Homeಕರ್ನಾಟಕನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

- Advertisement -
- Advertisement -

ಬೆಂಗಳೂರು: ಉಡುಪಿಯ ಕಬ್ಬಿನಾಲೆ ಸಮೀಪ, ನಕಲಿ ಎನ್ ಕೌಂಟರ್ ಮೂಲಕ ವಿಕ್ರಂ ಗೌಡ ನನ್ನು ಹತ್ಯೆ ಮಾಡಿರುವ ಪೋಲಿಸ್ ಇಲಾಖೆಯ ಕ್ರಮವನ್ನು   ಸಿಪಿಐ (ಎಂಎಲ್) ಮಾಸ್ ಲೈನ್ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಡಿ.ಹೆಚ್.ಪೂಜಾರ ರಾಜ್ಯ ಕಾರ್ಯದರ್ಶಿ ಹೇಳಿದ್ದಾರೆ.

ನಮ್ಮ ಸಿಪಿಐಎಂಎಲ್ ಮಾಸ್ ಲೈನ್ ಪಕ್ಷವು ನಕ್ಸಲ್ ರಾಜಕೀಯ ಸಿದ್ಧಾಂತವನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ  ಪ್ರಜಾತಾಂತ್ರಿಕ ಹಕ್ಕುಗಳನ್ನು ದಮನ  ಮಾಡುವ  ಮತ್ತು ಸರ್ಕಾದ   ಸಂವಿಧಾನ ವಿರೋಧಿ  ಕೃತ್ಯಗಳನ್ನು ಸಹಿಸಿಕೊಳ್ಳುವುದಿಲ್ಲ. ಸಾಮಾಜಿಕ ನ್ಯಾಯ ಮತ್ತು ಸಮಾಜವಾದಿ ಸಿದ್ದಾಂತದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಿಂದ ನಡೆದ ಈ ಹತ್ಯೆ ಕೆಲವರಿಗೆ ತೀವ್ರ  ಆಘಾತವಾಗಿದೆ ಎಂದು ಪಕ್ಷದ ವತಿಯಿಂದ ಹೊರಡಿಸಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ವಾರದ ಹಿಂದೆ ಬಂಧಿಸಿ ಕೊಲೆ ಮಾಡಲಾಗಿದೆ ಎಂದು ರಾಜ್ಯದ ಅನೇಕ ಪ್ರಗತಿಪರರು ಅನುಮಾನ ವ್ಯಕ್ತಪಡಿಸಿದ್ದಾರೆ. ಎನ್ ಕೌಂಟರ್ ಕಾರ್ಯ ನಡೆದಿದ್ದರೆ, ಪೋಲಿಸ್ ರಿಗೆ ಗಾಯಗಳಾಗಬೇಕಿತ್ತು. ಸತತ ಒಂದು ವಾರದ ಬೆಳವಣಿಗೆಯನ್ನು ಗಮನಿಸಿದರೆ ನಕಲಿ ಎನ್ ಕೌಂಟರ್ ಎನ್ನುವುದ ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ದೂರಿದ್ದಾರೆ.

ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ನಕ್ಸಲ್ ಕಾರ್ಯಚಟುವಟಿಕೆಗಳು ಮತ್ತು ಹಿಂಸಾತ್ಮಕ ಕೃತ್ಯಗಳು ನಡೆದಿಲ್ಲ. ಈ ರೀತಿಯ ವ್ಯಕ್ತಿಗಳನ್ನು ಕೊಲ್ಲುವುದರೊಂದಿಗೆ ಪ್ರಜಾತಂತ್ರಿಕ ಚಳುವಳಿಗಾರರನ್ನು ಬೆದರಿಸುವ ರಾಜಕೀಯ ತಂತ್ರವನ್ನು ಪ್ರತಿಯೊಬ್ಬರು ಖಂಡಿಸಬೇಕು. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಿ ಸತ್ಯಾಸತ್ಯತೆಯ ವಾಸ್ತವವನ್ನು ರಾಜ್ಯದ ಜನತೆಗೆ ತಿಳಿಸಬೇಕೆಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.

