Homeಕರ್ನಾಟಕನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

ನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

- Advertisement -
- Advertisement -

ಬೆಂಗಳೂರು: ಕರ್ನಾಟಕದ ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಮತ್ತು ರಾಜ್ಯವನ್ನು ‘ನಕ್ಸಲ್‌ ಮುಕ್ತ’ವನ್ನಾಗಿಸಲು ಮಹತ್ತರ ಪಾತ್ರ ವಹಿಸಿದ ಕರ್ನಾಟಕದ ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತಚರ ಘಟಕದ 22 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕವನ್ನು ಘೋಷಿಸಲಾಗಿದ್ದು, ಇದನ್ನು ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೇದಿಕೆಯು, ಇವರೆಲ್ಲರನ್ನೂ  ಮತ್ತು  ಪ್ರಧಾನವಾಗಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯ ಗುಪ್ತವಾರ್ತೆಯ ನಿರ್ದೇಶಕ ಹೇಮಂತ್‌ ಎಂ ನಿಂಬಾಳ್ಕರ್‌ ಹಾಗೂ ಉಪನಿರ್ದೇಶಕ ಹರಿರಾಮ್‌ ಶಂಕರ್‌ ಅವರನ್ನು, ʼಶಾಂತಿಗಾಗಿ ನಾಗರಿಕರ ವೇದಿಕೆʼ ಅಭಿನಂದಿಸುತ್ತದೆ. ಇವರಿಬ್ಬರೂ ಈ ಕಾರ್ಯಾಚರಣೆಯ ಪ್ರಾರಂಭದಿಂದಲೂ ಹೆಚ್ಚುವರಿ ಅಸಕ್ತಿ ವಹಿಸಿ, ನಮ್ಮ ವೇದಿಕೆ ಜತೆ ಸಹಕರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ನಕ್ಸಲರನ್ನು ಘನತೆಯಿಂದ ನಡೆಸಿಕೊಳ್ಳುವ ಕುರಿತು, ಅವರನ್ನು ಕಾಡಿನಿಂದ ಮಾತ್ರವಲ್ಲ, ಜೈಲಿನಿಂದ ಹೊರತರುವಲ್ಲಿ ವಹಿಸಬೇಕಾದ ಮುತುವರ್ಜಿಗಳ ಕುರಿತು ಹಾಗೂ ಮುಖ್ಯವಾಹಿನಿಗೆ ಬಂದ ಮೇಲೆ ನೀಡಬೇಕಾದ ಅಗತ್ಯ ನೆರವಿನ ಕುರಿತು ನಾವು ಮುಂದಿಟ್ಟ ಎಲ್ಲಾ ಬೇಡಿಕೆಗಳಿಗಳನ್ನೂ ಪೂರೈಸುವ ಭರವಸೆ ನೀಡಿದ್ದರಿಂದಲೇ ಈ ಕೆಲಸವು ಸಾಂಗವಾಗಿ ನೆರವೇರಲು ಸಹಾಯವಾಯಿತು. ಇದರಲ್ಲಿ  ನಕ್ಸಲ್‌ ಪುನರ್‌ವಸತಿ ಸಮಿತಿಯ ಸದಸ್ಯರು ನೀಡಿದ ಸಹಕಾರವನ್ನೂ ಕೂಡ ನಮ್ಮ ವೇದಿಕೆ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದಿದೆ.

