Homeಕರ್ನಾಟಕನಕ್ಸಲೈಟ್‌ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ ಎಂದು ತೀರ್ಪಿತ್ತ ಕೋರ್ಟ್

ನಕ್ಸಲೈಟ್‌ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ ಎಂದು ತೀರ್ಪಿತ್ತ ಕೋರ್ಟ್

- Advertisement -
- Advertisement -

2012 ರಲ್ಲಿ ನಕ್ಸಲ್ ನಿಗ್ರಹ ದಳದಿಂದ ಬಂಧಿಸಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯರನ್ನು, ಮೂರನೇ ಹೆಚ್ಚುವರಿ ನ್ಯಾಯಾಲಯವು ಗುರುವಾರ ನಿರ್ದೋಷಿ ಎಂದು ತೀರ್ಪು ನೀಡಿದೆ. ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದಲ್ಲಿ ವಿಠಲ ಮಲೆಕುಡಿಯ ಬಂಧನಕ್ಕೆ ಒಳಗಾಗುವ ವೇಳೆ ಅವರು ಮಂಗಳೂರು ವಿಶ್ವವಿದ್ಯಾನಿಯಲದ ಪತ್ರಿಕೋಧ್ಯಮದ ವಿದ್ಯಾರ್ಥಿಯಾಗಿದ್ದರು. ಜೈಲಿನಲ್ಲಿದ್ದಾಗ ಅವರು ಕಾಲೇಜಿಗೆ ಪರೀಕ್ಷೆ ಬರೆಯಲು ಕೈಯ್ಯಲ್ಲಿ ಬೇಡಿ ಹಾಕಿಕೊಂಡೆ ಬಂದಿದ್ದರು. ಇದರ ವಿರುದ್ದ ದೇಶದಾದ್ಯಂತ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ವಿಠಲ ಮಲೆಕುಡಿಯ ನಕ್ಸಲ್ ಚಟುವಟಿಕೆ ಮಾಡುತ್ತಿದ್ದರು ಎಂದು ಆರೋಪಿಸಿ ಅವರ ವಿರುದ್ದ ದೇಶದ್ರೋಹದ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಸಮಯದಲ್ಲಿ ವಿಠಲ ಅವರು ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದ ಮೂಲನಿವಾಸಿಗಳನ್ನು ಒಕ್ಕಲೆಬ್ಬಿಸುವ ಜಿಲ್ಲಾಡಳಿತದ ಕ್ರಮದ ವಿರುದ್ದ ಹೋರಾಟ ನಡೆಸುತ್ತಿದ್ದರು. ಬಂಧನಕ್ಕೆ ಒಳಗಾಗಿ ಮೂರು ತಿಂಗಳ ಬಳಿಕ ಅವರಿಗೆ ಜಾಮೀನು ನೀಡಲಾಗಿತ್ತು.

ಇದನ್ನೂ ಓದಿ: ಧರ್ಮಸ್ಥಳ: ನಾಪತ್ತೆಯಾಗಿದ್ದ ಮಲೆಕುಡಿಯ ಆದಿವಾಸಿ ಯುವತಿಯ ಶವ ಕಾಡಿನಲ್ಲಿ ಪತ್ತೆ

ನಕ್ಸಲ್ ನಿಗ್ರಹ ದಳವು ಅವರನ್ನು ಬಂಧಿಸಿದಾಗ ಅವರು ತನ್ನ ಮನೆಯಲ್ಲಿ ಭಗತ್‌ ಸಿಂಗ್ ಪುಸ್ತಕ ಹೊಂದಿದ್ದರು ಎಂದು ಮುಖ್ಯವಾಗಿ ಆರೋಪಿಸಿದ್ದರು. ಆದರೆ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಭಗತ್ ಸಿಂಗ್ ಸಾಹಿತ್ಯ ಓದುವುದು ಅಪರಾಧ ಅಲ್ಲ ಎಂದು ಒಪ್ಪಿಕೊಂಡಿದ್ದರು.