ನಕ್ಸಲರ ಹೋರಾಟದ ದಾರಿ ಸರಿ ಇಲ್ಲದಿರಬಹುದು, ಅವರ ಬೇಡಿಕೆಗಳನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಎಷ್ಟೋ ಬಾರಿ ಸರ್ಕಾರದ ಮುಖ್ಯಸ್ಥರುಗಳೇ ನಕ್ಸಲ್ ಚಳವಳಿಯ ಬದ್ದತೆಯನ್ನು ಶ್ಲಾಘಿಸಿದ್ದಿದೆ. “ನಕ್ಸಲರು ಎಂದರೆ ಅನ್ಯಾಯದ ವಿರುದ್ದ ಹೋರಾಡುವ ಪಡೆ” ಎಂದು ವಿಧಾನಸಭೆ ಅಧ್ಯಕ್ಷ ಪೀಠದಿಂದಲೇ ಕಾಗೋಡು ತಿಮ್ಮಪ್ಪನವರು ಹೇಳಿದ್ದರು‌. ನಕ್ಸಲ್ ಚಳವಳಿ ಎನ್ನುವುದು ಶೋಕಿಗಾಗಿಯೋ, ವೈಯುಕ್ತಿಕ ಲಾಭಕ್ಕಾಗಿಯೋ ನಡೆಸುವ ಅಪರಾಧ ಅಲ್ಲ. ನಕ್ಸಲರ ಬೇಡಿಕೆಗಳು ದಲಿತ, ಆದಿವಾಸಿಗಳ ‘ಕನಿಷ್ಠ ಘನತೆಯ ಬದುಕಿಗಾಗಿ’ ನಡೆಯುವ ಹೋರಾಟ. ಎನ್ ಕೌಂಟರ್ ಗಳನ್ನು ಸಂಭ್ರಮಿಸುವುದಕ್ಕೂ ಮೊದಲು ನಕ್ಸಲರು ಯಾರಿಗಾಗಿ, ಯಾಕಾಗಿ ಹೋರಾಟ ಮಾಡುತ್ತಾರೆ ಎಂಬುದನ್ನು ತಿಳಿಯಬೇಕು ಎಂದು ಪೂಜಾರ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅರಣ್ಯದಲ್ಲಿ ವಾಸಿಸುವ ಆದಿವಾಸಿ, ದಲಿತರು ತಮ್ಮ ವಾಸಿಸುವ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಅವರನ್ನು ಅಭಯಾರಣ್ಯ, ರಾಷ್ಟ್ರೀಯ ಉದ್ಯಾನವನ ನಿರ್ಮಾಣ ಕಾರಣಕ್ಕಾಗಿ ಒಕ್ಕಲೆಬ್ಬಿಸುತ್ತಿದ್ದಾರೆ. ಆದಿವಾಸಿಗಳನ್ನು ಹೊರಹಾಕಿ ರೆಸಾರ್ಟ್, ಗಣಿಗಾರಿಕೆಗೆ ಸರ್ಕಾರ ಅನುಮತಿ ನೀಡುತ್ತದೆ. ನಾಗರಿಕ ಸಮಾಜದಿಂದ ನಿರ್ಲಕ್ಷಿತವಾಗಿರುವ ಆದಿವಾಸಿ ಸಮುದಾಯದ ಹಕ್ಕುಗಳಿಗಾಗಿ ನಕ್ಸಲರು ಹೋರಾಡುತ್ತಾರೆ. ಅರಣ್ಯವಾಸಿ ದಲಿತ, ಬುಡಕಟ್ಟುಗಳ ಬಹಳಷ್ಟು ಜಮೀನುಗಳನ್ನು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ತೆಗೆದುಕೊಂಡಿರುವುದರಿಂದ ಅವರ ಬದುಕು ದುಸ್ಥರವಾಗಿದೆ. ಈಗ ಆದಿವಾಸಿಗಳು ಅರಣ್ಯದಲ್ಲಿ ಕೃಷಿ ಮಾಡುವಂತಿಲ್ಲ, ಅರಣ್ಯ ಉತ್ಪತ್ತಿ ಸಂಗ್ರಹಿಸುವಂತಿಲ್ಲ. ಬಡತನ ಮತ್ತು ಸಮಾನತೆ ಕೊರತೆಯ ವಿರುದ್ಧ ನಕ್ಸಲರು ಹೋರಾಟವನ್ನು ನಡೆಸಿದ್ದಾರೆ. ಅದು ಅವರಿಗೆ ಸ್ಥಳೀಯ ಜನರಿಂದ ಕೆಲವು ಮಟ್ಟದ ಬೆಂಬಲವನ್ನು ತಂದುಕೊಟ್ಟಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಲೆನಾಡು ಪ್ರದೇಶದಲ್ಲಿ ತೋಟದ ಕಾರ್ಮಿಕರ ಸಮಸ್ಯೆಗಳನ್ನು ಕೇಳುವವರೇ ಇಲ್ಲ. ನೂರಾರು, ಸಾವಿರಾರು ಎಕರೆ ತೋಟ ಹೊಂದಿರುವ ಭೂಮಾಲಕರು ತೋಟದ ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳುತ್ತಾರೆ. ಅದರ ವಿರುದ್ದದ ಜನಚಳವಳಿಯನ್ನೂ ನಕ್ಸಲರು ನಡೆಸುತ್ತಾರೆ.  ಮೂಲನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು‌. ಶತಶತಮಾನದಿಂದ ಬಾಳಿ ಬದುಕಿರುವ ಭೂಮಿ ಅವರದ್ದಾಗಬೇಕು. ರಸ್ತೆ, ನೀರು, ವಿದ್ಯುತ್ ಒದಗಿಸಬೇಕು. ಮಲೆನಾಡು ಭಾಗದಲ್ಲಿ ಇನ್ನೂ ಜಮೀನ್ದಾರಿ ಪದ್ದತಿ ಜಾರಿಯಲ್ಲಿದೆ. ಒಬ್ಬೊಬ್ಬ ಜಮೀನ್ದಾರನೂ ಸಾವಿರಾರು ಎಕರೆ ಭೂಮಿ ಹೊಂದಿದ್ದಾನೆ. ಆತ ದುಡಿಮೆಯ ಹಣದಿಂದ ಅಷ್ಟೊಂದು ಪ್ರಮಾಣದ ಭೂಮಿ ಖರೀಧಿಸಿಲ್ಲ. ವಂಶಪಾರಂಪರ್ಯವಾಗಿ ಸಾವಿರಾರು ಎಕರೆ ಭೂಮಿ ಬಂದಿದೆ. ಅದು ಜಮೀನ್ದಾರಿ ಪದ್ದತಿಯ ಮುಂದುವರಿಕೆ ಆಗುತ್ತದೆ. ಹಾಗಾಗಿ ಅಂತಹ ಭೂಮಿಗಳನ್ನು ಸಮಾನ ಹಂಚಿಕೆ ಮಾಡಿ ಜಮೀನ್ದಾರಿ ಪದ್ದತಿಯನ್ನು ಕೊನೆಗಾಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ...ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮ

ರಾಜಕಾರಣಿಗಳು ಮತ್ತು ವ್ಯವಸ್ಥೆಯು ಆದಿವಾಸಿ, ದಲಿತರು, ಅಲ್ಪಸಂಖ್ಯಾತರ ಬದುಕಿನ ನೈಜ ಸಮಸ್ಯೆಗಳ ಬಗ್ಗೆ ಮಾತನಾಡಬೇಕೇ ಹೊರತು ಕೋಮುವಾದದ ಮೂಲಕ ಜನರನ್ನು ಒಡೆದು ಆಳಬಾರದು. ಈ ಬೇಡಿಕೆಗಳಿಗೆ ನಕ್ಸಲರನ್ನು ಎನ್ ಕೌಂಟರ್ ಮಾಡುವುದು ಪರಿಹಾರವೇ ? ನಕ್ಸಲರ ಕೊಲೆಯಿಂದ ಜನರ ಈ ಸಮಸ್ಯೆ ಬಗೆಹರಿಯುತ್ತದೆಯೇ ? 2015 ಫೆಬ್ರವರಿ 03 ರಂದು ನಡೆದ ವಿಧಾನಸಭೆ ಕಲಾಪದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರು ನಕ್ಸಲ್ ನಿಗ್ರಹಕ್ಕೆ ಬಹಳ ಸರಳವಾದ ಪರಿಹಾರ ಸೂಚಿಸುತ್ತಾರೆ. “ಕಾಡಿನ ನಿವಾಸಿಗಳಿಗೆ ಹಕ್ಕುಪತ್ರ, ನೀರು, ವಿದ್ಯುತ್, ರಸ್ತೆ ಒದಗಿಸಿ. ಅರಣ್ಯಾಧಿಕಾರಿಗಳು, ಪೊಲೀಸರು ರಾಜರಂತೆ ವರ್ತಿಸುವುದು ನಿಲ್ಲಿಸಿ. ನಕ್ಸಲ್ ಸಮಸ್ಯೆ ಪರಿಹಾರ ಆಗುತ್ತದೆ” ಎಂದು ಸರ್ಕಾರಕ್ಕೆ ಸ್ಪೀಕರ್ ಸೂಚಿಸುತ್ತಾರೆ. ಇಷ್ಟೇ ಆಗಬೇಕಿರೋದು. ನಕ್ಸಲರ ಸಾವು ನಕ್ಸಲ್ ಸಮಸ್ಯೆಗೆ ಪರಿಹಾರ ಅಲ್ಲ ಎಂಬುದನ್ನು ಸರ್ಕಾರಗಳು ಮನಗಾಣಬೇಕು ಎಂದು ತಮ್ಮ ಹೇಳಿಕೆಯಲ್ಲಿ ಪೂಜಾರ ಅವರು ಸರಕಾರಕ್ಕೆ ತಿಳಿ ಹೇಳಿದ್ದಾರೆ.

ಇದನ್ನೂ ಓದಿ….ಉಡುಪಿ : ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...