Homeಕರ್ನಾಟಕನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

- Advertisement -
- Advertisement -

ಬೆಂಗಳೂರು: ಉಡುಪಿಯ ಕಬ್ಬಿನಾಲೆ ಸಮೀಪ, ನಕಲಿ ಎನ್ ಕೌಂಟರ್ ಮೂಲಕ ವಿಕ್ರಂ ಗೌಡ ನನ್ನು ಹತ್ಯೆ ಮಾಡಿರುವ ಪೋಲಿಸ್ ಇಲಾಖೆಯ ಕ್ರಮವನ್ನು   ಸಿಪಿಐ (ಎಂಎಲ್) ಮಾಸ್ ಲೈನ್ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಡಿ.ಹೆಚ್.ಪೂಜಾರ ರಾಜ್ಯ ಕಾರ್ಯದರ್ಶಿ ಹೇಳಿದ್ದಾರೆ.

ನಮ್ಮ ಸಿಪಿಐಎಂಎಲ್ ಮಾಸ್ ಲೈನ್ ಪಕ್ಷವು ನಕ್ಸಲ್ ರಾಜಕೀಯ ಸಿದ್ಧಾಂತವನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ  ಪ್ರಜಾತಾಂತ್ರಿಕ ಹಕ್ಕುಗಳನ್ನು ದಮನ  ಮಾಡುವ  ಮತ್ತು ಸರ್ಕಾದ   ಸಂವಿಧಾನ ವಿರೋಧಿ  ಕೃತ್ಯಗಳನ್ನು ಸಹಿಸಿಕೊಳ್ಳುವುದಿಲ್ಲ. ಸಾಮಾಜಿಕ ನ್ಯಾಯ ಮತ್ತು ಸಮಾಜವಾದಿ ಸಿದ್ದಾಂತದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಿಂದ ನಡೆದ ಈ ಹತ್ಯೆ ಕೆಲವರಿಗೆ ತೀವ್ರ  ಆಘಾತವಾಗಿದೆ ಎಂದು ಪಕ್ಷದ ವತಿಯಿಂದ ಹೊರಡಿಸಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ವಾರದ ಹಿಂದೆ ಬಂಧಿಸಿ ಕೊಲೆ ಮಾಡಲಾಗಿದೆ ಎಂದು ರಾಜ್ಯದ ಅನೇಕ ಪ್ರಗತಿಪರರು ಅನುಮಾನ ವ್ಯಕ್ತಪಡಿಸಿದ್ದಾರೆ. ಎನ್ ಕೌಂಟರ್ ಕಾರ್ಯ ನಡೆದಿದ್ದರೆ, ಪೋಲಿಸ್ ರಿಗೆ ಗಾಯಗಳಾಗಬೇಕಿತ್ತು. ಸತತ ಒಂದು ವಾರದ ಬೆಳವಣಿಗೆಯನ್ನು ಗಮನಿಸಿದರೆ ನಕಲಿ ಎನ್ ಕೌಂಟರ್ ಎನ್ನುವುದ ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ದೂರಿದ್ದಾರೆ.

ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ನಕ್ಸಲ್ ಕಾರ್ಯಚಟುವಟಿಕೆಗಳು ಮತ್ತು ಹಿಂಸಾತ್ಮಕ ಕೃತ್ಯಗಳು ನಡೆದಿಲ್ಲ. ಈ ರೀತಿಯ ವ್ಯಕ್ತಿಗಳನ್ನು ಕೊಲ್ಲುವುದರೊಂದಿಗೆ ಪ್ರಜಾತಂತ್ರಿಕ ಚಳುವಳಿಗಾರರನ್ನು ಬೆದರಿಸುವ ರಾಜಕೀಯ ತಂತ್ರವನ್ನು ಪ್ರತಿಯೊಬ್ಬರು ಖಂಡಿಸಬೇಕು. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಿ ಸತ್ಯಾಸತ್ಯತೆಯ ವಾಸ್ತವವನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.