ಈ ಬಗ್ಗೆ ತನ್ನ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಅಂತಿಮವಾಗಿ ನ್ಯಾಯಾಲಯ ನ್ಯಾಯ ಒದಗಿಸಿದೆ. ಸರಕಾರಕ್ಕೆ ಮುಖಭಂಗವಾಗಿದೆ. ವಕೀಲ ದಿನೇಶ್ ಹೆಗ್ಡೆ ನ್ಯಾಯಾಲಯದಲ್ಲಿ ಉಚಿತವಾಗಿ ವಾದ ಮಂಡಿಸಿದ್ದರು. ಮಾಧ್ಯಮಗಳು ಅಂದು ನಮ್ಮ ಜೊತೆ ನಿಂತಿದ್ದವು. ಎಲ್ಲರಿಗೂ ಡಿವೈಎಫ್ಐ ರಾಜ್ಯ ಸಮಿತಿ ಕೃತಜ್ಞತೆ ಸಲ್ಲಿಸುತ್ತದೆ. ಕುಲದೀಪ್ ನಯ್ಯರ್ ಬರೆದ ಭಗತ್ ಸಿಂಗ್ ಪುಸ್ತಕ, ಧರ್ಮಸ್ಥಳದ ಜಾತ್ರೆಯಲ್ಲಿ ಖರೀದಿಸಿದ್ದ ಆಟಿಕೆ ಬೈನಾಕುಲರ್, ನೂರು ಗ್ರಾಂ ಕಾಮತ್ ಕಾಫಿ ಪುಡಿ, ಕಾಲು ಕೆ ಜಿ ಸಕ್ಕರೆ, ಎರಡು ಸ್ಟೀಲ್ ತಟ್ಟೆಯನ್ನು ಇಟ್ಟು ಯುಎಪಿಎ ಕಾಯ್ದೆಯಡಿ ಆದಿವಾಸಿ ವಿದ್ಯಾರ್ಥಿಯ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಸರಕಾರಕ್ಕೆ ಈಗ ನಾಚಿಕೆ ಆಗಬೇಕು” ಎಂದು ಕಿಡಿ ಕಾಡಿದ್ದಾರೆ.

ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿರುವ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಂಘಟನಾ ಸಮಿತಿಯು “ಇದು ನ್ಯಾಯಯುತ ಹೋರಾಟಕ್ಕೆ, ಸತ್ಯಕ್ಕೆ ಸಂದ ಜಯ. ಈ ತೀರ್ಪು ಆಳುವ ಸರ್ಕಾರ ಮತ್ತು ಸ್ಥಾಪಿತ ಹಿತಾಸಕ್ತಿಗಳ ಕುತಂತ್ರವನ್ನು ಬಯಲಿಗೆಳೆದಿದೆ” ಎಂದು ತಿಳಿಸಿದೆ.

ಒಂಬತ್ತು ವರ್ಷಗಳ ಹಿಂದೆ ವಿಠಲ ಮತ್ತು ಅವರ ತಂದೆಯನ್ನು ನಕ್ಸಲೈಟ್ ಎಂದು ಆರೋಪಿಸಿ ಬಂಧಿಸಿದ್ದಾಗ ಡಿವೈಎಫ್ಐ ಸಂಘಟನೆ ಅವರ ಪರವಾಗಿ ಬೃಹತ್‌ ಹೋರಾಟಗಳನ್ನು ಸಂಘಟಿಸಿತ್ತು. ಅವರ ಹೋರಾಟವನ್ನು ಬೆಂಬಲಿಸಿ ಪ್ರಸ್ತುತ ಕೇರಳ ವಿಧಾನಸಭೆಯ ಸ್ಪೀಕರ್‌ ಆಗಿರುವ ಆಗ ಸಿಪಿಎಂ ಲೋಕಸಭಾ ಸದಸ್ಯರಾಗಿದ್ದ ಎಂಬಿ ರಾಜೇಶ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಜೈಲಿಗೆ ಭೇಟಿ ನೀಡಿ ವಿಠಲ ಮಲೆಕುಡಿಯ ಮತ್ತು ಅವರ ತಂದೆ ನಿಂಗಣ್ಣ ಮಲೆಕುಡಿಯರಿಗೆ ಧೈರ್ಯ ತುಂಬಿದ್ದರು.

ಇದನ್ನೂ ಓದಿ: ಹುಲಿಗಳಿಗೆ ಧಾಮ! ರೈತ, ಆದಿವಾಸಿಗಳಿಗೆ ಪಂಗನಾಮ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...