ಶಾಂತಿಗಾಗಿ ನಾಗರಿಕರ ವೇದಿಕ ಬಹಳ ಕಾಲದಿಂದಲೂ “ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ಬಂದೂಕಿನಿಂದ ಅಲ್ಲ” ಎಂದು ನಕ್ಸಲರಿಗೂ ಮತ್ತು ಪ್ರಭುತ್ವಕ್ಕೂ ಮನವಿಮಾಡಿಕೊಂಡೇ ಬಂದಿದೆ. ಇಬ್ಬರೂ ಈ ಮನವಿಯ ಔಚಿತ್ಯವನ್ನು ಮನಗಂಡು ಮುಂದೆ ಬಂದ್ದರಿಂದಲೇ ಈ ಕಾರ್ಯವು ಸಫಲವಾಯಿತು. ಅಲ್ಲದೆ ಸರ್ಕಾರವು ನಾಗರಿಕರ ಜತೆ ನಡೆಸುವ ಅನುಸಂಧಾನಗಳು ಪ್ರಜಾತಂತ್ರದ ಹಿರಿಮೆಯನ್ನು ಎತ್ತಿಹಿಡಿಯುತ್ತವೆ ಎಂಬುದನ್ನು ಈ ಘಟನೆ ಎತ್ತಿತೋರಿಸುತ್ತದೆ. ಇದನ್ನು ಸ್ವಾಗತಿಸುತ್ತಾ, ಇದಕ್ಕೆ ಕಾರಣರಾದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಪೊಲೀಸು ಅಧಿಕಾರಿಗಳನ್ನು ನಾವು ಮತ್ತೊಮ್ಮೆ ಅಭಿನಂದಿಸುತ್ತೇವೆ ಎಂದು ವೇದಿಕೆಯ ನಗರಗೆರೆ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವುದು ಎಂದರೆ ಅವರನ್ನು ಕಾಡಿನಿಂದ ಜೈಲಿಗೆ ಕರೆತರುವುಷ್ಟೇ ಅಲ್ಲ, ಸಮಾಜದಲ್ಲಿ ಅವರು ಗೌರವಾನ್ವಿತವಾಗಿ ಬದುಕಲು ಬೇಕಾದ ಎಲ್ಲ ಸೌಕರ್ಯವನ್ನೂ ಒದಗಿಸಿ ನಾಡಿಗೆ ಕರೆತರುವುದು ಕೂಡ. ಇದು ಪ್ರಜಾತಂತ್ರ ಸರ್ಕಾರದ ಕರ್ತವ್ಯ ಹಾಗೂ ಅದು ಜಾರಿಯಾಗುವ ಹಾಗೆ ನೋಡಿಕೊಳ್ಳುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ನಾವು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲವು ಸ್ವಾಗತಾರ್ಹ ಹೆಜ್ಜೆಗಳನ್ನು ಇಟ್ಟಿದೆ. ಉದಾಹರಣೆಗೆ ಈ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಆಲಿಸಲೆಂದೇ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ; ಆರ್ಥಿಕ ನೆರವನ್ನು ಕೂಡಲೇ ಬಿಡುಗಡೆ ಮಾಡಿದೆ. ಈ ಹಿಂದೆ ಬಂದಿದ್ದವರ ಸರಿಯಾದ ಪುನರ್ವಸತಿಗೆ ಬೇಕಾದ ಕ್ರಮವಹಿಸಲು ಮುಂದಾಗಿದೆ. ಇದು ಸಹ ಅಭಿನಂದನಾರ್ಹ ವಿಚಾರ.  ಆದರೂ ಇನ್ನೂ ಹಲವಾರು ಕೆಲಸಗಳು ಆಗಬೇಕಿದೆ. ವಿಶೇಷ ನ್ಯಾಯಾಲಯ ಕೂಡಲೇ ಕಾರ್ಯರೂಪಕ್ಕೆ ಬಂದು, ಕನಿಷ್ಟ ಎಲ್ಲರೂ ಬೇಲ್‌ ಮೇಲೆ ಹೊರಬರುವಂತಾಗಬೇಕು, ಮತ್ತು ಅಗತ್ಯ ಕಾನೂನು ಮತ್ತು ವೈದ್ಯಕೀಯ ನೆರವು ಒದಗಿಸಬೇಕು. ಸಾರಾಂಶದಲ್ಲಿ ಹೇಳಬೇಕೆಂದರೆ ಆಗಿರುವ ಕೆಲಸ ಅಭಿನಂದನಾರ್ಹವಾದದ್ದೇ  ಆದರೂ ಆಗಬೇಕಿರುವ ಕೆಲಸಗಳು ಕೂಡ ಸಾಕಷ್ಟು ಇವೆ. ಇವುಗಳನ್ನು ಕೂಡ ಸರ್ಕಾರ ಮತ್ತು ಪೊಲೀಸು ಇಲಾಖೆ ತುರ್ತಿನ ಮೇಲೆ ಕೈಗೆತ್ತಿ ಕೊಳ್ಳುತ್ತದೆ ಎಂಬ ಭರವಸೆ ನಮಗಿದೆ ಎಂದು ವೇದಿಕೆಯ ಮತ್ತೋರ್ವ ಸದಸ್ಯೆ ತಾರಾ ರಾವ್ ಹೇಳಿದ್ದಾರೆ.

ಈ ಕಾರ್ಯಾಚರಣೆ ಮೂಲಕ ಕರ್ನಾಟಕ ರಾಜ್ಯವು ಇಡೀ ದೇಶಕ್ಕೆ ಒಂದು ಶಾಂತಿಯುತ ಹಾಗೂ ಪ್ರಜಾತಾಂತ್ರಿಕ ಮಾದರಿಯನ್ನು ಕಟ್ಟಿಕೊಟ್ಟಿದೆ. ಜನರ ಸಮಸ್ಯೆಗಳನ್ನು ಬಗೆಹರಿಸದೆ, ಅವರ ಬದಕಿನ ಹಕ್ಕನ್ನು ಕಸಿಯಲು ಹೋದರೆ [ನ್ಯಾಷನಲ್‌ ಪಾರ್ಕ್‌ ವಿಚಾರದಲ್ಲಿ ಆದಂತೆ] ಜನರು ಸಶಸ್ತ್ರ ಸಂಘರ್ಷದಂತಹ ತೀಕ್ಷ್ಣ ರೂಪಗಳ ಮೊರೆಹೋಗುತ್ತಾರೆ. ಈ ರೀತಿಯ ವಿದ್ಯಮಾನಗಳು ಮತ್ತೆ ಮರುಕಳಿಸಬಾರದೆಂದರೆ ಜನಪರ ಎಂದು ಕರೆದುಕೊಳ್ಳುವ ಸರ್ಕಾರಗಳು ಜನರನ್ನು ಮೂಲೆಗೊತ್ತದೆ, ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂಬ ಪಾಠವನ್ನೂ ಈ ಪ್ರಕ್ರಿಯೆ ನೀಡಿದೆ. ಸರ್ಕಾರ ಮತ್ತು ಪೋಲೀಸ್‌ ಯಂತ್ರಾಂಗ ಈ ಪಾಠದತ್ತವೂ ಗಮನಹರಿಸಬೇಕು ಮತ್ತು ನಕ್ಸಲ್‌ ಪ್ರಭಾವಿತ ಪ್ರದೇಶದ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ವೇದಿಕೆಯ ವಿ.ಎಸ್. ಶ್ರೀಧರ್ ಮಾಹಿತಿ ನೀಡಿದ್ದಾರೆ.

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...