Homeಕರ್ನಾಟಕನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

ನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

- Advertisement -
- Advertisement -

ಬೆಂಗಳೂರು: ಕರ್ನಾಟಕದ ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಮತ್ತು ರಾಜ್ಯವನ್ನು ‘ನಕ್ಸಲ್‌ ಮುಕ್ತ’ವನ್ನಾಗಿಸಲು ಮಹತ್ತರ ಪಾತ್ರ ವಹಿಸಿದ ಕರ್ನಾಟಕದ ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತಚರ ಘಟಕದ 22 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕವನ್ನು ಘೋಷಿಸಲಾಗಿದ್ದು, ಇದನ್ನು ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೇದಿಕೆಯು, ಇವರೆಲ್ಲರನ್ನೂ  ಮತ್ತು  ಪ್ರಧಾನವಾಗಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯ ಗುಪ್ತವಾರ್ತೆಯ ನಿರ್ದೇಶಕ ಹೇಮಂತ್‌ ಎಂ ನಿಂಬಾಳ್ಕರ್‌ ಹಾಗೂ ಉಪನಿರ್ದೇಶಕ ಹರಿರಾಮ್‌ ಶಂಕರ್‌ ಅವರನ್ನು, ʼಶಾಂತಿಗಾಗಿ ನಾಗರಿಕರ ವೇದಿಕೆʼ ಅಭಿನಂದಿಸುತ್ತದೆ. ಇವರಿಬ್ಬರೂ ಈ ಕಾರ್ಯಾಚರಣೆಯ ಪ್ರಾರಂಭದಿಂದಲೂ ಹೆಚ್ಚುವರಿ ಅಸಕ್ತಿ ವಹಿಸಿ, ನಮ್ಮ ವೇದಿಕೆ ಜತೆ ಸಹಕರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ನಕ್ಸಲರನ್ನು ಘನತೆಯಿಂದ ನಡೆಸಿಕೊಳ್ಳುವ ಕುರಿತು, ಅವರನ್ನು ಕಾಡಿನಿಂದ ಮಾತ್ರವಲ್ಲ, ಜೈಲಿನಿಂದ ಹೊರತರುವಲ್ಲಿ ವಹಿಸಬೇಕಾದ ಮುತುವರ್ಜಿಗಳ ಕುರಿತು ಹಾಗೂ ಮುಖ್ಯವಾಹಿನಿಗೆ ಬಂದ ಮೇಲೆ ನೀಡಬೇಕಾದ ಅಗತ್ಯ ನೆರವಿನ ಕುರಿತು ನಾವು ಮುಂದಿಟ್ಟ ಎಲ್ಲಾ ಬೇಡಿಕೆಗಳಿಗಳನ್ನೂ ಪೂರೈಸುವ ಭರವಸೆ ನೀಡಿದ್ದರಿಂದಲೇ ಈ ಕೆಲಸವು ಸಾಂಗವಾಗಿ ನೆರವೇರಲು ಸಹಾಯವಾಯಿತು. ಇದರಲ್ಲಿ  ನಕ್ಸಲ್‌ ಪುನರ್‌ವಸತಿ ಸಮಿತಿಯ ಸದಸ್ಯರು ನೀಡಿದ ಸಹಕಾರವನ್ನೂ ಕೂಡ ನಮ್ಮ ವೇದಿಕೆ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದಿದೆ.