ನಕ್ಸಲರ ಹೋರಾಟದ ದಾರಿ ಸರಿ ಇಲ್ಲದಿರಬಹುದು, ಅವರ ಬೇಡಿಕೆಗಳನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಎಷ್ಟೋ ಬಾರಿ ಸರ್ಕಾರದ ಮುಖ್ಯಸ್ಥರುಗಳೇ ನಕ್ಸಲ್ ಚಳವಳಿಯ ಬದ್ದತೆಯನ್ನು ಶ್ಲಾಘಿಸಿದ್ದಿದೆ. “ನಕ್ಸಲರು ಎಂದರೆ ಅನ್ಯಾಯದ ವಿರುದ್ದ ಹೋರಾಡುವ ಪಡೆ” ಎಂದು ವಿಧಾನಸಭೆ ಅಧ್ಯಕ್ಷ ಪೀಠದಿಂದಲೇ ಕಾಗೋಡು ತಿಮ್ಮಪ್ಪನವರು ಹೇಳಿದ್ದರು‌. ನಕ್ಸಲ್ ಚಳವಳಿ ಎನ್ನುವುದು ಶೋಕಿಗಾಗಿಯೋ, ವೈಯುಕ್ತಿಕ ಲಾಭಕ್ಕಾಗಿಯೋ ನಡೆಸುವ ಅಪರಾಧ ಅಲ್ಲ. ನಕ್ಸಲರ ಬೇಡಿಕೆಗಳು ದಲಿತ, ಆದಿವಾಸಿಗಳ ‘ಕನಿಷ್ಠ ಘನತೆಯ ಬದುಕಿಗಾಗಿ’ ನಡೆಯುವ ಹೋರಾಟ. ಎನ್ ಕೌಂಟರ್ ಗಳನ್ನು ಸಂಭ್ರಮಿಸುವುದಕ್ಕೂ ಮೊದಲು ನಕ್ಸಲರು ಯಾರಿಗಾಗಿ, ಯಾಕಾಗಿ ಹೋರಾಟ ಮಾಡುತ್ತಾರೆ ಎಂಬುದನ್ನು ತಿಳಿಯಬೇಕು ಎಂದು ಪೂಜಾರ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅರಣ್ಯದಲ್ಲಿ ವಾಸಿಸುವ ಆದಿವಾಸಿ, ದಲಿತರು ತಮ್ಮ ವಾಸಿಸುವ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಅವರನ್ನು ಅಭಯಾರಣ್ಯ, ರಾಷ್ಟ್ರೀಯ ಉದ್ಯಾನವನ ನಿರ್ಮಾಣ ಕಾರಣಕ್ಕಾಗಿ ಒಕ್ಕಲೆಬ್ಬಿಸುತ್ತಿದ್ದಾರೆ. ಆದಿವಾಸಿಗಳನ್ನು ಹೊರಹಾಕಿ ರೆಸಾರ್ಟ್, ಗಣಿಗಾರಿಕೆಗೆ ಸರ್ಕಾರ ಅನುಮತಿ ನೀಡುತ್ತದೆ. ನಾಗರಿಕ ಸಮಾಜದಿಂದ ನಿರ್ಲಕ್ಷಿತವಾಗಿರುವ ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಕ್ಸಲರು ಹೋರಾಡುತ್ತಾರೆ. ಅರಣ್ಯವಾಸಿ ದಲಿತ, ಬುಡಕಟ್ಟುಗಳ ಬಹಳಷ್ಟು ಜಮೀನುಗಳನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ತೆಗೆದುಕೊಂಡಿರುವುದರಿಂದ ಅವರ ಬದುಕು ದುಸ್ಥರವಾಗಿದೆ. ಈಗ ಆದಿವಾಸಿಗಳು ಅರಣ್ಯದಲ್ಲಿ ಕೃಷಿ ಮಾಡುವಂತಿಲ್ಲ, ಅರಣ್ಯ ಉತ್ಪತ್ತಿ ಸಂಗ್ರಹಿಸುವಂತಿಲ್ಲ. ಬಡತನ ಮತ್ತು ಸಮಾನತೆ ಕೊರತೆಯ ವಿರುದ್ಧ ನಕ್ಸಲರು ಹೋರಾಟವನ್ನು ನಡೆಸಿದ್ದಾರೆ. ಅದು ಅವರಿಗೆ ಸ್ಥಳೀಯ ಜನರಿಂದ ಕೆಲವು ಮಟ್ಟದ ಬೆಂಬಲವನ್ನು ತಂದುಕೊಟ್ಟಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಲೆನಾಡು ಪ್ರದೇಶದಲ್ಲಿ ತೋಟದ ಕಾರ್ಮಿಕರ ಸಮಸ್ಯೆಗಳನ್ನು ಕೇಳುವವರೇ ಇಲ್ಲ. ನೂರಾರು, ಸಾವಿರಾರು ಎಕರೆ ತೋಟ ಹೊಂದಿರುವ ಭೂಮಾಲಕರು ತೋಟದ ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳುತ್ತಾರೆ. ಅದರ ವಿರುದ್ದದ ಜನಚಳವಳಿಯನ್ನೂ ನಕ್ಸಲರು ನಡೆಸುತ್ತಾರೆ.  ಮೂಲನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು‌. ಶತಶತಮಾನದಿಂದ ಬಾಳಿ ಬದುಕಿರುವ ಭೂಮಿ ಅವರದ್ದಾಗಬೇಕು. ರಸ್ತೆ, ನೀರು, ವಿದ್ಯುತ್ ಒದಗಿಸಬೇಕು. ಮಲೆನಾಡು ಭಾಗದಲ್ಲಿ ಇನ್ನೂ ಜಮೀನ್ದಾರಿ ಪದ್ದತಿ ಜಾರಿಯಲ್ಲಿದೆ. ಒಬ್ಬೊಬ್ಬ ಜಮೀನ್ದಾರನೂ ಸಾವಿರಾರು ಎಕರೆ ಭೂಮಿ ಹೊಂದಿದ್ದಾನೆ. ಆತ ದುಡಿಮೆಯ ಹಣದಿಂದ ಅಷ್ಟೊಂದು ಪ್ರಮಾಣದ ಭೂಮಿ ಖರೀಧಿಸಿಲ್ಲ. ವಂಶಪಾರಂಪರ್ಯವಾಗಿ ಸಾವಿರಾರು ಎಕರೆ ಭೂಮಿ ಬಂದಿದೆ. ಅದು ಜಮೀನ್ದಾರಿ ಪದ್ದತಿಯ ಮುಂದುವರಿಕೆ ಆಗುತ್ತದೆ. ಹಾಗಾಗಿ ಅಂತಹ ಭೂಮಿಗಳನ್ನು ಸಮಾನ ಹಂಚಿಕೆ ಮಾಡಿ ಜಮೀನ್ದಾರಿ ಪದ್ದತಿಯನ್ನು ಕೊನೆಗಾಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ...ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮ

ರಾಜಕಾರಣಿಗಳು ಮತ್ತು ವ್ಯವಸ್ಥೆಯು ಆದಿವಾಸಿ, ದಲಿತರು, ಅಲ್ಪಸಂಖ್ಯಾತರ ಬದುಕಿನ ನೈಜ ಸಮಸ್ಯೆಗಳ ಬಗ್ಗೆ ಮಾತನಾಡಬೇಕೇ ಹೊರತು ಕೋಮುವಾದದ ಮೂಲಕ ಜನರನ್ನು ಒಡೆದು ಆಳಬಾರದು. ಈ ಬೇಡಿಕೆಗಳಿಗೆ ನಕ್ಸಲರನ್ನು ಎನ್ ಕೌಂಟರ್ ಮಾಡುವುದು ಪರಿಹಾರವೇ ? ನಕ್ಸಲರ ಕೊಲೆಯಿಂದ ಜನರ ಈ ಸಮಸ್ಯೆ ಬಗೆಹರಿಯುತ್ತದೆಯೇ ? 2015 ಫೆಬ್ರವರಿ 03 ರಂದು ನಡೆದ ವಿಧಾನಸಭೆ ಕಲಾಪದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರು ನಕ್ಸಲ್ ನಿಗ್ರಹಕ್ಕೆ ಬಹಳ ಸರಳವಾದ ಪರಿಹಾರ ಸೂಚಿಸುತ್ತಾರೆ. “ಕಾಡಿನ ನಿವಾಸಿಗಳಿಗೆ ಹಕ್ಕುಪತ್ರ, ನೀರು, ವಿದ್ಯುತ್, ರಸ್ತೆ ಒದಗಿಸಿ. ಅರಣ್ಯಾಧಿಕಾರಿಗಳು, ಪೊಲೀಸರು ರಾಜರಂತೆ ವರ್ತಿಸುವುದು ನಿಲ್ಲಿಸಿ. ನಕ್ಸಲ್ ಸಮಸ್ಯೆ ಪರಿಹಾರ ಆಗುತ್ತದೆ” ಎಂದು ಸರ್ಕಾರಕ್ಕೆ ಸ್ಪೀಕರ್ ಸೂಚಿಸುತ್ತಾರೆ. ಇಷ್ಟೇ ಆಗಬೇಕಿರೋದು. ನಕ್ಸಲರ ಸಾವು ನಕ್ಸಲ್ ಸಮಸ್ಯೆಗೆ ಪರಿಹಾರ ಅಲ್ಲ ಎಂಬುದನ್ನು ಸರ್ಕಾರಗಳು ಮನಗಾಣಬೇಕು ಎಂದು ತಮ್ಮ ಹೇಳಿಕೆಯಲ್ಲಿ ಪೂಜಾರ ಅವರು ಸರಕಾರಕ್ಕೆ ತಿಳಿ ಹೇಳಿದ್ದಾರೆ.

ಇದನ್ನೂ ಓದಿ….ಉಡುಪಿ : ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...