯೊಬ್ಬರು ಖಂಡಿಸಬೇಕು. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಿ ಸತ್ಯಾಸತ್ಯತೆಯ ವಾಸ್ತವವನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.

ನಕ್ಸಲರ ಹೋರಾಟದ ದಾರಿ ಸರಿ ಇಲ್ಲದಿರಬಹುದು, ಅವರ ಬೇಡಿಕೆಗಳನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಎಷ್ಟೋ ಬಾರಿ ಸರ್ಕಾರದ ಮುಖ್ಯಸ್ಥರುಗಳೇ ನಕ್ಸಲ್ ಚಳವಳಿಯ ಬದ್ದತೆಯನ್ನು ಶ್ಲಾಘಿಸಿದ್ದಿದೆ. “ನಕ್ಸಲರು ಎಂದರೆ ಅನ್ಯಾಯದ ವಿರುದ್ದ ಹೋರಾಡುವ ಪಡೆ” ಎಂದು ವಿಧಾನಸಭೆ ಅಧ್ಯಕ್ಷ ಪೀಠದಿಂದಲೇ ಕಾಗೋಡು ತಿಮ್ಮಪ್ಪನವರು ಹೇಳಿದ್ದರು‌. ನಕ್ಸಲ್ ಚಳವಳಿ ಎನ್ನುವುದು ಶೋಕಿಗಾಗಿಯೋ, ವೈಯುಕ್ತಿಕ ಲಾಭಕ್ಕಾಗಿಯೋ ನಡೆಸುವ ಅಪರಾಧ ಅಲ್ಲ. ನಕ್ಸಲರ ಬೇಡಿಕೆಗಳು ದಲಿತ, ಆದಿವಾಸಿಗಳ ‘ಕನಿಷ್ಠ ಘನತೆಯ ಬದುಕಿಗಾಗಿ’ ನಡೆಯುವ ಹೋರಾಟ. ಎನ್ ಕೌಂಟರ್ ಗಳನ್ನು ಸಂಭ್ರಮಿಸುವುದಕ್ಕೂ ಮೊದಲು ನಕ್ಸಲರು ಯಾರಿಗಾಗಿ, ಯಾಕಾಗಿ ಹೋರಾಟ ಮಾಡುತ್ತಾರೆ ಎಂಬುದನ್ನು ತಿಳಿಯಬೇಕು ಎಂದು ಪೂಜಾರ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅರಣ್ಯದಲ್ಲಿ ವಾಸಿಸುವ ಆದಿವಾಸಿ, ದಲಿತರು ತಮ್ಮ ವಾಸಿಸುವ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಅವರನ್ನು ಅಭಯಾರಣ್ಯ, ರಾಷ್ಟ್ರೀಯ ಉದ್ಯಾನವನ ನಿರ್ಮಾಣ ಕಾರಣಕ್ಕಾಗಿ ಒಕ್ಕಲೆಬ್ಬಿಸುತ್ತಿದ್ದಾರೆ. ಆದಿವಾಸಿಗಳನ್ನು ಹೊರಹಾಕಿ ರೆಸಾರ್ಟ್, ಗಣಿಗಾರಿಕೆಗೆ ಸರ್ಕಾರ ಅನುಮತಿ ನೀಡುತ್ತದೆ. ನಾಗರಿಕ ಸಮಾಜದಿಂದ ನಿರ್ಲಕ್ಷಿತವಾಗಿರುವ ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಕ್ಸಲರು ಹೋರಾಡುತ್ತಾರೆ. ಅರಣ್ಯವಾಸಿ ದಲಿತ, ಬುಡಕಟ್ಟುಗಳ ಬಹಳಷ್ಟು ಜಮೀನುಗಳನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ತೆಗೆದುಕೊಂಡಿರುವುದರಿಂದ ಅವರ ಬದುಕು ದುಸ್ಥರವಾಗಿದೆ. ಈಗ ಆದಿವಾಸಿಗಳು ಅರಣ್ಯದಲ್ಲಿ ಕೃಷಿ ಮಾಡುವಂತಿಲ್ಲ, ಅರಣ್ಯ ಉತ್ಪತ್ತಿ ಸಂಗ್ರಹಿಸುವಂತಿಲ್ಲ. ಬಡತನ ಮತ್ತು ಸಮಾನತೆ ಕೊರತೆಯ ವಿರುದ್ಧ ನಕ್ಸಲರು ಹೋರಾಟವನ್ನು ನಡೆಸಿದ್ದಾರೆ. ಅದು ಅವರಿಗೆ ಸ್ಥಳೀಯ ಜನರಿಂದ ಕೆಲವು ಮಟ್ಟದ ಬೆಂಬಲವನ್ನು ತಂದುಕೊಟ್ಟಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಲೆನಾಡು ಪ್ರದೇಶದಲ್ಲಿ ತೋಟದ ಕಾರ್ಮಿಕರ ಸಮಸ್ಯೆಗಳನ್ನು ಕೇಳುವವರೇ ಇಲ್ಲ. ನೂರಾರು, ಸಾವಿರಾರು ಎಕರೆ ತೋಟ ಹೊಂದಿರುವ ಭೂಮಾಲಕರು ತೋಟದ ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳುತ್ತಾರೆ. ಅದರ ವಿರುದ್ದದ ಜನಚಳವಳಿಯನ್ನೂ ನಕ್ಸಲರು ನಡೆಸುತ್ತಾರೆ.  ಮೂಲನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು‌. ಶತಶತಮಾನದಿಂದ ಬಾಳಿ ಬದುಕಿರುವ ಭೂಮಿ ಅವರದ್ದಾಗಬೇಕು. ರಸ್ತೆ, ನೀರು, ವಿದ್ಯುತ್ ಒದಗಿಸಬೇಕು. ಮಲೆನಾಡು ಭಾಗದಲ್ಲಿ ಇನ್ನೂ ಜಮೀನ್ದಾರಿ ಪದ್ದತಿ ಜಾರಿಯಲ್ಲಿದೆ. ಒಬ್ಬೊಬ್ಬ ಜಮೀನ್ದಾರನೂ ಸಾವಿರಾರು ಎಕರೆ ಭೂಮಿ ಹೊಂದಿದ್ದಾನೆ. ಆತ ದುಡಿಮೆಯ ಹಣದಿಂದ ಅಷ್ಟೊಂದು ಪ್ರಮಾಣದ ಭೂಮಿ ಖರೀಧಿಸಿಲ್ಲ. ವಂಶಪಾರಂಪರ್ಯವಾಗಿ ಸಾವಿರಾರು ಎಕರೆ ಭೂಮಿ ಬಂದಿದೆ. ಅದು ಜಮೀನ್ದಾರಿ ಪದ್ದತಿಯ ಮುಂದುವರಿಕೆ ಆಗುತ್ತದೆ. ಹಾಗಾಗಿ ಅಂತಹ ಭೂಮಿಗಳನ್ನು ಸಮಾನ ಹಂಚಿಕೆ ಮಾಡಿ ಜಮೀನ್ದಾರಿ ಪದ್ದತಿಯನ್ನು ಕೊನೆಗಾಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ...ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮ

ರಾಜಕಾರಣಿಗಳು ಮತ್ತು ವ್ಯವಸ್ಥೆಯು ಆದಿವಾಸಿ, ದಲಿತರು, ಅಲ್ಪಸಂಖ್ಯಾತರ ಬದುಕಿನ ನೈಜ ಸಮಸ್ಯೆಗಳ ಬಗ್ಗೆ ಮಾತನಾಡಬೇಕೇ ಹೊರತು ಕೋಮುವಾದದ ಮೂಲಕ ಜನರನ್ನು ಒಡೆದು ಆಳಬಾರದು. ಈ ಬೇಡಿಕೆಗಳಿಗೆ ನಕ್ಸಲರನ್ನು ಎನ್ ಕೌಂಟರ್ ಮಾಡುವುದು ಪರಿಹಾರವೇ ? ನಕ್ಸಲರ ಕೊಲೆಯಿಂದ ಜನರ ಈ ಸಮಸ್ಯೆ ಬಗೆಹರಿಯುತ್ತದೆಯೇ ? 2015 ಫೆಬ್ರವರಿ 03 ರಂದು ನಡೆದ ವಿಧಾನಸಭೆ ಕಲಾಪದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರು ನಕ್ಸಲ್ ನಿಗ್ರಹಕ್ಕೆ ಬಹಳ ಸರಳವಾದ ಪರಿಹಾರ ಸೂಚಿಸುತ್ತಾರೆ. “ಕಾಡಿನ ನಿವಾಸಿಗಳಿಗೆ ಹಕ್ಕುಪತ್ರ, ನೀರು, ವಿದ್ಯುತ್, ರಸ್ತೆ ಒದಗಿಸಿ. ಅರಣ್ಯಾಧಿಕಾರಿಗಳು, ಪೊಲೀಸರು ರಾಜರಂತೆ ವರ್ತಿಸುವುದು ನಿಲ್ಲಿಸಿ. ನಕ್ಸಲ್ ಸಮಸ್ಯೆ ಪರಿಹಾರ ಆಗುತ್ತದೆ” ಎಂದು ಸರ್ಕಾರಕ್ಕೆ ಸ್ಪೀಕರ್ ಸೂಚಿಸುತ್ತಾರೆ. ಇಷ್ಟೇ ಆಗಬೇಕಿರೋದು. ನಕ್ಸಲರ ಸಾವು ನಕ್ಸಲ್ ಸಮಸ್ಯೆಗೆ ಪರಿಹಾರ ಅಲ್ಲ ಎಂಬುದನ್ನು ಸರ್ಕಾರಗಳು ಮನಗಾಣಬೇಕು ಎಂದು ತಮ್ಮ ಹೇಳಿಕೆಯಲ್ಲಿ ಪೂಜಾರ ಅವರು ಸರಕಾರಕ್ಕೆ ತಿಳಿ ಹೇಳಿದ್ದಾರೆ.

ಇದನ್ನೂ ಓದಿ….ಉಡುಪಿ : ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...