ಶಾಂತಿಗಾಗಿ ನಾಗರಿಕರ ವೇದಿಕ ಬಹಳ ಕಾಲದಿಂದಲೂ “ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ಬಂದೂಕಿನಿಂದ ಅಲ್ಲ” ಎಂದು ನಕ್ಸಲರಿಗೂ ಮತ್ತು ಪ್ರಭುತ್ವಕ್ಕೂ ಮನವಿಮಾಡಿಕೊಂಡೇ ಬಂದಿದೆ. ಇಬ್ಬರೂ ಈ ಮನವಿಯ ಔಚಿತ್ಯವನ್ನು ಮನಗಂಡು ಮುಂದೆ ಬಂದ್ದರಿಂದಲೇ ಈ ಕಾರ್ಯವು ಸಫಲವಾಯಿತು. ಅಲ್ಲದೆ ಸರ್ಕಾರವು ನಾಗರಿಕರ ಜತೆ ನಡೆಸುವ ಅನುಸಂಧಾನಗಳು ಪ್ರಜಾತಂತ್ರದ ಹಿರಿಮೆಯನ್ನು ಎತ್ತಿಹಿಡಿಯುತ್ತವೆ ಎಂಬುದನ್ನು ಈ ಘಟನೆ ಎತ್ತಿತೋರಿಸುತ್ತದೆ. ಇದನ್ನು ಸ್ವಾಗತಿಸುತ್ತಾ, ಇದಕ್ಕೆ ಕಾರಣರಾದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಪೊಲೀಸು ಅಧಿಕಾರಿಗಳನ್ನು ನಾವು ಮತ್ತೊಮ್ಮೆ ಅಭಿನಂದಿಸುತ್ತೇವೆ ಎಂದು ವೇದಿಕೆಯ ನಗರಗೆರೆ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವುದು ಎಂದರೆ ಅವರನ್ನು ಕಾಡಿನಿಂದ ಜೈಲಿಗೆ ಕರೆತರುವುಷ್ಟೇ ಅಲ್ಲ, ಸಮಾಜದಲ್ಲಿ ಅವರು ಗೌರವಾನ್ವಿತವಾಗಿ ಬದುಕಲು ಬೇಕಾದ ಎಲ್ಲ ಸೌಕರ್ಯವನ್ನೂ ಒದಗಿಸಿ ನಾಡಿಗೆ ಕರೆತರುವುದು ಕೂಡ. ಇದು ಪ್ರಜಾತಂತ್ರ ಸರ್ಕಾರದ ಕರ್ತವ್ಯ ಹಾಗೂ ಅದು ಜಾರಿಯಾಗುವ ಹಾಗೆ ನೋಡಿಕೊಳ್ಳುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ನಾವು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲವು ಸ್ವಾಗತಾರ್ಹ ಹೆಜ್ಜೆಗಳನ್ನು ಇಟ್ಟಿದೆ. ಉದಾಹರಣೆಗೆ ಈ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಆಲಿಸಲೆಂದೇ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ; ಆರ್ಥಿಕ ನೆರವನ್ನು ಕೂಡಲೇ ಬಿಡುಗಡೆ ಮಾಡಿದೆ. ಈ ಹಿಂದೆ ಬಂದಿದ್ದವರ ಸರಿಯಾದ ಪುನರ್ವಸತಿಗೆ ಬೇಕಾದ ಕ್ರಮವಹಿಸಲು ಮುಂದಾಗಿದೆ. ಇದು ಸಹ ಅಭಿನಂದನಾರ್ಹ ವಿಚಾರ.  ಆದರೂ ಇನ್ನೂ ಹಲವಾರು ಕೆಲಸಗಳು ಆಗಬೇಕಿದೆ. ವಿಶೇಷ ನ್ಯಾಯಾಲಯ ಕೂಡಲೇ ಕಾರ್ಯರೂಪಕ್ಕೆ ಬಂದು, ಕನಿಷ್ಟ ಎಲ್ಲರೂ ಬೇಲ್‌ ಮೇಲೆ ಹೊರಬರುವಂತಾಗಬೇಕು, ಮತ್ತು ಅಗತ್ಯ ಕಾನೂನು ಮತ್ತು ವೈದ್ಯಕೀಯ ನೆರವು ಒದಗಿಸಬೇಕು. ಸಾರಾಂಶದಲ್ಲಿ ಹೇಳಬೇಕೆಂದರೆ ಆಗಿರುವ ಕೆಲಸ ಅಭಿನಂದನಾರ್ಹವಾದದ್ದೇ  ಆದರೂ ಆಗಬೇಕಿರುವ ಕೆಲಸಗಳು ಕೂಡ ಸಾಕಷ್ಟು ಇವೆ. ಇವುಗಳನ್ನು ಕೂಡ ಸರ್ಕಾರ ಮತ್ತು ಪೊಲೀಸು ಇಲಾಖೆ ತುರ್ತಿನ ಮೇಲೆ ಕೈಗೆತ್ತಿ ಕೊಳ್ಳುತ್ತದೆ ಎಂಬ ಭರವಸೆ ನಮಗಿದೆ ಎಂದು ವೇದಿಕೆಯ ಮತ್ತೋರ್ವ ಸದಸ್ಯೆ ತಾರಾ ರಾವ್ ಹೇಳಿದ್ದಾರೆ.

ಈ ಕಾರ್ಯಾಚರಣೆ ಮೂಲಕ ಕರ್ನಾಟಕ ರಾಜ್ಯವು ಇಡೀ ದೇಶಕ್ಕೆ ಒಂದು ಶಾಂತಿಯುತ ಹಾಗೂ ಪ್ರಜಾತಾಂತ್ರಿಕ ಮಾದರಿಯನ್ನು ಕಟ್ಟಿಕೊಟ್ಟಿದೆ. ಜನರ ಸಮಸ್ಯೆಗಳನ್ನು ಬಗೆಹರಿಸದೆ, ಅವರ ಬದಕಿನ ಹಕ್ಕನ್ನು ಕಸಿಯಲು ಹೋದರೆ [ನ್ಯಾಷನಲ್‌ ಪಾರ್ಕ್‌ ವಿಚಾರದಲ್ಲಿ ಆದಂತೆ] ಜನರು ಸಶಸ್ತ್ರ ಸಂಘರ್ಷದಂತಹ ತೀಕ್ಷ್ಣ ರೂಪಗಳ ಮೊರೆಹೋಗುತ್ತಾರೆ. ಈ ರೀತಿಯ ವಿದ್ಯಮಾನಗಳು ಮತ್ತೆ ಮರುಕಳಿಸಬಾರದೆಂದರೆ ಜನಪರ ಎಂದು ಕರೆದುಕೊಳ್ಳುವ ಸರ್ಕಾರಗಳು ಜನರನ್ನು ಮೂಲೆಗೊತ್ತದೆ, ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂಬ ಪಾಠವನ್ನೂ ಈ ಪ್ರಕ್ರಿಯೆ ನೀಡಿದೆ. ಸರ್ಕಾರ ಮತ್ತು ಪೋಲೀಸ್‌ ಯಂತ್ರಾಂಗ ಈ ಪಾಠದತ್ತವೂ ಗಮನಹರಿಸಬೇಕು ಮತ್ತು ನಕ್ಸಲ್‌ ಪ್ರಭಾವಿತ ಪ್ರದೇಶದ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ವೇದಿಕೆಯ ವಿ.ಎಸ್. ಶ್ರೀಧರ್ ಮಾಹಿತಿ ನೀಡಿದ್ದಾರೆ.

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...